Homeಕರ್ನಾಟಕಬೆಂಗಳೂರು ದಕ್ಷಿಣ ಕ್ಷೇತ್ರದ ಮತಗಟ್ಟೆಯೊಂದರಲ್ಲಿ 'ನಕಲಿ ಮತದಾನ'!

ಬೆಂಗಳೂರು ದಕ್ಷಿಣ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ‘ನಕಲಿ ಮತದಾನ’!

- Advertisement -
- Advertisement -

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಟಿಎಂ ಲೇಔಟ್‌ನ ಮತಗಟ್ಟೆಯಲ್ಲಿ ನಕಲಿ ಮತದಾನ ನಡೆದಿರುವ ಆರೋಪ ಕೇಳಿ ಬಂದಿದೆ.

ಈ ಕ್ಷೇತ್ರದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಮತ್ತು ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಸ್ಪರ್ಧಿಸುತ್ತಿದ್ದಾರೆ. ನಕಲಿ ಮತದಾನ ನಡೆದಿರುವ ಆರೋಪದ ಬಳಿಕ ಕಾಂಗ್ರೆಸ್ ನಾಯಕರು ಮಧ್ಯಪ್ರವೇಶಿಸಿದ್ದು, ಸಂಬಂಧಿತ ನಿಯಮಗಳ ಅಡಿಯಲ್ಲಿ ಮತ ಚಲಾಯಿಸಲು ಅವಕಾಶ ಮಾಡಿಕೊಡಲಾಗಿದೆ.

ಬೆಂಗಳೂರಿನ ಬಿಟಿಎಂ ಲೇಔಟ್‌ನ ನಲವತ್ತು ವರ್ಷದ ಸುಲ್ತಾನಾ ಮತ ಚಲಾಯಿಸಲು ಬೂತ್‌ ಸಂಖ್ಯೆ 195ಕ್ಕೆ ತೆರಳಿದ್ದರು, ಆದರೆ ಅವರ ಮತವನ್ನು ಈಗಾಗಲೇ ಹಾಕಲಾಗಿದೆ ಎಂದು ಮತಗಟ್ಟೆಯ ಸಿಬ್ಬಂದಿಗಳು ಹೇಳಿದ್ದಾರೆ. ಮಧ್ಯಾಹ್ನ 12.30ರ ಸುಮಾರಿಗೆ ನಾನು ಬೂತ್‌ಗೆ ಹೋದಾಗ ಚುನಾವಣಾ ಆಯೋಗದ ಅಧಿಕಾರಿಗಳು, ನಾನು ಈಗಾಗಲೇ ಮತವನ್ನು ಹಾಕಲಾಗಿದೆ ಎಂದು ಹೇಳಿದ್ದಾರೆ. ಇನ್ನೂ ಅನೇಕರಿಗೆ ಈ ರೀತಿ ಹೇಳುತ್ತಿರುವುದನ್ನು ನಾನು ಗಮನಿಸಿದ್ದೇನೆ ಎಂದು ಸುಲ್ತಾನಾ ಹೇಳಿದ್ದಾರೆ.

