Homeಮುಖಪುಟಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ 9 ಮಂದಿಯ ಬಂಧನ

ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ 9 ಮಂದಿಯ ಬಂಧನ

- Advertisement -
- Advertisement -

ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಹಿಸಾರ್ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ ಹರಿಯಾಣ ಮತ್ತು ಪಂಜಾಬ್‌ನಾದ್ಯಂತ ಎರಡು ವಾರಗಳಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

‘ಟ್ರಾವೆಲ್ ವಿತ್ ಜೋ’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಜ್ಯೋತಿ ಮಲ್ಹೋತ್ರಾ ಅವರನ್ನು ಹಿಸಾರ್‌ನ ನ್ಯೂ ಅಗರ್‌ವಾಲ್ ಎಕ್ಸ್‌ಟೆನ್ಶನ್ ಪ್ರದೇಶದಿಂದ ಬಂಧಿಸಲಾಗಿದೆ. ಅವರು ಯೂಟ್ಯೂಬ್‌ನಲ್ಲಿ 3.77 ಲಕ್ಷ ಚಂದಾದಾರರನ್ನು ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ 1.32 ಲಕ್ಷ ಫಾಲೋವರ್ಸ್ ಹೊಂದಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ ಬಗ್ಗೆ ವಿಡಿಯೋಗಳನ್ನು ಸಹ ಪೋಸ್ಟ್ ಮಾಡಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿಸಾರ್ ಪೊಲೀಸರು ಜ್ಯೋತಿ ಮಲ್ಹೋತ್ರಾ ವಿರುದ್ದ ಎಫ್‌ಐಆರ್ ದಾಖಲಿಸಿ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯವು ಆಕೆಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್ ಬಿಜೇಂದರ್ ಸಿಂಗ್ ಅವರ ದೂರಿನ ಮೇರೆಗೆ ಜ್ಯೋತಿ ವಿರುದ್ಧ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ 3 ಮತ್ತು 5 ಹಾಗೂ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ, ಜ್ಯೋತಿ ಮಲ್ಹೋತ್ರಾ ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಸಿಬ್ಬಂದಿಯಾಗಿದ್ದ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಅವರ ಜೊತೆ ಸಂಪರ್ಕ ಹೊಂದಿದ್ದು, 2023 ರಲ್ಲಿ ಎರಡು ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಡ್ಯಾನಿಶ್ ಅವರ ಹ್ಯಾಂಡ್ಲರ್ ಆಗಿ ಕಾರ್ಯನಿರ್ವಹಿಸಿದ್ದರು. ಅವರನ್ನು ಐಎಸ್‌ಐ ಕಾರ್ಯಕರ್ತರಿಗೆ ಪರಿಚಯಿಸಿದ್ದರು ಮತ್ತು ಎನ್‌ಕ್ರಿಪ್ಟ್ ಮಾಡಿದ ವೇದಿಕೆಗಳ ಮೂಲಕ ನಿಯಮಿತ ಸಂಪರ್ಕವನ್ನು ಸಾಧಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

“2023 ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಅಲಿ ಎಹ್ವಾನ್ ಅವರನ್ನು ಭೇಟಿಯಾಗಿದ್ದೆ, ಅವರು ತನಗೆ ವಾಸ್ತವ್ಯ ಮತ್ತು ಪ್ರಯಾಣದ ವ್ಯವಸ್ಥೆಯನ್ನು ಮಾಡಿದ್ದರು ಎಂದು ಜ್ಯೋತಿ ಬಹಿರಂಗಪಡಿಸಿದ್ದಾರೆ. ಅಲಿ ಜ್ಯೋತಿ ಅವರನ್ನು ಶಕೀರ್ ಮತ್ತು ರಾಣಾ ಶಹಬಾಜ್ ಸೇರಿದಂತೆ ಪಾಕಿಸ್ತಾನಿ ಭದ್ರತಾ ಮತ್ತು ಗುಪ್ತಚರ ಅಧಿಕಾರಿಗಳಿಗೆ ಎಹ್ವಾನ್ ಪರಿಚಯಿಸಿದ್ದರು” ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಹಿಸಾರ್ ಪೊಲೀಸ್ ವಕ್ತಾರ ವಿಕಾಸ್ ಕುಮಾರ್ ಅವರು ಜ್ಯೋತಿ ಮಲ್ಹೋತ್ರಾ  ಬಂಧನವನ್ನು ದೃಢಪಡಿಸಿದ್ದು, ಹೆಚ್ಚಿನ ಮಾಹಿತಿ ಪಡೆಯಲು ಅಧಿಕಾರಿಗಳು ಜ್ಯೋತಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಹೇಳಿದ್ದಾರೆ. ಭಾರತ ಸರ್ಕಾರ ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ ಸಿಬ್ಬಂದಿಯಾಗಿದ್ದ ಡ್ಯಾನಿಶ್ ಅವರನ್ನು ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಿ ಮೇ 13 ರಂದು ಪಾಕಿಸ್ತಾನಕ್ಕೆ ಕಳಿಸಿದೆ.

