Homeಕರ್ನಾಟಕಬೆಂಗಳೂರು: ಹೈಕೋರ್ಟ್ ಆದೇಶ ಉಲ್ಲಂಘಿಸಿ ಬೀದಿಬದಿ ವ್ಯಾಪಾರಿಗಳ ತೆರವು ಆರೋಪ

ಬೆಂಗಳೂರು: ಹೈಕೋರ್ಟ್ ಆದೇಶ ಉಲ್ಲಂಘಿಸಿ ಬೀದಿಬದಿ ವ್ಯಾಪಾರಿಗಳ ತೆರವು ಆರೋಪ

- Advertisement -
- Advertisement -

ಹೈಕೋರ್ಟ್ ಆದೇಶದ ಹೊರತಾಗಿಯೂ ಬೆಂಗಳೂರಿನ ಜಯನಗರ ನಾಲ್ಕನೇ ಹಂತದಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಬಿಬಿಎಂಪಿ ಮತ್ತು ಪೊಲೀಸ್ ಅಧಿಕಾರಿಗಳು ತೆರವುಗೊಳಿಸುತ್ತಿರುವ ಆರೋಪ ಕೇಳಿ ಬಂದಿದೆ.

ಈ ಕುರಿತು ವಿಡಿಯೋ ಮೂಲಕ ಮಾತನಾಡಿರುವ ವಕೀಲ ವಿನಯ್ ಶ್ರೀನಿವಾಸ್, “ಜಯನಗರ 4ನೇ ಹಂತದಲ್ಲಿ ಬಿಬಿಎಂಪಿ ಅಧಿಕಾರಿಗಳು ಬೀದಿಬದಿ ವ್ಯಾಪಾರಿಗಳಿಗೆ ಪದೇ ಪದೇ ತೊಂದರೆ ಕೊಡುತ್ತಿದ್ದಾರೆ. ಇದರ ವಿರುದ್ದ 78 ಬೀದಿಬದಿ ವ್ಯಾಪಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬೀದಿಬದಿ ವ್ಯಾಪಾರಿಗಳಿಗೆ ಯಾವುದೇ ತೊಂದರೆ ಕೊಡದಂತೆ ಸೂಚಿಸಿದೆ” ಎಂದಿದ್ದಾರೆ.

“ನಾವು ಹೈಕೋರ್ಟ್ ಆದೇಶದ ಪ್ರತಿಯನ್ನು ಬಿಬಿಎಂಪಿ ದಕ್ಷಿಣ ವಲಯ ಆಯುಕ್ತರು ಮತ್ತು ಜಯನಗರ ಪೊಲೀಸ್ ಠಾಣೆಯ ಸರ್ಕಲ್‌ ಇನ್ಸ್‌ಪೆಕ್ಟರ್ ಅವರಿಗೆ ನೀಡಿದ್ದೇವೆ. ಆದರೂ, ಕೋರ್ಟ್ ಆದೇಶ ಲೆಕ್ಕಿಸದೆ ಬೀದಿ ವ್ಯಾಪಾರಿಗಳ ತೆರವಿಗೆ ಮುಂದಾಗಿದ್ದಾರೆ. ಇದು ಕಾನೂನು ಬಾಹಿರ ಮತ್ತು ನ್ಯಾಯಾಂಗ ನಿಂದನೆಯಾಗಿದೆ” ಎಂದು ತಿಳಿಸಿದ್ದಾರೆ.


ಬೀದಿಬದಿ ವ್ಯಾಪಾರಿಗಳು-ಅಧಿಕಾರಿಗಳ ಜಟಾಪಟಿ:

ಜಯನಗರ 4ನೇ ಹಂತದಲ್ಲಿ ಜನವರಿ 12,2024ರಂದು ಸಂಜೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಬಿಬಿಎಂಪಿ ಮತ್ತು ಪೊಲೀಸ್ ಅಧಿಕಾರಿಗಳು ಮಾರ್ಷಲ್‌ಗಳೊಂದಿಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದ್ದ ವ್ಯಾಪಾರಿಗಳು ವಕೀಲ ವಿನಯ್‌ ಶ್ರೀನಿವಾಸ್ ಅವರ ನೇತೃತ್ವದಲ್ಲಿ ರಾತ್ರಿವರೆಗೂ ಪ್ರತಿಭಟನೆ ನಡೆಸಿದ್ದರು.

