Homeಮುಖಪುಟಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ 9 ಮಂದಿಯ ಬಂಧನ

ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ 9 ಮಂದಿಯ ಬಂಧನ

- Advertisement -
- Advertisement -

ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಹಿಸಾರ್ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ ಹರಿಯಾಣ ಮತ್ತು ಪಂಜಾಬ್‌ನಾದ್ಯಂತ ಎರಡು ವಾರಗಳಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

‘ಟ್ರಾವೆಲ್ ವಿತ್ ಜೋ’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಜ್ಯೋತಿ ಮಲ್ಹೋತ್ರಾ ಅವರನ್ನು ಹಿಸಾರ್‌ನ ನ್ಯೂ ಅಗರ್‌ವಾಲ್ ಎಕ್ಸ್‌ಟೆನ್ಶನ್ ಪ್ರದೇಶದಿಂದ ಬಂಧಿಸಲಾಗಿದೆ. ಅವರು ಯೂಟ್ಯೂಬ್‌ನಲ್ಲಿ 3.77 ಲಕ್ಷ ಚಂದಾದಾರರನ್ನು ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ 1.32 ಲಕ್ಷ ಫಾಲೋವರ್ಸ್ ಹೊಂದಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ ಬಗ್ಗೆ ವಿಡಿಯೋಗಳನ್ನು ಸಹ ಪೋಸ್ಟ್ ಮಾಡಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿಸಾರ್ ಪೊಲೀಸರು ಜ್ಯೋತಿ ಮಲ್ಹೋತ್ರಾ ವಿರುದ್ದ ಎಫ್‌ಐಆರ್ ದಾಖಲಿಸಿ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯವು ಆಕೆಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್ ಬಿಜೇಂದರ್ ಸಿಂಗ್ ಅವರ ದೂರಿನ ಮೇರೆಗೆ ಜ್ಯೋತಿ ವಿರುದ್ಧ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ 3 ಮತ್ತು 5 ಹಾಗೂ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ, ಜ್ಯೋತಿ ಮಲ್ಹೋತ್ರಾ ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಸಿಬ್ಬಂದಿಯಾಗಿದ್ದ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಅವರ ಜೊತೆ ಸಂಪರ್ಕ ಹೊಂದಿದ್ದು, 2023 ರಲ್ಲಿ ಎರಡು ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಡ್ಯಾನಿಶ್ ಅವರ ಹ್ಯಾಂಡ್ಲರ್ ಆಗಿ ಕಾರ್ಯನಿರ್ವಹಿಸಿದ್ದರು. ಅವರನ್ನು ಐಎಸ್‌ಐ ಕಾರ್ಯಕರ್ತರಿಗೆ ಪರಿಚಯಿಸಿದ್ದರು ಮತ್ತು ಎನ್‌ಕ್ರಿಪ್ಟ್ ಮಾಡಿದ ವೇದಿಕೆಗಳ ಮೂಲಕ ನಿಯಮಿತ ಸಂಪರ್ಕವನ್ನು ಸಾಧಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

“2023 ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಅಲಿ ಎಹ್ವಾನ್ ಅವರನ್ನು ಭೇಟಿಯಾಗಿದ್ದೆ, ಅವರು ತನಗೆ ವಾಸ್ತವ್ಯ ಮತ್ತು ಪ್ರಯಾಣದ ವ್ಯವಸ್ಥೆಯನ್ನು ಮಾಡಿದ್ದರು ಎಂದು ಜ್ಯೋತಿ ಬಹಿರಂಗಪಡಿಸಿದ್ದಾರೆ. ಅಲಿ ಜ್ಯೋತಿ ಅವರನ್ನು ಶಕೀರ್ ಮತ್ತು ರಾಣಾ ಶಹಬಾಜ್ ಸೇರಿದಂತೆ ಪಾಕಿಸ್ತಾನಿ ಭದ್ರತಾ ಮತ್ತು ಗುಪ್ತಚರ ಅಧಿಕಾರಿಗಳಿಗೆ ಎಹ್ವಾನ್ ಪರಿಚಯಿಸಿದ್ದರು” ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಹಿಸಾರ್ ಪೊಲೀಸ್ ವಕ್ತಾರ ವಿಕಾಸ್ ಕುಮಾರ್ ಅವರು ಜ್ಯೋತಿ ಮಲ್ಹೋತ್ರಾ  ಬಂಧನವನ್ನು ದೃಢಪಡಿಸಿದ್ದು, ಹೆಚ್ಚಿನ ಮಾಹಿತಿ ಪಡೆಯಲು ಅಧಿಕಾರಿಗಳು ಜ್ಯೋತಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಹೇಳಿದ್ದಾರೆ. ಭಾರತ ಸರ್ಕಾರ ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ ಸಿಬ್ಬಂದಿಯಾಗಿದ್ದ ಡ್ಯಾನಿಶ್ ಅವರನ್ನು ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಿ ಮೇ 13 ರಂದು ಪಾಕಿಸ್ತಾನಕ್ಕೆ ಕಳಿಸಿದೆ.

