Homeಮುಖಪುಟ‘ಅಲೋಪತಿ’ ಕುರಿತ ತನ್ನ ವಿವಾದಾತ್ಮಕ ಹೇಳಿಕೆ ಹಿಂಪಡೆದ ಯೋಗ ಗುರು ರಾಮ್‌ದೇವ್‌

‘ಅಲೋಪತಿ’ ಕುರಿತ ತನ್ನ ವಿವಾದಾತ್ಮಕ ಹೇಳಿಕೆ ಹಿಂಪಡೆದ ಯೋಗ ಗುರು ರಾಮ್‌ದೇವ್‌

- Advertisement -
- Advertisement -

ಯೋಗಗುರು ಬಾಬಾ ರಾಮ್‌ದೇವ್‌ ಅಲೋಪತಿ ಔಷಧ ಸಂಬಂಧಿಸಿದಂತೆ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಭಾನುವಾರ ರಾತ್ರಿ ಹಿಂಪಡೆದಿದ್ದಾರೆ. ‘ಕೊರೋನಾ ಸಾಂಕ್ರಾಮಿಕ ಸಮಯದಲ್ಲಿ ಅಲೋಪಥಿಕ್ ಔಷಧಿಗಳಿಂದಾಗಿ ಲಕ್ಷಾಂತರ ಜನರು ಸತ್ತಿದ್ದಾರೆ’ ಎಂದು ಅವರು ಹೇಳಿರುವ ವಿಡಿಯೊವೊಂದು ವೈರಲ್‌ ಆಗಿದ್ದು, ದೇಶದಾದ್ಯತಂತ ಭಾರಿ ಆಕ್ರೋಶ ಉಂಟುಮಾಡಿತ್ತು.

ಈ ಹೇಳಿಕೆ ಸಂಬಂಧಿಸಿದಂತೆ ಭಾರತೀಯ ವೈದ್ಯಕೀಯ ಸಂಸ್ಥೆ ಕಟುವಾಗಿ ಟೀಕಿಸಿತ್ತು ಮತ್ತು ರಾಮದೇವ್ ಅವರಿಗೆ ನೋಟಿಸ್‌ ನೀಡಿತ್ತು. ಸಾಂಕ್ರಾಮಿಕ ಕಾಯ್ದೆ ಅಡಿ ಅವರ ಮೇಲೆ ಪ್ರಕರಣ ದಾಖಲಿಸಲು ಐಎಂಎ ಸರ್ಕಾರಕ್ಕೆ ಮನವಿ ಕೂಡಾ ಮಾಡಿತ್ತು. ಅಲ್ಲದೆ ದೆಹಲಿ ವೈದ್ಯಕೀಯ ಸಂಘವು ದೆಹಲಿಯ ದರಿಯಾಗಂಜ್‌ ಪೊಲೀಸ್‌ ಠಾಣೆಯಲ್ಲಿ ರಾಮ್‌ದೇವ್‌ ಅವರ ವಿರುದ್ದ ಪ್ರಕರಣವನ್ನೂ ದಾಖಲಿಸಿತ್ತು.

ದೇಶದಾದ್ಯಂತ ರಾಮ್‌ದೇವ್‌ ವಿರುದ್ದ ಆಕ್ರೋಶ ಹೆಚ್ಚುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಹೇಳಿಕೆಯನ್ನು ಹಿಂಪಡೆಯುವಂತೆ ಭಾನುವಾರ ಪತ್ರ ಬರೆದಿದ್ದರು. ಅವರು ಪತ್ರದಲ್ಲಿ, “ಅಲೋಪತಿ ಔಷಧಿಗಳ ಬಗ್ಗೆ ನಿಮ್ಮ ಹೇಳಿಕೆಯಿಂದ ದೇಶದ ಜನರು ತುಂಬಾ ನೊಂದಿದ್ದಾರೆ. ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ದೇಶದ ಜನರಿಗೆ ದೇವರಿದ್ದಂತೆ. ಅವರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನೀವು ಕೊರೊನಾ ಯೋಧರನ್ನಷ್ಟೇ ಅವಮಾನಿಸಿದ್ದಲ್ಲ, ದೇಶದ ಜನರ ಭಾವನೆಗಳನ್ನು ನೋಯಿಸಿದ್ದೀರಿ. ನಿಮ್ಮ ಸ್ಪಷ್ಟೀಕರಣ ಮಾತ್ರ ಸಾಕಾಗುವುದಿಲ್ಲ, ಈ ಬಗ್ಗೆ ನೀವು ಗಂಭೀರವಾಗಿ ಯೋಚಿಸಿ ನಿಮ್ಮ ಹೇಳಿಕೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಹರ್ಷವರ್ಧನ್‌ ಪತ್ರದಲ್ಲಿ ಹೇಳಿದ್ದರು.