ಜಯನಗರ ಮಾತ್ರವಲ್ಲದೆ ಬೆಂಗಳೂರು ನಗರದ ಹಲವೆಡೆ ಬೀದಿಬದಿ ವ್ಯಾಪಾರಿಗಳು ಮತ್ತು ಅಧಿಕಾರಿಗಳ ನಡುವೆ ಜಟಾಪಟಿ ನಡೆಯುತ್ತಲೇ ಇರುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಇಲ್ಲವೇ ಎಂಬಂತಾಗಿದೆ ಪರಿಸ್ಥಿತಿ. ಪ್ರತೀ ಬಾರಿಯೂ ಅಧಿಕಾರಿಗಳು ತೆರವಿಗೆ ಮುಂದಾಗುವುದು, ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸುವುದು ಆಗುತ್ತಿದೆ.

ಬನಶಂಕರಿ: ಬೀದಿ ವ್ಯಾಪಾರಿಗಳ ಎತ್ತಂಗಡಿಗೆ ಮುಂದಾದ ಬಿಬಿಎಂಪಿ; ತೀವ್ರ ವಿರೋಧ

ಈ ಹಿಂದೆ ಬನಶಂಕರಿ ಬಸ್‌ ನಿಲ್ದಾಣದ ಮುಂಭಾಗ ಮತ್ತು ಸಾರಕ್ಕಿ ಮಾರುಕಟ್ಟೆಯ ಬಳಿ ಇದೇ ರೀತಿ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಮುಂದಾದಾಗ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದ್ದರು. ವ್ಯಾಪಾರಿಗಳು ತಮ್ಮ ಅನುಮತಿ ಪತ್ರ ಸೇರಿದಂತೆ ದಾಖಲೆಗಳನ್ನು ತೋರಿಸಿದಾಗ ಅಧಿಕಾರಿಗಳು ಸ್ಥಳದಿಂದ ಕಾಲ್ಕಿತ್ತಿದ್ದರು.

ಅನುಮತಿ ಇದ್ದರೂ ಅಧಿಕಾರಿಗಳಿಂದ ಕಿರುಕುಳ ಆರೋಪ:

ನಾನುಗೌರಿ ತಂಡ ಹಲವು ಬಾರಿ ಬೀದಿಬದಿ ವ್ಯಾಪಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಈ ವೇಳೆ ಅವರು ಹೇಳಿರುವುದು ನಮಗೆ ಬೀದಿಬದಿ ವ್ಯಾಪಾರ ಮಾಡಲು ಬಿಬಿಎಂಪಿ ಅಧಿಕಾರಿಗಳೇ ಅನುಮತಿ ನೀಡಿದ್ದಾರೆ ಎಂಬುದಾಗಿದೆ. ವ್ಯಾಪಾರಿಗಳು ತಮ್ಮಲ್ಲಿರುವ ಅನುಮತಿ ಪತ್ರಗಳನ್ನು ಕೂಡ ನಮಗೆ ತೋರಿಸಿದ್ದಾರೆ. ಆದರೂ, ಅವರನ್ನು ತೆರವುಗೊಳಿಸಲು ಅಧಿಕಾರಿಗಳು ಪದೇ ಪದೇ ಮುಂದಾಗುತ್ತಿದ್ದಾರೆ.

ಹಾಗಾದರೆ, ಬೀದಿಬದಿ ವ್ಯಾಪಾರ ಮಾಡಲು ಬಿಬಿಎಂಪಿ ಕೊಟ್ಟಿರುವ ಅನುಮತಿ ಪತ್ರಗಳಿಗೆ ಬೆಲೆ ಇಲ್ಲವೇ ಎಂಬ ನಮ್ಮ ಪ್ರಶ್ನೆಗೆ ಉತ್ತರಿಸಿರುವ ವಕೀಲ ವಿನಯ್‌ ಶ್ರೀನಿವಾಸ್, “ಹೆಚ್ಚಿನ ಅಧಿಕಾರಿಗಳಿಗೆ ಈ ಅನುಮತಿ ಪತ್ರದ ಬಗ್ಗೆ ಮತ್ತು ಬೀದಿಬದಿ ವ್ಯಾಪಾರಿಗಳ ಕಾನೂನಿನ ಬಗ್ಗೆ ಮಾಹಿತಿಯೇ ಇಲ್ಲ” ಎಂದಾಗಿದೆ.

ಜಯನಗರ 4ನೇ ಹಂತಕ್ಕೆ ಸಂಬಂಧಿಸಿದಂತೆ ಕೇವಲ ಅನುಮತಿ ಪತ್ರ ಮಾತ್ರವಲ್ಲ, ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸದಂತೆ ಹೈಕೋರ್ಟ್ ಆದೇಶವೂ ಇದೆ. ಅದನ್ನು ಉಲ್ಲಂಘಿಸಿ ಅಧಿಕಾರಿಗಳು ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಏಳನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.5ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...