Homeಅಂತರಾಷ್ಟ್ರೀಯ#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

- Advertisement -
- Advertisement -

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ಹೊರಟಿರುವ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್’ನ ಪ್ರಯಾಣವು ಆರನೇ ದಿನಕ್ಕೆ ತಲುಪಿದೆ. ಪ್ರಸ್ತುತ ಮೆಡಿಟರೇನಿಯನ್ ಸಮುದ್ರದಲ್ಲಿರುವ ಹಡಗು ಯಾವುದೇ ಅಡೆತಡೆಗಳಿಲ್ಲದಿದ್ದರೆ ಏಳನೆ ದಿನವಾದ ಶುಕ್ರವಾರ (ನಾಳೆ) ಗಾಝಾ ತಲುಪಲಿದೆ. #AllEyesOnDeck | 6ನೇ ದಿನಕ್ಕೆ

ಮಾರ್ಚ್ 2 ರಿಂದ ಗಾಝಾ ಮೇಲೆ ವಸಾಹತುಗಾರ ಇಸ್ರೇಲ್‌ ವಿಧಿಸಿರುವ ಮುತ್ತಿಗೆಯನ್ನು ಮುರಿಯುವ ಉದ್ದೇಶ ಕೂಡಾ ಮದ್ಲೀನ್‌ಗೆ ಇದೆ. ಹಡಗಿನಲ್ಲಿರುವ 12 ಹೋರಾಟಗಾರಲ್ಲಿ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಕೂಡ ಒಬ್ಬರು. 2007 ರಿಂದ ಈ ಗಾಝಾ ಪ್ರದೇಶವನ್ನು ಇಸ್ರೇಲ್‌ ನೆಲೆ, ಜಲ ಮತ್ತು ವಾಯು ದಿಗ್ಬಂಧನಕ್ಕೆ ಒಳಗಾಗಿಸಿದೆ.

ತಿಂಗಳ ಹಿಂದೆಯಷ್ಟೆ ಗಾಝಾಗೆ ತೆರಳುತ್ತಿದ್ದ ಮತ್ತೊಂದು ಎಫ್‌ಎಫ್‌ಸಿ ನೆರವು ಹಡಗಿನ ಮೇಲೆ ಇಸ್ರೇಲ್‌ನ ಡ್ರೋನ್‌ಗಳು ಬಾಂಬ್ ದಾಳಿ ಮಾಡಿತ್ತು. ಅದಾಗಿ ಒಂದು ತಿಂಗಳ ನಂತರ ಜೂನ್ 1 ರಂದು ಮದ್ಲೀನ್‌ ಸಿಸಿಲಿಯ ಕ್ಯಾಟಾನಿಯಾ ಬಂದರಿನಿಂದ ಹೊರಟಿದೆ. ಇಸ್ರೇಲಿ ಬಾಂಬ್ ದಾಳಿಯಲ್ಲಿ 54,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

 

View this post on Instagram

 

A post shared by Thiago Ávila (@thiagoavilabrasil)

ಮದ್ಲೀನ್ ಸುಮಾರು 2,000 ಕಿಮೀ (1,250-ಮೈಲಿ) ಪ್ರಯಾಣಿಸಲಿದ್ದು ಏಳು ದಿನಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹಡಗಿನ ಲೈವ್ ಟ್ರ್ಯಾಕರ್ ಅನ್ನು ಫೋರೆನ್ಸಿಕ್ ಆರ್ಕಿಟೆಕ್ಚರ್ ನೇರಪ್ರಸಾರ ಮಾಡುತ್ತಿದ್ದು, ಜೊತೆಗೆ ಹಡಗಿನಲ್ಲಿರುವ ಗಾರ್ಮಿನ್ ಲೈವ್ ಟ್ರ್ಯಾಕರ್ ಅನ್ನು ಬಳಸುತ್ತಿದೆ.

ಅದಾಗ್ಯೂ, ಮದ್ಲೀನ್ ಹಡಗನ್ನು ಗಾಝಾ ತಲುಪಲು ಇಸ್ರೇಲ್ ಸೇನೆ ಅನುಮತಿಸುವುದಿಲ್ಲ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ. ಹಡಗಿನಲ್ಲಿರುವ ಹೋರಾಟಗಾರರು ಇಸ್ರೇಲಿ ಸೈನ್ಯದ ಆದೇಶವನ್ನು ಪಾಲಿಸಲು ವಿಫಲವಾದರೆ ಅವರ ಬಂಧನ ಮತ್ತು ಅವರ ಹಡಗನ್ನು ವಶಪಡಿಸಿಕೊಳ್ಳುವ ಅಪಾಯವಿದೆ ಎಂದು ಹೇಳಿವೆ.

