Homeಕರ್ನಾಟಕಅಧಿಕ ದರ ನಿಗಧಿ ಆರೋಪ: ಓಲಾ, ಉಬರ್ ಆಟೋ ಸೇವೆ ನಿಲ್ಲಿಸಲು ನೋಟಿಸ್

ಅಧಿಕ ದರ ನಿಗಧಿ ಆರೋಪ: ಓಲಾ, ಉಬರ್ ಆಟೋ ಸೇವೆ ನಿಲ್ಲಿಸಲು ನೋಟಿಸ್

- Advertisement -
- Advertisement -

ರಾಜ್ಯ ಸಾರಿಗೆ ಇಲಾಖೆಯು ಸೆಪ್ಟೆಂಬರ್ 6 ರಂದು ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳಲ್ಲಿ ಓಲಾ, ಉಬರ್ ಮತ್ತು ರಾಪಿಡೋ ಆಟೋ ಸೇವೆಗಳನ್ನು ನಿಲ್ಲಿಸುವಂತೆ ನೋಟಿಸ್ ಜಾರಿ ಮಾಡಿದೆ. ಓಲಾ, ಉಬರ್ ಸೇವೆಗಳು 2 ಕಿಲೋಮೀಟರ್‌ಗಿಂತ ಕಡಿಮೆ ದೂರಕ್ಕೂ 100 ರೂ. ಶುಲ್ಕ ವಿಧಿಸುತ್ತದೆ ಎಂದು ಪ್ರಯಾಣಿಕರು ಸಾರಿಗೆ ಇಲಾಖೆಯಲ್ಲಿ ದೂರು ದಾಖಲಿಸಿದ ನಂತರ ಇಲಾಖೆಯು ಈ ಸೂಚನೆ ನೀಡಿದೆ.

ಪ್ರಸ್ತುತ, ಬೆಂಗಳೂರಿನಲ್ಲಿ ಮೊದಲ 2 ಕಿ.ಮೀಗೆ ಕನಿಷ್ಠ ಆಟೋ ದರವನ್ನು 30 ರೂ.ಗೆ ನಿಗದಿಪಡಿಸಲಾಗಿದೆ. ನಂತರ ಪ್ರತಿ ಕಿಲೋಮೀಟರ್‌ಗೆ 15 ರೂ. ಶುಲ್ಕ ವಿಧಿಸಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕಂಪನಿಗಳು ತಮ್ಮ ಆಟೋ ಸೇವೆಗಳನ್ನು ಆದಷ್ಟು ಬೇಗನೆ ನಿಲ್ಲಿಸಬೇಕು ಮತ್ತು ಟ್ಯಾಕ್ಸಿಗಳಲ್ಲಿ ಪ್ರಯಾಣಿಕರಿಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ವಿಧಿಸಬಾರದು ಎಂದು ಆದೇಶ ಹೇಳಿದೆ. ಆದೇಶವನ್ನು ಅನುಸರಿಸಲು ವಿಫಲವಾದರೆ ಕಾನೂನು ಕ್ರಮ ಜರುಗಿಸುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ಕರ್ನಾಟಕ ಆನ್ ಡಿಮ್ಯಾಂಡ್ ಟ್ರಾನ್ಸ್‌ಪೋರ್ಟೇಶನ್ ಟೆಕ್ನಾಲಜಿ ಅಗ್ರಿಗೇಟರ್ಸ್ ರೂಲ್ಸ್-2016 ರ ಪ್ರಕಾರ ಓಲಾ ಮತ್ತು ಉಬರ್‌ಗೆ ಟ್ಯಾಕ್ಸಿಗಳನ್ನು ಮಾತ್ರ ಓಡಿಸಲು ಪರವಾನಗಿ ನೀಡಲಾಗಿದೆಯೆ ಹೊರತು ಆಟೋಗಳನ್ನು ಓಡಿಸಲು ಅಲ್ಲ ಎಂದು ಸಾರಿಗೆ ಆಯುಕ್ತ ಟಿಎಚ್‌ಎಂ ಕುಮಾರ್ ತಿಳಿಸಿದ್ದಾರೆ.

“ಟ್ಯಾಕ್ಸಿ ಎಂದರೆ ಚಾಲಕನನ್ನು ಹೊರತುಪಡಿಸಿ ಆರು ಪ್ರಯಾಣಿಕರನ್ನು ಮೀರದ ಆಸನ ಸಾಮರ್ಥ್ಯ ಹೊಂದಿರುವ ಮೋಟಾರ್ ಕ್ಯಾಬ್” ಎಂದು ಕುಮಾರ್ ತಿಳಿಸಿದ್ದಾರೆ. ಆಟೋಗಳನ್ನು ಓಡಿಸಲಾಗುತ್ತಿದೆ ಎಂದರೆ ಕಂಪೆನಿಗಳು ನಿಯಮಾವಳಿಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದರ್ಥವಾಗಿದೆ ಎಂದಿದ್ದಾರೆ.

