Homeಅಂತರಾಷ್ಟ್ರೀಯ#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

- Advertisement -
- Advertisement -

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ಹೊರಟಿರುವ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್’ನ ಪ್ರಯಾಣವು ಆರನೇ ದಿನಕ್ಕೆ ತಲುಪಿದೆ. ಪ್ರಸ್ತುತ ಮೆಡಿಟರೇನಿಯನ್ ಸಮುದ್ರದಲ್ಲಿರುವ ಹಡಗು ಯಾವುದೇ ಅಡೆತಡೆಗಳಿಲ್ಲದಿದ್ದರೆ ಏಳನೆ ದಿನವಾದ ಶುಕ್ರವಾರ (ನಾಳೆ) ಗಾಝಾ ತಲುಪಲಿದೆ. #AllEyesOnDeck | 6ನೇ ದಿನಕ್ಕೆ

ಮಾರ್ಚ್ 2 ರಿಂದ ಗಾಝಾ ಮೇಲೆ ವಸಾಹತುಗಾರ ಇಸ್ರೇಲ್‌ ವಿಧಿಸಿರುವ ಮುತ್ತಿಗೆಯನ್ನು ಮುರಿಯುವ ಉದ್ದೇಶ ಕೂಡಾ ಮದ್ಲೀನ್‌ಗೆ ಇದೆ. ಹಡಗಿನಲ್ಲಿರುವ 12 ಹೋರಾಟಗಾರಲ್ಲಿ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಕೂಡ ಒಬ್ಬರು. 2007 ರಿಂದ ಈ ಗಾಝಾ ಪ್ರದೇಶವನ್ನು ಇಸ್ರೇಲ್‌ ನೆಲೆ, ಜಲ ಮತ್ತು ವಾಯು ದಿಗ್ಬಂಧನಕ್ಕೆ ಒಳಗಾಗಿಸಿದೆ.

ತಿಂಗಳ ಹಿಂದೆಯಷ್ಟೆ ಗಾಝಾಗೆ ತೆರಳುತ್ತಿದ್ದ ಮತ್ತೊಂದು ಎಫ್‌ಎಫ್‌ಸಿ ನೆರವು ಹಡಗಿನ ಮೇಲೆ ಇಸ್ರೇಲ್‌ನ ಡ್ರೋನ್‌ಗಳು ಬಾಂಬ್ ದಾಳಿ ಮಾಡಿತ್ತು. ಅದಾಗಿ ಒಂದು ತಿಂಗಳ ನಂತರ ಜೂನ್ 1 ರಂದು ಮದ್ಲೀನ್‌ ಸಿಸಿಲಿಯ ಕ್ಯಾಟಾನಿಯಾ ಬಂದರಿನಿಂದ ಹೊರಟಿದೆ. ಇಸ್ರೇಲಿ ಬಾಂಬ್ ದಾಳಿಯಲ್ಲಿ 54,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

 

View this post on Instagram

 

A post shared by Thiago Ávila (@thiagoavilabrasil)

ಮದ್ಲೀನ್ ಸುಮಾರು 2,000 ಕಿಮೀ (1,250-ಮೈಲಿ) ಪ್ರಯಾಣಿಸಲಿದ್ದು ಏಳು ದಿನಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹಡಗಿನ ಲೈವ್ ಟ್ರ್ಯಾಕರ್ ಅನ್ನು ಫೋರೆನ್ಸಿಕ್ ಆರ್ಕಿಟೆಕ್ಚರ್ ನೇರಪ್ರಸಾರ ಮಾಡುತ್ತಿದ್ದು, ಜೊತೆಗೆ ಹಡಗಿನಲ್ಲಿರುವ ಗಾರ್ಮಿನ್ ಲೈವ್ ಟ್ರ್ಯಾಕರ್ ಅನ್ನು ಬಳಸುತ್ತಿದೆ.

ಅದಾಗ್ಯೂ, ಮದ್ಲೀನ್ ಹಡಗನ್ನು ಗಾಝಾ ತಲುಪಲು ಇಸ್ರೇಲ್ ಸೇನೆ ಅನುಮತಿಸುವುದಿಲ್ಲ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ. ಹಡಗಿನಲ್ಲಿರುವ ಹೋರಾಟಗಾರರು ಇಸ್ರೇಲಿ ಸೈನ್ಯದ ಆದೇಶವನ್ನು ಪಾಲಿಸಲು ವಿಫಲವಾದರೆ ಅವರ ಬಂಧನ ಮತ್ತು ಅವರ ಹಡಗನ್ನು ವಶಪಡಿಸಿಕೊಳ್ಳುವ ಅಪಾಯವಿದೆ ಎಂದು ಹೇಳಿವೆ.

