Homeಕರ್ನಾಟಕಅಧಿಕ ದರ ನಿಗಧಿ ಆರೋಪ: ಓಲಾ, ಉಬರ್ ಆಟೋ ಸೇವೆ ನಿಲ್ಲಿಸಲು ನೋಟಿಸ್

ಅಧಿಕ ದರ ನಿಗಧಿ ಆರೋಪ: ಓಲಾ, ಉಬರ್ ಆಟೋ ಸೇವೆ ನಿಲ್ಲಿಸಲು ನೋಟಿಸ್

- Advertisement -
- Advertisement -

ರಾಜ್ಯ ಸಾರಿಗೆ ಇಲಾಖೆಯು ಸೆಪ್ಟೆಂಬರ್ 6 ರಂದು ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳಲ್ಲಿ ಓಲಾ, ಉಬರ್ ಮತ್ತು ರಾಪಿಡೋ ಆಟೋ ಸೇವೆಗಳನ್ನು ನಿಲ್ಲಿಸುವಂತೆ ನೋಟಿಸ್ ಜಾರಿ ಮಾಡಿದೆ. ಓಲಾ, ಉಬರ್ ಸೇವೆಗಳು 2 ಕಿಲೋಮೀಟರ್‌ಗಿಂತ ಕಡಿಮೆ ದೂರಕ್ಕೂ 100 ರೂ. ಶುಲ್ಕ ವಿಧಿಸುತ್ತದೆ ಎಂದು ಪ್ರಯಾಣಿಕರು ಸಾರಿಗೆ ಇಲಾಖೆಯಲ್ಲಿ ದೂರು ದಾಖಲಿಸಿದ ನಂತರ ಇಲಾಖೆಯು ಈ ಸೂಚನೆ ನೀಡಿದೆ.

ಪ್ರಸ್ತುತ, ಬೆಂಗಳೂರಿನಲ್ಲಿ ಮೊದಲ 2 ಕಿ.ಮೀಗೆ ಕನಿಷ್ಠ ಆಟೋ ದರವನ್ನು 30 ರೂ.ಗೆ ನಿಗದಿಪಡಿಸಲಾಗಿದೆ. ನಂತರ ಪ್ರತಿ ಕಿಲೋಮೀಟರ್‌ಗೆ 15 ರೂ. ಶುಲ್ಕ ವಿಧಿಸಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕಂಪನಿಗಳು ತಮ್ಮ ಆಟೋ ಸೇವೆಗಳನ್ನು ಆದಷ್ಟು ಬೇಗನೆ ನಿಲ್ಲಿಸಬೇಕು ಮತ್ತು ಟ್ಯಾಕ್ಸಿಗಳಲ್ಲಿ ಪ್ರಯಾಣಿಕರಿಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ವಿಧಿಸಬಾರದು ಎಂದು ಆದೇಶ ಹೇಳಿದೆ. ಆದೇಶವನ್ನು ಅನುಸರಿಸಲು ವಿಫಲವಾದರೆ ಕಾನೂನು ಕ್ರಮ ಜರುಗಿಸುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ಕರ್ನಾಟಕ ಆನ್ ಡಿಮ್ಯಾಂಡ್ ಟ್ರಾನ್ಸ್‌ಪೋರ್ಟೇಶನ್ ಟೆಕ್ನಾಲಜಿ ಅಗ್ರಿಗೇಟರ್ಸ್ ರೂಲ್ಸ್-2016 ರ ಪ್ರಕಾರ ಓಲಾ ಮತ್ತು ಉಬರ್‌ಗೆ ಟ್ಯಾಕ್ಸಿಗಳನ್ನು ಮಾತ್ರ ಓಡಿಸಲು ಪರವಾನಗಿ ನೀಡಲಾಗಿದೆಯೆ ಹೊರತು ಆಟೋಗಳನ್ನು ಓಡಿಸಲು ಅಲ್ಲ ಎಂದು ಸಾರಿಗೆ ಆಯುಕ್ತ ಟಿಎಚ್‌ಎಂ ಕುಮಾರ್ ತಿಳಿಸಿದ್ದಾರೆ.

“ಟ್ಯಾಕ್ಸಿ ಎಂದರೆ ಚಾಲಕನನ್ನು ಹೊರತುಪಡಿಸಿ ಆರು ಪ್ರಯಾಣಿಕರನ್ನು ಮೀರದ ಆಸನ ಸಾಮರ್ಥ್ಯ ಹೊಂದಿರುವ ಮೋಟಾರ್ ಕ್ಯಾಬ್” ಎಂದು ಕುಮಾರ್ ತಿಳಿಸಿದ್ದಾರೆ. ಆಟೋಗಳನ್ನು ಓಡಿಸಲಾಗುತ್ತಿದೆ ಎಂದರೆ ಕಂಪೆನಿಗಳು ನಿಯಮಾವಳಿಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದರ್ಥವಾಗಿದೆ ಎಂದಿದ್ದಾರೆ.

