Homeಅಂತರಾಷ್ಟ್ರೀಯ#AllEyesOnDeck | ಗಾಝಾಗೆ ಹೊರಟ 'ಮದ್ಲೀನ್‌'ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

#AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

- Advertisement -
- Advertisement -

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ಹೊರಟಿರುವ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ’ದ ನೆರವು ಹಡಗು ‘ಮದ್ಲೀನ್’ ಮೇಲೆ ಸೋಮವಾರ ತಡರಾತ್ರಿ ಕಣ್ಗಾವಲು ಡ್ರೋನ್ ಕಂಡುಬಂದಿದೆ ಎಂದು ವರದಿಯಾಗಿದೆ. ಈ ಘಟನೆ ಗ್ರೀಕ್ ಪ್ರಾದೇಶಿಕ ಜಲಮಾರ್ಗದಿಂದ 68 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿದೆ. ಮದ್ಲೀನ್ ಎಲ್ಲಿದೆ ಎಂದು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು. #AllEyesOnDeck

ಹೆಲೆನಿಕ್ ಕೋಸ್ಟ್ ಗಾರ್ಡ್ ಹೆರಾನ್ ಎಂದು ಗುರುತಿಸಲಾದ ಡ್ರೋನ್ ಈಗ ಹಡಗಿನ ಮೇಲಿನಿಂದ ಹೊರಟಿದೆ ಎಂದು ಒಕ್ಕೂಟ ಹೇಳಿಕೆಯಲ್ಲಿ ತಿಳಿಸಿದ್ದು, ಮದ್ಲೀನ್‌ ಹಡಗಿನಲ್ಲಿರುವ ಎಲ್ಲಾ 12 ವ್ಯಕ್ತಿಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದೆ. ಅದಾಗ್ಯೂ, ಮದ್ಲೀನ್ ಹಡಗು ಇಟಲಿಯ ಸಿಸಿಲಿಯಿಂದ ಹೊರಟು ನಾಲ್ಕನೇ ದಿನದ ಸೂರ್ಯೋದಯವನ್ನು ಕಂಡಿದೆ ಎಂದು ಹಡಗಿನಲ್ಲಿ ಪ್ರಯಾಣಿಸುತ್ತಿರುವ ಬ್ರೆಜಿಲ್‌ನ ಥಿಯಾಗೊ ಅವಿಲಾ ಅವರು ಬುಧವಾರ ಬೆಳಿಗ್ಗೆ (ಭಾರತೀಯ ಕಾಲಮಾನ) ಹೇಳಿದ್ದಾರೆ. #AllEyesOnDeck

 

View this post on Instagram

 

A post shared by Thiago Ávila (@thiagoavilabrasil)

“ನಮ್ಮ ಲೈವ್ ಅಪ್‌ಡೇಟ್‌ಗಳನ್ನು ಹಂಚಿಕೊಂಡ ಮತ್ತು ಮದ್ಲೀನ್‌ನಲ್ಲಿರುವವರನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು. ಇದು ನಾಗರಿಕ ಪ್ರತಿರೋಧದ ಶಾಂತಿಯುತ ಕ್ರಿಯೆಯಾಗಿದೆ. ಮದ್ಲೀನ್‌ನಲ್ಲಿರುವ ಎಲ್ಲಾ ಸ್ವಯಂಸೇವಕರು ಮತ್ತು ಸಿಬ್ಬಂದಿ ಅಹಿಂಸೆಯಲ್ಲಿ ತರಬೇತಿ ಪಡೆದಿದ್ದಾರೆ.” ಎಂದು ಒಕ್ಕೂಟ ಹೇಳಿದೆ. ಅದಾಗ್ಯೂ, ನಂತರ ಮತ್ತೊಂದು ಡ್ರೋನ್ ಹಡಗಿನ ಮೇಲೆ ಹಾರಾಡುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.

