Homeಕರ್ನಾಟಕಅಧಿಕ ದರ ನಿಗಧಿ ಆರೋಪ: ಓಲಾ, ಉಬರ್ ಆಟೋ ಸೇವೆ ನಿಲ್ಲಿಸಲು ನೋಟಿಸ್

ಅಧಿಕ ದರ ನಿಗಧಿ ಆರೋಪ: ಓಲಾ, ಉಬರ್ ಆಟೋ ಸೇವೆ ನಿಲ್ಲಿಸಲು ನೋಟಿಸ್

- Advertisement -
- Advertisement -

ರಾಜ್ಯ ಸಾರಿಗೆ ಇಲಾಖೆಯು ಸೆಪ್ಟೆಂಬರ್ 6 ರಂದು ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳಲ್ಲಿ ಓಲಾ, ಉಬರ್ ಮತ್ತು ರಾಪಿಡೋ ಆಟೋ ಸೇವೆಗಳನ್ನು ನಿಲ್ಲಿಸುವಂತೆ ನೋಟಿಸ್ ಜಾರಿ ಮಾಡಿದೆ. ಓಲಾ, ಉಬರ್ ಸೇವೆಗಳು 2 ಕಿಲೋಮೀಟರ್‌ಗಿಂತ ಕಡಿಮೆ ದೂರಕ್ಕೂ 100 ರೂ. ಶುಲ್ಕ ವಿಧಿಸುತ್ತದೆ ಎಂದು ಪ್ರಯಾಣಿಕರು ಸಾರಿಗೆ ಇಲಾಖೆಯಲ್ಲಿ ದೂರು ದಾಖಲಿಸಿದ ನಂತರ ಇಲಾಖೆಯು ಈ ಸೂಚನೆ ನೀಡಿದೆ.

ಪ್ರಸ್ತುತ, ಬೆಂಗಳೂರಿನಲ್ಲಿ ಮೊದಲ 2 ಕಿ.ಮೀಗೆ ಕನಿಷ್ಠ ಆಟೋ ದರವನ್ನು 30 ರೂ.ಗೆ ನಿಗದಿಪಡಿಸಲಾಗಿದೆ. ನಂತರ ಪ್ರತಿ ಕಿಲೋಮೀಟರ್‌ಗೆ 15 ರೂ. ಶುಲ್ಕ ವಿಧಿಸಲಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕಂಪನಿಗಳು ತಮ್ಮ ಆಟೋ ಸೇವೆಗಳನ್ನು ಆದಷ್ಟು ಬೇಗನೆ ನಿಲ್ಲಿಸಬೇಕು ಮತ್ತು ಟ್ಯಾಕ್ಸಿಗಳಲ್ಲಿ ಪ್ರಯಾಣಿಕರಿಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ವಿಧಿಸಬಾರದು ಎಂದು ಆದೇಶ ಹೇಳಿದೆ. ಆದೇಶವನ್ನು ಅನುಸರಿಸಲು ವಿಫಲವಾದರೆ ಕಾನೂನು ಕ್ರಮ ಜರುಗಿಸುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ಕರ್ನಾಟಕ ಆನ್ ಡಿಮ್ಯಾಂಡ್ ಟ್ರಾನ್ಸ್‌ಪೋರ್ಟೇಶನ್ ಟೆಕ್ನಾಲಜಿ ಅಗ್ರಿಗೇಟರ್ಸ್ ರೂಲ್ಸ್-2016 ರ ಪ್ರಕಾರ ಓಲಾ ಮತ್ತು ಉಬರ್‌ಗೆ ಟ್ಯಾಕ್ಸಿಗಳನ್ನು ಮಾತ್ರ ಓಡಿಸಲು ಪರವಾನಗಿ ನೀಡಲಾಗಿದೆಯೆ ಹೊರತು ಆಟೋಗಳನ್ನು ಓಡಿಸಲು ಅಲ್ಲ ಎಂದು ಸಾರಿಗೆ ಆಯುಕ್ತ ಟಿಎಚ್‌ಎಂ ಕುಮಾರ್ ತಿಳಿಸಿದ್ದಾರೆ.

“ಟ್ಯಾಕ್ಸಿ ಎಂದರೆ ಚಾಲಕನನ್ನು ಹೊರತುಪಡಿಸಿ ಆರು ಪ್ರಯಾಣಿಕರನ್ನು ಮೀರದ ಆಸನ ಸಾಮರ್ಥ್ಯ ಹೊಂದಿರುವ ಮೋಟಾರ್ ಕ್ಯಾಬ್” ಎಂದು ಕುಮಾರ್ ತಿಳಿಸಿದ್ದಾರೆ. ಆಟೋಗಳನ್ನು ಓಡಿಸಲಾಗುತ್ತಿದೆ ಎಂದರೆ ಕಂಪೆನಿಗಳು ನಿಯಮಾವಳಿಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದರ್ಥವಾಗಿದೆ ಎಂದಿದ್ದಾರೆ.

