Homeಮುಖಪುಟನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿದೆ.

- Advertisement -
- Advertisement -

ಇಷ್ಟು ದಿನ ಕೇವಲ ಉತ್ಪನ್ನವಾಗಿದ್ದ ವಾಟ್ಸಾಪ್‌ ಈಗ ತನ್ನ ಬಳಕೆದಾರರನ್ನೆಲ್ಲಾ ಉತ್ಪನ್ನಗಳಾಗಿ ಮಾಡಿಕೊಳ್ಳಲು ಮುಂದಾಗಿದೆ. ಅದು ತನ್ನ ಗೌಪ್ಯತೆ ನೀತಿ ಮತ್ತು ಸೇವಾ ನಿಯಮಗಳನ್ನು ನವೀಕರಿಸಲು ಮುಂದಾಗಿದೆ. ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಡೇಟಾವನ್ನು ಫೇಸ್‌ಬುಕ್ ಮತ್ತು ಇತರ ಕಂಪನಿಗಳೊಂದಿಗೆ ಹಂಚಿಕೊಳ್ಳಲು ಬಳಕೆದಾರರು ಒಪ್ಪಿಗೆ ನೀಡಬೇಕು. ಇಲ್ಲದಿದ್ದರೆ ಅವರ ಖಾತೆಯನ್ನು ಡಿಲೀಟ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಈ ಕುರಿತು ಮಂಗಳವಾರದಿಂದ ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ಮಾಹಿತಿ ನೀಡಿದೆ. ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ ‘ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿದೆ.

ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿದೆ.

ಇದುವರೆಗೂ ವಾಟ್ಸಾಪ್‌ನಲ್ಲಿ ಎಂಡ್ ಟು ಎಂಡ್ encryption ಎಂಬ ಸುರಕ್ಷತಾ ಕ್ರಮವಿತ್ತು. ಅಂದರೆ ಒಬ್ಬರು ಮತ್ತೊಬ್ಬರಿಗೆ ಕಳಿಸುವ ಸಂದೇಶ-ಫೋಟೊಗಳು ಅವರಿಬ್ಬರಲ್ಲದೆ ಬೇರೆ ಯಾರಿಗೂ ಸಿಗಲು ಸಾಧ್ಯವಿರಲಿಲ್ಲ. ಆದರೆ ಇನ್ನು ಮುಂದೆ ಅದು ಇರುವುದಿಲ್ಲ ಎನ್ನಲಾಗಿದೆ. ಅಲ್ಲದೆ ವಾಟ್ಸಾಪ್ ಚಾಟ್‌ಗಳು ಸೇರಿದಂತೆ ಎಲ್ಲಾ ಡೇಟಾವನ್ನು ಸಂಗ್ರಹಿಸುವುದಾಗಿಯೂ, ಅದನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದಾಗಿಯೂ ತಿಳಿಸಿದೆ.

ವಾಟ್ಸಾಪ್‌ನ ಈ ನಡೆಗೆ ತೀವ್ರ ಟೀಕೆಗಳು ವ್ಯಕ್ತವಾಗಿವೆ. “ಭಾರತದಲ್ಲಿ ಶಕ್ತವಾದ Data privacy ಕಾನೂನು ಇಲ್ಲದ ಕಾರಣದಿಂದ ವಾಟ್ಸಪ್ ಮತ್ತು ಫೇಸ್ ಬುಕ್ ನಮ್ಮೆಲ್ಲರ ವೈಯಕ್ತಿಕ ಮಾಹಿತಿಯನ್ನು ಮಾರಿಕೊಳ್ಳುತ್ತದೆ.
ಸಂಕ್ಷಿಪ್ತವಾಗಿ ಇನ್ನು ಮುಂದೆ ವಾಟ್ಸಪ್ ಅನ್ನೋದು ಪ್ರಾಡಕ್ಟ್ ಅಲ್ಲ ವಾಟ್ಸಪ್ ಉಪಯೋಗಿಸುವ ಪ್ರತಿಯೊಬ್ಬರೂ ಪ್ರಾಡಕ್ಟ್ ಗಳು. ಇದಕ್ಕೆ ಪರಿಹಾರ ಏನು ಅಂದರೆ ಯಾವುದೇ ಕಾರಣಕ್ಕೂ ವಾಟ್ಸಪ್ update ಮಾಡಬೇಡಿ. Signal ಅಥವಾ Telegram app ಗೆ ಎಲ್ಲರೂ ಬದಲಾಯಿಸಿಕೊಳ್ಳಿ” ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಕರೆ ನೀಡಿದ್ದಾರೆ.


ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...