Homeಕರ್ನಾಟಕಅಧಿಕ ದರ ನಿಗಧಿ ಆರೋಪ: ಓಲಾ, ಉಬರ್ ಆಟೋ ಸೇವೆ ನಿಲ್ಲಿಸಲು ನೋಟಿಸ್

ಅಧಿಕ ದರ ನಿಗಧಿ ಆರೋಪ: ಓಲಾ, ಉಬರ್ ಆಟೋ ಸೇವೆ ನಿಲ್ಲಿಸಲು ನೋಟಿಸ್

- Advertisement -
- Advertisement -

ರಾಜ್ಯ ಸಾರಿಗೆ ಇಲಾಖೆಯು ಸೆಪ್ಟೆಂಬರ್ 6 ರಂದು ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳಲ್ಲಿ ಓಲಾ, ಉಬರ್ ಮತ್ತು ರಾಪಿಡೋ ಆಟೋ ಸೇವೆಗಳನ್ನು ನಿಲ್ಲಿಸುವಂತೆ ನೋಟಿಸ್ ಜಾರಿ ಮಾಡಿದೆ. ಓಲಾ, ಉಬರ್ ಸೇವೆಗಳು 2 ಕಿಲೋಮೀಟರ್‌ಗಿಂತ ಕಡಿಮೆ ದೂರಕ್ಕೂ 100 ರೂ. ಶುಲ್ಕ ವಿಧಿಸುತ್ತದೆ ಎಂದು ಪ್ರಯಾಣಿಕರು ಸಾರಿಗೆ ಇಲಾಖೆಯಲ್ಲಿ ದೂರು ದಾಖಲಿಸಿದ ನಂತರ ಇಲಾಖೆಯು ಈ ಸೂಚನೆ ನೀಡಿದೆ.

ಪ್ರಸ್ತುತ, ಬೆಂಗಳೂರಿನಲ್ಲಿ ಮೊದಲ 2 ಕಿ.ಮೀಗೆ ಕನಿಷ್ಠ ಆಟೋ ದರವನ್ನು 30 ರೂ.ಗೆ ನಿಗದಿಪಡಿಸಲಾಗಿದೆ. ನಂತರ ಪ್ರತಿ ಕಿಲೋಮೀಟರ್‌ಗೆ 15 ರೂ. ಶುಲ್ಕ ವಿಧಿಸಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕಂಪನಿಗಳು ತಮ್ಮ ಆಟೋ ಸೇವೆಗಳನ್ನು ಆದಷ್ಟು ಬೇಗನೆ ನಿಲ್ಲಿಸಬೇಕು ಮತ್ತು ಟ್ಯಾಕ್ಸಿಗಳಲ್ಲಿ ಪ್ರಯಾಣಿಕರಿಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ವಿಧಿಸಬಾರದು ಎಂದು ಆದೇಶ ಹೇಳಿದೆ. ಆದೇಶವನ್ನು ಅನುಸರಿಸಲು ವಿಫಲವಾದರೆ ಕಾನೂನು ಕ್ರಮ ಜರುಗಿಸುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ಕರ್ನಾಟಕ ಆನ್ ಡಿಮ್ಯಾಂಡ್ ಟ್ರಾನ್ಸ್‌ಪೋರ್ಟೇಶನ್ ಟೆಕ್ನಾಲಜಿ ಅಗ್ರಿಗೇಟರ್ಸ್ ರೂಲ್ಸ್-2016 ರ ಪ್ರಕಾರ ಓಲಾ ಮತ್ತು ಉಬರ್‌ಗೆ ಟ್ಯಾಕ್ಸಿಗಳನ್ನು ಮಾತ್ರ ಓಡಿಸಲು ಪರವಾನಗಿ ನೀಡಲಾಗಿದೆಯೆ ಹೊರತು ಆಟೋಗಳನ್ನು ಓಡಿಸಲು ಅಲ್ಲ ಎಂದು ಸಾರಿಗೆ ಆಯುಕ್ತ ಟಿಎಚ್‌ಎಂ ಕುಮಾರ್ ತಿಳಿಸಿದ್ದಾರೆ.

“ಟ್ಯಾಕ್ಸಿ ಎಂದರೆ ಚಾಲಕನನ್ನು ಹೊರತುಪಡಿಸಿ ಆರು ಪ್ರಯಾಣಿಕರನ್ನು ಮೀರದ ಆಸನ ಸಾಮರ್ಥ್ಯ ಹೊಂದಿರುವ ಮೋಟಾರ್ ಕ್ಯಾಬ್” ಎಂದು ಕುಮಾರ್ ತಿಳಿಸಿದ್ದಾರೆ. ಆಟೋಗಳನ್ನು ಓಡಿಸಲಾಗುತ್ತಿದೆ ಎಂದರೆ ಕಂಪೆನಿಗಳು ನಿಯಮಾವಳಿಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದರ್ಥವಾಗಿದೆ ಎಂದಿದ್ದಾರೆ.

