Homeಮುಖಪುಟಭಾರತ್‌ ಜೋಡೋದಲ್ಲಿ ಕೆಜಿಎಫ್‌- 2 ಹಾಡು ಬಳಕೆ ಆರೋಪ; ರಾಹುಲ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ ವಿರುದ್ಧ...

ಭಾರತ್‌ ಜೋಡೋದಲ್ಲಿ ಕೆಜಿಎಫ್‌- 2 ಹಾಡು ಬಳಕೆ ಆರೋಪ; ರಾಹುಲ್‌ ಸೇರಿದಂತೆ ಕಾಂಗ್ರೆಸ್‌ ನಾಯಕರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಕಾಂಗ್ರೆಸ್‌ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ ‘ಕೆಜಿಎಫ್‌ ಚಾಪ್ಟರ್‌-2’ ಸಿನಿಮಾದ ಸಂಗೀತವನ್ನು ಅನಧಿಕೃತವಾಗಿ ಬಳಸಿದ್ದಾರೆ ಎಂಬ ಆರೋಪದ ಮೇಲೆ ರಾಹುಲ್ ಗಾಂಧಿ ಸೇರಿದಂತೆ ಮೂವರು ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕೆಜಿಎಫ್- 2ರ ಸಂಗೀತವನ್ನು ಬಳಸಿದ್ದಕ್ಕಾಗಿ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರಿನೇಟ್ ವಿರುದ್ಧ ಕೃತಿಸ್ವಾಮ್ಯ ಕಾಯ್ದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ನವೆಂಬರ್ 4 ರಂದು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯ ಎಂ.ನವೀನ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್‌ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತ್ ಜೋಡೋ ಯಾತ್ರೆಯು ಕರ್ನಾಟಕದಲ್ಲಿ ಸಾಗುವಾಗ ಪ್ಲೇ ಮಾಡಲಾಗಿರುವ ಕೆಜಿಎಫ್‌-2ರ ಹಿಂದಿ ಅವತರಣಿಕೆಯ ‘ಸುಲ್ತಾನ್’ ಹಾಡಿನ ಕುರಿತು ದೂರು ಸಲ್ಲಿಕೆಯಾಗಿದೆ. ರಾಹುಲ್ ಅವರ ಪಾದಯಾತ್ರೆ ಮತ್ತು ಸಾರ್ವಜನಿಕರೊಂದಿಗೆ ಸಂವಹನ ನಡೆಸುವುದನ್ನು ತೋರಿಸುವ ವೀಡಿಯೊದಲ್ಲಿ ಹಾಡು ಬಳಸಲಾಗಿದೆ ಎಂದು ಆಕ್ಷೇಪ ಎತ್ತಲಾಗಿದೆ.

ಜೈರಾಮ್ ರಮೇಶ್ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಭಾರತ್‌ ಜೋಡೋ ಯಾತ್ರೆಯ ಎರಡು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಕೆಜಿಎಫ್ 2ರ ಚಿತ್ರದ ಜನಪ್ರಿಯ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

ದೂರುದಾರರ ಒಡೆತನದ ಜನಪ್ರಿಯ ಧ್ವನಿಮುದ್ರಿಕೆಗಳನ್ನು ಬಳಸಿಕೊಂಡು ವೀಡಿಯೊಗಳನ್ನು ಮಾಡಲಾಗಿದೆ. ಬಳಸಲಾದ ಧ್ವನಿಮುದ್ರಿಕೆಗಳು ಕೆಜಿಎಫ್ ಚಾಪ್ಟರ್‌‌ 2 (ಹಿಂದಿ ಆವೃತ್ತಿ)‍ ಸಿನಿಮಾಕ್ಕೆ ಸೇರಿವೆ ಎಂದು ಆಕ್ಷೇಪಿಸಲಾಗಿದೆ.

“ವೀಡಿಯೊಗಳನ್ನು ನೋಡಿದಾಗ ಆರೋಪಿಗಳು ಮೋಸದಿಂದ, ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಅನಧಿಕೃತವಾಗಿ ಮತ್ತು ಕಾನೂನುಬಾಹಿರವಾಗಿ ದೂರುದಾರನ ಮಾಲೀಕತ್ವದ ಧ್ವನಿಮುದ್ರಿಕೆಯನ್ನು ಬಳಸಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಭಾರತ್‌ ಜೋಡೋ ಯಾತ್ರೆಯು ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಜನವರಿ 30, 2023ರಂದು ಜಮ್ಮುವನ್ನು ತಲುಪುವ ಗುರಿಯನ್ನು ಹೊಂದಿದೆ. ಈ ಯಾತ್ರೆಯು ಇದುವರೆಗೆ ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮೂಲಕ ಹಾದುಹೋಗಿದೆ.

ಇದನ್ನೂ ಓದಿರಿ: ಕೃತಿಚೌರ್ಯ ಆರೋಪ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿಗೆ ಕೇರಳ ನ್ಯಾಯಾಲಯ ತಡೆಯಾಜ್ಞೆ

ಕೃತಿಚೌರ್ಯದ ಆರೋಪಗಳು ಇತ್ತೀಚೆಗೆ ಸದ್ದು ಮಾಡುತ್ತಿವೆ. ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ವಿರುದ್ಧ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ ಇತ್ತೀಚೆಗೆ ಪ್ರಕರಣ ದಾಖಲಿಸಿತ್ತು. ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮೆ ವಿಚಾರಣೆ ನಡೆಸಿದ ನ್ಯಾಯಾಲಯ ಹಾಡನ್ನು ಪ್ಲೇ ಮಾಡದಂತೆ ಸ್ಟ್ರೀಮಿಂಗ್ ಫ್ಲಾಟ್‌ಫಾರ್ಮ್‌ಗಳಿಗೆ ತಡೆಯಾಜ್ಞೆ ನೀಡಿತ್ತು.

ಕಾಂತಾರ ಚಿತ್ರದ ವರಾಹ ರೂಪಂ ಹಾಡು ಮತ್ತು 2015 ರಲ್ಲಿ ಬಿಡುಗಡೆಯಾದ ಥಕ್ಕುಡಂ ಬ್ರಿಡ್ಜ್‌‌ನ ‘ನವರಸಂ’ ಗೀತೆ ನಡುವೆ ‘ಸಾಮ್ಯತೆ’ ಇದೆ ಎಂದು ದೂರಲಾಗಿದೆ.

ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕರು, ಅಮೇಜಾನ್, ಯೂಟ್ಯೂಬ್‌, ಸ್ಪೋಟಿಫೈ, ವಿಂಕ್ ಮ್ಯೂಸಿಕ್, ಜಿಯೋಸಾವನ್ ಮತ್ತು ಇತರರು ಕಾಂತಾರ ಚಿತ್ರದ ವರಾಹ ರೂಪಂ ಹಾಡನ್ನು ಥೈಕ್ಕುಡಂ ಬ್ರಿಡ್ಜ್‌ನ ಅನುಮತಿಯಿಲ್ಲದೆ ಬಳಸುವಂತಿಲ್ಲ ಎಂದು ಕೋರ್ಟ್ ತಡೆಯಾಜ್ಞೆ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...