ಈ ನಡುವೆ, ಸುಮಾರು 6,50,706 ಜನರು ಇಸ್ರೇಲ್ ಸರ್ಕಾರಕ್ಕೆ ಆಗ್ರಹ ಪತ್ರವನ್ನು ಕಳುಹಿಸಿದ್ದು, ಹಡಗು ಯಾವುದೇ ಅಡೆತಡೆಯಿಲ್ಲದೆ ಗಾಝಾ ತಲುಪಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದೆ.

“ಹಡಗು ನಿರಾಯುಧವಾಗಿದ್ದು, ಯಾವುದೇ ಬೆದರಿಕೆಯನ್ನು ಒಡ್ಡುವುದಿಲ್ಲ ಮತ್ತು ಅಂತರರಾಷ್ಟ್ರೀಯ ಕಡಲ ಕಾನೂನು ಹಾಗೂ ಮಾನವೀಯ ಮತ್ತು ಮಾನವ ಹಕ್ಕುಗಳ ಕಾನೂನಿನೊಂದಿಗೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಅದರ ಪ್ರಯಾಣಿಕರು ಮತ್ತು ಸಿಬ್ಬಂದಿಯಲ್ಲಿ ಸಂಸದರು, ಪತ್ರಕರ್ತರು, ವಕೀಲರು ಮತ್ತು ಜಾಗತಿಕ ನಾಗರಿಕ ಸಮಾಜವನ್ನು ಪ್ರತಿನಿಧಿಸುವ ಮಾನವ ಹಕ್ಕುಗಳ ರಕ್ಷಕರು ಸೇರಿದ್ದಾರೆ” ಎಂದು ಪತ್ರವು ಹೇಳಿದೆ.

“ಮದ್ಲೀನ್ ಅಥವಾ ಅದರ ನಾಗರಿಕ ಪ್ರಯಾಣಿಕರು ಮತ್ತು ಸಿಬ್ಬಂದಿಯೊಂದಿಗೆ ಯಾವುದೇ ಪ್ರತಿಬಂಧ, ದಾಳಿ, ವಿಧ್ವಂಸಕ ಕೃತ್ಯ ಅಥವಾ ಹಸ್ತಕ್ಷೇಪ ಮಾಡಿದರೆ ಅದು ನಾಗರಿಕರ ಮೇಲಿನ ಉದ್ದೇಶಪೂರ್ವಕ, ತಿಳಿದ ಮತ್ತು ಕಾನೂನುಬಾಹಿರ ದಾಳಿಯಾಗುತ್ತದೆ. ಜೊತಗೆ ಅದು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುತ್ತದೆ” ಎಂದು ಪತ್ರವೂ ಎಚ್ಚರಿಸಿದೆ.

“ಅಂತಹ ಕ್ರಮಗಳು ನಾಲ್ಕನೇ ಜಿನೀವಾ ಸಮಾವೇಶದ ಗಂಭೀರ ಉಲ್ಲಂಘನೆಗೆ ಸಮನಾಗಿರುತ್ತದೆ ಮತ್ತು ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ರೋಮ್ ಶಾಸನದ ಅಡಿಯಲ್ಲಿನ ಯುದ್ಧ ಅಪರಾಧಗಳಾಗಿ ಪರಿಣಮಿಸಬಹುದು” ಎಂದು ಪತ್ರವೂ ಹೇಳಿದೆ.

ಅಮೆರಿಕದ ಗಾಯಕ ಮ್ಯಾಕ್ಲೆಮೋರ್‌ ಬೆಂಬಲ

ಈ ನಡುವೆ ಬುಧವಾರ ಐರ್ಲೆಂಡ್‌ನ ರಾಜಧಾನಿ ಡಬ್ಲಿನ್‌ನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಅಮೆರಿಕದ ಗಾಯಕ ಮ್ಯಾಕ್ಲೆಮೋರ್‌, ಪ್ಯಾಲೆಸ್ತೀನಿ ಹೋರಾಟ ಮತ್ತು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಳೆದ ಜೂನ್‌ನಲ್ಲಿ ಪ್ಯಾಲೆಸ್ತೀನ್‌ ಪರ ಬೆಂಬಲಿಗ ಮ್ಯಾಕ್ಲೆಮೋರ್ ಜರ್ಮನಿಯ ವೇದಿಕೆಯಲ್ಲಿ ಮಾಡಿದ ಭಾಷಣದಲ್ಲಿ ಹತ್ಯಾಕಾಂಡವನ್ನು ನೆನಪಿಸಿಕೊಂಡಿದ್ದಾರೆ. ಈ ವೇಳೆ ಅವರು ಗಾಝಾದ ಮೇಲೆ ಇಸ್ರೇಲ್‌ನ ಯುದ್ಧವನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದರು.