ಸಾರಿಗೆ ಹೆಚ್ಚುವರಿ ಆಯುಕ್ತ ಮತ್ತು ರಾಜ್ಯ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಎಲ್ ಹೇಮಂತ್ ಕುಮಾರ್, “ಕ್ಯಾಬ್-ಅಗ್ರಿಗೇಟರ್ ಪರವಾನಗಿಯೊಂದಿಗೆ ಆಟೋರಿಕ್ಷಾಗಳನ್ನು ಓಡಿಸಬಾರದು. ಅಗ್ರಿಗೇಟರ್ ನಿಯಮಗಳು ಕ್ಯಾಬ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ಆ್ಯಪ್ ಮೂಲಕ ಆಟೋರಿಕ್ಷಾ ಸೇವೆಗಳನ್ನು ನಿಲ್ಲಿಸಲು ಮತ್ತು ವರದಿಯನ್ನು ಸಲ್ಲಿಸಲು ನಾವು ಅವರನ್ನು ಕೇಳಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

ಅಕ್ಟೋಬರ್‌ 6 ರಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಈ ವಿಷಯದ ಬಗ್ಗೆ ಧ್ವನಿ ಎತ್ತಿದ್ದು, ಸಿಎಂ ಮತ್ತು ಸಾರಿಗೆ ಸಚಿವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಈ ಕುರಿತು ಟ್ವೀಟ್ ಮಾಡಿದ್ದ ಅವರು, ಬೆಂಗಳೂರಿನ ಮೊದಲ ಮತ್ತು ಕೊನೆಯ ಮೈಲಿಯ ಸಂಪರ್ಕಕ್ಕೆ ಆಟೋ ರಿಕ್ಷಾ ಬೆನ್ನೆಲುಬಾಗಿದೆ. ಟೆಕ್ ಅಗ್ರಿಗೇಟರ್‌ಗಳು 30 ರೂ.ಗಳ ನಿಗದಿತ ಮಿತಿಗೆ ವಿರುದ್ಧವಾಗಿ 100 ರೂ. ವಿಧಿಸುವ ಕುರಿತು ನಾವು ಇತ್ತೀಚೆಗೆ ಹಲವು ದೂರುಗಳನ್ನು ಸ್ವೀಕರಿಸಿದ್ದೇವೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಿಗೆ ಮನವಿ ಮಾಡಿದ್ದೇನೆ ಎಂದಿದ್ದರು.

ನಗರದ ಆಟೋ ಯೂನಿಯನ್‌ಗಳು ತಮ್ಮದೇ ಆದ ‘ನಮ್ಮ ಯಾತ್ರಿ’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸುವ ಪ್ರಕ್ರಿಯೆಯಲ್ಲಿವೆ. ಆಟೋರಿಕ್ಷಾ ಚಾಲಕರ ಒಕ್ಕೂಟವು ಬೆಕ್ನ್ ಫೌಂಡೇಶನ್ ಸಹಭಾಗಿತ್ವದಲ್ಲಿ ನವೆಂಬರ್ 1 ರಂದು ಅಪ್ಲಿಕೇಶನ್ ಅನ್ನು ಪ್ರಾರಂಭಿಸುತ್ತದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋರಿಕ್ಷಾ ದರ ಏರಿಕೆ: ಕನಿಷ್ಠ ಬೆಲೆ 25 ರೂ.ನಿಂದ 30 ರೂಪಾಯಿಗೆ ಹೆಚ್ಚಳ

“ನಮ್ಮ ಯಾತ್ರಿ ಅಪ್ಲಿಕೇಶನ್ ಅನ್ನು ನವೆಂಬರ್ 1 ರಿಂದ ಪ್ರಾರಂಭಿಸಲು ನಮ್ಮ ಒಕ್ಕೂಟವು ಯೋಜಿಸಿದೆ. ನಾವು ಸರ್ಕಾರ ನಿಗದಿಪಡಿಸಿದ ದರವನ್ನು ಅನುಸರಿಸುತ್ತೇವೆ. ಅದರ ಮೇಲೆ ಹೆಚ್ಚುವರಿ 10ರೂ. ಅನ್ನು ಪಿಕ್ ಅಪ್ ಶುಲ್ಕವಾಗಿ ಸಂಗ್ರಹಿಸುತ್ತೇವೆ. ಮೆಟ್ರೋ ನಿಲ್ದಾಣಗಳು ಮತ್ತು ನಿವಾಸ/ಕಚೇರಿಗಳ ನಡುವೆ 2 ಕಿಮೀ ವ್ಯಾಪ್ತಿಯಲ್ಲಿ ಫ್ಲಾಟ್ 40 ರೂ. ದರವನ್ನು ಪ್ರಾರಂಭಿಸಲು ನಾವು ಯೋಜಿಸಿದ್ದೇವೆ” ಎಂದು ಎಆರ್‌ಡಿಯು ಅಧ್ಯಕ್ಷ ಡಿ ರುದ್ರಮೂರ್ತಿ ಹೇಳಿದ್ದಾರೆ ಎಂದು ಹಿಂದೂಸ್ತಾನ್ ವರದಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...