ಈ ನಡುವೆ, ಸುಮಾರು 6,50,706 ಜನರು ಇಸ್ರೇಲ್ ಸರ್ಕಾರಕ್ಕೆ ಆಗ್ರಹ ಪತ್ರವನ್ನು ಕಳುಹಿಸಿದ್ದು, ಹಡಗು ಯಾವುದೇ ಅಡೆತಡೆಯಿಲ್ಲದೆ ಗಾಝಾ ತಲುಪಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದೆ.

“ಹಡಗು ನಿರಾಯುಧವಾಗಿದ್ದು, ಯಾವುದೇ ಬೆದರಿಕೆಯನ್ನು ಒಡ್ಡುವುದಿಲ್ಲ ಮತ್ತು ಅಂತರರಾಷ್ಟ್ರೀಯ ಕಡಲ ಕಾನೂನು ಹಾಗೂ ಮಾನವೀಯ ಮತ್ತು ಮಾನವ ಹಕ್ಕುಗಳ ಕಾನೂನಿನೊಂದಿಗೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಅದರ ಪ್ರಯಾಣಿಕರು ಮತ್ತು ಸಿಬ್ಬಂದಿಯಲ್ಲಿ ಸಂಸದರು, ಪತ್ರಕರ್ತರು, ವಕೀಲರು ಮತ್ತು ಜಾಗತಿಕ ನಾಗರಿಕ ಸಮಾಜವನ್ನು ಪ್ರತಿನಿಧಿಸುವ ಮಾನವ ಹಕ್ಕುಗಳ ರಕ್ಷಕರು ಸೇರಿದ್ದಾರೆ” ಎಂದು ಪತ್ರವು ಹೇಳಿದೆ.

“ಮದ್ಲೀನ್ ಅಥವಾ ಅದರ ನಾಗರಿಕ ಪ್ರಯಾಣಿಕರು ಮತ್ತು ಸಿಬ್ಬಂದಿಯೊಂದಿಗೆ ಯಾವುದೇ ಪ್ರತಿಬಂಧ, ದಾಳಿ, ವಿಧ್ವಂಸಕ ಕೃತ್ಯ ಅಥವಾ ಹಸ್ತಕ್ಷೇಪ ಮಾಡಿದರೆ ಅದು ನಾಗರಿಕರ ಮೇಲಿನ ಉದ್ದೇಶಪೂರ್ವಕ, ತಿಳಿದ ಮತ್ತು ಕಾನೂನುಬಾಹಿರ ದಾಳಿಯಾಗುತ್ತದೆ. ಜೊತಗೆ ಅದು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುತ್ತದೆ” ಎಂದು ಪತ್ರವೂ ಎಚ್ಚರಿಸಿದೆ.

“ಅಂತಹ ಕ್ರಮಗಳು ನಾಲ್ಕನೇ ಜಿನೀವಾ ಸಮಾವೇಶದ ಗಂಭೀರ ಉಲ್ಲಂಘನೆಗೆ ಸಮನಾಗಿರುತ್ತದೆ ಮತ್ತು ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ರೋಮ್ ಶಾಸನದ ಅಡಿಯಲ್ಲಿನ ಯುದ್ಧ ಅಪರಾಧಗಳಾಗಿ ಪರಿಣಮಿಸಬಹುದು” ಎಂದು ಪತ್ರವೂ ಹೇಳಿದೆ.

ಅಮೆರಿಕದ ಗಾಯಕ ಮ್ಯಾಕ್ಲೆಮೋರ್‌ ಬೆಂಬಲ

ಈ ನಡುವೆ ಬುಧವಾರ ಐರ್ಲೆಂಡ್‌ನ ರಾಜಧಾನಿ ಡಬ್ಲಿನ್‌ನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಅಮೆರಿಕದ ಗಾಯಕ ಮ್ಯಾಕ್ಲೆಮೋರ್‌, ಪ್ಯಾಲೆಸ್ತೀನಿ ಹೋರಾಟ ಮತ್ತು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಳೆದ ಜೂನ್‌ನಲ್ಲಿ ಪ್ಯಾಲೆಸ್ತೀನ್‌ ಪರ ಬೆಂಬಲಿಗ ಮ್ಯಾಕ್ಲೆಮೋರ್ ಜರ್ಮನಿಯ ವೇದಿಕೆಯಲ್ಲಿ ಮಾಡಿದ ಭಾಷಣದಲ್ಲಿ ಹತ್ಯಾಕಾಂಡವನ್ನು ನೆನಪಿಸಿಕೊಂಡಿದ್ದಾರೆ. ಈ ವೇಳೆ ಅವರು ಗಾಝಾದ ಮೇಲೆ ಇಸ್ರೇಲ್‌ನ ಯುದ್ಧವನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದರು.

