Homeಕರ್ನಾಟಕಮತಗಳ್ಳತನದ ಆರೋಪ: ಸಂವಿಧಾನದ ಮೇಲೆ ಕೈ ಇಟ್ಟಿದ್ದೇನೆ, ಸುಳ್ಳು ಹೇಳುವುದಿಲ್ಲ - ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ...

ಮತಗಳ್ಳತನದ ಆರೋಪ: ಸಂವಿಧಾನದ ಮೇಲೆ ಕೈ ಇಟ್ಟಿದ್ದೇನೆ, ಸುಳ್ಳು ಹೇಳುವುದಿಲ್ಲ – ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶದಲ್ಲಿ ರಾಹುಲ್ ಗಾಂಧಿ

- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳು ಕಳ್ಳತನವಾಗಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಪ್ರಮಾಣ ಮಾಡುವಂತೆ ಕೇಳಿದ್ದ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ ಅವರು, “ನಾನು ಈಗಾಗಲೇ ಸಂಸತ್ತಿನಲ್ಲಿ ಸಂವಿಧಾನದ ಮೇಲೆ ಕೈಯಿಟ್ಟು ಪ್ರಮಾಣ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಭಾಷಣ ಮಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಾಡಿದ ಮತ ಕಳ್ಳತನದ ಬಗ್ಗೆ ಸಮಗ್ರ ವರದಿ ನೀಡಲು ಚುನಾವಣಾ ಆಯೋಗ ನಿರಾಕರಿಸುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ ಮಹಾರಾಷ್ಟ್ರದಲ್ಲಿನ ಮತದಾರರ ಪಟ್ಟಿಯಲ್ಲೂ ಗೊಂದಲಗಳಿವೆ ಎಂದು ಉಲ್ಲೇಖಿಸಿ, ವಿಧಾನಸಭೆ ಚುನಾವಣೆಯಲ್ಲಿ ಮತ ಹಾಕದ ಒಂದು ಕೋಟಿ ಹೊಸ ಮತದಾರರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮಹಾದೇವಪುರದಲ್ಲಿ ಮತ ಕಳ್ಳತನದ ಪುರಾವೆಗಳನ್ನು ಮುಂದಿಟ್ಟ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅವರು ಕರ್ನಾಟಕದ ಬೆಂಗಳೂರು ಮಹಾದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ಸಮಗ್ರ ವಿಶ್ಲೇಷಣೆಯ ವರದಿಯನ್ನು ಸಾರ್ವಜನಿಕವಾಗಿ ಪ್ರಸ್ತುತಪಡಿಸಿದರು. “ಮಹಾದೇವಪುರದಲ್ಲಿರುವ 6.5 ಲಕ್ಷ ಮತಗಳಲ್ಲಿ 1 ಲಕ್ಷದ 2,250 ಮತಗಳು ಕಳ್ಳತನವಾಗಿವೆ ಎಂದು ನಾವು ಖಚಿತವಾಗಿ ಹೇಳುತ್ತೇವೆ” ಎಂದು ರಾಹುಲ್ ಗಾಂಧಿ ಘೋಷಿಸಿದರು.

ಈ ಮತ ಕಳ್ಳತನದ ಪ್ರಕ್ರಿಯೆಯು ಐದು ವಿಧಗಳಲ್ಲಿ ನಡೆದಿದೆ ಎಂದು ಅವರು ವಿವರಿಸಿದರು:

ದ್ವಿಪ್ರತಿ ನಮೂದು (Duplicate Entries): ಒಬ್ಬ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಲ್ಲಿ ಹಲವು ಬಾರಿ ಸೇರಿಸಲಾಗಿದೆ ಮತ್ತು ಆತ ಐದು ಮತಗಟ್ಟೆಗಳಲ್ಲಿ ಮತದಾನ ಮಾಡಿರುವುದು ಕಂಡುಬಂದಿದೆ. ಈ ರೀತಿಯ 12,000 ಕಳ್ಳ ಮತಗಳನ್ನು ಗುರುತಿಸಲಾಗಿದೆ.

ನಕಲಿ ವಿಳಾಸಗಳು: ಒಂದೇ ಕೊಠಡಿಯಿರುವ ಮನೆಗಳಲ್ಲಿ 40 ರಿಂದ 80 ಮತದಾರರ ಹೆಸರುಗಳನ್ನು ಸೇರಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ಹೋಗಿ ಪರಿಶೀಲಿಸಿದಾಗ ಆ ವಿಳಾಸಗಳಲ್ಲಿ ಯಾರೂ ಇರಲಿಲ್ಲ. ಈ ರೀತಿಯ 40,000 ನಕಲಿ ಮತದಾರರನ್ನು ಗುರುತಿಸಲಾಗಿದೆ.

