Homeಅಂತರಾಷ್ಟ್ರೀಯ#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

- Advertisement -
- Advertisement -

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ಹೊರಟಿರುವ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್’ನ ಪ್ರಯಾಣವು ಆರನೇ ದಿನಕ್ಕೆ ತಲುಪಿದೆ. ಪ್ರಸ್ತುತ ಮೆಡಿಟರೇನಿಯನ್ ಸಮುದ್ರದಲ್ಲಿರುವ ಹಡಗು ಯಾವುದೇ ಅಡೆತಡೆಗಳಿಲ್ಲದಿದ್ದರೆ ಏಳನೆ ದಿನವಾದ ಶುಕ್ರವಾರ (ನಾಳೆ) ಗಾಝಾ ತಲುಪಲಿದೆ. #AllEyesOnDeck | 6ನೇ ದಿನಕ್ಕೆ

ಮಾರ್ಚ್ 2 ರಿಂದ ಗಾಝಾ ಮೇಲೆ ವಸಾಹತುಗಾರ ಇಸ್ರೇಲ್‌ ವಿಧಿಸಿರುವ ಮುತ್ತಿಗೆಯನ್ನು ಮುರಿಯುವ ಉದ್ದೇಶ ಕೂಡಾ ಮದ್ಲೀನ್‌ಗೆ ಇದೆ. ಹಡಗಿನಲ್ಲಿರುವ 12 ಹೋರಾಟಗಾರಲ್ಲಿ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಕೂಡ ಒಬ್ಬರು. 2007 ರಿಂದ ಈ ಗಾಝಾ ಪ್ರದೇಶವನ್ನು ಇಸ್ರೇಲ್‌ ನೆಲೆ, ಜಲ ಮತ್ತು ವಾಯು ದಿಗ್ಬಂಧನಕ್ಕೆ ಒಳಗಾಗಿಸಿದೆ.

ತಿಂಗಳ ಹಿಂದೆಯಷ್ಟೆ ಗಾಝಾಗೆ ತೆರಳುತ್ತಿದ್ದ ಮತ್ತೊಂದು ಎಫ್‌ಎಫ್‌ಸಿ ನೆರವು ಹಡಗಿನ ಮೇಲೆ ಇಸ್ರೇಲ್‌ನ ಡ್ರೋನ್‌ಗಳು ಬಾಂಬ್ ದಾಳಿ ಮಾಡಿತ್ತು. ಅದಾಗಿ ಒಂದು ತಿಂಗಳ ನಂತರ ಜೂನ್ 1 ರಂದು ಮದ್ಲೀನ್‌ ಸಿಸಿಲಿಯ ಕ್ಯಾಟಾನಿಯಾ ಬಂದರಿನಿಂದ ಹೊರಟಿದೆ. ಇಸ್ರೇಲಿ ಬಾಂಬ್ ದಾಳಿಯಲ್ಲಿ 54,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

 

View this post on Instagram

 

A post shared by Thiago Ávila (@thiagoavilabrasil)

ಮದ್ಲೀನ್ ಸುಮಾರು 2,000 ಕಿಮೀ (1,250-ಮೈಲಿ) ಪ್ರಯಾಣಿಸಲಿದ್ದು ಏಳು ದಿನಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹಡಗಿನ ಲೈವ್ ಟ್ರ್ಯಾಕರ್ ಅನ್ನು ಫೋರೆನ್ಸಿಕ್ ಆರ್ಕಿಟೆಕ್ಚರ್ ನೇರಪ್ರಸಾರ ಮಾಡುತ್ತಿದ್ದು, ಜೊತೆಗೆ ಹಡಗಿನಲ್ಲಿರುವ ಗಾರ್ಮಿನ್ ಲೈವ್ ಟ್ರ್ಯಾಕರ್ ಅನ್ನು ಬಳಸುತ್ತಿದೆ.

ಅದಾಗ್ಯೂ, ಮದ್ಲೀನ್ ಹಡಗನ್ನು ಗಾಝಾ ತಲುಪಲು ಇಸ್ರೇಲ್ ಸೇನೆ ಅನುಮತಿಸುವುದಿಲ್ಲ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ. ಹಡಗಿನಲ್ಲಿರುವ ಹೋರಾಟಗಾರರು ಇಸ್ರೇಲಿ ಸೈನ್ಯದ ಆದೇಶವನ್ನು ಪಾಲಿಸಲು ವಿಫಲವಾದರೆ ಅವರ ಬಂಧನ ಮತ್ತು ಅವರ ಹಡಗನ್ನು ವಶಪಡಿಸಿಕೊಳ್ಳುವ ಅಪಾಯವಿದೆ ಎಂದು ಹೇಳಿವೆ.

