Homeಕರ್ನಾಟಕಪರಿಸರ ನಿಯಮಾವಳಿ ಉಲ್ಲಂಘನೆ ಆರೋಪ: ಯತ್ನಾಳ್ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ

ಪರಿಸರ ನಿಯಮಾವಳಿ ಉಲ್ಲಂಘನೆ ಆರೋಪ: ಯತ್ನಾಳ್ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ

- Advertisement -
- Advertisement -

ಪರಿಸರ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಎರಡು ಸಕ್ಕರೆ ಕಾರ್ಖಾನೆಗಳನ್ನು ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಆದೇಶಿಸಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಒಡೆತನದ ಕಲಬುರಗಿ ಜಿಲ್ಲೆ ಚಿಂಚೋಳಿಯ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ವಿಷಾನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾದ ಬೀದರ್‌ ಜಿಲ್ಲೆ ಹುಮನಾಬಾದ್‌ನ ಪ್ರಸನ್ನ ಪ್ರಿ ಪ್ರೊಸೆಸಿಂಗ್‌ ಪ್ರೈವೇಟ್‌ ಲಿಮಿಟೆಡ್‌ ಕಾರ್ಖಾನೆಗಳನ್ನು ತಕ್ಷಣದಿಂದಲೇ ಮುಚ್ಚುವಂತೆ ಸೂಚಿಸಲಾಗಿದೆ.

ಕಳೆದ ವಾರ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಕೆಎಸ್‌ಪಿಸಿಬಿ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ ಬೆನ್ನಲ್ಲೇ ತುರ್ತು ಸಭೆ ನಡೆಸಿದ ಮಂಡಳಿ, ಸಕ್ಕರೆ ಕಾರ್ಖಾನೆಗಳನ್ನು ಮುಚ್ಚುವಂತೆ ನೋಟಿಸ್ ಜಾರಿಗೊಳಿಸಿದೆ ಎಂದು ವರದಿಗಳು ಹೇಳಿವೆ.

ಸಕ್ಕರೆ ಕಾರ್ಖಾನೆಗಳಿಗೆ ಬೀಗ ಜಡಿಯುವುದು ಮಾತ್ರವಲ್ಲದೆ, ಅವುಗಳ ನೋಂದಣಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ದವೂ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೆಎಸ್‌ಪಿಸಿಬಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಎರಡು ಕಾರ್ಖಾನೆಗಳಲ್ಲಿ ಅವೈಜ್ಞಾನಿಕ ನಿರ್ವಹಣೆ ಸೇರಿದಂತೆ ಹಲವು ಲೋಪಗಳು ಕಂಡು ಬಂದಿವೆ ಎಂದು ಹೇಳಲಾಗಿದೆ.

ಯತ್ನಾಳ್ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ:

ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಒಡೆತನದ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ಕೆಎಸ್‌ಪಿಸಿಬಿ ಆದೇಶಿಸಿದೆ. ಮಾಲಿನ್ಯ ನಿಯಂತ್ರಣ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾರ್ಖಾನೆ ನಡೆಸುತ್ತಿದ್ದ ಆರೋಪ ಕೇಳಿ ಬಂದಿದೆ. ವರದಿಗಳ ಪ್ರಕಾರ, ಅನುಮತಿ ಪಡೆಯದೆ ಬಾಯ್ಲರ್ ಆರಂಭ, ಕಬ್ಬು ಅರೆಯುವಿಕೆ, ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ ಹಂತದಲ್ಲಿದ್ದರೂ ಅನುಮತಿ ಪಡೆಯದೆ ಡಿಸ್ಟಿಲರಿ ಘಟಕ ಸ್ಥಾಪಿಸಿದ್ದು ಸೇರಿದಂತೆ ಅನೇಕ ಆರೋಪಗಳು ಈ ಕಾರ್ಖಾನೆ ವಿರುದ್ದ ಕೇಳಿ ಬಂದಿವೆ.

ಹುಮನಾಬಾದ್ ಕಾರ್ಖಾನೆಗೆ ಬೀಗ:

ಜನವರಿ 21ರಂದು ವಿಷಾನಿಲ ಸೋರಿಕೆಯಿಂದ ದುರ್ಘಟನೆ ನಡೆದಿರುವ ಬೀದರ್ ಜಿಲ್ಲೆ ಹುಮನಾಬಾದ್‌ ತಾಲೂಕಿನ ಗಡ್ವಂತಿ ಗ್ರಾಮದ ಕೆಐಎಡಿಬಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಸನ್ನ ಪ್ರಿ ಪ್ರೊಸೆಸಿಂಗ್‌ ಪ್ರೈವೇಟ್‌ ಲಿಮಿಟೆಡ್‌ ಕಾರ್ಖಾನೆಯನ್ನು ಮುಂದಿನ ಆದೇಶವರೆಗೆ ಸ್ಥಗಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಈ ಕಾರ್ಖಾನೆ ಮುಚ್ಚಲು ಇತ್ತೀಚೆಗೆ ನಡೆದ ದುರ್ಘಟನೆ ಮತ್ತು ನಿಯಮಾವಳಿಗಳ ಉಲ್ಲಂಘನೆ ಮುಖ್ಯ ಕಾರಣ ಎನ್ನಲಾಗಿದೆ.

ಕೈಗಾರಿಗೆ, ಕಲ್ಲು ಮತ್ತು ಅದಿರು ಗಣಿಗಳಿಗೆ ನೋಟಿಸ್:

ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು 2023ರಿಂದ ಈವರೆಗೆ ರಾಜ್ಯದಲ್ಲಿಎಷ್ಟು ಕೈಗಾರಿಕೆಗಳು, ಕಲ್ಲು ಮತ್ತು ಅದಿರು ಗಣಿಗಳಿಗೆ ನೋಟಿಸ್‌ ನೀಡಲಾಗಿದೆ. ಅವುಗಳಲ್ಲಿ ಎಷ್ಟು ನೋಟಿಸ್‌ಗೆ ಉತ್ತರ ನೀಡಿವೆ. ಎಷ್ಟು ಕಾರ್ಖಾನೆಗಳು ಮತ್ತು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಒಂದು ವಾರದಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; 32 ಶಾಸಕರಿಗೆ ಮೊದಲ ಆದ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...