Homeಅಂತರಾಷ್ಟ್ರೀಯ#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

- Advertisement -
- Advertisement -

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ಹೊರಟಿರುವ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್’ನ ಪ್ರಯಾಣವು ಆರನೇ ದಿನಕ್ಕೆ ತಲುಪಿದೆ. ಪ್ರಸ್ತುತ ಮೆಡಿಟರೇನಿಯನ್ ಸಮುದ್ರದಲ್ಲಿರುವ ಹಡಗು ಯಾವುದೇ ಅಡೆತಡೆಗಳಿಲ್ಲದಿದ್ದರೆ ಏಳನೆ ದಿನವಾದ ಶುಕ್ರವಾರ (ನಾಳೆ) ಗಾಝಾ ತಲುಪಲಿದೆ. #AllEyesOnDeck | 6ನೇ ದಿನಕ್ಕೆ

ಮಾರ್ಚ್ 2 ರಿಂದ ಗಾಝಾ ಮೇಲೆ ವಸಾಹತುಗಾರ ಇಸ್ರೇಲ್‌ ವಿಧಿಸಿರುವ ಮುತ್ತಿಗೆಯನ್ನು ಮುರಿಯುವ ಉದ್ದೇಶ ಕೂಡಾ ಮದ್ಲೀನ್‌ಗೆ ಇದೆ. ಹಡಗಿನಲ್ಲಿರುವ 12 ಹೋರಾಟಗಾರಲ್ಲಿ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಕೂಡ ಒಬ್ಬರು. 2007 ರಿಂದ ಈ ಗಾಝಾ ಪ್ರದೇಶವನ್ನು ಇಸ್ರೇಲ್‌ ನೆಲೆ, ಜಲ ಮತ್ತು ವಾಯು ದಿಗ್ಬಂಧನಕ್ಕೆ ಒಳಗಾಗಿಸಿದೆ.

ತಿಂಗಳ ಹಿಂದೆಯಷ್ಟೆ ಗಾಝಾಗೆ ತೆರಳುತ್ತಿದ್ದ ಮತ್ತೊಂದು ಎಫ್‌ಎಫ್‌ಸಿ ನೆರವು ಹಡಗಿನ ಮೇಲೆ ಇಸ್ರೇಲ್‌ನ ಡ್ರೋನ್‌ಗಳು ಬಾಂಬ್ ದಾಳಿ ಮಾಡಿತ್ತು. ಅದಾಗಿ ಒಂದು ತಿಂಗಳ ನಂತರ ಜೂನ್ 1 ರಂದು ಮದ್ಲೀನ್‌ ಸಿಸಿಲಿಯ ಕ್ಯಾಟಾನಿಯಾ ಬಂದರಿನಿಂದ ಹೊರಟಿದೆ. ಇಸ್ರೇಲಿ ಬಾಂಬ್ ದಾಳಿಯಲ್ಲಿ 54,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

 

View this post on Instagram

 

A post shared by Thiago Ávila (@thiagoavilabrasil)

ಮದ್ಲೀನ್ ಸುಮಾರು 2,000 ಕಿಮೀ (1,250-ಮೈಲಿ) ಪ್ರಯಾಣಿಸಲಿದ್ದು ಏಳು ದಿನಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹಡಗಿನ ಲೈವ್ ಟ್ರ್ಯಾಕರ್ ಅನ್ನು ಫೋರೆನ್ಸಿಕ್ ಆರ್ಕಿಟೆಕ್ಚರ್ ನೇರಪ್ರಸಾರ ಮಾಡುತ್ತಿದ್ದು, ಜೊತೆಗೆ ಹಡಗಿನಲ್ಲಿರುವ ಗಾರ್ಮಿನ್ ಲೈವ್ ಟ್ರ್ಯಾಕರ್ ಅನ್ನು ಬಳಸುತ್ತಿದೆ.

ಅದಾಗ್ಯೂ, ಮದ್ಲೀನ್ ಹಡಗನ್ನು ಗಾಝಾ ತಲುಪಲು ಇಸ್ರೇಲ್ ಸೇನೆ ಅನುಮತಿಸುವುದಿಲ್ಲ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ. ಹಡಗಿನಲ್ಲಿರುವ ಹೋರಾಟಗಾರರು ಇಸ್ರೇಲಿ ಸೈನ್ಯದ ಆದೇಶವನ್ನು ಪಾಲಿಸಲು ವಿಫಲವಾದರೆ ಅವರ ಬಂಧನ ಮತ್ತು ಅವರ ಹಡಗನ್ನು ವಶಪಡಿಸಿಕೊಳ್ಳುವ ಅಪಾಯವಿದೆ ಎಂದು ಹೇಳಿವೆ.