ಭಾನುವಾರ ಸಿಸಿಲಿಯಿಂದ ಹೊರಟ ಮದ್ಲೀನ್, ಬೇಬಿ ಫಾರ್ಮುಲಾ, ನ್ಯಾಪ್‌ಕಿನ್, ಹಿಟ್ಟು, ಅಕ್ಕಿ, ನೈರ್ಮಲ್ಯ ಉತ್ಪನ್ನಗಳು, ನೀರಿನ ಫಿಲ್ಟರ್‌ಗಳು ಮತ್ತು ವೈದ್ಯಕೀಯ ಸರಬರಾಜುಗಳನ್ನು ಒಳಗೊಂಡಂತೆ ಮಾನವೀಯ ಸಹಾಯವನ್ನು ಹೊತ್ತೊಯ್ಯುತ್ತಿದೆ. ಈ ಹಡಗು ಗಾಝಾದ ಮೇಲೆ ವಸಾಹತುಗಾರ ಇಸ್ರೇಲ್‌ನ ನೌಕಾ ದಿಗ್ಬಂಧನವನ್ನು ಮುರಿಯಲು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವು ಆಯೋಜಿಸಿರುವ ಅಂತರರಾಷ್ಟ್ರೀಯ ಪ್ರಯತ್ನದ ಭಾಗವಾಗಿ ಪ್ರಯಾಣಿಸುತ್ತಿದೆ.

 

View this post on Instagram

 

A post shared by Thiago Ávila (@thiagoavilabrasil)

ಯಾವುದೇ ಅಡೆತಡೆಗಳಿಲ್ಲದಿದ್ದರೆ 2,000 ಕಿಮೀ (1,250-ಮೈಲಿ) ಪ್ರಯಾಣವು ಏಳು ದಿನಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ.

“2014 ರಲ್ಲಿ ಗಾಝಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆಯಾದ ‘ಮದ್ಲೀನ್’ ಅವರ ಹೆಸರನ್ನು ಹಡಗಿಗೆ ಇಡಲಾಗಿದ್ದು, ಪ್ಯಾಲೆಸ್ತೀನಿ ಹೋರಾಟದ ಅವಿಶ್ರಾಂತ ಮನೋಭಾವ ಮತ್ತು ಇಸ್ರೇಲ್‌ನ ಸಾಮೂಹಿಕ ಶಿಕ್ಷೆ ಮತ್ತು ಉದ್ದೇಶಪೂರ್ವಕ ಹಸಿವು ನೀತಿಗಳ ಹೇರಿಕೆಗಳ ವಿರುದ್ಧ ಬೆಳೆಯುತ್ತಿರುವ ಜಾಗತಿಕ ಪ್ರತಿರೋಧವನ್ನು ಇದು ಸಂಕೇತಿಸುತ್ತದೆ” ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿದೆ.

ಸ್ವೀಡಿಷ್‌ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರೊಂದಿಗೆ ಜರ್ಮನಿಯ ಯಾಸೆಮಿನ್ ಅಕಾರ್, ಬ್ರೆಜಿಲ್‌ನ ಥಿಯಾಗೊ ಅವಿಲಾ, ಫ್ರಾನ್ಸ್‌ನ ಒಮರ್ ಫಯಾದ್, ರಿಮಾ ಹಸನ್, ಬ್ಯಾಪ್ಟಿಸ್ಟ್ ಆಂಡ್ರೆ, ಪ್ಯಾಸ್ಕಲ್ ಮೌರಿಯರಾಸ್, ಯಾನಿಸ್ ಮಹಮ್ದಿ, ಟರ್ಕಿಯ ಶುವಾಯ್ಬ್ ಒರ್ಡು, ರೆವಾ ವಿಯಾರ್ಡ್, ಸ್ಪೇನ್‌ನ ಸೆರ್ಗಿಯೊ ಟೊರಿಬಿಯೊ ಮತ್ತು ನೆದರ್ಲ್ಯಾಂಡ್ಸ್‌ನ ಮಾರ್ಕೊ ವ್ಯಾನ್ ರೆನ್ನೆಸ್ ಹಡಗಿನಲ್ಲಿ ಇದ್ದಾರೆ.

