Homeಕರ್ನಾಟಕಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುರುಘಾ ಶರಣರ ವಿರುದ್ಧ ಪೋಕ್ಸೋ ಅಡಿ ಎಫ್‌ಐಆರ್‌

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮುರುಘಾ ಶರಣರ ವಿರುದ್ಧ ಪೋಕ್ಸೋ ಅಡಿ ಎಫ್‌ಐಆರ್‌

ಚಿತ್ರದುರ್ಗದಲ್ಲಿ ನ್ಯಾಯ ಸಿಗುವುದಿಲ್ಲವೆಂದು ಅರಿತ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದ ಬಳಿಕ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ ಎಂದು ತನಿಖಾ ವರದಿಗಳ ಜಾಲತಾಣ ‘ದಿ ಫೈಲ್‌’ ಹಾಗೂ ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ ಮಾಡಿವೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಅವರು ಹಲವು ದಿನಗಳಿಂದಲೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಅಲ್ಲಿ ನ್ಯಾಯ ದೊರಕುವುದಿಲ್ಲ ಎಂಬ ಆತಂಕದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದರು ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೌರ್ಜನ್ಯಕ್ಕೊಳಗಾದ ಹೆಣ್ಣುಮಕ್ಕಳ ಪೋಷಣೆಯಲ್ಲಿ ಪ್ರಮುಖಪಾತ್ರ ವಹಿಸುತ್ತಿರುವ ಒಡನಾಡಿ ಸಂಸ್ಥೆಯು ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿದೆ ಎಂದು ವರದಿಗಳು ಹೇಳಿವೆ.

ತೊಂದರೆಗೊಳಗಾದ ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿಯು ಆದೇಶ ಹೊರಡಿಸಿದೆ.

ಆರಂಭದಲ್ಲಿ ಪ್ರಕಣವನ್ನು ದಾಖಲಿಸಲು ನಜರಾಬಾದ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಆನಂತರ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದ ಬಳಿಕ ಪ್ರಕರಣ ದಾಖಲಿಸಲಾಗಿದೆ. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರ್‌ಬಾದ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆ ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಇಡೀ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಎಫ್‌ಆರ್‌ಐಆರ್‌ನಲ್ಲಿ ಮೊದಲ ಆರೋಪಿಯಾಗಿ ಮುರುಘಾ ಶರಣರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ.

“ಸ್ವಾಮೀಜಿ ಅವರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೂರು ನೀಡಿದ್ದು, ನಜರ್‌ಬಾದ್‌ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ” ಎಂದು ಮೈಸೂರು ಡಿಸಿಪಿ ಪ್ರದೀಪ್ ಗುಂಟಿ ಅವರು ‘ಆಂದೋಲನ’ ದಿನಪತ್ರಿಕೆಗೆ ತಿಳಿಸಿದ್ದಾರೆ.

ಮತ್ತುಬರಿಸಿ ಲೈಂಗಿಕ ದೌರ್ಜನ್ಯ; ಮಕ್ಕಳ ಆರೋಪ

“ಚಿತ್ರದುರ್ಗದ ಮುರುಘಾಮಠದ ವಿದ್ಯಾರ್ಥಿನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು” ಎಂದು ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

ಇದನ್ನೂ ಓದಿರಿ: ಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!

“ಇದೇ ರೀತಿಯ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ದೂರು ನೀಡಲು ಹೆದರುತ್ತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದೆವು” ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ಒಡನಾಡಿ ಸಂಸ್ಥೆಯವರು ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ದಾಖಲಿಸಿದ್ದರು. ವಿಸ್ಕೃತ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ ಕಮಲ ಅವರು ರಜೆ ಇದ್ದ ಕಾರಣ ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾಕುಮಾರಿ ವಿಚಾರಣೆ ನಡೆಸಿದ್ದಾರೆ.

ಈ ಹಿಂದೆ ತಡೆಯಾಜ್ಞೆ ಕೋರಿದ್ದ ಮುರುಘಾ ಶರಣರು

“ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಪೋಷಕರು ಎಂದು ಹೇಳಿಕೊಳ್ಳುತ್ತಲೇ ತಮ್ಮ ಕುರಿತಾದ ಅಪ್ರಿಯವಾದ ಸಂಗತಿಗಳ ಕುರಿತು ಯಾರೂ ಪ್ರಕಟಿಸಬಾರದು ಮತ್ತು ಚರ್ಚಿಸಬಾರದು” ಎಂದು ಶಿವಮೂರ್ತಿ ಮುರುಘಾ ಶರಣರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅಸಲು ದಾವೆ ಸಲ್ಲಿಸಿದ್ದರು. ಆದರೆ ನಿರ್ದಿಷ್ಟ ಪ್ರಕರಣ, ನಿರ್ದಿಷ್ಟ ವಸ್ತು ಸಂಗತಿಯನ್ನು ಉಲ್ಲೇಖಿಸದೇ ತಡೆಯಾಜ್ಞೆ ಕೋರಿದ್ದರು ಎಂದು ‘ದಿ ಫೈಲ್‌’ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...