ಸಾರಿಗೆ ಹೆಚ್ಚುವರಿ ಆಯುಕ್ತ ಮತ್ತು ರಾಜ್ಯ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಎಲ್ ಹೇಮಂತ್ ಕುಮಾರ್, “ಕ್ಯಾಬ್-ಅಗ್ರಿಗೇಟರ್ ಪರವಾನಗಿಯೊಂದಿಗೆ ಆಟೋರಿಕ್ಷಾಗಳನ್ನು ಓಡಿಸಬಾರದು. ಅಗ್ರಿಗೇಟರ್ ನಿಯಮಗಳು ಕ್ಯಾಬ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ಆ್ಯಪ್ ಮೂಲಕ ಆಟೋರಿಕ್ಷಾ ಸೇವೆಗಳನ್ನು ನಿಲ್ಲಿಸಲು ಮತ್ತು ವರದಿಯನ್ನು ಸಲ್ಲಿಸಲು ನಾವು ಅವರನ್ನು ಕೇಳಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

ಅಕ್ಟೋಬರ್‌ 6 ರಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಈ ವಿಷಯದ ಬಗ್ಗೆ ಧ್ವನಿ ಎತ್ತಿದ್ದು, ಸಿಎಂ ಮತ್ತು ಸಾರಿಗೆ ಸಚಿವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಈ ಕುರಿತು ಟ್ವೀಟ್ ಮಾಡಿದ್ದ ಅವರು, ಬೆಂಗಳೂರಿನ ಮೊದಲ ಮತ್ತು ಕೊನೆಯ ಮೈಲಿಯ ಸಂಪರ್ಕಕ್ಕೆ ಆಟೋ ರಿಕ್ಷಾ ಬೆನ್ನೆಲುಬಾಗಿದೆ. ಟೆಕ್ ಅಗ್ರಿಗೇಟರ್‌ಗಳು 30 ರೂ.ಗಳ ನಿಗದಿತ ಮಿತಿಗೆ ವಿರುದ್ಧವಾಗಿ 100 ರೂ. ವಿಧಿಸುವ ಕುರಿತು ನಾವು ಇತ್ತೀಚೆಗೆ ಹಲವು ದೂರುಗಳನ್ನು ಸ್ವೀಕರಿಸಿದ್ದೇವೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಿಗೆ ಮನವಿ ಮಾಡಿದ್ದೇನೆ ಎಂದಿದ್ದರು.

ನಗರದ ಆಟೋ ಯೂನಿಯನ್‌ಗಳು ತಮ್ಮದೇ ಆದ ‘ನಮ್ಮ ಯಾತ್ರಿ’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸುವ ಪ್ರಕ್ರಿಯೆಯಲ್ಲಿವೆ. ಆಟೋರಿಕ್ಷಾ ಚಾಲಕರ ಒಕ್ಕೂಟವು ಬೆಕ್ನ್ ಫೌಂಡೇಶನ್ ಸಹಭಾಗಿತ್ವದಲ್ಲಿ ನವೆಂಬರ್ 1 ರಂದು ಅಪ್ಲಿಕೇಶನ್ ಅನ್ನು ಪ್ರಾರಂಭಿಸುತ್ತದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋರಿಕ್ಷಾ ದರ ಏರಿಕೆ: ಕನಿಷ್ಠ ಬೆಲೆ 25 ರೂ.ನಿಂದ 30 ರೂಪಾಯಿಗೆ ಹೆಚ್ಚಳ

“ನಮ್ಮ ಯಾತ್ರಿ ಅಪ್ಲಿಕೇಶನ್ ಅನ್ನು ನವೆಂಬರ್ 1 ರಿಂದ ಪ್ರಾರಂಭಿಸಲು ನಮ್ಮ ಒಕ್ಕೂಟವು ಯೋಜಿಸಿದೆ. ನಾವು ಸರ್ಕಾರ ನಿಗದಿಪಡಿಸಿದ ದರವನ್ನು ಅನುಸರಿಸುತ್ತೇವೆ. ಅದರ ಮೇಲೆ ಹೆಚ್ಚುವರಿ 10ರೂ. ಅನ್ನು ಪಿಕ್ ಅಪ್ ಶುಲ್ಕವಾಗಿ ಸಂಗ್ರಹಿಸುತ್ತೇವೆ. ಮೆಟ್ರೋ ನಿಲ್ದಾಣಗಳು ಮತ್ತು ನಿವಾಸ/ಕಚೇರಿಗಳ ನಡುವೆ 2 ಕಿಮೀ ವ್ಯಾಪ್ತಿಯಲ್ಲಿ ಫ್ಲಾಟ್ 40 ರೂ. ದರವನ್ನು ಪ್ರಾರಂಭಿಸಲು ನಾವು ಯೋಜಿಸಿದ್ದೇವೆ” ಎಂದು ಎಆರ್‌ಡಿಯು ಅಧ್ಯಕ್ಷ ಡಿ ರುದ್ರಮೂರ್ತಿ ಹೇಳಿದ್ದಾರೆ ಎಂದು ಹಿಂದೂಸ್ತಾನ್ ವರದಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...