Homeಮುಖಪುಟಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

- Advertisement -
- Advertisement -

ಶಾರ್ಜಾದಲ್ಲಿ ಮಹಿಳೆಯೊಬ್ಬರು ತನ್ನ ಒಂದೂವರೆ ವರ್ಷದ ಮಗಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಸಂಬಂಧ ಕೇರಳದ ಕೊಲ್ಲಂ ಜಿಲ್ಲೆಯ ಕುಂದರಾ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ವಿಪಂಚಿಕಾ ಅವರ ಗಂಡ ನಿತೀಶ್ ಅವರನ್ನು ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ಗುರುತಿಸಲಾಗಿದ್ದು, ಎರಡನೇ ಆರೋಪಿಯಾಗಿ ಅತ್ತಿಗೆ ನೀತು ಮತ್ತು ಮೂರನೇ ಆರೋಪಿಯಾಗಿ ಮಾವ ಮೋಹನನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಲಾಗಿದೆ.

ಕಳೆದ ಮಂಗಳವಾರ ಶಾರ್ಜಾದ ಅಲ್ ನಹ್ದಾದಲ್ಲಿ 33 ವರ್ಷದ ವಿಪಂಚಿಕಾ ಮತ್ತು ಅವರ ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕಳೆದ ಏಳು ವರ್ಷಗಳಿಂದ ಶಾರ್ಜಾದ ಖಾಸಗಿ ಸಂಸ್ಥೆಯಲ್ಲಿ ಗುಮಾಸ್ತೆ ಕೆಲಸ ಮಾಡುತ್ತಿದ್ದ ವಿಪಂಚಿಕಾ, ನವೆಂಬರ್ 2020 ರಲ್ಲಿ ನಿತೀಶ್ ಅವರನ್ನು ವಿವಾಹವಾಗಿದ್ದರು.

ಸಾವಿಗೂ ಮುನ್ನ ವಿಪಂಚಿಕಾ ಬರೆದಿದ್ದಾರೆ ಎನ್ನಲಾದ ಆತ್ಮಹತ್ಯೆ ಪತ್ರ ಅವರ ಫೇಸ್‌ಬುಕ್ ಪುಟದಲ್ಲಿ ಕಾಣಿಸಿಕೊಂಡಿತ್ತು. ಆದರೆ, ನಂತರ ಅದನ್ನು ಅಳಿಸಲಾಗಿದೆ ಎಂಬ ವರದಿಗಳಿವೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ವಿಪಂಚಿಕಾ, “ತನ್ನ ಪತಿ, ಮಾವ ಮತ್ತು ಅತ್ತಿಗೆಯಿಂದ ತಾನು ಎದುರಿಸಿದ ತೀವ್ರ ಚಿತ್ರಹಿಂಸೆಯನ್ನು ಹೇಳಿಕೊಂಡಿದ್ದರು. ವರದಕ್ಷಿಣೆ ಕಿರುಕುಳ, ದಾಖಲೆಗಳನ್ನು ಬಚ್ಚಿಟ್ಟುಕೊಂಡು ಗಂಡ ತನ್ನಿಂದ ಪ್ರತ್ಯೇಕವಾಗಲು ಪ್ರಯತ್ನಿಸಿದ್ದು ಸೇರಿದಂತೆ ಎಲ್ಲವನ್ನೂ ಆಕೆ ವಿವರಿಸಿದ್ದರು ಎಂದು ವರದಿಗಳು ಹೇಳಿವೆ.

“ಅವರೆಲ್ಲರಿಗೂ ನನ್ನ ಹಣ ಬೇಕು” ಎಂದು ತನ್ನ ಪೋಸ್ಟ್‌ನಲ್ಲಿ ವಿಪಂಚಿಕಾ ಹೇಳಿದ್ದರು. ಅತ್ತೆ-ಮಾವ ತನ್ನ ಗಂಡನೊಂದಿಗೆ ಸಾಮಾನ್ಯ ಸಂಬಂಧ ಹೊಂದುವುದನ್ನು ತಡೆಯುತ್ತಿದ್ದರು. “ಅವನಿಗೆ ನಿನಗಿಂತ ಒಳ್ಳೇ ಹುಡುಗಿ ಸಿಗುತ್ತಿದ್ದಳು” ಎಂದು ಅವಮಾನಿಸುತ್ತಿದ್ದರು” ಎಂದು ವಿಪಂಚಿಕಾ ಆರೋಪಿಸಿದ್ದರು.

ವಿಪಂಚಿಕಾಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ. ಆಕೆಯ ಕೂದಲನ್ನು ಕತ್ತರಿಸಿ ಗಂಡ ಚಿತ್ರಹಿಂಸೆ ನೀಡಿದ್ದಾನೆ. ಇದರಿಂದ ಮನನೊಂದು ಆಕೆ ಸಾವಿಗೆ ಶರಣಾಗಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ.

ಪೊಲೀಸರು ಪ್ರಕರಣ ದಾಖಲಿಸಿರುವುದು ನಮಗೆ ಭರವಸೆ ಮೂಡಿಸಿದೆ. ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ವಿಪಂಚಿಕಾ ಅವರ ಕುಟುಂಬ ತಿಳಿಸಿದೆ. ತಮ್ಮ ಮಗಳು ಮತ್ತು ಮೊಮ್ಮಗಳ ಶವಗಳನ್ನು ತಕ್ಷಣ ಭಾರತಕ್ಕೆ ತರಬೇಕು ಮತ್ತು ಇಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ವಿಪಂಚಿಕಾ ಅವರ ತಾಯಿ ಶೈಲಜಾ ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಮುಖ್ಯಮಂತ್ರಿ ಕಚೇರಿ, ರಾಜ್ಯ ಪೊಲೀಸ್ ಮುಖ್ಯಸ್ಥರು, ಭಾರತೀಯ ರಾಯಭಾರ ಕಚೇರಿ ಮತ್ತು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

“ನನ್ನ ಮಗಳ ಆತ್ಮಹತ್ಯೆ ಹಿಂದಿನ ಕಾರಣ ನನಗೆ ಗೊತ್ತಾಗಬೇಕು. ಇದಕ್ಕೆ ಕಾರಣರಾದ ಎಲ್ಲರನ್ನೂ ಕಾನೂನಿನ ಮುಂದೆ ತರಬೇಕು. ಪಾರದರ್ಶಕ ತನಿಖೆ ನಡೆಯಬೇಕು. ನನಗೆ ನ್ಯಾಯ ಬೇಕು” ಎಂದು ಶೈಲಜಾ ಹೇಳಿದ್ದಾರೆ.

ವಿಪಂಚಿಕಾ ತನ್ನ ಪತಿ ಮತ್ತು ಅವರ ಕುಟುಂಬದಿಂದ ತೀವ್ರ ಕಿರುಕುಳ ಅನುಭವಿಸಿದ್ದಾಳೆ. ನನ್ನ ಮಗಳು ಆಕೆಯ ಗಂಡನನ್ನು ಪ್ರೀತಿಸಿದ್ದೇ ತಪ್ಪು ಮತ್ತು ಮಗಳ ಮೌನವೇ ಈ ದುರಂತಕ್ಕೆ ಕಾರಣ ಎಂದು ಶೈಲಜಾ ಹೇಳಿದ್ದು, ನನ್ನ ಮಗಳಿಗೆ ನ್ಯಾಯ ದೊರಕಿಸಿಕೊಡಲು ಯಾವುದೇ ಹಂತಕ್ಕೂ ಹೋಗುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

‘ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ’: ಅನನ್ಯ ಭಟ್ ತಾಯಿ ಕಣ್ಣೀರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...