Homeಕರ್ನಾಟಕಬೆಂಗಳೂರು| ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ಬೆಂಗಳೂರು| ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಉಪನ್ಯಾಸಕರಿಂದ ಬೆದರಿಕೆ ಹೆಚ್ಚಾದಾಗ ಸಂಕಷ್ಟ ತಾಳಲಾರದೆ ಪೋಷಕರನ್ನು ಮಗಳನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಕೌನ್ಸೆಲಿಂಗ್ ನಡೆಸಿ ಧೈರ್ಯ ತುಂಬಿದ್ದಾರೆ. ಬಳಿಕ ಸಂತ್ರಸ್ತೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇವರನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜೊತೆ ಸಲುಗೆ ಬೆಳೆಸಿಕೊಂಡಿದ್ದ. ಬಳಿಕ ವಾಟ್ಸಾಪ್‌ನಲ್ಲಿ ಚಾಟ್ ಮಾಡುತ್ತಿದ್ದ. ವಿದ್ಯಾರ್ಥಿನಿ ನಂಬಿ ಆಗಾಗ ಉಪನ್ಯಾಸಕನಿಂದ ನೋಟ್ಸ್ ಪಡೆಯುತ್ತಿದ್ದರು. ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್​​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ ಎಂದು ವರದಿ ಹೇಳಿದೆ.

ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಸಮಯದಲ್ಲಿ ಆಕೆ ಪ್ರತಿರೋಧ ವ್ಯಕ್ತಪಡಿಸಿದಳು. ಆಗ, “ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ನನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ” ಎಂದು ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್​ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, “ನೀನು ನನ್ನ ರೂಮ್​ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್​​ನಲ್ಲಿ ಸಿಸಿಟಿವಿ ಇದೆ” ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳಲಾಗುತ್ತಿದೆ.

ರೈತರ ಬೇಡಿಕೆ ಪರಿಗಣಿಸಿ ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...