ಪ್ರತ್ಯೇಕ ಪ್ರಕರಣವೊಂದರಲ್ಲಿ, ಐಎಸ್‌ಐ ಕಾರ್ಯಕರ್ತರಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಕಾರ್ಖಾನೆಯ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಕೈರಾನಾದ 24 ವರ್ಷದ ಯುವಕ ನೌಮನ್ ಇಲಾಹಿ ಎಂಬಾತನ್ನು ಪಾಣಿಪತ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈತ ತನ್ನ ಸಹೋದರಿ ಜೀನತ್ ಮತ್ತು ಸೋದರ ಮಾವ ಇರ್ಫಾನ್ ಜೊತೆ ಪಾಣಿಪತ್‌ನ ಹಲಿ ಕಾಲೋನಿಯಲ್ಲಿ ವಾಸಿಸುತ್ತಿದ್ದರು.

ಮೇ 12ರಂದು, ಹರಿಯಾಣದ ಕೈಥಾಲ್ ಜಿಲ್ಲೆಯ ಗುಹ್ಲಾ ಪ್ರದೇಶದ 25 ವರ್ಷದ ದೇವೇಂದರ್ ಸಿಂಗ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದಕ್ಕಾಗಿ ಬಂಧಿಸಲಾಗಿತ್ತು. ಪಂಜಾಬ್‌ನ ಕಾಲೇಜಿನಿಂದ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ಸಿಂಗ್, ಕಳೆದ ವರ್ಷ ಪಾಕಿಸ್ತಾನದ ನಂಕಾನಾ ಸಾಹಿಬ್‌ಗೆ ಭೇಟಿ ನೀಡಿದ್ದರು. ಆ ಸಮಯದಲ್ಲಿ, ಅವರು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿದ್ದರು. ಭಾರತಕ್ಕೆ ಹಿಂದಿರುಗಿದ ನಂತರವೂ ಅವರ ಜೊತೆ ಸಂಪರ್ಕದಲ್ಲಿದ್ದರು ಎಂದು ಆರೋಪಿಸಲಾಗಿದೆ.

ಪಟಿಯಾಲ ಕಂಟೋನ್ಮೆಂಟ್‌ನ ಫೋಟೋಗಳನ್ನು ಹೊರಗಿನಿಂದ ತೆಗೆದು ಕಳುಹಿಸಿದ್ದಾಗಿ ಸಿಂಗ್ ಒಪ್ಪಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಟಿಂಡಾ ಕಂಟೋನ್ಮೆಂಟ್‌ನ ಒಳಗಿನ ಅಂಗಡಿಯಲ್ಲಿ ಎರಡು ವರ್ಷಗಳ ಕಾಲ ಟೈಲರ್ ಆಗಿ ಕೆಲಸ ಮಾಡಿದ್ದ ಉತ್ತರಾಖಂಡದ ರೂರ್ಕಿಯ ರಕೀಬ್ ಖಾನ್ ಅವರನ್ನು ಬೇಹುಗಾರಿಕೆ ಆರೋಪದ ಮೇಲೆ ಪಂಜಾಬ್ ಪೊಲೀಸರು ಮೇ 13ರಂದು ಬಂಧಿಸಿದರು. ಕಂಟೋನ್ಮೆಂಟ್ ಅಧಿಕಾರಿಗಳು ಅನುಮಾನಾಸ್ಪದ ಚಟುವಟಿಕೆಯನ್ನು ವರದಿ ಮಾಡಿದ್ದು, ಅವರ ಫೋನ್ ಅನ್ನು ವಿಧಿವಿಜ್ಞಾನ ವಿಶ್ಲೇಷಣೆಗೆ ಕಳುಹಿಸಲಾಗಿದೆ.

