Homeಕರ್ನಾಟಕಬೆಂಗಳೂರು ದಕ್ಷಿಣ ಕ್ಷೇತ್ರದ ಮತಗಟ್ಟೆಯೊಂದರಲ್ಲಿ 'ನಕಲಿ ಮತದಾನ'!

ಬೆಂಗಳೂರು ದಕ್ಷಿಣ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ‘ನಕಲಿ ಮತದಾನ’!

- Advertisement -
- Advertisement -

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಟಿಎಂ ಲೇಔಟ್‌ನ ಮತಗಟ್ಟೆಯಲ್ಲಿ ನಕಲಿ ಮತದಾನ ನಡೆದಿರುವ ಆರೋಪ ಕೇಳಿ ಬಂದಿದೆ.

ಈ ಕ್ಷೇತ್ರದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಮತ್ತು ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಸ್ಪರ್ಧಿಸುತ್ತಿದ್ದಾರೆ. ನಕಲಿ ಮತದಾನ ನಡೆದಿರುವ ಆರೋಪದ ಬಳಿಕ ಕಾಂಗ್ರೆಸ್ ನಾಯಕರು ಮಧ್ಯಪ್ರವೇಶಿಸಿದ್ದು, ಸಂಬಂಧಿತ ನಿಯಮಗಳ ಅಡಿಯಲ್ಲಿ ಮತ ಚಲಾಯಿಸಲು ಅವಕಾಶ ಮಾಡಿಕೊಡಲಾಗಿದೆ.

ಬೆಂಗಳೂರಿನ ಬಿಟಿಎಂ ಲೇಔಟ್‌ನ ನಲವತ್ತು ವರ್ಷದ ಸುಲ್ತಾನಾ ಮತ ಚಲಾಯಿಸಲು ಬೂತ್‌ ಸಂಖ್ಯೆ 195ಕ್ಕೆ ತೆರಳಿದ್ದರು, ಆದರೆ ಅವರ ಮತವನ್ನು ಈಗಾಗಲೇ ಹಾಕಲಾಗಿದೆ ಎಂದು ಮತಗಟ್ಟೆಯ ಸಿಬ್ಬಂದಿಗಳು ಹೇಳಿದ್ದಾರೆ. ಮಧ್ಯಾಹ್ನ 12.30ರ ಸುಮಾರಿಗೆ ನಾನು ಬೂತ್‌ಗೆ ಹೋದಾಗ ಚುನಾವಣಾ ಆಯೋಗದ ಅಧಿಕಾರಿಗಳು, ನಾನು ಈಗಾಗಲೇ ಮತವನ್ನು ಹಾಕಲಾಗಿದೆ ಎಂದು ಹೇಳಿದ್ದಾರೆ. ಇನ್ನೂ ಅನೇಕರಿಗೆ ಈ ರೀತಿ ಹೇಳುತ್ತಿರುವುದನ್ನು ನಾನು ಗಮನಿಸಿದ್ದೇನೆ ಎಂದು ಸುಲ್ತಾನಾ ಹೇಳಿದ್ದಾರೆ.

