Homeಅಂತರಾಷ್ಟ್ರೀಯ#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

- Advertisement -
- Advertisement -

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ಹೊರಟಿರುವ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್’ನ ಪ್ರಯಾಣವು ಆರನೇ ದಿನಕ್ಕೆ ತಲುಪಿದೆ. ಪ್ರಸ್ತುತ ಮೆಡಿಟರೇನಿಯನ್ ಸಮುದ್ರದಲ್ಲಿರುವ ಹಡಗು ಯಾವುದೇ ಅಡೆತಡೆಗಳಿಲ್ಲದಿದ್ದರೆ ಏಳನೆ ದಿನವಾದ ಶುಕ್ರವಾರ (ನಾಳೆ) ಗಾಝಾ ತಲುಪಲಿದೆ. #AllEyesOnDeck | 6ನೇ ದಿನಕ್ಕೆ

ಮಾರ್ಚ್ 2 ರಿಂದ ಗಾಝಾ ಮೇಲೆ ವಸಾಹತುಗಾರ ಇಸ್ರೇಲ್‌ ವಿಧಿಸಿರುವ ಮುತ್ತಿಗೆಯನ್ನು ಮುರಿಯುವ ಉದ್ದೇಶ ಕೂಡಾ ಮದ್ಲೀನ್‌ಗೆ ಇದೆ. ಹಡಗಿನಲ್ಲಿರುವ 12 ಹೋರಾಟಗಾರಲ್ಲಿ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಕೂಡ ಒಬ್ಬರು. 2007 ರಿಂದ ಈ ಗಾಝಾ ಪ್ರದೇಶವನ್ನು ಇಸ್ರೇಲ್‌ ನೆಲೆ, ಜಲ ಮತ್ತು ವಾಯು ದಿಗ್ಬಂಧನಕ್ಕೆ ಒಳಗಾಗಿಸಿದೆ.

ತಿಂಗಳ ಹಿಂದೆಯಷ್ಟೆ ಗಾಝಾಗೆ ತೆರಳುತ್ತಿದ್ದ ಮತ್ತೊಂದು ಎಫ್‌ಎಫ್‌ಸಿ ನೆರವು ಹಡಗಿನ ಮೇಲೆ ಇಸ್ರೇಲ್‌ನ ಡ್ರೋನ್‌ಗಳು ಬಾಂಬ್ ದಾಳಿ ಮಾಡಿತ್ತು. ಅದಾಗಿ ಒಂದು ತಿಂಗಳ ನಂತರ ಜೂನ್ 1 ರಂದು ಮದ್ಲೀನ್‌ ಸಿಸಿಲಿಯ ಕ್ಯಾಟಾನಿಯಾ ಬಂದರಿನಿಂದ ಹೊರಟಿದೆ. ಇಸ್ರೇಲಿ ಬಾಂಬ್ ದಾಳಿಯಲ್ಲಿ 54,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

 

View this post on Instagram

 

A post shared by Thiago Ávila (@thiagoavilabrasil)

ಮದ್ಲೀನ್ ಸುಮಾರು 2,000 ಕಿಮೀ (1,250-ಮೈಲಿ) ಪ್ರಯಾಣಿಸಲಿದ್ದು ಏಳು ದಿನಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹಡಗಿನ ಲೈವ್ ಟ್ರ್ಯಾಕರ್ ಅನ್ನು ಫೋರೆನ್ಸಿಕ್ ಆರ್ಕಿಟೆಕ್ಚರ್ ನೇರಪ್ರಸಾರ ಮಾಡುತ್ತಿದ್ದು, ಜೊತೆಗೆ ಹಡಗಿನಲ್ಲಿರುವ ಗಾರ್ಮಿನ್ ಲೈವ್ ಟ್ರ್ಯಾಕರ್ ಅನ್ನು ಬಳಸುತ್ತಿದೆ.

ಅದಾಗ್ಯೂ, ಮದ್ಲೀನ್ ಹಡಗನ್ನು ಗಾಝಾ ತಲುಪಲು ಇಸ್ರೇಲ್ ಸೇನೆ ಅನುಮತಿಸುವುದಿಲ್ಲ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ. ಹಡಗಿನಲ್ಲಿರುವ ಹೋರಾಟಗಾರರು ಇಸ್ರೇಲಿ ಸೈನ್ಯದ ಆದೇಶವನ್ನು ಪಾಲಿಸಲು ವಿಫಲವಾದರೆ ಅವರ ಬಂಧನ ಮತ್ತು ಅವರ ಹಡಗನ್ನು ವಶಪಡಿಸಿಕೊಳ್ಳುವ ಅಪಾಯವಿದೆ ಎಂದು ಹೇಳಿವೆ.

