Homeಮುಖಪುಟನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿದೆ.

- Advertisement -
- Advertisement -

ಇಷ್ಟು ದಿನ ಕೇವಲ ಉತ್ಪನ್ನವಾಗಿದ್ದ ವಾಟ್ಸಾಪ್‌ ಈಗ ತನ್ನ ಬಳಕೆದಾರರನ್ನೆಲ್ಲಾ ಉತ್ಪನ್ನಗಳಾಗಿ ಮಾಡಿಕೊಳ್ಳಲು ಮುಂದಾಗಿದೆ. ಅದು ತನ್ನ ಗೌಪ್ಯತೆ ನೀತಿ ಮತ್ತು ಸೇವಾ ನಿಯಮಗಳನ್ನು ನವೀಕರಿಸಲು ಮುಂದಾಗಿದೆ. ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಡೇಟಾವನ್ನು ಫೇಸ್‌ಬುಕ್ ಮತ್ತು ಇತರ ಕಂಪನಿಗಳೊಂದಿಗೆ ಹಂಚಿಕೊಳ್ಳಲು ಬಳಕೆದಾರರು ಒಪ್ಪಿಗೆ ನೀಡಬೇಕು. ಇಲ್ಲದಿದ್ದರೆ ಅವರ ಖಾತೆಯನ್ನು ಡಿಲೀಟ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಈ ಕುರಿತು ಮಂಗಳವಾರದಿಂದ ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ಮಾಹಿತಿ ನೀಡಿದೆ. ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ ‘ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿದೆ.

ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿದೆ.

ಇದುವರೆಗೂ ವಾಟ್ಸಾಪ್‌ನಲ್ಲಿ ಎಂಡ್ ಟು ಎಂಡ್ encryption ಎಂಬ ಸುರಕ್ಷತಾ ಕ್ರಮವಿತ್ತು. ಅಂದರೆ ಒಬ್ಬರು ಮತ್ತೊಬ್ಬರಿಗೆ ಕಳಿಸುವ ಸಂದೇಶ-ಫೋಟೊಗಳು ಅವರಿಬ್ಬರಲ್ಲದೆ ಬೇರೆ ಯಾರಿಗೂ ಸಿಗಲು ಸಾಧ್ಯವಿರಲಿಲ್ಲ. ಆದರೆ ಇನ್ನು ಮುಂದೆ ಅದು ಇರುವುದಿಲ್ಲ ಎನ್ನಲಾಗಿದೆ. ಅಲ್ಲದೆ ವಾಟ್ಸಾಪ್ ಚಾಟ್‌ಗಳು ಸೇರಿದಂತೆ ಎಲ್ಲಾ ಡೇಟಾವನ್ನು ಸಂಗ್ರಹಿಸುವುದಾಗಿಯೂ, ಅದನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದಾಗಿಯೂ ತಿಳಿಸಿದೆ.

ವಾಟ್ಸಾಪ್‌ನ ಈ ನಡೆಗೆ ತೀವ್ರ ಟೀಕೆಗಳು ವ್ಯಕ್ತವಾಗಿವೆ. “ಭಾರತದಲ್ಲಿ ಶಕ್ತವಾದ Data privacy ಕಾನೂನು ಇಲ್ಲದ ಕಾರಣದಿಂದ ವಾಟ್ಸಪ್ ಮತ್ತು ಫೇಸ್ ಬುಕ್ ನಮ್ಮೆಲ್ಲರ ವೈಯಕ್ತಿಕ ಮಾಹಿತಿಯನ್ನು ಮಾರಿಕೊಳ್ಳುತ್ತದೆ.
ಸಂಕ್ಷಿಪ್ತವಾಗಿ ಇನ್ನು ಮುಂದೆ ವಾಟ್ಸಪ್ ಅನ್ನೋದು ಪ್ರಾಡಕ್ಟ್ ಅಲ್ಲ ವಾಟ್ಸಪ್ ಉಪಯೋಗಿಸುವ ಪ್ರತಿಯೊಬ್ಬರೂ ಪ್ರಾಡಕ್ಟ್ ಗಳು. ಇದಕ್ಕೆ ಪರಿಹಾರ ಏನು ಅಂದರೆ ಯಾವುದೇ ಕಾರಣಕ್ಕೂ ವಾಟ್ಸಪ್ update ಮಾಡಬೇಡಿ. Signal ಅಥವಾ Telegram app ಗೆ ಎಲ್ಲರೂ ಬದಲಾಯಿಸಿಕೊಳ್ಳಿ” ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಕರೆ ನೀಡಿದ್ದಾರೆ.


ಇದನ್ನೂ ಓದಿ: ಅಮೆರಿಕ ಸಂಸತ್ ಮೇಲೆ ದಾಳಿ: ಟ್ರಂಪ್ ಖಾತೆ ಸ್ಥಗಿತಗೊಳಿಸಿದ ಟ್ವಿಟರ್, ಫೇಸ್‌ಬುಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...