ಪ್ರತ್ಯೇಕ ಪ್ರಕರಣವೊಂದರಲ್ಲಿ, ಐಎಸ್‌ಐ ಕಾರ್ಯಕರ್ತರಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಕಾರ್ಖಾನೆಯ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಕೈರಾನಾದ 24 ವರ್ಷದ ಯುವಕ ನೌಮನ್ ಇಲಾಹಿ ಎಂಬಾತನ್ನು ಪಾಣಿಪತ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈತ ತನ್ನ ಸಹೋದರಿ ಜೀನತ್ ಮತ್ತು ಸೋದರ ಮಾವ ಇರ್ಫಾನ್ ಜೊತೆ ಪಾಣಿಪತ್‌ನ ಹಲಿ ಕಾಲೋನಿಯಲ್ಲಿ ವಾಸಿಸುತ್ತಿದ್ದರು.

ಮೇ 12ರಂದು, ಹರಿಯಾಣದ ಕೈಥಾಲ್ ಜಿಲ್ಲೆಯ ಗುಹ್ಲಾ ಪ್ರದೇಶದ 25 ವರ್ಷದ ದೇವೇಂದರ್ ಸಿಂಗ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದಕ್ಕಾಗಿ ಬಂಧಿಸಲಾಗಿತ್ತು. ಪಂಜಾಬ್‌ನ ಕಾಲೇಜಿನಿಂದ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ಸಿಂಗ್, ಕಳೆದ ವರ್ಷ ಪಾಕಿಸ್ತಾನದ ನಂಕಾನಾ ಸಾಹಿಬ್‌ಗೆ ಭೇಟಿ ನೀಡಿದ್ದರು. ಆ ಸಮಯದಲ್ಲಿ, ಅವರು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿದ್ದರು. ಭಾರತಕ್ಕೆ ಹಿಂದಿರುಗಿದ ನಂತರವೂ ಅವರ ಜೊತೆ ಸಂಪರ್ಕದಲ್ಲಿದ್ದರು ಎಂದು ಆರೋಪಿಸಲಾಗಿದೆ.

ಪಟಿಯಾಲ ಕಂಟೋನ್ಮೆಂಟ್‌ನ ಫೋಟೋಗಳನ್ನು ಹೊರಗಿನಿಂದ ತೆಗೆದು ಕಳುಹಿಸಿದ್ದಾಗಿ ಸಿಂಗ್ ಒಪ್ಪಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಟಿಂಡಾ ಕಂಟೋನ್ಮೆಂಟ್‌ನ ಒಳಗಿನ ಅಂಗಡಿಯಲ್ಲಿ ಎರಡು ವರ್ಷಗಳ ಕಾಲ ಟೈಲರ್ ಆಗಿ ಕೆಲಸ ಮಾಡಿದ್ದ ಉತ್ತರಾಖಂಡದ ರೂರ್ಕಿಯ ರಕೀಬ್ ಖಾನ್ ಅವರನ್ನು ಬೇಹುಗಾರಿಕೆ ಆರೋಪದ ಮೇಲೆ ಪಂಜಾಬ್ ಪೊಲೀಸರು ಮೇ 13ರಂದು ಬಂಧಿಸಿದರು. ಕಂಟೋನ್ಮೆಂಟ್ ಅಧಿಕಾರಿಗಳು ಅನುಮಾನಾಸ್ಪದ ಚಟುವಟಿಕೆಯನ್ನು ವರದಿ ಮಾಡಿದ್ದು, ಅವರ ಫೋನ್ ಅನ್ನು ವಿಧಿವಿಜ್ಞಾನ ವಿಶ್ಲೇಷಣೆಗೆ ಕಳುಹಿಸಲಾಗಿದೆ.