ಈ ನಡುವೆ, ಸುಮಾರು 6,50,706 ಜನರು ಇಸ್ರೇಲ್ ಸರ್ಕಾರಕ್ಕೆ ಆಗ್ರಹ ಪತ್ರವನ್ನು ಕಳುಹಿಸಿದ್ದು, ಹಡಗು ಯಾವುದೇ ಅಡೆತಡೆಯಿಲ್ಲದೆ ಗಾಝಾ ತಲುಪಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದೆ.

“ಹಡಗು ನಿರಾಯುಧವಾಗಿದ್ದು, ಯಾವುದೇ ಬೆದರಿಕೆಯನ್ನು ಒಡ್ಡುವುದಿಲ್ಲ ಮತ್ತು ಅಂತರರಾಷ್ಟ್ರೀಯ ಕಡಲ ಕಾನೂನು ಹಾಗೂ ಮಾನವೀಯ ಮತ್ತು ಮಾನವ ಹಕ್ಕುಗಳ ಕಾನೂನಿನೊಂದಿಗೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಅದರ ಪ್ರಯಾಣಿಕರು ಮತ್ತು ಸಿಬ್ಬಂದಿಯಲ್ಲಿ ಸಂಸದರು, ಪತ್ರಕರ್ತರು, ವಕೀಲರು ಮತ್ತು ಜಾಗತಿಕ ನಾಗರಿಕ ಸಮಾಜವನ್ನು ಪ್ರತಿನಿಧಿಸುವ ಮಾನವ ಹಕ್ಕುಗಳ ರಕ್ಷಕರು ಸೇರಿದ್ದಾರೆ” ಎಂದು ಪತ್ರವು ಹೇಳಿದೆ.

“ಮದ್ಲೀನ್ ಅಥವಾ ಅದರ ನಾಗರಿಕ ಪ್ರಯಾಣಿಕರು ಮತ್ತು ಸಿಬ್ಬಂದಿಯೊಂದಿಗೆ ಯಾವುದೇ ಪ್ರತಿಬಂಧ, ದಾಳಿ, ವಿಧ್ವಂಸಕ ಕೃತ್ಯ ಅಥವಾ ಹಸ್ತಕ್ಷೇಪ ಮಾಡಿದರೆ ಅದು ನಾಗರಿಕರ ಮೇಲಿನ ಉದ್ದೇಶಪೂರ್ವಕ, ತಿಳಿದ ಮತ್ತು ಕಾನೂನುಬಾಹಿರ ದಾಳಿಯಾಗುತ್ತದೆ. ಜೊತಗೆ ಅದು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುತ್ತದೆ” ಎಂದು ಪತ್ರವೂ ಎಚ್ಚರಿಸಿದೆ.

“ಅಂತಹ ಕ್ರಮಗಳು ನಾಲ್ಕನೇ ಜಿನೀವಾ ಸಮಾವೇಶದ ಗಂಭೀರ ಉಲ್ಲಂಘನೆಗೆ ಸಮನಾಗಿರುತ್ತದೆ ಮತ್ತು ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ರೋಮ್ ಶಾಸನದ ಅಡಿಯಲ್ಲಿನ ಯುದ್ಧ ಅಪರಾಧಗಳಾಗಿ ಪರಿಣಮಿಸಬಹುದು” ಎಂದು ಪತ್ರವೂ ಹೇಳಿದೆ.

ಅಮೆರಿಕದ ಗಾಯಕ ಮ್ಯಾಕ್ಲೆಮೋರ್‌ ಬೆಂಬಲ

ಈ ನಡುವೆ ಬುಧವಾರ ಐರ್ಲೆಂಡ್‌ನ ರಾಜಧಾನಿ ಡಬ್ಲಿನ್‌ನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಅಮೆರಿಕದ ಗಾಯಕ ಮ್ಯಾಕ್ಲೆಮೋರ್‌, ಪ್ಯಾಲೆಸ್ತೀನಿ ಹೋರಾಟ ಮತ್ತು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಳೆದ ಜೂನ್‌ನಲ್ಲಿ ಪ್ಯಾಲೆಸ್ತೀನ್‌ ಪರ ಬೆಂಬಲಿಗ ಮ್ಯಾಕ್ಲೆಮೋರ್ ಜರ್ಮನಿಯ ವೇದಿಕೆಯಲ್ಲಿ ಮಾಡಿದ ಭಾಷಣದಲ್ಲಿ ಹತ್ಯಾಕಾಂಡವನ್ನು ನೆನಪಿಸಿಕೊಂಡಿದ್ದಾರೆ. ಈ ವೇಳೆ ಅವರು ಗಾಝಾದ ಮೇಲೆ ಇಸ್ರೇಲ್‌ನ ಯುದ್ಧವನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದರು.