“ಈ ಕಾರ್ಯಾಚರಣೆ ಎಷ್ಟೇ ಅಪಾಯಕಾರಿಯಾಗಿದ್ದರೂ, ನರಮೇಧಕ್ಕೆ ಒಳಗಾಗುತ್ತಿರುವ ಜೀವಗಳ ಮುಂದೆ ಇಡೀ ಪ್ರಪಂಚದ ಮೌನದಷ್ಟು ಅಪಾಯಕಾರಿ ಅಲ್ಲ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರು ಹೇಳಿದ್ದಾರೆ.

ಗಾಝಾಗೆ ನೆರವು ತಡೆಯಲು ತಾನು ‘ಸನ್ನದ್ಧ’ ಎಂದ ಇಸ್ರೇಲ್

ಈ ಮಧ್ಯೆ, ಗಾಝಾ ಕಡೆಗೆ ಸಾಗುತ್ತಿರುವ ಮದ್ಲೀನ್‌ ಹಡಗನ್ನು ತಡೆಯಲು ತಾನು ಸಿದ್ಧ ಎಂದು ಪ್ಯಾಲೆಸ್ತೀನ್‌ ಅನ್ನು ಅಕ್ರಮವಾಗಿ ವಸಾಹತು ಮಾಡಿರುವ ಇಸ್ರೇಲ್ ಸೇನೆ ಹೇಳಿದೆ. ಇಸ್ರೇಲ್‌ನ ಕ್ರೂರ ಹತ್ಯಾಕಾಂಡದ ನಡುವೆಯು ಗಾಝಾದಲ್ಲಿ ನಡೆಯುತ್ತಿರುವ ಮಾನವೀಯ ದುರಂತದ ಬಗ್ಗೆ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಆತಂಕದ ನಡೆಯುವೆಯು ಇಸ್ರೇಲ್ ಈ ಹೇಳಿಕೆ ನೀಡಿದೆ.

ಇಸ್ರೇಲಿ ಸೇನಾ ವಕ್ತಾರ ಬ್ರಿಗೇಡಿಯರ್ ಜನರಲ್ ಎಫೀ ಡೆಫ್ರಿನ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, “ಕಡಲು ಸೇರಿದಂತೆ ಎಲ್ಲಾ ರಂಗಗಳಲ್ಲಿ ಮಿಲಿಟರಿ ಕಾರ್ಯನಿರ್ವಹಿಸಲು ಸೇನೆ ಸಿದ್ಧವಾಗಿದೆ” ಎಂದು ಹೇಳಿದ್ದಾರೆ. ಹಡಗನ್ನು ನೇರವಾಗಿ ಹೆಸರಿಸದಿದ್ದರೂ,”ನಾವು ಸಿದ್ಧರಿದ್ದೇವೆ… ನಾವು ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸುತ್ತೇವೆ. ನೌಕಾಪಡೆಯು ಇತ್ತೀಚಿನ ವರ್ಷಗಳಲ್ಲಿ ಅನುಭವವನ್ನು ಗಳಿಸಿದೆ” ಎಂದು ಅವರು ಹೇಳಿದ್ದಾರೆ.

ಇದಕ್ಕೆ ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವು ಕಾರ್ಯಾಚರಣೆಯ ಶಾಂತಿಯುತ ಸ್ವರೂಪವನ್ನು ಪುನರುಚ್ಚರಿಸುವ ಮೂಲಕ ಪ್ರತಿಕ್ರಿಯಿಸಿದೆ. “ಒಟ್ಟಾಗಿ, ನಾವು ಗಾಝಾಗೆ ಜನರ ಸಮುದ್ರ ಕಾರಿಡಾರ್ ಅನ್ನು ತೆರೆಯಬಹುದು” ಎಂದು ಅದು ಎಕ್ಸ್‌ನಲ್ಲಿ ಹೇಳಿದೆ.

ಇಸ್ರೇಲ್‌ ಮುತ್ತಿಗೆ ಹಾಕಿರುವ ಗಾಝಾದಲ್ಲಿ ಮೇ ತಿಂಗಳಿನಿಂದ ಸಂಪೂರ್ಣವಾಗಿ ಕ್ಷಾಮವನ್ನು ಎದುರಿಸುತ್ತಿದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ. ಅಲ್ಲಿಗೆ ಆಹಾರ ಮತ್ತು ಇತರ ಸರಬರಾಜುಗಳ ಹರಿವನ್ನು ಇಸ್ರೇಲ್ ನಿರಂತರ ಅಡ್ಡಿಪಡಿಸುತ್ತಿದೆ.