ಈ ಬಗ್ಗೆ ಚುನಾವಣಾಧಿಕಾರಿಗಳನ್ನು ಪ್ರಶ್ನಿಸಿದಾಗ, ಬುರ್ಖಾ ಧರಿಸಿದ್ದರಿಂದ ನಮಗೆ ಸರಿಯಾಗಿ ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಮತದಾರರು ಮತ್ತು ಚುನಾವಣಾಧಿಕಾರಿಗಳ ನಡುವಿನ ವಾಗ್ವಾದದ ವಿಡಿಯೋ ವೈರಲ್‌ ಆಗಿದೆ, ಮತದಾರರು ಮತಗಟ್ಟೆಯೊಳಗೆ ಅಧಿಕಾರಿಗಳನ್ನು ಪ್ರಶ್ನಿಸುತ್ತಿರುವುದನ್ನು ವಿಡಿಯೋ ತೋರಿಸುತ್ತಿದೆ. ಅದೇ ಮತಗಟ್ಟೆಯ ಇತರ ಇಬ್ಬರು ಮತದಾರರು ಕೂಡ  ತಮ್ಮ ಮತಗಳನ್ನು ಬೇರೆ ಯಾರೋ ಚಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಕಲಿ ಮತಗಳ ನಿಖರ ಸಂಖ್ಯೆ ಸರಿಯಾಗಿ ತಿಳಿದು ಬಂದಿಲ್ಲ. ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಮೇಯರ್ ಬಿಎನ್ ಮಂಜುನಾಥ್ ರೆಡ್ಡಿ, ಆ ಮತಗಟ್ಟೆಯಲ್ಲಿ 9 ಮತದಾರರು ಇದೇ ಪರಿಸ್ಥಿತಿ ಎದುರಿಸಿದ್ದಾರೆ. ನಾವು ರಿಜಿಸ್ಟರ್‌ನಲ್ಲಿ  ನಕಲಿ ಮತದಾನ ಮಾಡಿದವರ ಸಹಿಯನ್ನು ತೋರಿಸಲು ಅಧಿಕಾರಿಗಳನ್ನು ಕೇಳಿದಾಗ, ಚುನಾವಣಾ ಅಧಿಕಾರಿಗಳು ನಿರಾಕರಿಸಿದರು. ಸಾಕಷ್ಟು ಪ್ರತಿಭಟನೆ ಮತ್ತು ವಾದದ ನಂತರ ಅವರು ಅಂತಿಮವಾಗಿ 5.30ಕ್ಕೆ ಜನರಿಗೆ ಮತ ಚಲಾಯಿಸಲು ಅವಕಾಶ ಮಾಡಿಕೊಟ್ಟರು ಎಂದು ಹೇಳಿದ್ದಾರೆ.

ಚುನಾವಣಾ ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ಇಂತಹ ಒಂದೇ ಒಂದು ಘಟನೆ ಮಾತ್ರ ನಡೆದಿದೆ. ನಾವು ಟೆಂಡರ್ ಮತದಾನಕ್ಕೆ ಅವಕಾಶ ನೀಡಿದ್ದೇವೆಯೇ ಹೊರತು ಸವಾಲಿನ ಮತಕ್ಕಲ್ಲ. ಘಟನೆ ಬೆಳಕಿಗೆ ಬಂದ ನಂತರ ಮತಗಟ್ಟೆ ಅಧಿಕಾರಿಯನ್ನು ಬದಲಾಯಿಸಲಾಗಿದೆ ಎಂದು ಹೇಳಿದ್ದಾರೆ.

ಸಂತ್ರಸ್ತ ಮತದಾರರಿಗೆ ಚಾಲೆಂಜಿಂಗ್‌ ವೋಟ್‌’ ಹಾಕಲು ಅವಕಾಶ ನೀಡಬೇಕಿತ್ತು ಆದರೆ ಅಧಿಕಾರಿಗಳು ಅದಕ್ಕೆ ಅವಕಾಶ ನೀಡಲಿಲ್ಲ. ಬದಲಿಗೆ ಟೆಂಡರ್ ಮತದಾನಕ್ಕೆ ಅವಕಾಶ ನೀಡಿದ್ದಾರೆ ಎಂದು ಮಂಜುನಾಥ್ ರೆಡ್ಡಿ ಹೇಳಿದ್ದಾರೆ. ಮತದಾರರು ತಮ್ಮ ಬದಲಿಗೆ ಯಾರಾದರೂ ಮೊದಲೇ ಮತದಾನ ಮಾಡಿದ್ದರೆ 49P ಅಡಿಯಲ್ಲಿ ಮತ್ತೆ ಮತ ಚಲಾಯಿಸಬಹುದು. ಈ ಟೆಂಡರ್ ಮತಗಳನ್ನು ಬ್ಯಾಲೆಟ್ ಪೇಪರ್‌ಗಳಲ್ಲಿ ಹಾಕಲಾಗುತ್ತದೆ. ಪ್ರತ್ಯೇಕವಾಗಿ ವಿನ್ಯಾಸ ಮಾಡಿರುವ ಬ್ಯಾಲೆಟ್ ಪೇಪರ್‌ನಲ್ಲಿ ಮತ ಚಲಾಯಿಸಲು ಮತದಾರರಿಗೆ ಅವಕಾಶ ಮಾಡಿಕೊಡಲಾಗುತ್ತದೆ.

ಇದನ್ನು ಓದಿ:ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...