ಸಾರಿಗೆ ಹೆಚ್ಚುವರಿ ಆಯುಕ್ತ ಮತ್ತು ರಾಜ್ಯ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಎಲ್ ಹೇಮಂತ್ ಕುಮಾರ್, “ಕ್ಯಾಬ್-ಅಗ್ರಿಗೇಟರ್ ಪರವಾನಗಿಯೊಂದಿಗೆ ಆಟೋರಿಕ್ಷಾಗಳನ್ನು ಓಡಿಸಬಾರದು. ಅಗ್ರಿಗೇಟರ್ ನಿಯಮಗಳು ಕ್ಯಾಬ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ಆ್ಯಪ್ ಮೂಲಕ ಆಟೋರಿಕ್ಷಾ ಸೇವೆಗಳನ್ನು ನಿಲ್ಲಿಸಲು ಮತ್ತು ವರದಿಯನ್ನು ಸಲ್ಲಿಸಲು ನಾವು ಅವರನ್ನು ಕೇಳಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

ಅಕ್ಟೋಬರ್‌ 6 ರಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಈ ವಿಷಯದ ಬಗ್ಗೆ ಧ್ವನಿ ಎತ್ತಿದ್ದು, ಸಿಎಂ ಮತ್ತು ಸಾರಿಗೆ ಸಚಿವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಈ ಕುರಿತು ಟ್ವೀಟ್ ಮಾಡಿದ್ದ ಅವರು, ಬೆಂಗಳೂರಿನ ಮೊದಲ ಮತ್ತು ಕೊನೆಯ ಮೈಲಿಯ ಸಂಪರ್ಕಕ್ಕೆ ಆಟೋ ರಿಕ್ಷಾ ಬೆನ್ನೆಲುಬಾಗಿದೆ. ಟೆಕ್ ಅಗ್ರಿಗೇಟರ್‌ಗಳು 30 ರೂ.ಗಳ ನಿಗದಿತ ಮಿತಿಗೆ ವಿರುದ್ಧವಾಗಿ 100 ರೂ. ವಿಧಿಸುವ ಕುರಿತು ನಾವು ಇತ್ತೀಚೆಗೆ ಹಲವು ದೂರುಗಳನ್ನು ಸ್ವೀಕರಿಸಿದ್ದೇವೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಿಗೆ ಮನವಿ ಮಾಡಿದ್ದೇನೆ ಎಂದಿದ್ದರು.

ನಗರದ ಆಟೋ ಯೂನಿಯನ್‌ಗಳು ತಮ್ಮದೇ ಆದ ‘ನಮ್ಮ ಯಾತ್ರಿ’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸುವ ಪ್ರಕ್ರಿಯೆಯಲ್ಲಿವೆ. ಆಟೋರಿಕ್ಷಾ ಚಾಲಕರ ಒಕ್ಕೂಟವು ಬೆಕ್ನ್ ಫೌಂಡೇಶನ್ ಸಹಭಾಗಿತ್ವದಲ್ಲಿ ನವೆಂಬರ್ 1 ರಂದು ಅಪ್ಲಿಕೇಶನ್ ಅನ್ನು ಪ್ರಾರಂಭಿಸುತ್ತದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋರಿಕ್ಷಾ ದರ ಏರಿಕೆ: ಕನಿಷ್ಠ ಬೆಲೆ 25 ರೂ.ನಿಂದ 30 ರೂಪಾಯಿಗೆ ಹೆಚ್ಚಳ

“ನಮ್ಮ ಯಾತ್ರಿ ಅಪ್ಲಿಕೇಶನ್ ಅನ್ನು ನವೆಂಬರ್ 1 ರಿಂದ ಪ್ರಾರಂಭಿಸಲು ನಮ್ಮ ಒಕ್ಕೂಟವು ಯೋಜಿಸಿದೆ. ನಾವು ಸರ್ಕಾರ ನಿಗದಿಪಡಿಸಿದ ದರವನ್ನು ಅನುಸರಿಸುತ್ತೇವೆ. ಅದರ ಮೇಲೆ ಹೆಚ್ಚುವರಿ 10ರೂ. ಅನ್ನು ಪಿಕ್ ಅಪ್ ಶುಲ್ಕವಾಗಿ ಸಂಗ್ರಹಿಸುತ್ತೇವೆ. ಮೆಟ್ರೋ ನಿಲ್ದಾಣಗಳು ಮತ್ತು ನಿವಾಸ/ಕಚೇರಿಗಳ ನಡುವೆ 2 ಕಿಮೀ ವ್ಯಾಪ್ತಿಯಲ್ಲಿ ಫ್ಲಾಟ್ 40 ರೂ. ದರವನ್ನು ಪ್ರಾರಂಭಿಸಲು ನಾವು ಯೋಜಿಸಿದ್ದೇವೆ” ಎಂದು ಎಆರ್‌ಡಿಯು ಅಧ್ಯಕ್ಷ ಡಿ ರುದ್ರಮೂರ್ತಿ ಹೇಳಿದ್ದಾರೆ ಎಂದು ಹಿಂದೂಸ್ತಾನ್ ವರದಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...