ಭಾನುವಾರ ಸಿಸಿಲಿಯಿಂದ ಹೊರಟ ಮದ್ಲೀನ್, ಬೇಬಿ ಫಾರ್ಮುಲಾ, ನ್ಯಾಪ್‌ಕಿನ್, ಹಿಟ್ಟು, ಅಕ್ಕಿ, ನೈರ್ಮಲ್ಯ ಉತ್ಪನ್ನಗಳು, ನೀರಿನ ಫಿಲ್ಟರ್‌ಗಳು ಮತ್ತು ವೈದ್ಯಕೀಯ ಸರಬರಾಜುಗಳನ್ನು ಒಳಗೊಂಡಂತೆ ಮಾನವೀಯ ಸಹಾಯವನ್ನು ಹೊತ್ತೊಯ್ಯುತ್ತಿದೆ. ಈ ಹಡಗು ಗಾಝಾದ ಮೇಲೆ ವಸಾಹತುಗಾರ ಇಸ್ರೇಲ್‌ನ ನೌಕಾ ದಿಗ್ಬಂಧನವನ್ನು ಮುರಿಯಲು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವು ಆಯೋಜಿಸಿರುವ ಅಂತರರಾಷ್ಟ್ರೀಯ ಪ್ರಯತ್ನದ ಭಾಗವಾಗಿ ಪ್ರಯಾಣಿಸುತ್ತಿದೆ.

“2014 ರಲ್ಲಿ ಗಾಝಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆಯಾದ ‘ಮದ್ಲೀನ್’ ಅವರ ಹೆಸರನ್ನು ಹಡಗಿಗೆ ಇಡಲಾಗಿದ್ದು, ಪ್ಯಾಲೆಸ್ತೀನಿ ಹೋರಾಟದ ಅವಿಶ್ರಾಂತ ಮನೋಭಾವ ಮತ್ತು ಇಸ್ರೇಲ್‌ನ ಸಾಮೂಹಿಕ ಶಿಕ್ಷೆ ಮತ್ತು ಉದ್ದೇಶಪೂರ್ವಕ ಹಸಿವು ನೀತಿಗಳ ಹೇರಿಕೆಗಳ ವಿರುದ್ಧ ಬೆಳೆಯುತ್ತಿರುವ ಜಾಗತಿಕ ಪ್ರತಿರೋಧವನ್ನು ಇದು ಸಂಕೇತಿಸುತ್ತದೆ” ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿದೆ.

ಸ್ವೀಡಿಷ್‌ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರೊಂದಿಗೆ ಜರ್ಮನಿಯ ಯಾಸೆಮಿನ್ ಅಕಾರ್, ಬ್ರೆಜಿಲ್‌ನ ಥಿಯಾಗೊ ಅವಿಲಾ, ಫ್ರಾನ್ಸ್‌ನ ಒಮರ್ ಫಯಾದ್, ರಿಮಾ ಹಸನ್, ಬ್ಯಾಪ್ಟಿಸ್ಟ್ ಆಂಡ್ರೆ, ಪ್ಯಾಸ್ಕಲ್ ಮೌರಿಯರಾಸ್, ಯಾನಿಸ್ ಮಹಮ್ದಿ, ಟರ್ಕಿಯ ಶುವಾಯ್ಬ್ ಒರ್ಡು, ರೆವಾ ವಿಯಾರ್ಡ್, ಸ್ಪೇನ್‌ನ ಸೆರ್ಗಿಯೊ ಟೊರಿಬಿಯೊ ಮತ್ತು ನೆದರ್ಲ್ಯಾಂಡ್ಸ್‌ನ ಮಾರ್ಕೊ ವ್ಯಾನ್ ರೆನ್ನೆಸ್ ಹಡಗಿನಲ್ಲಿ ಇದ್ದಾರೆ.

“ಈ ಕಾರ್ಯಾಚರಣೆ ಎಷ್ಟೇ ಅಪಾಯಕಾರಿಯಾಗಿದ್ದರೂ, ನರಮೇಧಕ್ಕೆ ಒಳಗಾಗುತ್ತಿರುವ ಜೀವಗಳ ಮುಂದೆ ಇಡೀ ಪ್ರಪಂಚದ ಮೌನದಷ್ಟು ಅಪಾಯಕಾರಿ ಅಲ್ಲ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರು ಹೇಳಿದ್ದಾರೆ. #AllEyesOnDeck | 6ನೇ ದಿನಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  #AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

#AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...