ರಕೀಬ್ ಖಾನ್ ಬಟಿಂಡಾ ಕಂಟೋನ್ಮೆಂಟ್‌ ಪ್ರದೇಶದಲ್ಲಿ ಬೇಹುಗಾರಿಕೆಗೆ ಆರೋಪದಲ್ಲಿ ಬಂಧನಕ್ಕೊಳಗಾದ ಎರಡನೇ ವ್ಯಕ್ತಿಯಾಗಿದ್ದಾರೆ. ಏಪ್ರಿಲ್ 29 ರಂದು, ಬಿಹಾರದ ಸಮಸ್ತಿಪುರದ ಚಮ್ಮಾರ ಸುನಿಲ್ ಕುಮಾರ್ ಅವರನ್ನು ಇದೇ ಪ್ರದೇಶದಲ್ಲಿ ಬಂಧಿಸಲಾಗಿತ್ತು. ಅವರು 2017 ರಿಂದ ಬಟಿಂಡಾ ಕಂಟೋನ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಧೋಬಿಯಾನಾ ಬಸ್ತಿಯಲ್ಲಿ ವಾಸಿಸುತ್ತಿದ್ದರು. ಅವರ ಸಹೋದರ ಮತ್ತು ಚಿಕ್ಕಪ್ಪ ಕೂಡ ಅದೇ ಪ್ರದೇಶದಲ್ಲಿ ಚಮ್ಮಾರರಾಗಿದ್ದಾರೆ. ಪೊಲೀಸರು ಅವರ ಬ್ಯಾಂಕ್ ಮತ್ತು ಆಸ್ತಿ ದಾಖಲೆಗಳನ್ನು ವಿಶ್ಲೇಷಿಸುತ್ತಿದ್ದಾರೆ ಮತ್ತು ಅವರ ಫೋನ್ ವಿಧಿವಿಜ್ಞಾನ ಪರೀಕ್ಷೆಯಲ್ಲಿದೆ.

ಮೇ 11ರಂದು, ದೆಹಲಿಯ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಪಾಕಿಸ್ತಾನಿ ಅಧಿಕಾರಿಗೆ ಸಹಾಯ ಮಾಡಿದ ಆರೋಪದ ಮೇಲೆ ಪಂಜಾಬ್ ಪೊಲೀಸರು 31 ವರ್ಷದ ಮಹಿಳೆ ಗುಜಲಾ ಮತ್ತು ಆಕೆಯ ಸಹಚರ ಮಲೇರ್ಕೋಟ್ಲಾದ ಯಮೀನ್ ಮೊಹಮ್ಮದ್ ಎಂಬವರನ್ನು ಬಂಧಿಸಿದ್ದರು. ಈ ಇಬ್ಬರೂ ದೊಡ್ಡ ಬೇಹುಗಾರಿಕೆ ಜಾಲದ ಭಾಗವಾಗಿದ್ದರು ಎಂದು ಪೊಲೀಸರು ಶಂಕಿಸಿದ್ದಾರೆ.

ಇದಕ್ಕೂ ಮೊದಲು ಮೇ 3ರಂದು, ಸೇನಾ ಕಂಟೋನ್ಮೆಂಟ್‌ಗಳು ಮತ್ತು ವಾಯುನೆಲೆಗಳ ಫೋಟೋಗಳನ್ನು ತೆಗೆದುಕೊಂಡು ಸೂಕ್ಷ್ಮ ವಿವರಗಳನ್ನು ಹಂಚಿಕೊಂಡ ಆರೋಪದ ಮೇಲೆ ಪಾಲಕ್ ಶೇರ್ ಮಸಿಹ್ ಮತ್ತು ಸೂರಜ್ ಮಸಿಹ್ ಎಂಬ ಇಬ್ಬರು ವ್ಯಕ್ತಿಗಳನ್ನು ಅಮೃತಸರದಲ್ಲಿ ಬಂಧಿಸಲಾಗಿತ್ತು. ಅಮೃತಸರ ಕೇಂದ್ರ ಜೈಲಿನಲ್ಲಿರುವ ಹರ್‌ಪ್ರೀತ್ ಸಿಂಗ್ ಅಲಿಯಾಸ್ ಪಿಟ್ಟು ಅಲಿಯಾಸ್ ಹ್ಯಾಪಿ ಮೂಲಕ ಅವರು ಐಎಸ್‌ಐ ಜೊತೆ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದೆ.

ಪೊಲೀಸ್ ಮೂಲಗಳು ಹೇಳುವಂತೆ, ಎಲ್ಲಾ ಒಂಬತ್ತು ವ್ಯಕ್ತಿಗಳು ಐಎಸ್‌ಐ ಜೊತೆ ಆಗಾಗ್ಗೆ ಸಂಪರ್ಕದಲ್ಲಿದ್ದರು ಮತ್ತು ಪಾಕಿಸ್ತಾನಿ ನಿರ್ವಾಹಕರಿಗೆ ಸೂಕ್ಷ್ಮ ಮಾಹಿತಿಯನ್ನು ಸಕ್ರಿಯವಾಗಿ ರವಾನಿಸುತ್ತಿದ್ದರು.

ಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...