Homeಮುಖಪುಟಗೋಲ್ಡನ್ ಟೆಂಪಲ್‌ ಅಪವಿತ್ರತೆ ಆರೋಪ: ವ್ಯಕ್ತಿಯೊಬ್ಬನನ್ನು ಕ್ರೂರವಾಗಿ ಥಳಿಸಿ ಕೊಲೆ

ಗೋಲ್ಡನ್ ಟೆಂಪಲ್‌ ಅಪವಿತ್ರತೆ ಆರೋಪ: ವ್ಯಕ್ತಿಯೊಬ್ಬನನ್ನು ಕ್ರೂರವಾಗಿ ಥಳಿಸಿ ಕೊಲೆ

- Advertisement -
- Advertisement -

ಪಂಜಾಬ್‌ನ ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರಾರ್ಥನಾ ಸ್ಥಳಕ್ಕೆ ನುಗ್ಗಿ, ಕತ್ತಿ ಕಿತ್ತುಕೊಂಡು ಗುರು ಗ್ರಂಥ ಸಾಹಿಬ್‌ಗೆ ಅಪವಿತ್ರಗೊಳಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕ್ರೂರವಾಗಿ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಶನಿವಾರ ನಡೆದಿದೆ.

ಶನಿವಾರ ಗೋಲ್ಡನ್ ಟೆಂಪಲ್‌ನಲ್ಲಿ ನಿತ್ಯದ ಸಂಜೆ ಪ್ರಾರ್ಥನೆ ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ಬ್ಯಾರಿಕೇಡ್ ಹಾರಿ ಗುರು ಗ್ರಂಥ ಸಾಹಿಬ್ ಬಳಿ ತೆರಳಿದ್ದಾನೆ. ಅಷ್ಟರಲ್ಲಿ ಅಲ್ಲಿದ್ದವರು ಆತನನ್ನು ವಶಕ್ಕೆ ಪಡೆಯುವುದು ವಿಡಿಯೋದಲ್ಲಿ ದಾಖಲಾಗಿದೆ. ಆನಂತರ ಆ ವ್ಯಕ್ತಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಹತ್ಯೆಗೈಯಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

20-25 ವರ್ಷದ ಆ ವ್ಯಕ್ತಿಯು ತಲೆಗೆ ಹಳದಿ ಬಟ್ಟೆ ಕಟ್ಟಿಕೊಂಡಿದ್ದ. ಆತ ಉತ್ತರ ಪ್ರದೇಶದ ವ್ಯಕ್ತಿಯಾಗಿರಬಹುದು ಎಂದು ಪಿಟಿಐ ತಿಳಿಸಿದ್ದು, ಆತ ಏಕೆ ಬಂದ, ಆತನ ಗುರಿಯೇನಾಗಿತ್ತು? ಜೊತೆಗೆ ಯಾರಿದ್ದರೂ ಎಂಬುದನ್ನು ಸಿಸಿಟಿವಿ ಫೂಟೇಜ್‌ಗಳ ಆಧಾರದಲ್ಲಿ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಇಂದು ವರದಿ ಬರುವ ಸಾಧ್ಯತೆಯಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ ಚನ್ನಿ, “ಶ್ರೀ ರೆಹ್ರಾಸ್ ಸಾಹಿಬ್ ಅವರ ಮಾರ್ಗದರ್ಶನದಲ್ಲಿ ಶ್ರೀ ಹರಿಮಂದಿರ ಸಾಹಿಬ್ ಅವರ ಗರ್ಭಗುಡಿಯಲ್ಲಿ ಶ್ರೀ ಗುರು ಗ್ರಂಥ ಸಾಹಿಬ್ ಅವರನ್ನು ಅಪವಿತ್ರಗೊಳಿಸಲು ಪ್ರಯತ್ನಿಸುವ ಅತ್ಯಂತ ದುರದೃಷ್ಟಕರ ಮತ್ತು ಹೇಯ ಕೃತ್ಯವನ್ನು ಬಲವಾಗಿ ಖಂಡಿಸುತ್ತೇನೆ. ಈ ದುಷ್ಕೃತ್ಯದ ಹಿಂದಿನ ಮೂಲ ಉದ್ದೇಶ ಮತ್ತು ನಿಜವಾದ ಪಿತೂರಿದಾರರನ್ನು ಪತ್ತೆ ಹಚ್ಚಲು ಸಂಪೂರ್ಣ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದಿದ್ದಾರೆ.

ಗುರು ಗ್ರಂಥ ಸಾಹಿಬ್ ಮತ್ತು ಸಿಖ್ ದೇವಾಲಯಗಳ ಅಪವಿತ್ರಗೊಳಿಸುವಿಕೆಯು ಪಂಜಾಬ್ ಮತ್ತು ಸಿಖ್ಖರಲ್ಲಿ ಹೆಚ್ಚು ಭಾವನಾತ್ಮಕ ವಿಷಯವಾಗಿದೆ, ಅವರು ಪವಿತ್ರ ಪುಸ್ತಕವನ್ನು ತಮ್ಮ 11 ನೇ ಗುರು ಎಂದು ಭಾವಿಸುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಕೆಲ ಅಪವಿತ್ರತೆಗೊಳಿಸುವ ಪ್ರಕರಣಗಳು ತೀವ್ರ ಆಕ್ರೋಶ ಹಾಗೂ ರಾಜಕೀಯ ಕೋಲಾಹಲಕ್ಕೆ ಎಡೆಮಾಡಿಕೊಟ್ಟಿವೆ. ದೆಹಲಿಯ ರೈತ ಹೊರಾಟದಲ್ಲಿಯೂ ಸಹ ಲಕ್ಬೀರ್ ಸಿಂಗ್ ಎಂಬ ದಲಿತ ವ್ಯಕ್ತಿ ಅಪವಿತ್ರಗೊಳಿಸಿದನೆಂಬ ಕಾರಣಕ್ಕೆ ಅಮಾನವೀಯವಾಗಿ ಹತ್ಯೆಗೈಯಲಾಗಿತ್ತು.


ಇದನ್ನೂ ಓದಿ: ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...