Homeಮುಖಪುಟ5 ಕೆಜಿ ಗೋಧಿ ಕದ್ದ ಆರೋಪ: ಉತ್ತರಪ್ರದೇಶದ 9 ವರ್ಷದ ಬಾಲಕನನ್ನು ಮರಕ್ಕೆ ಕಟ್ಟಿ ಥಳಿತ

5 ಕೆಜಿ ಗೋಧಿ ಕದ್ದ ಆರೋಪ: ಉತ್ತರಪ್ರದೇಶದ 9 ವರ್ಷದ ಬಾಲಕನನ್ನು ಮರಕ್ಕೆ ಕಟ್ಟಿ ಥಳಿತ

- Advertisement -
- Advertisement -

ಉತ್ತರ ಪ್ರದೇಶದ ಮಹರಾಜಗಂಜ್‌ನಲ್ಲಿ ಮಾರುಕಟ್ಟೆಗೆ ಒಯ್ಯುವಾಗ ರಸ್ತೆಯಲ್ಲಿ ಬಿದ್ದ 5 ಕೆಜಿ ಗೋಧಿ ಧಾನ್ಯ ಕಳ್ಳತನದ ಆರೋಪದ ಮೇಲೆ 9 ವರ್ಷದ ಬಾಲಕನನ್ನು ಮರಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಕೃತ್ಯ ವರದಿಯಾಗಿದೆ.

ಗೋಧಿ ತುಂಬಿದ ವಾಹನವೊಂದು ಮಾರುಕಟ್ಟೆಗೆ ಒಯ್ಯುವಾಗ ಸಣ್ಣ ಗೋಧಿ ಚೀಲ ರಸ್ತೆಗೆ ಬಿದ್ದಿದೆ. ಅದನ್ನು ತೆಗೆದುಕೊಂಡ ಬಾಲಕನ ಮೇಲೆ ಕಳ್ಳತನದ ಆರೋಪವೊರಿಸಿ ನೌತನ್ವಾ ಮಂಡಿ ನೌಕರರು ಮರಕ್ಕೆ ಕಟ್ಟಿ ಕೋಲುಗಳಿಂದ ಪೊಲೀಸರ ಎದುರೆ ಥಳಿಸಲಾಗಿದೆ. ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ನಂತರ ಆ ಬಾಲಕನ ಕುಟುಂಬಸ್ಥರನ್ನು ಕರೆಸಿ ಕ್ಷಮೆ ಕೇಳಿದ್ದಲ್ಲದೆ, ಕ್ಷಮಾಪಣೆ ಪತ್ರ ಬರೆಸಿಕೊಂಡು ಬಿಡುಗಡೆ ಮಾಡಲಾಗಿದೆ ಎಂದು ಹಲವು ಪತ್ರಕರ್ತರು ಟ್ವಿಟರ್‌ನಲ್ಲಿ ಆರೋಪಿಸಿದ್ದಾರೆ.

ಆ ವಿಡಿಯೋ ವೈರಲ್ ಆದ ಕೂಡಲೇ ಮಹರಾಜಗಂಜ್‌ನ ಜಿಲ್ಲಾ ವರಿಷ್ಠಾಧಿಕಾರಿ ಪ್ರದೀಪ್ ಗುಪ್ತಾ ಪ್ರತಿಕ್ರಿಯಿಸಿದ್ದಾರೆ. “ಪ್ರಕರಣದ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದುವರೆಗೂ ಮೂವರು ಮಂಡಿ ನೌಕರರನ್ನು ಬಂಧಿಸಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ.ತನಿಖೆ ಚಾಲ್ತಿಯಲ್ಲಿದೆ” ಎಂದು ತಿಳಿಸಿದ್ದಾರೆ.

ಆ ಬಾಲಕ ಯಾವ ತಪ್ಪು ಮಾಡಿಲ್ಲ. ರಸ್ತೆಯಲ್ಲಿ ಬಿದ್ದ ಗೋದಿ ತೆಗೆದುಕೊಂಡರೆ ಏನು ತಪ್ಪು? ಅಲ್ಲದೇ ಹಸಿದವರು ಧಾನ್ಯ ತೆಗೆದುಕೊಂಡರೆ ಅದು ಕಳ್ಳತನವಲ್ಲ. ಹಲ್ಲ ಮಾಡಿದವರು ಅಮಾನವೀಯತೆಯುಳ್ಳವರು ಎಂದು ಟ್ವಿಟರ್‌ನಲ್ಲಿ ಘಟನೆ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ನೌತನ್ವಾ ಪೊಲೀಸರ ಎದುರೇ ಹಲ್ಲೆ ನಡೆದಿದ್ದರೂ ಪೊಲೀಸರು ಹಲ್ಲೆಕೋರರಿಗೆ ಸಹಾಯ ಮಾಡಿದ್ದಾರೆಯೇ ಹೊರತು ಬಾಲಕನಿಗಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಉತ್ತರ ಪ್ರದೇಶ ಪೊಲೀಸರು ಬಡಜನ ವಿರೋಧಿಗಳು ಎಂದು ಟ್ವಿಟರ್‌ನಲ್ಲಿ ಕಿಡಿಕಾರಲಾಗಿದೆ.


ಇದನ್ನೂ ಓದಿ: ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಮಾನವೀಯವಾಗಿ ವರ್ತಿಸಿರುವ ಎಲ್ಲರಿಗೂ ಕಟಿಣ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...