ಭಾನುವಾರ ಸಿಸಿಲಿಯಿಂದ ಹೊರಟ ಮದ್ಲೀನ್, ಬೇಬಿ ಫಾರ್ಮುಲಾ, ನ್ಯಾಪ್‌ಕಿನ್, ಹಿಟ್ಟು, ಅಕ್ಕಿ, ನೈರ್ಮಲ್ಯ ಉತ್ಪನ್ನಗಳು, ನೀರಿನ ಫಿಲ್ಟರ್‌ಗಳು ಮತ್ತು ವೈದ್ಯಕೀಯ ಸರಬರಾಜುಗಳನ್ನು ಒಳಗೊಂಡಂತೆ ಮಾನವೀಯ ಸಹಾಯವನ್ನು ಹೊತ್ತೊಯ್ಯುತ್ತಿದೆ. ಈ ಹಡಗು ಗಾಝಾದ ಮೇಲೆ ವಸಾಹತುಗಾರ ಇಸ್ರೇಲ್‌ನ ನೌಕಾ ದಿಗ್ಬಂಧನವನ್ನು ಮುರಿಯಲು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವು ಆಯೋಜಿಸಿರುವ ಅಂತರರಾಷ್ಟ್ರೀಯ ಪ್ರಯತ್ನದ ಭಾಗವಾಗಿ ಪ್ರಯಾಣಿಸುತ್ತಿದೆ.

“2014 ರಲ್ಲಿ ಗಾಝಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆಯಾದ ‘ಮದ್ಲೀನ್’ ಅವರ ಹೆಸರನ್ನು ಹಡಗಿಗೆ ಇಡಲಾಗಿದ್ದು, ಪ್ಯಾಲೆಸ್ತೀನಿ ಹೋರಾಟದ ಅವಿಶ್ರಾಂತ ಮನೋಭಾವ ಮತ್ತು ಇಸ್ರೇಲ್‌ನ ಸಾಮೂಹಿಕ ಶಿಕ್ಷೆ ಮತ್ತು ಉದ್ದೇಶಪೂರ್ವಕ ಹಸಿವು ನೀತಿಗಳ ಹೇರಿಕೆಗಳ ವಿರುದ್ಧ ಬೆಳೆಯುತ್ತಿರುವ ಜಾಗತಿಕ ಪ್ರತಿರೋಧವನ್ನು ಇದು ಸಂಕೇತಿಸುತ್ತದೆ” ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿದೆ.

ಸ್ವೀಡಿಷ್‌ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರೊಂದಿಗೆ ಜರ್ಮನಿಯ ಯಾಸೆಮಿನ್ ಅಕಾರ್, ಬ್ರೆಜಿಲ್‌ನ ಥಿಯಾಗೊ ಅವಿಲಾ, ಫ್ರಾನ್ಸ್‌ನ ಒಮರ್ ಫಯಾದ್, ರಿಮಾ ಹಸನ್, ಬ್ಯಾಪ್ಟಿಸ್ಟ್ ಆಂಡ್ರೆ, ಪ್ಯಾಸ್ಕಲ್ ಮೌರಿಯರಾಸ್, ಯಾನಿಸ್ ಮಹಮ್ದಿ, ಟರ್ಕಿಯ ಶುವಾಯ್ಬ್ ಒರ್ಡು, ರೆವಾ ವಿಯಾರ್ಡ್, ಸ್ಪೇನ್‌ನ ಸೆರ್ಗಿಯೊ ಟೊರಿಬಿಯೊ ಮತ್ತು ನೆದರ್ಲ್ಯಾಂಡ್ಸ್‌ನ ಮಾರ್ಕೊ ವ್ಯಾನ್ ರೆನ್ನೆಸ್ ಹಡಗಿನಲ್ಲಿ ಇದ್ದಾರೆ.

“ಈ ಕಾರ್ಯಾಚರಣೆ ಎಷ್ಟೇ ಅಪಾಯಕಾರಿಯಾಗಿದ್ದರೂ, ನರಮೇಧಕ್ಕೆ ಒಳಗಾಗುತ್ತಿರುವ ಜೀವಗಳ ಮುಂದೆ ಇಡೀ ಪ್ರಪಂಚದ ಮೌನದಷ್ಟು ಅಪಾಯಕಾರಿ ಅಲ್ಲ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರು ಹೇಳಿದ್ದಾರೆ. #AllEyesOnDeck | 6ನೇ ದಿನಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  #AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

#AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...