ಈ ನಡುವೆ, ಸುಮಾರು 6,50,706 ಜನರು ಇಸ್ರೇಲ್ ಸರ್ಕಾರಕ್ಕೆ ಆಗ್ರಹ ಪತ್ರವನ್ನು ಕಳುಹಿಸಿದ್ದು, ಹಡಗು ಯಾವುದೇ ಅಡೆತಡೆಯಿಲ್ಲದೆ ಗಾಝಾ ತಲುಪಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದೆ.

“ಹಡಗು ನಿರಾಯುಧವಾಗಿದ್ದು, ಯಾವುದೇ ಬೆದರಿಕೆಯನ್ನು ಒಡ್ಡುವುದಿಲ್ಲ ಮತ್ತು ಅಂತರರಾಷ್ಟ್ರೀಯ ಕಡಲ ಕಾನೂನು ಹಾಗೂ ಮಾನವೀಯ ಮತ್ತು ಮಾನವ ಹಕ್ಕುಗಳ ಕಾನೂನಿನೊಂದಿಗೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಅದರ ಪ್ರಯಾಣಿಕರು ಮತ್ತು ಸಿಬ್ಬಂದಿಯಲ್ಲಿ ಸಂಸದರು, ಪತ್ರಕರ್ತರು, ವಕೀಲರು ಮತ್ತು ಜಾಗತಿಕ ನಾಗರಿಕ ಸಮಾಜವನ್ನು ಪ್ರತಿನಿಧಿಸುವ ಮಾನವ ಹಕ್ಕುಗಳ ರಕ್ಷಕರು ಸೇರಿದ್ದಾರೆ” ಎಂದು ಪತ್ರವು ಹೇಳಿದೆ.

“ಮದ್ಲೀನ್ ಅಥವಾ ಅದರ ನಾಗರಿಕ ಪ್ರಯಾಣಿಕರು ಮತ್ತು ಸಿಬ್ಬಂದಿಯೊಂದಿಗೆ ಯಾವುದೇ ಪ್ರತಿಬಂಧ, ದಾಳಿ, ವಿಧ್ವಂಸಕ ಕೃತ್ಯ ಅಥವಾ ಹಸ್ತಕ್ಷೇಪ ಮಾಡಿದರೆ ಅದು ನಾಗರಿಕರ ಮೇಲಿನ ಉದ್ದೇಶಪೂರ್ವಕ, ತಿಳಿದ ಮತ್ತು ಕಾನೂನುಬಾಹಿರ ದಾಳಿಯಾಗುತ್ತದೆ. ಜೊತಗೆ ಅದು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುತ್ತದೆ” ಎಂದು ಪತ್ರವೂ ಎಚ್ಚರಿಸಿದೆ.

“ಅಂತಹ ಕ್ರಮಗಳು ನಾಲ್ಕನೇ ಜಿನೀವಾ ಸಮಾವೇಶದ ಗಂಭೀರ ಉಲ್ಲಂಘನೆಗೆ ಸಮನಾಗಿರುತ್ತದೆ ಮತ್ತು ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ರೋಮ್ ಶಾಸನದ ಅಡಿಯಲ್ಲಿನ ಯುದ್ಧ ಅಪರಾಧಗಳಾಗಿ ಪರಿಣಮಿಸಬಹುದು” ಎಂದು ಪತ್ರವೂ ಹೇಳಿದೆ.

ಅಮೆರಿಕದ ಗಾಯಕ ಮ್ಯಾಕ್ಲೆಮೋರ್‌ ಬೆಂಬಲ

ಈ ನಡುವೆ ಬುಧವಾರ ಐರ್ಲೆಂಡ್‌ನ ರಾಜಧಾನಿ ಡಬ್ಲಿನ್‌ನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಅಮೆರಿಕದ ಗಾಯಕ ಮ್ಯಾಕ್ಲೆಮೋರ್‌, ಪ್ಯಾಲೆಸ್ತೀನಿ ಹೋರಾಟ ಮತ್ತು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಳೆದ ಜೂನ್‌ನಲ್ಲಿ ಪ್ಯಾಲೆಸ್ತೀನ್‌ ಪರ ಬೆಂಬಲಿಗ ಮ್ಯಾಕ್ಲೆಮೋರ್ ಜರ್ಮನಿಯ ವೇದಿಕೆಯಲ್ಲಿ ಮಾಡಿದ ಭಾಷಣದಲ್ಲಿ ಹತ್ಯಾಕಾಂಡವನ್ನು ನೆನಪಿಸಿಕೊಂಡಿದ್ದಾರೆ. ಈ ವೇಳೆ ಅವರು ಗಾಝಾದ ಮೇಲೆ ಇಸ್ರೇಲ್‌ನ ಯುದ್ಧವನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದರು.