2023ರ ಅಕ್ಟೋಬರ್ ತಿಂಗಳಿನಿಂದ ಇಸ್ರೇಲ್ ಸೇನೆಯು ಗಾಝಾದಲ್ಲಿ ನರಮೇಧವನ್ನು ನಡೆಸುತ್ತಿದೆ. ಈ ವರೆಗೆ 54,470 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದ್ದು, ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಇದ್ದಾರೆ. ಪ್ಯಾಲೆಸ್ಟೀನ್‌ನ ಅಧಿಕೃತ WAFA ಸುದ್ದಿ ಸಂಸ್ಥೆಯ ಪ್ರಕಾರ, ಸುಮಾರು 11,000 ಪ್ಯಾಲೆಸ್ತೀನಿಯನ್ನರು ನಾಶವಾದ ಮನೆಗಳ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ ಎಂದು ಶಂಕಿಸಲಾಗಿದೆ.

ಆದಾಗ್ಯೂ, ನಿಜವಾದ ಸಾವಿನ ಸಂಖ್ಯೆ ಗಾಝಾ ಅಧಿಕಾರಿಗಳು ವರದಿ ಮಾಡಿದ್ದಕ್ಕಿಂತ ತೀವ್ರ ಹೆಚ್ಚಾಗಿದ್ದು, ಸುಮಾರು 2 ಲಕ್ಷ ಜನರು ಸಾವಿಗೀಡಾಗಿದ್ದಾರೆ ಎಂದು ತಜ್ಞರು ಅಂದಾಜಿಸಿದ್ದಾರೆ. ನರಮೇಧದ ಅವಧಿಯಲ್ಲಿ, ಇಸ್ರೇಲ್ ಹೆಚ್ಚಿನ ಪ್ರದೇಶವನ್ನು ನಾಶಮಾಡಿದ್ದು, ಪ್ರಾಯೋಗಿಕವಾಗಿ ಅಲ್ಲಿನ ಎಲ್ಲಾ ಜನರನ್ನು ಸ್ಥಳಾಂತರಿಸಿದೆ. 20 ಲಕ್ಷಕ್ಕೂ ಹೆಚ್ಚು ಜನರು ವಾಸಿಸುವ ಗಾಝಾ ಪ್ರದೇಶದಲ್ಲಿ ಸನ್ನಿಹಿತವಾದ ಕ್ಷಾಮದ ಬಗ್ಗೆ ನೆರವು ಸಂಸ್ಥೆಗಳು ಎಚ್ಚರಿಸುತ್ತಲೇ ಇವೆ.

ನವೆಂಬರ್‌ನಲ್ಲಿ, ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯವು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ವಿರುದ್ಧ ಗಾಝಾದಲ್ಲಿ ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಬಂಧನ ವಾರಂಟ್‌ಗಳನ್ನು ಹೊರಡಿಸಿದೆ. #AllEyesOnDeck

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:    All eyes on Madleen | ನೆರವು ಹೊತ್ತು ಗಾಝಾದತ್ತ ‘ಮದ್ಲೀನ್’ ಹಡಗು; ಇಸ್ರೇಲ್‌ನ ನೌಕಾ ದಿಗ್ಬಂಧನ ಮುರಿಯಲಿದೆಯೆ!

All eyes on Madleen | ನೆರವು ಹೊತ್ತು ಗಾಝಾದತ್ತ ‘ಮದ್ಲೀನ್’ ಹಡಗು; ಇಸ್ರೇಲ್‌ನ ನೌಕಾ ದಿಗ್ಬಂಧನ ಮುರಿಯಲಿದೆಯೆ!

ಬಿಹಾರ | ಇಂಡಿಯಾ ಮೈತ್ರಿಗೆ ಸೇರಲು ಮುಂದಾದ ಎಐಎಂಐಎಂ; ಎಡಪಕ್ಷಗಳಿಂದ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...