ಈ ನಡುವೆ, ಸುಮಾರು 6,50,706 ಜನರು ಇಸ್ರೇಲ್ ಸರ್ಕಾರಕ್ಕೆ ಆಗ್ರಹ ಪತ್ರವನ್ನು ಕಳುಹಿಸಿದ್ದು, ಹಡಗು ಯಾವುದೇ ಅಡೆತಡೆಯಿಲ್ಲದೆ ಗಾಝಾ ತಲುಪಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದೆ.

“ಹಡಗು ನಿರಾಯುಧವಾಗಿದ್ದು, ಯಾವುದೇ ಬೆದರಿಕೆಯನ್ನು ಒಡ್ಡುವುದಿಲ್ಲ ಮತ್ತು ಅಂತರರಾಷ್ಟ್ರೀಯ ಕಡಲ ಕಾನೂನು ಹಾಗೂ ಮಾನವೀಯ ಮತ್ತು ಮಾನವ ಹಕ್ಕುಗಳ ಕಾನೂನಿನೊಂದಿಗೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಅದರ ಪ್ರಯಾಣಿಕರು ಮತ್ತು ಸಿಬ್ಬಂದಿಯಲ್ಲಿ ಸಂಸದರು, ಪತ್ರಕರ್ತರು, ವಕೀಲರು ಮತ್ತು ಜಾಗತಿಕ ನಾಗರಿಕ ಸಮಾಜವನ್ನು ಪ್ರತಿನಿಧಿಸುವ ಮಾನವ ಹಕ್ಕುಗಳ ರಕ್ಷಕರು ಸೇರಿದ್ದಾರೆ” ಎಂದು ಪತ್ರವು ಹೇಳಿದೆ.

“ಮದ್ಲೀನ್ ಅಥವಾ ಅದರ ನಾಗರಿಕ ಪ್ರಯಾಣಿಕರು ಮತ್ತು ಸಿಬ್ಬಂದಿಯೊಂದಿಗೆ ಯಾವುದೇ ಪ್ರತಿಬಂಧ, ದಾಳಿ, ವಿಧ್ವಂಸಕ ಕೃತ್ಯ ಅಥವಾ ಹಸ್ತಕ್ಷೇಪ ಮಾಡಿದರೆ ಅದು ನಾಗರಿಕರ ಮೇಲಿನ ಉದ್ದೇಶಪೂರ್ವಕ, ತಿಳಿದ ಮತ್ತು ಕಾನೂನುಬಾಹಿರ ದಾಳಿಯಾಗುತ್ತದೆ. ಜೊತಗೆ ಅದು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುತ್ತದೆ” ಎಂದು ಪತ್ರವೂ ಎಚ್ಚರಿಸಿದೆ.

“ಅಂತಹ ಕ್ರಮಗಳು ನಾಲ್ಕನೇ ಜಿನೀವಾ ಸಮಾವೇಶದ ಗಂಭೀರ ಉಲ್ಲಂಘನೆಗೆ ಸಮನಾಗಿರುತ್ತದೆ ಮತ್ತು ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ರೋಮ್ ಶಾಸನದ ಅಡಿಯಲ್ಲಿನ ಯುದ್ಧ ಅಪರಾಧಗಳಾಗಿ ಪರಿಣಮಿಸಬಹುದು” ಎಂದು ಪತ್ರವೂ ಹೇಳಿದೆ.

ಅಮೆರಿಕದ ಗಾಯಕ ಮ್ಯಾಕ್ಲೆಮೋರ್‌ ಬೆಂಬಲ

ಈ ನಡುವೆ ಬುಧವಾರ ಐರ್ಲೆಂಡ್‌ನ ರಾಜಧಾನಿ ಡಬ್ಲಿನ್‌ನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಅಮೆರಿಕದ ಗಾಯಕ ಮ್ಯಾಕ್ಲೆಮೋರ್‌, ಪ್ಯಾಲೆಸ್ತೀನಿ ಹೋರಾಟ ಮತ್ತು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಳೆದ ಜೂನ್‌ನಲ್ಲಿ ಪ್ಯಾಲೆಸ್ತೀನ್‌ ಪರ ಬೆಂಬಲಿಗ ಮ್ಯಾಕ್ಲೆಮೋರ್ ಜರ್ಮನಿಯ ವೇದಿಕೆಯಲ್ಲಿ ಮಾಡಿದ ಭಾಷಣದಲ್ಲಿ ಹತ್ಯಾಕಾಂಡವನ್ನು ನೆನಪಿಸಿಕೊಂಡಿದ್ದಾರೆ. ಈ ವೇಳೆ ಅವರು ಗಾಝಾದ ಮೇಲೆ ಇಸ್ರೇಲ್‌ನ ಯುದ್ಧವನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದರು.

