Homeಮುಖಪುಟಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

- Advertisement -
- Advertisement -

ಶಾರ್ಜಾದಲ್ಲಿ ಮಹಿಳೆಯೊಬ್ಬರು ತನ್ನ ಒಂದೂವರೆ ವರ್ಷದ ಮಗಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಸಂಬಂಧ ಕೇರಳದ ಕೊಲ್ಲಂ ಜಿಲ್ಲೆಯ ಕುಂದರಾ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ವಿಪಂಚಿಕಾ ಅವರ ಗಂಡ ನಿತೀಶ್ ಅವರನ್ನು ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ಗುರುತಿಸಲಾಗಿದ್ದು, ಎರಡನೇ ಆರೋಪಿಯಾಗಿ ಅತ್ತಿಗೆ ನೀತು ಮತ್ತು ಮೂರನೇ ಆರೋಪಿಯಾಗಿ ಮಾವ ಮೋಹನನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಲಾಗಿದೆ.

ಕಳೆದ ಮಂಗಳವಾರ ಶಾರ್ಜಾದ ಅಲ್ ನಹ್ದಾದಲ್ಲಿ 33 ವರ್ಷದ ವಿಪಂಚಿಕಾ ಮತ್ತು ಅವರ ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕಳೆದ ಏಳು ವರ್ಷಗಳಿಂದ ಶಾರ್ಜಾದ ಖಾಸಗಿ ಸಂಸ್ಥೆಯಲ್ಲಿ ಗುಮಾಸ್ತೆ ಕೆಲಸ ಮಾಡುತ್ತಿದ್ದ ವಿಪಂಚಿಕಾ, ನವೆಂಬರ್ 2020 ರಲ್ಲಿ ನಿತೀಶ್ ಅವರನ್ನು ವಿವಾಹವಾಗಿದ್ದರು.

ಸಾವಿಗೂ ಮುನ್ನ ವಿಪಂಚಿಕಾ ಬರೆದಿದ್ದಾರೆ ಎನ್ನಲಾದ ಆತ್ಮಹತ್ಯೆ ಪತ್ರ ಅವರ ಫೇಸ್‌ಬುಕ್ ಪುಟದಲ್ಲಿ ಕಾಣಿಸಿಕೊಂಡಿತ್ತು. ಆದರೆ, ನಂತರ ಅದನ್ನು ಅಳಿಸಲಾಗಿದೆ ಎಂಬ ವರದಿಗಳಿವೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ವಿಪಂಚಿಕಾ, “ತನ್ನ ಪತಿ, ಮಾವ ಮತ್ತು ಅತ್ತಿಗೆಯಿಂದ ತಾನು ಎದುರಿಸಿದ ತೀವ್ರ ಚಿತ್ರಹಿಂಸೆಯನ್ನು ಹೇಳಿಕೊಂಡಿದ್ದರು. ವರದಕ್ಷಿಣೆ ಕಿರುಕುಳ, ದಾಖಲೆಗಳನ್ನು ಬಚ್ಚಿಟ್ಟುಕೊಂಡು ಗಂಡ ತನ್ನಿಂದ ಪ್ರತ್ಯೇಕವಾಗಲು ಪ್ರಯತ್ನಿಸಿದ್ದು ಸೇರಿದಂತೆ ಎಲ್ಲವನ್ನೂ ಆಕೆ ವಿವರಿಸಿದ್ದರು ಎಂದು ವರದಿಗಳು ಹೇಳಿವೆ.

“ಅವರೆಲ್ಲರಿಗೂ ನನ್ನ ಹಣ ಬೇಕು” ಎಂದು ತನ್ನ ಪೋಸ್ಟ್‌ನಲ್ಲಿ ವಿಪಂಚಿಕಾ ಹೇಳಿದ್ದರು. ಅತ್ತೆ-ಮಾವ ತನ್ನ ಗಂಡನೊಂದಿಗೆ ಸಾಮಾನ್ಯ ಸಂಬಂಧ ಹೊಂದುವುದನ್ನು ತಡೆಯುತ್ತಿದ್ದರು. “ಅವನಿಗೆ ನಿನಗಿಂತ ಒಳ್ಳೇ ಹುಡುಗಿ ಸಿಗುತ್ತಿದ್ದಳು” ಎಂದು ಅವಮಾನಿಸುತ್ತಿದ್ದರು” ಎಂದು ವಿಪಂಚಿಕಾ ಆರೋಪಿಸಿದ್ದರು.

ವಿಪಂಚಿಕಾಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ. ಆಕೆಯ ಕೂದಲನ್ನು ಕತ್ತರಿಸಿ ಗಂಡ ಚಿತ್ರಹಿಂಸೆ ನೀಡಿದ್ದಾನೆ. ಇದರಿಂದ ಮನನೊಂದು ಆಕೆ ಸಾವಿಗೆ ಶರಣಾಗಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ.

ಪೊಲೀಸರು ಪ್ರಕರಣ ದಾಖಲಿಸಿರುವುದು ನಮಗೆ ಭರವಸೆ ಮೂಡಿಸಿದೆ. ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ವಿಪಂಚಿಕಾ ಅವರ ಕುಟುಂಬ ತಿಳಿಸಿದೆ. ತಮ್ಮ ಮಗಳು ಮತ್ತು ಮೊಮ್ಮಗಳ ಶವಗಳನ್ನು ತಕ್ಷಣ ಭಾರತಕ್ಕೆ ತರಬೇಕು ಮತ್ತು ಇಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ವಿಪಂಚಿಕಾ ಅವರ ತಾಯಿ ಶೈಲಜಾ ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಮುಖ್ಯಮಂತ್ರಿ ಕಚೇರಿ, ರಾಜ್ಯ ಪೊಲೀಸ್ ಮುಖ್ಯಸ್ಥರು, ಭಾರತೀಯ ರಾಯಭಾರ ಕಚೇರಿ ಮತ್ತು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

“ನನ್ನ ಮಗಳ ಆತ್ಮಹತ್ಯೆ ಹಿಂದಿನ ಕಾರಣ ನನಗೆ ಗೊತ್ತಾಗಬೇಕು. ಇದಕ್ಕೆ ಕಾರಣರಾದ ಎಲ್ಲರನ್ನೂ ಕಾನೂನಿನ ಮುಂದೆ ತರಬೇಕು. ಪಾರದರ್ಶಕ ತನಿಖೆ ನಡೆಯಬೇಕು. ನನಗೆ ನ್ಯಾಯ ಬೇಕು” ಎಂದು ಶೈಲಜಾ ಹೇಳಿದ್ದಾರೆ.

ವಿಪಂಚಿಕಾ ತನ್ನ ಪತಿ ಮತ್ತು ಅವರ ಕುಟುಂಬದಿಂದ ತೀವ್ರ ಕಿರುಕುಳ ಅನುಭವಿಸಿದ್ದಾಳೆ. ನನ್ನ ಮಗಳು ಆಕೆಯ ಗಂಡನನ್ನು ಪ್ರೀತಿಸಿದ್ದೇ ತಪ್ಪು ಮತ್ತು ಮಗಳ ಮೌನವೇ ಈ ದುರಂತಕ್ಕೆ ಕಾರಣ ಎಂದು ಶೈಲಜಾ ಹೇಳಿದ್ದು, ನನ್ನ ಮಗಳಿಗೆ ನ್ಯಾಯ ದೊರಕಿಸಿಕೊಡಲು ಯಾವುದೇ ಹಂತಕ್ಕೂ ಹೋಗುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

‘ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ’: ಅನನ್ಯ ಭಟ್ ತಾಯಿ ಕಣ್ಣೀರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...