Homeಕರ್ನಾಟಕ'ರಾಜ್ಯದಲ್ಲಿ ವಿದೇಶಿ ವಿವಿಗಳಿಗೆ ಅವಕಾಶ’ ಎಸ್‌ಇಪಿ ವರದಿಗೆ ತದ್ವಿರುದ್ಧ: ದುರ್ಗೇಶ್ ಬರಗೂರು

‘ರಾಜ್ಯದಲ್ಲಿ ವಿದೇಶಿ ವಿವಿಗಳಿಗೆ ಅವಕಾಶ’ ಎಸ್‌ಇಪಿ ವರದಿಗೆ ತದ್ವಿರುದ್ಧ: ದುರ್ಗೇಶ್ ಬರಗೂರು

- Advertisement -
- Advertisement -

ಇತ್ತೀಚೆಗೆ ಲಂಡನ್ ಪ್ರವಾಸ ಕೈಗೊಂಡಿದ್ದ ಉನ್ನತ ಶಿಕ್ಷಣ ಸಚಿವರು ರಾಜ್ಯದಲ್ಲಿ ವಿದೇಶಿ ವಿಶ್ವ ವಿದ್ಯಾನಿಲಯಗಳಿಗೆ ಅವಕಾಶ ಕಲ್ಪಿಸುವುದಾಗಿ ಹೇಳಿರುವುದು ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಆಯೋಗ ವರದಿಗೆ ತದ್ವಿರುದ್ಧವಾಗಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (ಕೆವಿಎಸ್‌) ರಾಜ್ಯ ಸಂಚಾಲಕ ದುರ್ಗೇಶ್ ಬರಗೂರು ಹೇಳಿದ್ದಾರೆ.

ಭಾನುವಾರ (ಸೆ.14) ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಶಿಕ್ಷಣ ನೀತಿ ಆಯೋಗವು ವಿದೇಶಿ ವಿಶ್ವ ವಿದ್ಯಾನಿಲಯಗಳಿಗೆ ಅವಕಾಶ ನೀಡಬಾರದೆಂದು ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ. ಹೀಗಿರುವಾಗ ಉನ್ನತ ಶಿಕ್ಷಣ ಸಚಿವರ ಹೇಳಿಕೆಯು ರಾಜ್ಯ ಸರ್ಕಾರದ ನಿಲುವಿಗೆ ವಿರುದ್ದವಾಗಿದೆ ಎಂದಿದ್ದಾರೆ.

ರಾಜ್ಯದ ಸರ್ಕಾರಿ ವಿಶ್ವ ವಿದ್ಯಾನಿಲಯಗಳು ಅನುದಾನಗಳಿಲ್ಲದೇ, ಅಧ್ಯಾಪಕರ ಕೊರತೆಯಿಂದ ಮತ್ತು ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಂದ ತೀವ್ರವಾಗಿ ಬಳಲುತ್ತಿವೆ. ಇಂತಹ ಸಂದರ್ಭದಲ್ಲಿ ಪ್ರಸ್ತುತ ವಿಶ್ವ ವಿದ್ಯಾನಿಲಯಗಳನ್ನು ಅಭಿವೃದ್ಧಿಪಡಿಸುವುದರ ಕಡೆ ಗಮನ ನೀಡುವುದು ಬಿಟ್ಟು, ವಿದೇಶಿ ವಿಶ್ವ ವಿದ್ಯಾನಿಲಯಗಳಿಗೆ ಅವಕಾಶ ಕಲ್ಪಿಸಲಾಗುವುದೆಂದು ಹೇಳಿರುವುದು ಹಾಸ್ಯಾಸ್ಪದವಾಗಿದೆ. ಪ್ರಸ್ತುತ ಸರ್ಕಾರಿ ಕಾಲೇಜುಗಳಲ್ಲಿರುವ ಶುಲ್ಕಗಳನ್ನು ಭರಿಸಲು ಸಾಧ್ಯವಾಗದೇ, ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ ಎಂದು ದುರ್ಗೇಶ್ ಹೇಳಿದ್ದಾರೆ.

ಸರ್ಕಾರ ನಿಜವಾಗಿಯೂ ನಮ್ಮ ಸಾರ್ವಜನಿಕ ಸಂಸ್ಥೆಗಳನ್ನು ಸುಧಾರಿಸಲು ಬದ್ಧವಾಗಿದ್ದರೆ, ಅದು ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಬೇಕು. ಕಾರ್ಪೊರೇಟ್ ಸಂಸ್ಥೆಗಳಿಗೆ ನೀಡುವ ಬೃಹತ್ ತೆರಿಗೆ ವಿನಾಯಿತಿಗಳನ್ನು ನಿಲ್ಲಿಸಬೇಕು ಮತ್ತು ಶಾಸಕ, ಸಚಿವರ ಸಂಬಳ ಹಾಗೂ ಭತ್ಯೆಗಳನ್ನು ಕಡಿತಗೊಳಿಸಬೇಕು. ಆ ಹಣವನ್ನು ಶಿಕ್ಷಣದ ಸಧೃಡೀಕರಣಕ್ಕೆ ವಿನಿಯೋಗಿಸಬೇಕು. ಎಲ್ಲರಿಗೂ ಉಚಿತ, ಗುಣಮಟ್ಟದ ಶಿಕ್ಷಣವನ್ನು ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ವೈದ್ಯಕೀಯ ಶಿಕ್ಷಣದಿಂದ ದಲಿತರನ್ನು ಹೊರಗಿಡುವ ಕುತಂತ್ರ!

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್‌ಆರ್‌ಐ ಕೋಟಾವನ್ನು ಜಾರಿಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ, ದಲಿತ, ಮಧ್ಯಮ ವರ್ಗದ ಬಡ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದಿಂದ ದೂರ ತಳ್ಳುವ ಕುತಂತ್ರವಾಗಿದೆ. ಅಷ್ಟೇ ಅಲ್ಲದೇ, ಸೀಟುಗಳನ್ನು ಮಾರಾಟ ಮಾಡಲು ಅವಕಾಶ ನೀಡುವುದು ಪ್ರಜಾಸತ್ತಾತ್ಮಕ ಶಿಕ್ಷಣ, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯದ ಗುಣಮಟ್ಟದ ತಳಹದಿಯ ಮೇಲಿನ ನೇರ ಪ್ರಹಾರವಾಗಿದೆ ಎಂದು ದುರ್ಗೇಶ್ ಬರಗೂರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಪಡೆಯಲು ‘ನೀಟ್’ ಪರೀಕ್ಷೆ ಜಾರಿಯಲ್ಲಿದ್ದು, ಇದರಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ರಷ್ಟು ಅಂಕಗಳನ್ನು ಗಳಿಸಿದ್ದರೂ ಪ್ರವೇಶಾತಿ ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ‘ನೀಟ್’ ಪರೀಕ್ಷೆ ರದ್ದು ಮಾಡುವುದು ಬಿಟ್ಟು, ಎನ್‌ಆರ್‌ಐ ಕೋಟಾ ಜಾರಿ ಮಾಡುತ್ತಿರುವುದು ಬಡವರ, ಮಧ್ಯಮ ವರ್ಗದವರ ಕನಸುಗಳನ್ನು ನುಚ್ಚುನೂರು ಮಾಡುವಾದಾಗಿದೆ ಮತ್ತು ವಿದ್ಯಾರ್ಥಿ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.

ಡ್ರಗ್ ಪೆಡ್ಲರ್‌ಗಳ ಜೊತೆ ಸಂಪರ್ಕ ಆರೋಪ: 11 ಮಂದಿ ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...