Homeಮುಖಪುಟಭಾರತ್‌ ಜೋಡೋದಲ್ಲಿ ಕೆಜಿಎಫ್‌- 2 ಹಾಡು ಬಳಕೆ ಆರೋಪ; ರಾಹುಲ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ ವಿರುದ್ಧ...

ಭಾರತ್‌ ಜೋಡೋದಲ್ಲಿ ಕೆಜಿಎಫ್‌- 2 ಹಾಡು ಬಳಕೆ ಆರೋಪ; ರಾಹುಲ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಕಾಂಗ್ರೆಸ್‌ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ ‘ಕೆಜಿಎಫ್‌ ಚಾಪ್ಟರ್‌-2’ ಸಿನಿಮಾದ ಸಂಗೀತವನ್ನು ಅನಧಿಕೃತವಾಗಿ ಬಳಸಿದ್ದಾರೆ ಎಂಬ ಆರೋಪದ ಮೇಲೆ ರಾಹುಲ್ ಗಾಂಧಿ ಸೇರಿದಂತೆ ಮೂವರು ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕೆಜಿಎಫ್- 2ರ ಸಂಗೀತವನ್ನು ಬಳಸಿದ್ದಕ್ಕಾಗಿ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರಿನೇಟ್ ವಿರುದ್ಧ ಕೃತಿಸ್ವಾಮ್ಯ ಕಾಯ್ದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ನವೆಂಬರ್ 4 ರಂದು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯ ಎಂ.ನವೀನ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್‌ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತ್ ಜೋಡೋ ಯಾತ್ರೆಯು ಕರ್ನಾಟಕದಲ್ಲಿ ಸಾಗುವಾಗ ಪ್ಲೇ ಮಾಡಲಾಗಿರುವ ಕೆಜಿಎಫ್‌-2ರ ಹಿಂದಿ ಅವತರಣಿಕೆಯ ‘ಸುಲ್ತಾನ್’ ಹಾಡಿನ ಕುರಿತು ದೂರು ಸಲ್ಲಿಕೆಯಾಗಿದೆ. ರಾಹುಲ್ ಅವರ ಪಾದಯಾತ್ರೆ ಮತ್ತು ಸಾರ್ವಜನಿಕರೊಂದಿಗೆ ಸಂವಹನ ನಡೆಸುವುದನ್ನು ತೋರಿಸುವ ವೀಡಿಯೊದಲ್ಲಿ ಹಾಡು ಬಳಸಲಾಗಿದೆ ಎಂದು ಆಕ್ಷೇಪ ಎತ್ತಲಾಗಿದೆ.

ಜೈರಾಮ್ ರಮೇಶ್ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಭಾರತ್‌ ಜೋಡೋ ಯಾತ್ರೆಯ ಎರಡು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಕೆಜಿಎಫ್ 2ರ ಚಿತ್ರದ ಜನಪ್ರಿಯ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

ದೂರುದಾರರ ಒಡೆತನದ ಜನಪ್ರಿಯ ಧ್ವನಿಮುದ್ರಿಕೆಗಳನ್ನು ಬಳಸಿಕೊಂಡು ವೀಡಿಯೊಗಳನ್ನು ಮಾಡಲಾಗಿದೆ. ಬಳಸಲಾದ ಧ್ವನಿಮುದ್ರಿಕೆಗಳು ಕೆಜಿಎಫ್ ಚಾಪ್ಟರ್‌‌ 2 (ಹಿಂದಿ ಆವೃತ್ತಿ)‍ ಸಿನಿಮಾಕ್ಕೆ ಸೇರಿವೆ ಎಂದು ಆಕ್ಷೇಪಿಸಲಾಗಿದೆ.

“ವೀಡಿಯೊಗಳನ್ನು ನೋಡಿದಾಗ ಆರೋಪಿಗಳು ಮೋಸದಿಂದ, ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಅನಧಿಕೃತವಾಗಿ ಮತ್ತು ಕಾನೂನುಬಾಹಿರವಾಗಿ ದೂರುದಾರನ ಮಾಲೀಕತ್ವದ ಧ್ವನಿಮುದ್ರಿಕೆಯನ್ನು ಬಳಸಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಭಾರತ್‌ ಜೋಡೋ ಯಾತ್ರೆಯು ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಜನವರಿ 30, 2023ರಂದು ಜಮ್ಮುವನ್ನು ತಲುಪುವ ಗುರಿಯನ್ನು ಹೊಂದಿದೆ. ಈ ಯಾತ್ರೆಯು ಇದುವರೆಗೆ ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮೂಲಕ ಹಾದುಹೋಗಿದೆ.

ಇದನ್ನೂ ಓದಿರಿ: ಕೃತಿಚೌರ್ಯ ಆರೋಪ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿಗೆ ಕೇರಳ ನ್ಯಾಯಾಲಯ ತಡೆಯಾಜ್ಞೆ

ಕೃತಿಚೌರ್ಯದ ಆರೋಪಗಳು ಇತ್ತೀಚೆಗೆ ಸದ್ದು ಮಾಡುತ್ತಿವೆ. ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ವಿರುದ್ಧ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ ಇತ್ತೀಚೆಗೆ ಪ್ರಕರಣ ದಾಖಲಿಸಿತ್ತು. ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮೆ ವಿಚಾರಣೆ ನಡೆಸಿದ ನ್ಯಾಯಾಲಯ ಹಾಡನ್ನು ಪ್ಲೇ ಮಾಡದಂತೆ ಸ್ಟ್ರೀಮಿಂಗ್ ಫ್ಲಾಟ್‌ಫಾರ್ಮ್‌ಗಳಿಗೆ ತಡೆಯಾಜ್ಞೆ ನೀಡಿತ್ತು.

ಕಾಂತಾರ ಚಿತ್ರದ ವರಾಹ ರೂಪಂ ಹಾಡು ಮತ್ತು 2015 ರಲ್ಲಿ ಬಿಡುಗಡೆಯಾದ ಥಕ್ಕುಡಂ ಬ್ರಿಡ್ಜ್‌‌ನ ‘ನವರಸಂ’ ಗೀತೆ ನಡುವೆ ‘ಸಾಮ್ಯತೆ’ ಇದೆ ಎಂದು ದೂರಲಾಗಿದೆ.

ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕರು, ಅಮೇಜಾನ್, ಯೂಟ್ಯೂಬ್‌, ಸ್ಪೋಟಿಫೈ, ವಿಂಕ್ ಮ್ಯೂಸಿಕ್, ಜಿಯೋಸಾವನ್ ಮತ್ತು ಇತರರು ಕಾಂತಾರ ಚಿತ್ರದ ವರಾಹ ರೂಪಂ ಹಾಡನ್ನು ಥೈಕ್ಕುಡಂ ಬ್ರಿಡ್ಜ್‌ನ ಅನುಮತಿಯಿಲ್ಲದೆ ಬಳಸುವಂತಿಲ್ಲ ಎಂದು ಕೋರ್ಟ್ ತಡೆಯಾಜ್ಞೆ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...