ಈ ಬಗ್ಗೆ ಚುನಾವಣಾಧಿಕಾರಿಗಳನ್ನು ಪ್ರಶ್ನಿಸಿದಾಗ, ಬುರ್ಖಾ ಧರಿಸಿದ್ದರಿಂದ ನಮಗೆ ಸರಿಯಾಗಿ ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಮತದಾರರು ಮತ್ತು ಚುನಾವಣಾಧಿಕಾರಿಗಳ ನಡುವಿನ ವಾಗ್ವಾದದ ವಿಡಿಯೋ ವೈರಲ್‌ ಆಗಿದೆ, ಮತದಾರರು ಮತಗಟ್ಟೆಯೊಳಗೆ ಅಧಿಕಾರಿಗಳನ್ನು ಪ್ರಶ್ನಿಸುತ್ತಿರುವುದನ್ನು ವಿಡಿಯೋ ತೋರಿಸುತ್ತಿದೆ. ಅದೇ ಮತಗಟ್ಟೆಯ ಇತರ ಇಬ್ಬರು ಮತದಾರರು ಕೂಡ  ತಮ್ಮ ಮತಗಳನ್ನು ಬೇರೆ ಯಾರೋ ಚಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಕಲಿ ಮತಗಳ ನಿಖರ ಸಂಖ್ಯೆ ಸರಿಯಾಗಿ ತಿಳಿದು ಬಂದಿಲ್ಲ. ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಮೇಯರ್ ಬಿಎನ್ ಮಂಜುನಾಥ್ ರೆಡ್ಡಿ, ಆ ಮತಗಟ್ಟೆಯಲ್ಲಿ 9 ಮತದಾರರು ಇದೇ ಪರಿಸ್ಥಿತಿ ಎದುರಿಸಿದ್ದಾರೆ. ನಾವು ರಿಜಿಸ್ಟರ್‌ನಲ್ಲಿ  ನಕಲಿ ಮತದಾನ ಮಾಡಿದವರ ಸಹಿಯನ್ನು ತೋರಿಸಲು ಅಧಿಕಾರಿಗಳನ್ನು ಕೇಳಿದಾಗ, ಚುನಾವಣಾ ಅಧಿಕಾರಿಗಳು ನಿರಾಕರಿಸಿದರು. ಸಾಕಷ್ಟು ಪ್ರತಿಭಟನೆ ಮತ್ತು ವಾದದ ನಂತರ ಅವರು ಅಂತಿಮವಾಗಿ 5.30ಕ್ಕೆ ಜನರಿಗೆ ಮತ ಚಲಾಯಿಸಲು ಅವಕಾಶ ಮಾಡಿಕೊಟ್ಟರು ಎಂದು ಹೇಳಿದ್ದಾರೆ.

ಚುನಾವಣಾ ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ಇಂತಹ ಒಂದೇ ಒಂದು ಘಟನೆ ಮಾತ್ರ ನಡೆದಿದೆ. ನಾವು ಟೆಂಡರ್ ಮತದಾನಕ್ಕೆ ಅವಕಾಶ ನೀಡಿದ್ದೇವೆಯೇ ಹೊರತು ಸವಾಲಿನ ಮತಕ್ಕಲ್ಲ. ಘಟನೆ ಬೆಳಕಿಗೆ ಬಂದ ನಂತರ ಮತಗಟ್ಟೆ ಅಧಿಕಾರಿಯನ್ನು ಬದಲಾಯಿಸಲಾಗಿದೆ ಎಂದು ಹೇಳಿದ್ದಾರೆ.

ಸಂತ್ರಸ್ತ ಮತದಾರರಿಗೆ ಚಾಲೆಂಜಿಂಗ್‌ ವೋಟ್‌’ ಹಾಕಲು ಅವಕಾಶ ನೀಡಬೇಕಿತ್ತು ಆದರೆ ಅಧಿಕಾರಿಗಳು ಅದಕ್ಕೆ ಅವಕಾಶ ನೀಡಲಿಲ್ಲ. ಬದಲಿಗೆ ಟೆಂಡರ್ ಮತದಾನಕ್ಕೆ ಅವಕಾಶ ನೀಡಿದ್ದಾರೆ ಎಂದು ಮಂಜುನಾಥ್ ರೆಡ್ಡಿ ಹೇಳಿದ್ದಾರೆ. ಮತದಾರರು ತಮ್ಮ ಬದಲಿಗೆ ಯಾರಾದರೂ ಮೊದಲೇ ಮತದಾನ ಮಾಡಿದ್ದರೆ 49P ಅಡಿಯಲ್ಲಿ ಮತ್ತೆ ಮತ ಚಲಾಯಿಸಬಹುದು. ಈ ಟೆಂಡರ್ ಮತಗಳನ್ನು ಬ್ಯಾಲೆಟ್ ಪೇಪರ್‌ಗಳಲ್ಲಿ ಹಾಕಲಾಗುತ್ತದೆ. ಪ್ರತ್ಯೇಕವಾಗಿ ವಿನ್ಯಾಸ ಮಾಡಿರುವ ಬ್ಯಾಲೆಟ್ ಪೇಪರ್‌ನಲ್ಲಿ ಮತ ಚಲಾಯಿಸಲು ಮತದಾರರಿಗೆ ಅವಕಾಶ ಮಾಡಿಕೊಡಲಾಗುತ್ತದೆ.

ಇದನ್ನು ಓದಿ:ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...