ಫೋಟೋ ಇಲ್ಲದ ಮತದಾರರು: ಕೆಲವು ಮತದಾರರ ಗುರುತಿನ ಚೀಟಿಗಳಲ್ಲಿ ಫೋಟೋ ಇರಲಿಲ್ಲ.

ನಮೂನೆ 6ರಲ್ಲಿ ಅಕ್ರಮಗಳು: ಹೊಸ ಮತದಾರರನ್ನು ಸೇರಿಸಲು ಬಳಸುವ ಫಾರ್ಮ್ 6 ರಲ್ಲಿ ಅವ್ಯವಹಾರಗಳು ನಡೆದಿವೆ. 85-90 ವರ್ಷ ವಯಸ್ಸಿನ ವ್ಯಕ್ತಿಗಳನ್ನು ಹೊಸ ಮತದಾರರನ್ನಾಗಿ ಸೇರಿಸಲಾಗಿದೆ. ಈ ರೀತಿ 34,000 ಮತದಾರರ ಹೆಸರುಗಳು ಕಂಡುಬಂದಿವೆ.

ಬಹು ಮತದಾನದ ಹಕ್ಕು: ಒಬ್ಬ ವ್ಯಕ್ತಿಗೆ ಬೆಂಗಳೂರು, ಲಕ್ನೋ ಮತ್ತು ವಾರಣಾಸಿಯಲ್ಲೂ ಮತದಾನದ ಹಕ್ಕನ್ನು ನೀಡಲಾಗಿದೆ.

ಚುನಾವಣಾ ಆಯೋಗದ ವಿರುದ್ಧ ಆಕ್ರೋಶ

ಚುನಾವಣಾ ಆಯೋಗವು ಬಿಜೆಪಿಯ ಕೈಗೊಂಬೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. “ನಾವು ಈ ಅಕ್ರಮಗಳ ಬಗ್ಗೆ ಪ್ರಶ್ನಿಸಿದಾಗ, ಚುನಾವಣಾ ಆಯೋಗ ದಾಖಲೆಗಳನ್ನು ಬದಲಿಸಿ, ದಾಖಲೆಗಳನ್ನು ಅಳಿಸಿಹಾಕುತ್ತಿದೆ” ಎಂದು ಅವರು ಹೇಳಿದರು. ಬಿಹಾರ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಚುನಾವಣಾ ಆಯೋಗದ ವೆಬ್‌ಸೈಟ್‌ಗಳನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಜನರು ಪ್ರಶ್ನಿಸಲು ಆರಂಭಿಸಿದರೆ ತಮ್ಮ “ನಾಟಕ” ಕೊನೆಯಾಗುತ್ತದೆ ಎಂಬ ಭಯದಿಂದ ಆಯೋಗವು ಹೀಗೆ ಮಾಡುತ್ತಿದೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಅವರು, “ನಾವು ಚುನಾವಣಾ ಆಯೋಗದಿಂದ ಕಳೆದ 10 ವರ್ಷಗಳ ಡಿಜಿಟಲ್ ಮತದಾನ ಮಾಹಿತಿ ಮತ್ತು ಮತಗಟ್ಟೆಗಳ ವೀಡಿಯೋ ರೆಕಾರ್ಡ್‌ಗಳನ್ನು ಕೇಳುತ್ತಿದ್ದೇವೆ. ಈ ಮಾಹಿತಿ ಸಿಕ್ಕರೆ ದೇಶಾದ್ಯಂತ ನಡೆದಿರುವ ಮತ ಕಳ್ಳತನದ ಬಗ್ಗೆ ನಾವು ಪುರಾವೆಗಳೊಂದಿಗೆ ತೋರಿಸುತ್ತೇವೆ. ಕೇವಲ ಒಂದು ಕ್ಷೇತ್ರದಲ್ಲಿ ಇದನ್ನು ಸಾಬೀತು ಮಾಡಲು ನಮಗೆ ಆರು ತಿಂಗಳು ಬೇಕಾಯಿತು” ಎಂದು ಹೇಳಿದರು.