ಈ ಪತ್ರಕ್ಕೆ ಭಾನುವಾರ ರಾತ್ರಿ ಪ್ರತಿಕ್ರಿಯೆ ನೀಡಿರುವ ರಾಮ್‌ದೇವ್‌, “ಗೌರವಾನ್ವಿತ ಹರ್ಷವರ್ಧನ್‌ ಅವರೆ, ನಾನು ನಿಮ್ಮ ಪತ್ರವನ್ನು ಸ್ವೀಕರಿಸಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ, ವೈದ್ಯಕೀಯ ಪದ್ಧತಿಗಳ ಹೋರಾಟದ ಈ ಸಂಪೂರ್ಣ ವಿವಾದಕ್ಕೆ ವಿಷಾದಿಸುತ್ತಾ ನನ್ನ ಹೇಳಿಕೆಯನ್ನು ಹಿಂತೆಗೆದುಕೊಳ್ಳುತ್ತೇನೆ” ಎಂದು ಪತ್ರವೊಂದನ್ನು ಕಳುಹಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ರಾಮ್‌ದೇವ್‌ ಅವರ ವಿವಾದಾತ್ಮಕ ವಿಡಿಯೊ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಅದರಲ್ಲಿ ಅವರು, “ಅಲೋಪತಿ ಔಷಧಿಗಳಿಂದಾಗಿ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ. ಈ ಸಂಖ್ಯೆಯು ಚಿಕಿತ್ಸೆ ಸಿಗದೆ ಅಥವಾ ಆಮ್ಲಜನಕದ ಕೊರೆತೆಯಿಂದ ಸಾವಿಗೀಡಾಗಿರುವ ಜನರಿಗಿಂತ ಹೆಚ್ಚು. ಅಲೋಪತಿಯು ಅವಿವೇಕಿ ಮತ್ತು ದಿವಾಳಿಯಾದ ವಿಜ್ಞಾನ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಲೋಪತಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಾಬಾ ರಾಮದೇವ್‌ಗೆ ಲೀಗಲ್ ನೋಟಿಸ್ – ಬಂಧನಕ್ಕೆ ಒತ್ತಾಯ

ಅವರ ಸಂಸ್ಥೆಯಾದ ಪತಂಜಲಿಯು, “ಈ ವಿಡಿಯೋವನ್ನು ಎಡಿಟ್ ಮಾಡಲಾಗಿದೆ ಮತ್ತು ಹೇಳಿಕೆಯನ್ನು ಬೇರೆ ಸಂದರ್ಭದಿಂದ ಬೇರ್ಪಡಿಸಗಿದೆ. ರಾಮದೇವ್ ಅವರಿಗೆ ಆಧುನಿಕ ವಿಜ್ಞಾನದ ವೈದ್ಯರ ವಿರುದ್ಧ ಯಾವುದೇ ಕೆಟ್ಟ ಅಭಿಪ್ರಾಯವಿಲ್ಲ. ಈ ಘಟನೆಯು ಖಾಸಗಿ ಕಾರ್ಯಕಮವಾಗಿತ್ತು. ರಾಮದೇವ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸದಸ್ಯರು ಫಾರ್ವರ್ಡ್ ಮಾಡಿದ ವಾಟ್ಸಾಪ್ ಸಂದೇಶವನ್ನು ಓದುತ್ತಿದ್ದರು. ಅವರ ವಿರುದ್ಧದ ಆರೋಪ ಸುಳ್ಳು” ಎಂದು ಹೇಳಿತ್ತು.

ಆಡಳಿತಾರೂಢ ಬಿಜೆಪಿ ಸರ್ಕಾರದೊಂದಿಗೆ ನಿಕಟ ಸಂಬಂಧ ಹೊಂದಿರುವ ರಾಮದೇವ್ ಕೊರೊನಾ ಒಂದನೆ ಅಲೆಯ ಸಮಯದಲ್ಲೂ ವಿವಾದವನ್ನು ಎದುರಿಸಿದ್ದರು. ಅವರು ಆರೋಗ್ಯ ಸಚಿವ ಹರ್ಷ್ವರ್ಧನ್ ಮತ್ತು ಸಚಿವ ನಿತಿನ್ ಗಡ್ಕರಿಯ ಸಮ್ಮುಖದಲ್ಲಿ ‘ವಿಶ್ವ ಆರೋಗ್ಯ ಸಂಸ್ಥೆಯಿಂದ ಪ್ರಮಾಣೀಕೃತ ಔಷಧಿಗಳು’ ಎಂದು ಪತಂಜಲಿಯ ಔಷಧಿಗಳನ್ನು ಬಿಡುಗಡೆ ಮಾಡಿದ್ದರು.

ಅಲ್ಲದೆ, ಸ್ವತಃ ವೈದ್ಯರೂ ಆಗಿರುವ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌‌ ಅವರ ಸಮ್ಮುಖದಲ್ಲೇ ವೈದ್ಯರನ್ನು “ಕೊಲೆಗಾರರು” ಎಂದು ಕರೆದಿದ್ದರು ಎಂದು ಆರೋಪಿಸಲಾಗಿದೆ.

ಆದರೆ ವಿಶ್ವ ಆರೋಗ್ಯ ಸಂಸ್ಥೆಯು, “ಕೋವಿಡ್ ಚಿಕಿತ್ಸೆಗೆ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ” ಎಂದು ಸ್ಪಷ್ಟೀಕರಣವನ್ನು ನೀಡಿತ್ತು.

ಇದನ್ನೂ ಓದಿ: ‘ಅಲೋಪತಿ ನಿಂದನೆಯಲ್ಲಿ ಸ್ಪಷ್ಟೀಕರಣವಷ್ಟೇ ಸಾಲದು’: ರಾಮದೇವ್‌ಗೆ ಆರೋಗ್ಯ ಸಚಿವ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...