Homeಕರ್ನಾಟಕಶ್ರೀರಾಮನ ಅವಹೇಳನ ಆರೋಪ: ಚಿಂತಕ ಕೆ.ಎಸ್ ಭಗವಾನ್‌ ಖುಲಾಸೆ

ಶ್ರೀರಾಮನ ಅವಹೇಳನ ಆರೋಪ: ಚಿಂತಕ ಕೆ.ಎಸ್ ಭಗವಾನ್‌ ಖುಲಾಸೆ

- Advertisement -
- Advertisement -

‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ ಪುಸ್ತಕದಲ್ಲಿ ಶ್ರೀರಾಮನನ್ನು ಹೀಯಾಳಿಸಿದ್ದಾರೆ, ಅವಹೇಳನಕಾರಿ ಪದಗಳ ಬಳಕೆ ಮಾಡಿದ್ದಾರೆ. ಆ ಮೂಲಕ ಹಿಂದೂಗಳ ಧಾರ್ಮಿಖಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ’ಎಂದು ಆರೋಪಿಸಿ ವಕೀಲೆ ಮೀರಾ ರಾಘವೇಂದ್ರ ಅವರು ಲೇಖಕ ಕೆ.ಎಸ್ ಭಗವಾನ್‌ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣವನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಸೋಮವಾರ (ಜೂ.9) ವಜಾಗೊಳಿಸಿದೆ ಎಂದು ವರದಿಯಾಗಿದೆ.

ಮೀರಾ ರಾಘವೇಂದ್ರ ಅವರು ಐಪಿಸಿ ಸೆಕ್ಷನ್‌ 298 ಮತ್ತು 505ರ ಅಡಿ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 37ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಎಂ. ಸೈಯದ್‌ ಅರಾಫತ್‌ ಇಬ್ರಾಹಿಂ ಅವರು ಭಗವಾನ್‌ ಅವರನ್ನು ಖುಲಾಸೆಗೊಳಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಇಂತಹುದೇ ಮತ್ತೊಂದು ಪ್ರಕರಣದಲ್ಲಿ ನ್ಯಾಯಾಲಯ ಇತ್ತಿಚೆಗೆಷ್ಟೇ ಕೆ.ಎಸ್ ಭಗವಾನ್ ಅವರನ್ನು ಖುಲಾಸೆಗೊಳಿಸಿತ್ತು. ಎರಡೂ ಪ್ರಕರಣಗಳಲ್ಲಿ ಹಿರಿಯ ವಕೀಲ ಸಿ.ಎಚ್ ಹನುಮಂತರಾಯ ಅವರು ಭಗವಾನ್‌ ಪರ ವಾದ ಮಂಡಿಸಿದ್ದರು.

ಕೋರ್ಟ್‌ ಆವರಣದಲ್ಲಿ ಭಗವಾನ್‌ ಅವರ ಮುಖಕ್ಕೆ ಮಸಿ ಬಳಿಯುವ ಮೂಲಕ ವಕೀಲೆ ಮೀರಾ ರಾಘವೇಂದ್ರ ಅವರು ವೃತ್ತಿ ದುರ್ನಡತೆ ತೋರಿದ್ದು, ವಕೀಲರ ಶಿಷ್ಟಾಚಾರಗಳಿಗೆ ಅವಮಾನ ಉಂಟು ಮಾಡಿದ್ದಾರೆ. ಈ ಕಾರಣಕ್ಕಾಗಿ ಅವರು ಮೂರು ತಿಂಗಳ ಕಾಲ ದೇಶದ ಯಾವುದೇ ಕೋರ್ಟ್‌ಗಳಲ್ಲಿ ವಕೀಲಿಕೆ ನಡೆಸಬಾರದು ಎಂದು ರಾಜ್ಯ ವಕೀಲರ ಪರಿಷತ್‌ ಇತ್ತೀಚೆಗಷ್ಟೇ ಆದೇಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ವಿಚಾರಣೆಗೆ ಹಾಜರಾಗಿದ್ದ ಸಮಯದಲ್ಲಿ ಕೋರ್ಟ್‌ ಆವರಣದಲ್ಲಿ ತಮ್ಮ ಮುಖಕ್ಕೆ ಮೀರಾ ಮಸಿ ಬಳಿದಿದ್ದಾರೆ ಎಂದು ಆರೋಪಿಸಿ ಭಗವಾನ್‌ ಅವರು ದಾಖಲಿಸಿದ್ದ ದೂರನ್ನು ರಾಜ್ಯ ವಕೀಲರ ಪರಿಷತ್ತಿನ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಎಸ್‌. ಮಹೇಶ್‌ ಮತ್ತು ಪರಿಷತ್‌ ಸದಸ್ಯ ಎಸ್‌. ಹರೀಶ್‌ ನೇತೃತ್ವದ ಸಮಿತಿ ವಿಚಾರಣೆ ನಡೆಸಿ ಆದೇಶ ನೀಡಿತ್ತು.

‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ ಪುಸ್ತಕದಲ್ಲಿ ‘ಶ್ರೀರಾಮನನ್ನು ಹೀಯಾಳಿಸಿದ್ದಾರೆ. ಅವಹೇಳನಕಾರಿ ಪದಗಳ ಬಳಕೆ ಮಾಡಿದ್ದಾರೆ. ಈ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ’ ಎಂದು ಆರೋಪಿಸಿ ವಕೀಲೆ ಮೀರಾ ರಾಘವೇಂದ್ರ ಅವರು ಕೆ.ಎಸ್.ಭಗವಾನ್‌ ವಿರುದ್ಧ 2ನೇ ಎಸಿಎಂಎಂ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದರು.

2021ರ ಫೆಬ್ರವರಿ 4ರಂದು ಕೋರ್ಟ್‌ಗೆ ಹಾಜರಾಗಿ ಷರತ್ತುಬದ್ಧ ಜಾಮೀನು ಪಡೆದು ಹೊರಬರುತ್ತಿದ್ದ  ಭಗವಾನ್‌ ಅವರ ಮುಖಕ್ಕೆ ಮೀರಾ ರಾಘವೇಂದ್ರ ಮಸಿ ಬಳಿದಿದ್ದರು ಮತ್ತು ಎಂ.ಎಂ ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್‌ ಅವರಂತೆ ನಿಮ್ಮನ್ನೂ ಹತ್ಯೆ ಮಾಡಲಾಗುವುದು ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನು ಮೀರಾ ಎದುರಿಸುತ್ತಿದ್ದರು. ಮೀರಾ ಅವರು ತಮ್ಮ ಮುಖಕ್ಕೆ ಮಸಿ ಬಳಿದಿದ್ದ ನಡವಳಿಕೆಯನ್ನು ಆಕ್ಷೇಪಿಸಿ ಭಗವಾನ್‌ ಅವರು ರಾಜ್ಯ ವಕೀಲರ ಪರಿಷತ್‌ನಲ್ಲಿ ದೂರು ದಾಖಲಿಸಿದ್ದರು.

ದಲಿತ ಚಳವಳಿಯಲ್ಲಿ ಬಿ.ಕೃಷ್ಣಪ್ಪ ನಮ್ಮ ಕೈಹಿಡಿದು ನಡೆಸಿದರು: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...