ಭಾನುವಾರ ಸಿಸಿಲಿಯಿಂದ ಹೊರಟ ಮದ್ಲೀನ್, ಬೇಬಿ ಫಾರ್ಮುಲಾ, ನ್ಯಾಪ್‌ಕಿನ್, ಹಿಟ್ಟು, ಅಕ್ಕಿ, ನೈರ್ಮಲ್ಯ ಉತ್ಪನ್ನಗಳು, ನೀರಿನ ಫಿಲ್ಟರ್‌ಗಳು ಮತ್ತು ವೈದ್ಯಕೀಯ ಸರಬರಾಜುಗಳನ್ನು ಒಳಗೊಂಡಂತೆ ಮಾನವೀಯ ಸಹಾಯವನ್ನು ಹೊತ್ತೊಯ್ಯುತ್ತಿದೆ. ಈ ಹಡಗು ಗಾಝಾದ ಮೇಲೆ ವಸಾಹತುಗಾರ ಇಸ್ರೇಲ್‌ನ ನೌಕಾ ದಿಗ್ಬಂಧನವನ್ನು ಮುರಿಯಲು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವು ಆಯೋಜಿಸಿರುವ ಅಂತರರಾಷ್ಟ್ರೀಯ ಪ್ರಯತ್ನದ ಭಾಗವಾಗಿ ಪ್ರಯಾಣಿಸುತ್ತಿದೆ.

“2014 ರಲ್ಲಿ ಗಾಝಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆಯಾದ ‘ಮದ್ಲೀನ್’ ಅವರ ಹೆಸರನ್ನು ಹಡಗಿಗೆ ಇಡಲಾಗಿದ್ದು, ಪ್ಯಾಲೆಸ್ತೀನಿ ಹೋರಾಟದ ಅವಿಶ್ರಾಂತ ಮನೋಭಾವ ಮತ್ತು ಇಸ್ರೇಲ್‌ನ ಸಾಮೂಹಿಕ ಶಿಕ್ಷೆ ಮತ್ತು ಉದ್ದೇಶಪೂರ್ವಕ ಹಸಿವು ನೀತಿಗಳ ಹೇರಿಕೆಗಳ ವಿರುದ್ಧ ಬೆಳೆಯುತ್ತಿರುವ ಜಾಗತಿಕ ಪ್ರತಿರೋಧವನ್ನು ಇದು ಸಂಕೇತಿಸುತ್ತದೆ” ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿದೆ.

ಸ್ವೀಡಿಷ್‌ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರೊಂದಿಗೆ ಜರ್ಮನಿಯ ಯಾಸೆಮಿನ್ ಅಕಾರ್, ಬ್ರೆಜಿಲ್‌ನ ಥಿಯಾಗೊ ಅವಿಲಾ, ಫ್ರಾನ್ಸ್‌ನ ಒಮರ್ ಫಯಾದ್, ರಿಮಾ ಹಸನ್, ಬ್ಯಾಪ್ಟಿಸ್ಟ್ ಆಂಡ್ರೆ, ಪ್ಯಾಸ್ಕಲ್ ಮೌರಿಯರಾಸ್, ಯಾನಿಸ್ ಮಹಮ್ದಿ, ಟರ್ಕಿಯ ಶುವಾಯ್ಬ್ ಒರ್ಡು, ರೆವಾ ವಿಯಾರ್ಡ್, ಸ್ಪೇನ್‌ನ ಸೆರ್ಗಿಯೊ ಟೊರಿಬಿಯೊ ಮತ್ತು ನೆದರ್ಲ್ಯಾಂಡ್ಸ್‌ನ ಮಾರ್ಕೊ ವ್ಯಾನ್ ರೆನ್ನೆಸ್ ಹಡಗಿನಲ್ಲಿ ಇದ್ದಾರೆ.

“ಈ ಕಾರ್ಯಾಚರಣೆ ಎಷ್ಟೇ ಅಪಾಯಕಾರಿಯಾಗಿದ್ದರೂ, ನರಮೇಧಕ್ಕೆ ಒಳಗಾಗುತ್ತಿರುವ ಜೀವಗಳ ಮುಂದೆ ಇಡೀ ಪ್ರಪಂಚದ ಮೌನದಷ್ಟು ಅಪಾಯಕಾರಿ ಅಲ್ಲ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರು ಹೇಳಿದ್ದಾರೆ. #AllEyesOnDeck | 6ನೇ ದಿನಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  #AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

#AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...