ಭಾನುವಾರ ಸಿಸಿಲಿಯಿಂದ ಹೊರಟ ಮದ್ಲೀನ್, ಬೇಬಿ ಫಾರ್ಮುಲಾ, ನ್ಯಾಪ್‌ಕಿನ್, ಹಿಟ್ಟು, ಅಕ್ಕಿ, ನೈರ್ಮಲ್ಯ ಉತ್ಪನ್ನಗಳು, ನೀರಿನ ಫಿಲ್ಟರ್‌ಗಳು ಮತ್ತು ವೈದ್ಯಕೀಯ ಸರಬರಾಜುಗಳನ್ನು ಒಳಗೊಂಡಂತೆ ಮಾನವೀಯ ಸಹಾಯವನ್ನು ಹೊತ್ತೊಯ್ಯುತ್ತಿದೆ. ಈ ಹಡಗು ಗಾಝಾದ ಮೇಲೆ ವಸಾಹತುಗಾರ ಇಸ್ರೇಲ್‌ನ ನೌಕಾ ದಿಗ್ಬಂಧನವನ್ನು ಮುರಿಯಲು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವು ಆಯೋಜಿಸಿರುವ ಅಂತರರಾಷ್ಟ್ರೀಯ ಪ್ರಯತ್ನದ ಭಾಗವಾಗಿ ಪ್ರಯಾಣಿಸುತ್ತಿದೆ.

“2014 ರಲ್ಲಿ ಗಾಝಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆಯಾದ ‘ಮದ್ಲೀನ್’ ಅವರ ಹೆಸರನ್ನು ಹಡಗಿಗೆ ಇಡಲಾಗಿದ್ದು, ಪ್ಯಾಲೆಸ್ತೀನಿ ಹೋರಾಟದ ಅವಿಶ್ರಾಂತ ಮನೋಭಾವ ಮತ್ತು ಇಸ್ರೇಲ್‌ನ ಸಾಮೂಹಿಕ ಶಿಕ್ಷೆ ಮತ್ತು ಉದ್ದೇಶಪೂರ್ವಕ ಹಸಿವು ನೀತಿಗಳ ಹೇರಿಕೆಗಳ ವಿರುದ್ಧ ಬೆಳೆಯುತ್ತಿರುವ ಜಾಗತಿಕ ಪ್ರತಿರೋಧವನ್ನು ಇದು ಸಂಕೇತಿಸುತ್ತದೆ” ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿದೆ.

ಸ್ವೀಡಿಷ್‌ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರೊಂದಿಗೆ ಜರ್ಮನಿಯ ಯಾಸೆಮಿನ್ ಅಕಾರ್, ಬ್ರೆಜಿಲ್‌ನ ಥಿಯಾಗೊ ಅವಿಲಾ, ಫ್ರಾನ್ಸ್‌ನ ಒಮರ್ ಫಯಾದ್, ರಿಮಾ ಹಸನ್, ಬ್ಯಾಪ್ಟಿಸ್ಟ್ ಆಂಡ್ರೆ, ಪ್ಯಾಸ್ಕಲ್ ಮೌರಿಯರಾಸ್, ಯಾನಿಸ್ ಮಹಮ್ದಿ, ಟರ್ಕಿಯ ಶುವಾಯ್ಬ್ ಒರ್ಡು, ರೆವಾ ವಿಯಾರ್ಡ್, ಸ್ಪೇನ್‌ನ ಸೆರ್ಗಿಯೊ ಟೊರಿಬಿಯೊ ಮತ್ತು ನೆದರ್ಲ್ಯಾಂಡ್ಸ್‌ನ ಮಾರ್ಕೊ ವ್ಯಾನ್ ರೆನ್ನೆಸ್ ಹಡಗಿನಲ್ಲಿ ಇದ್ದಾರೆ.

“ಈ ಕಾರ್ಯಾಚರಣೆ ಎಷ್ಟೇ ಅಪಾಯಕಾರಿಯಾಗಿದ್ದರೂ, ನರಮೇಧಕ್ಕೆ ಒಳಗಾಗುತ್ತಿರುವ ಜೀವಗಳ ಮುಂದೆ ಇಡೀ ಪ್ರಪಂಚದ ಮೌನದಷ್ಟು ಅಪಾಯಕಾರಿ ಅಲ್ಲ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರು ಹೇಳಿದ್ದಾರೆ. #AllEyesOnDeck | 6ನೇ ದಿನಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  #AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

#AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....