ಸಾರಿಗೆ ಹೆಚ್ಚುವರಿ ಆಯುಕ್ತ ಮತ್ತು ರಾಜ್ಯ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಎಲ್ ಹೇಮಂತ್ ಕುಮಾರ್, “ಕ್ಯಾಬ್-ಅಗ್ರಿಗೇಟರ್ ಪರವಾನಗಿಯೊಂದಿಗೆ ಆಟೋರಿಕ್ಷಾಗಳನ್ನು ಓಡಿಸಬಾರದು. ಅಗ್ರಿಗೇಟರ್ ನಿಯಮಗಳು ಕ್ಯಾಬ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ಆ್ಯಪ್ ಮೂಲಕ ಆಟೋರಿಕ್ಷಾ ಸೇವೆಗಳನ್ನು ನಿಲ್ಲಿಸಲು ಮತ್ತು ವರದಿಯನ್ನು ಸಲ್ಲಿಸಲು ನಾವು ಅವರನ್ನು ಕೇಳಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

ಅಕ್ಟೋಬರ್‌ 6 ರಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಈ ವಿಷಯದ ಬಗ್ಗೆ ಧ್ವನಿ ಎತ್ತಿದ್ದು, ಸಿಎಂ ಮತ್ತು ಸಾರಿಗೆ ಸಚಿವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಈ ಕುರಿತು ಟ್ವೀಟ್ ಮಾಡಿದ್ದ ಅವರು, ಬೆಂಗಳೂರಿನ ಮೊದಲ ಮತ್ತು ಕೊನೆಯ ಮೈಲಿಯ ಸಂಪರ್ಕಕ್ಕೆ ಆಟೋ ರಿಕ್ಷಾ ಬೆನ್ನೆಲುಬಾಗಿದೆ. ಟೆಕ್ ಅಗ್ರಿಗೇಟರ್‌ಗಳು 30 ರೂ.ಗಳ ನಿಗದಿತ ಮಿತಿಗೆ ವಿರುದ್ಧವಾಗಿ 100 ರೂ. ವಿಧಿಸುವ ಕುರಿತು ನಾವು ಇತ್ತೀಚೆಗೆ ಹಲವು ದೂರುಗಳನ್ನು ಸ್ವೀಕರಿಸಿದ್ದೇವೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಿಗೆ ಮನವಿ ಮಾಡಿದ್ದೇನೆ ಎಂದಿದ್ದರು.

ನಗರದ ಆಟೋ ಯೂನಿಯನ್‌ಗಳು ತಮ್ಮದೇ ಆದ ‘ನಮ್ಮ ಯಾತ್ರಿ’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸುವ ಪ್ರಕ್ರಿಯೆಯಲ್ಲಿವೆ. ಆಟೋರಿಕ್ಷಾ ಚಾಲಕರ ಒಕ್ಕೂಟವು ಬೆಕ್ನ್ ಫೌಂಡೇಶನ್ ಸಹಭಾಗಿತ್ವದಲ್ಲಿ ನವೆಂಬರ್ 1 ರಂದು ಅಪ್ಲಿಕೇಶನ್ ಅನ್ನು ಪ್ರಾರಂಭಿಸುತ್ತದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋರಿಕ್ಷಾ ದರ ಏರಿಕೆ: ಕನಿಷ್ಠ ಬೆಲೆ 25 ರೂ.ನಿಂದ 30 ರೂಪಾಯಿಗೆ ಹೆಚ್ಚಳ

“ನಮ್ಮ ಯಾತ್ರಿ ಅಪ್ಲಿಕೇಶನ್ ಅನ್ನು ನವೆಂಬರ್ 1 ರಿಂದ ಪ್ರಾರಂಭಿಸಲು ನಮ್ಮ ಒಕ್ಕೂಟವು ಯೋಜಿಸಿದೆ. ನಾವು ಸರ್ಕಾರ ನಿಗದಿಪಡಿಸಿದ ದರವನ್ನು ಅನುಸರಿಸುತ್ತೇವೆ. ಅದರ ಮೇಲೆ ಹೆಚ್ಚುವರಿ 10ರೂ. ಅನ್ನು ಪಿಕ್ ಅಪ್ ಶುಲ್ಕವಾಗಿ ಸಂಗ್ರಹಿಸುತ್ತೇವೆ. ಮೆಟ್ರೋ ನಿಲ್ದಾಣಗಳು ಮತ್ತು ನಿವಾಸ/ಕಚೇರಿಗಳ ನಡುವೆ 2 ಕಿಮೀ ವ್ಯಾಪ್ತಿಯಲ್ಲಿ ಫ್ಲಾಟ್ 40 ರೂ. ದರವನ್ನು ಪ್ರಾರಂಭಿಸಲು ನಾವು ಯೋಜಿಸಿದ್ದೇವೆ” ಎಂದು ಎಆರ್‌ಡಿಯು ಅಧ್ಯಕ್ಷ ಡಿ ರುದ್ರಮೂರ್ತಿ ಹೇಳಿದ್ದಾರೆ ಎಂದು ಹಿಂದೂಸ್ತಾನ್ ವರದಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...