ಈ ಮತ ಕಳ್ಳತನ ಕೇವಲ ರಾಜ್ಯಮಟ್ಟದಲ್ಲಿ ನಡೆಯುತ್ತಿಲ್ಲ, ಬದಲಾಗಿ ಇದು ದೇಶಾದ್ಯಂತ ವ್ಯಾಪಕವಾಗಿ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನರೇಂದ್ರ ಮೋದಿ ಕೇವಲ 25 ಸ್ಥಾನಗಳ ಅಂತರದಿಂದ ಪ್ರಧಾನಿಯಾಗಿದ್ದಾರೆ. ಈ ರೀತಿಯ ಮತ ಕಳ್ಳತನ ನಡೆದಿಲ್ಲವೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಿರುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಬಿಜೆಪಿಯು 35 ಸಾವಿರ ಅಂತರದಿಂದ ಜಯಗಳಿಸಿದ 25 ಸ್ಥಾನಗಳಲ್ಲೂ ಮತ ಕಳ್ಳತನ ನಡೆದಿದೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ರಕ್ಷಣೆಯ ಕರೆ

ಈ ಮತ ಕಳ್ಳತನವು ಸಂವಿಧಾನದ ಮೇಲಿನ ನೇರ ದಾಳಿಯಾಗಿದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. “ಸಂವಿಧಾನವು ನಮ್ಮ ಪವಿತ್ರ ಗ್ರಂಥ. ಅದು ಈ ದೇಶದ ಬಡವರು, ಕಾರ್ಮಿಕರು, ರೈತರು ಮತ್ತು ಮಹಿಳೆಯರ ಧ್ವನಿ” ಎಂದು ಅವರು ಹೇಳಿದರು. ಚುನಾವಣಾ ಆಯೋಗವು ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸುತ್ತಿದ್ದು, ಬಿಜೆಪಿಯ ನಿರ್ದೇಶನದಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಅಂತಿಮವಾಗಿ, ರಾಹುಲ್ ಗಾಂಧಿ ಅವರು ಕರ್ನಾಟಕದ ರಾಜ್ಯ ಸರ್ಕಾರವನ್ನು ಈ ವಿಷಯದ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಿದರು. “ಮಹಾದೇವಪುರದ ಈ ಕ್ರಿಮಿನಲ್ ಕೃತ್ಯದ ತನಿಖೆ ನಡೆಸಿ, ನೈಜತೆ ಹೊರತರುವಂತೆ” ಮನವಿ ಮಾಡಿದರು. ಜೊತೆಗೆ, ಕಾಂಗ್ರೆಸ್ ಕಾರ್ಯಕರ್ತರಿಗೆ ಸಂವಿಧಾನ ರಕ್ಷಣೆಗೆ ಒಗ್ಗಟ್ಟಿನಿಂದ ಹೋರಾಡುವಂತೆ ಕರೆ ನೀಡಿದರು.

“ಬಿಜೆಪಿಯ ಸಿದ್ಧಾಂತವು ಸಂವಿಧಾನ ವಿರೋಧಿಯಾಗಿದೆ” ಎಂದು ಹೇಳಿದ ರಾಹುಲ್ ಗಾಂಧಿ, ನಾವು ಸತ್ಯವನ್ನು ಹೊರತರುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. “ಆಯೋಗವು ನಮಗೆ ಸರಿಯಾದ ಮಾಹಿತಿ ನೀಡದಿದ್ದರೆ ನಾವು ಮತ್ತಷ್ಟು 20 ಕ್ಷೇತ್ರಗಳ ಮಾಹಿತಿಯನ್ನು ಹೊರತರುತ್ತೇವೆ” ಎಂದು ಅವರು ಎಚ್ಚರಿಸಿದರು. ಈ ಮತ ಕಳ್ಳತನವು ದೇಶದಾದ್ಯಂತ ನಡೆದಿರುವ ಕಾರಣ, ಎಲ್ಲ ರಾಜಕೀಯ ಪಕ್ಷಗಳು ಇದರ ವಿರುದ್ಧ ಒಟ್ಟಾಗಿ ಪ್ರಶ್ನೆ ಮಾಡುತ್ತಿವೆ ಎಂದು ಅವರು ಹೇಳಿದರು.

ಲೋಕಸಭೆಯಲ್ಲಿ ಮಣಿಪುರಕ್ಕೆ ಸಂಬಂಧಿಸಿದ ಎರಡು ಮಸೂದೆಗಳು ಚರ್ಚೆಯಿಲ್ಲದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...