Homeಮುಖಪುಟಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

- Advertisement -
- Advertisement -

ಶಾರ್ಜಾದಲ್ಲಿ ಮಹಿಳೆಯೊಬ್ಬರು ತನ್ನ ಒಂದೂವರೆ ವರ್ಷದ ಮಗಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಸಂಬಂಧ ಕೇರಳದ ಕೊಲ್ಲಂ ಜಿಲ್ಲೆಯ ಕುಂದರಾ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ವಿಪಂಚಿಕಾ ಅವರ ಗಂಡ ನಿತೀಶ್ ಅವರನ್ನು ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ಗುರುತಿಸಲಾಗಿದ್ದು, ಎರಡನೇ ಆರೋಪಿಯಾಗಿ ಅತ್ತಿಗೆ ನೀತು ಮತ್ತು ಮೂರನೇ ಆರೋಪಿಯಾಗಿ ಮಾವ ಮೋಹನನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಲಾಗಿದೆ.

ಕಳೆದ ಮಂಗಳವಾರ ಶಾರ್ಜಾದ ಅಲ್ ನಹ್ದಾದಲ್ಲಿ 33 ವರ್ಷದ ವಿಪಂಚಿಕಾ ಮತ್ತು ಅವರ ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕಳೆದ ಏಳು ವರ್ಷಗಳಿಂದ ಶಾರ್ಜಾದ ಖಾಸಗಿ ಸಂಸ್ಥೆಯಲ್ಲಿ ಗುಮಾಸ್ತೆ ಕೆಲಸ ಮಾಡುತ್ತಿದ್ದ ವಿಪಂಚಿಕಾ, ನವೆಂಬರ್ 2020 ರಲ್ಲಿ ನಿತೀಶ್ ಅವರನ್ನು ವಿವಾಹವಾಗಿದ್ದರು.

ಸಾವಿಗೂ ಮುನ್ನ ವಿಪಂಚಿಕಾ ಬರೆದಿದ್ದಾರೆ ಎನ್ನಲಾದ ಆತ್ಮಹತ್ಯೆ ಪತ್ರ ಅವರ ಫೇಸ್‌ಬುಕ್ ಪುಟದಲ್ಲಿ ಕಾಣಿಸಿಕೊಂಡಿತ್ತು. ಆದರೆ, ನಂತರ ಅದನ್ನು ಅಳಿಸಲಾಗಿದೆ ಎಂಬ ವರದಿಗಳಿವೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ವಿಪಂಚಿಕಾ, “ತನ್ನ ಪತಿ, ಮಾವ ಮತ್ತು ಅತ್ತಿಗೆಯಿಂದ ತಾನು ಎದುರಿಸಿದ ತೀವ್ರ ಚಿತ್ರಹಿಂಸೆಯನ್ನು ಹೇಳಿಕೊಂಡಿದ್ದರು. ವರದಕ್ಷಿಣೆ ಕಿರುಕುಳ, ದಾಖಲೆಗಳನ್ನು ಬಚ್ಚಿಟ್ಟುಕೊಂಡು ಗಂಡ ತನ್ನಿಂದ ಪ್ರತ್ಯೇಕವಾಗಲು ಪ್ರಯತ್ನಿಸಿದ್ದು ಸೇರಿದಂತೆ ಎಲ್ಲವನ್ನೂ ಆಕೆ ವಿವರಿಸಿದ್ದರು ಎಂದು ವರದಿಗಳು ಹೇಳಿವೆ.

“ಅವರೆಲ್ಲರಿಗೂ ನನ್ನ ಹಣ ಬೇಕು” ಎಂದು ತನ್ನ ಪೋಸ್ಟ್‌ನಲ್ಲಿ ವಿಪಂಚಿಕಾ ಹೇಳಿದ್ದರು. ಅತ್ತೆ-ಮಾವ ತನ್ನ ಗಂಡನೊಂದಿಗೆ ಸಾಮಾನ್ಯ ಸಂಬಂಧ ಹೊಂದುವುದನ್ನು ತಡೆಯುತ್ತಿದ್ದರು. “ಅವನಿಗೆ ನಿನಗಿಂತ ಒಳ್ಳೇ ಹುಡುಗಿ ಸಿಗುತ್ತಿದ್ದಳು” ಎಂದು ಅವಮಾನಿಸುತ್ತಿದ್ದರು” ಎಂದು ವಿಪಂಚಿಕಾ ಆರೋಪಿಸಿದ್ದರು.

ವಿಪಂಚಿಕಾಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ. ಆಕೆಯ ಕೂದಲನ್ನು ಕತ್ತರಿಸಿ ಗಂಡ ಚಿತ್ರಹಿಂಸೆ ನೀಡಿದ್ದಾನೆ. ಇದರಿಂದ ಮನನೊಂದು ಆಕೆ ಸಾವಿಗೆ ಶರಣಾಗಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ.

ಪೊಲೀಸರು ಪ್ರಕರಣ ದಾಖಲಿಸಿರುವುದು ನಮಗೆ ಭರವಸೆ ಮೂಡಿಸಿದೆ. ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ವಿಪಂಚಿಕಾ ಅವರ ಕುಟುಂಬ ತಿಳಿಸಿದೆ. ತಮ್ಮ ಮಗಳು ಮತ್ತು ಮೊಮ್ಮಗಳ ಶವಗಳನ್ನು ತಕ್ಷಣ ಭಾರತಕ್ಕೆ ತರಬೇಕು ಮತ್ತು ಇಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ವಿಪಂಚಿಕಾ ಅವರ ತಾಯಿ ಶೈಲಜಾ ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಮುಖ್ಯಮಂತ್ರಿ ಕಚೇರಿ, ರಾಜ್ಯ ಪೊಲೀಸ್ ಮುಖ್ಯಸ್ಥರು, ಭಾರತೀಯ ರಾಯಭಾರ ಕಚೇರಿ ಮತ್ತು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

“ನನ್ನ ಮಗಳ ಆತ್ಮಹತ್ಯೆ ಹಿಂದಿನ ಕಾರಣ ನನಗೆ ಗೊತ್ತಾಗಬೇಕು. ಇದಕ್ಕೆ ಕಾರಣರಾದ ಎಲ್ಲರನ್ನೂ ಕಾನೂನಿನ ಮುಂದೆ ತರಬೇಕು. ಪಾರದರ್ಶಕ ತನಿಖೆ ನಡೆಯಬೇಕು. ನನಗೆ ನ್ಯಾಯ ಬೇಕು” ಎಂದು ಶೈಲಜಾ ಹೇಳಿದ್ದಾರೆ.

ವಿಪಂಚಿಕಾ ತನ್ನ ಪತಿ ಮತ್ತು ಅವರ ಕುಟುಂಬದಿಂದ ತೀವ್ರ ಕಿರುಕುಳ ಅನುಭವಿಸಿದ್ದಾಳೆ. ನನ್ನ ಮಗಳು ಆಕೆಯ ಗಂಡನನ್ನು ಪ್ರೀತಿಸಿದ್ದೇ ತಪ್ಪು ಮತ್ತು ಮಗಳ ಮೌನವೇ ಈ ದುರಂತಕ್ಕೆ ಕಾರಣ ಎಂದು ಶೈಲಜಾ ಹೇಳಿದ್ದು, ನನ್ನ ಮಗಳಿಗೆ ನ್ಯಾಯ ದೊರಕಿಸಿಕೊಡಲು ಯಾವುದೇ ಹಂತಕ್ಕೂ ಹೋಗುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

‘ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ’: ಅನನ್ಯ ಭಟ್ ತಾಯಿ ಕಣ್ಣೀರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...