ಭಾನುವಾರ ಸಿಸಿಲಿಯಿಂದ ಹೊರಟ ಮದ್ಲೀನ್, ಬೇಬಿ ಫಾರ್ಮುಲಾ, ನ್ಯಾಪ್‌ಕಿನ್, ಹಿಟ್ಟು, ಅಕ್ಕಿ, ನೈರ್ಮಲ್ಯ ಉತ್ಪನ್ನಗಳು, ನೀರಿನ ಫಿಲ್ಟರ್‌ಗಳು ಮತ್ತು ವೈದ್ಯಕೀಯ ಸರಬರಾಜುಗಳನ್ನು ಒಳಗೊಂಡಂತೆ ಮಾನವೀಯ ಸಹಾಯವನ್ನು ಹೊತ್ತೊಯ್ಯುತ್ತಿದೆ. ಈ ಹಡಗು ಗಾಝಾದ ಮೇಲೆ ವಸಾಹತುಗಾರ ಇಸ್ರೇಲ್‌ನ ನೌಕಾ ದಿಗ್ಬಂಧನವನ್ನು ಮುರಿಯಲು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವು ಆಯೋಜಿಸಿರುವ ಅಂತರರಾಷ್ಟ್ರೀಯ ಪ್ರಯತ್ನದ ಭಾಗವಾಗಿ ಪ್ರಯಾಣಿಸುತ್ತಿದೆ.

“2014 ರಲ್ಲಿ ಗಾಝಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆಯಾದ ‘ಮದ್ಲೀನ್’ ಅವರ ಹೆಸರನ್ನು ಹಡಗಿಗೆ ಇಡಲಾಗಿದ್ದು, ಪ್ಯಾಲೆಸ್ತೀನಿ ಹೋರಾಟದ ಅವಿಶ್ರಾಂತ ಮನೋಭಾವ ಮತ್ತು ಇಸ್ರೇಲ್‌ನ ಸಾಮೂಹಿಕ ಶಿಕ್ಷೆ ಮತ್ತು ಉದ್ದೇಶಪೂರ್ವಕ ಹಸಿವು ನೀತಿಗಳ ಹೇರಿಕೆಗಳ ವಿರುದ್ಧ ಬೆಳೆಯುತ್ತಿರುವ ಜಾಗತಿಕ ಪ್ರತಿರೋಧವನ್ನು ಇದು ಸಂಕೇತಿಸುತ್ತದೆ” ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿದೆ.

ಸ್ವೀಡಿಷ್‌ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರೊಂದಿಗೆ ಜರ್ಮನಿಯ ಯಾಸೆಮಿನ್ ಅಕಾರ್, ಬ್ರೆಜಿಲ್‌ನ ಥಿಯಾಗೊ ಅವಿಲಾ, ಫ್ರಾನ್ಸ್‌ನ ಒಮರ್ ಫಯಾದ್, ರಿಮಾ ಹಸನ್, ಬ್ಯಾಪ್ಟಿಸ್ಟ್ ಆಂಡ್ರೆ, ಪ್ಯಾಸ್ಕಲ್ ಮೌರಿಯರಾಸ್, ಯಾನಿಸ್ ಮಹಮ್ದಿ, ಟರ್ಕಿಯ ಶುವಾಯ್ಬ್ ಒರ್ಡು, ರೆವಾ ವಿಯಾರ್ಡ್, ಸ್ಪೇನ್‌ನ ಸೆರ್ಗಿಯೊ ಟೊರಿಬಿಯೊ ಮತ್ತು ನೆದರ್ಲ್ಯಾಂಡ್ಸ್‌ನ ಮಾರ್ಕೊ ವ್ಯಾನ್ ರೆನ್ನೆಸ್ ಹಡಗಿನಲ್ಲಿ ಇದ್ದಾರೆ.

“ಈ ಕಾರ್ಯಾಚರಣೆ ಎಷ್ಟೇ ಅಪಾಯಕಾರಿಯಾಗಿದ್ದರೂ, ನರಮೇಧಕ್ಕೆ ಒಳಗಾಗುತ್ತಿರುವ ಜೀವಗಳ ಮುಂದೆ ಇಡೀ ಪ್ರಪಂಚದ ಮೌನದಷ್ಟು ಅಪಾಯಕಾರಿ ಅಲ್ಲ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರು ಹೇಳಿದ್ದಾರೆ. #AllEyesOnDeck | 6ನೇ ದಿನಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  #AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

#AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...