ರಕೀಬ್ ಖಾನ್ ಬಟಿಂಡಾ ಕಂಟೋನ್ಮೆಂಟ್‌ ಪ್ರದೇಶದಲ್ಲಿ ಬೇಹುಗಾರಿಕೆಗೆ ಆರೋಪದಲ್ಲಿ ಬಂಧನಕ್ಕೊಳಗಾದ ಎರಡನೇ ವ್ಯಕ್ತಿಯಾಗಿದ್ದಾರೆ. ಏಪ್ರಿಲ್ 29 ರಂದು, ಬಿಹಾರದ ಸಮಸ್ತಿಪುರದ ಚಮ್ಮಾರ ಸುನಿಲ್ ಕುಮಾರ್ ಅವರನ್ನು ಇದೇ ಪ್ರದೇಶದಲ್ಲಿ ಬಂಧಿಸಲಾಗಿತ್ತು. ಅವರು 2017 ರಿಂದ ಬಟಿಂಡಾ ಕಂಟೋನ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಧೋಬಿಯಾನಾ ಬಸ್ತಿಯಲ್ಲಿ ವಾಸಿಸುತ್ತಿದ್ದರು. ಅವರ ಸಹೋದರ ಮತ್ತು ಚಿಕ್ಕಪ್ಪ ಕೂಡ ಅದೇ ಪ್ರದೇಶದಲ್ಲಿ ಚಮ್ಮಾರರಾಗಿದ್ದಾರೆ. ಪೊಲೀಸರು ಅವರ ಬ್ಯಾಂಕ್ ಮತ್ತು ಆಸ್ತಿ ದಾಖಲೆಗಳನ್ನು ವಿಶ್ಲೇಷಿಸುತ್ತಿದ್ದಾರೆ ಮತ್ತು ಅವರ ಫೋನ್ ವಿಧಿವಿಜ್ಞಾನ ಪರೀಕ್ಷೆಯಲ್ಲಿದೆ.

ಮೇ 11ರಂದು, ದೆಹಲಿಯ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಪಾಕಿಸ್ತಾನಿ ಅಧಿಕಾರಿಗೆ ಸಹಾಯ ಮಾಡಿದ ಆರೋಪದ ಮೇಲೆ ಪಂಜಾಬ್ ಪೊಲೀಸರು 31 ವರ್ಷದ ಮಹಿಳೆ ಗುಜಲಾ ಮತ್ತು ಆಕೆಯ ಸಹಚರ ಮಲೇರ್ಕೋಟ್ಲಾದ ಯಮೀನ್ ಮೊಹಮ್ಮದ್ ಎಂಬವರನ್ನು ಬಂಧಿಸಿದ್ದರು. ಈ ಇಬ್ಬರೂ ದೊಡ್ಡ ಬೇಹುಗಾರಿಕೆ ಜಾಲದ ಭಾಗವಾಗಿದ್ದರು ಎಂದು ಪೊಲೀಸರು ಶಂಕಿಸಿದ್ದಾರೆ.

ಇದಕ್ಕೂ ಮೊದಲು ಮೇ 3ರಂದು, ಸೇನಾ ಕಂಟೋನ್ಮೆಂಟ್‌ಗಳು ಮತ್ತು ವಾಯುನೆಲೆಗಳ ಫೋಟೋಗಳನ್ನು ತೆಗೆದುಕೊಂಡು ಸೂಕ್ಷ್ಮ ವಿವರಗಳನ್ನು ಹಂಚಿಕೊಂಡ ಆರೋಪದ ಮೇಲೆ ಪಾಲಕ್ ಶೇರ್ ಮಸಿಹ್ ಮತ್ತು ಸೂರಜ್ ಮಸಿಹ್ ಎಂಬ ಇಬ್ಬರು ವ್ಯಕ್ತಿಗಳನ್ನು ಅಮೃತಸರದಲ್ಲಿ ಬಂಧಿಸಲಾಗಿತ್ತು. ಅಮೃತಸರ ಕೇಂದ್ರ ಜೈಲಿನಲ್ಲಿರುವ ಹರ್‌ಪ್ರೀತ್ ಸಿಂಗ್ ಅಲಿಯಾಸ್ ಪಿಟ್ಟು ಅಲಿಯಾಸ್ ಹ್ಯಾಪಿ ಮೂಲಕ ಅವರು ಐಎಸ್‌ಐ ಜೊತೆ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದೆ.

ಪೊಲೀಸ್ ಮೂಲಗಳು ಹೇಳುವಂತೆ, ಎಲ್ಲಾ ಒಂಬತ್ತು ವ್ಯಕ್ತಿಗಳು ಐಎಸ್‌ಐ ಜೊತೆ ಆಗಾಗ್ಗೆ ಸಂಪರ್ಕದಲ್ಲಿದ್ದರು ಮತ್ತು ಪಾಕಿಸ್ತಾನಿ ನಿರ್ವಾಹಕರಿಗೆ ಸೂಕ್ಷ್ಮ ಮಾಹಿತಿಯನ್ನು ಸಕ್ರಿಯವಾಗಿ ರವಾನಿಸುತ್ತಿದ್ದರು.

ಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...