Homeಮುಖಪುಟ'ಪುಷ್ಪ-2' ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ...

‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

- Advertisement -
- Advertisement -

ಡಿಸೆಂಬರ್ 4ರಂದು ಪುಷ್ಪ 2 (Pushpa 2: The Rule)ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಮತ್ತು ನಟ ಅಲ್ಲು ಅರ್ಜುನ್ ನಡುವಿನ ವಾಗ್ಯುದ್ಧ ತಾರಕಕ್ಕೇರಿದೆ.

ತೆಲಂಗಾಣ ವಿಧಾನಸಭೆಯಲ್ಲಿ ಶನಿವಾರ (ಡಿ.21) ಮಾತನಾಡಿದ್ದ ಸಿಎಂ ರೇವಂತ್ ರೆಡ್ಡಿ ” ಕಾಲ್ತುಳಿತ ಸಂಭವಿಸಿದ ಬಗ್ಗೆ ಪೊಲೀಸರು ಮಾಹಿತಿ ನೀಡಿದರೂ ಅಲ್ಲು ಅರ್ಜುನ್ ಥಿಯೇಟರ್ ಬಿಟ್ಟು ಹೋಗಲು ನಿರಾಕರಿಸಿದ್ದರು” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಲ್ಲು ಅರ್ಜುನ್, “ಕಾಲ್ತುಳಿತ ದುರಂತ ನಡೆದು ಮಹಿಳೆ ಸಾವನ್ನಪ್ಪಿದ ಬಗ್ಗೆ ನನಗೆ ಮರುದಿನವಷ್ಟೇ ಗೊತ್ತಾಯಿತು” ಎಂದಿದ್ದಾರೆ.

“ಯಾವುದೇ ಪೊಲೀಸ್ ಬಂದು ನನಗೆ ಮಾಹಿತಿ ನೀಡಿಲ್ಲ. ಥಿಯೇಟರ್ ಆಡಳಿತದವರು ಬಂದು ಹೊರಗಡೆ ಭಾರೀ ಜನ ಸೇರಿದ್ದಾರೆ. ಹಾಗಾಗಿ, ತಾವು ದಯವಿಟ್ಟು ಇಲ್ಲಿಂದ ಹೋಗಿ ಎಂದರು. ನಾನು ತಕ್ಷಣ ಹೊರಟು ಬಂದೆ. ಮಹಿಳೆ ಸಾವನ್ನಪ್ಪಿದ ಬಗ್ಗೆ ನನಗೆ ಮರುದಿನವಷ್ಟೇ ಮಾಹಿತಿ ಗೊತ್ತಾಯಿತು” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

“ನಾನು ಥಿಯೇಟರ್‌ಗೆ ಭೇಟಿ ಕೊಡುವುದಕ್ಕೆ ಅನುಮತಿ ಇಲ್ಲ ಎಂದಿದ್ದರೆ ಪೊಲೀಸರು ತಿಳಿಸಬೇಕಿತ್ತು. ಕಾನೂನು ಪಾಲಿಸುವವನಾಗಿ ನಾನು ವಾಪಸ್ ಹೋಗುತ್ತಿದ್ದೆ” ಎಂದು ಅಲ್ಲು ಅರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 4ರಂದು ಪುಷ್ಪ-2 ಸಿನಿಮಾದ ಪ್ರೀಮಿಯರ್ ಶೋ ಅನ್ನು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಆಯೋಜಿಸಲಾಗಿತ್ತು. ಇಲ್ಲಿಗೆ ಅಲ್ಲು ಅರ್ಜುನ್ ಹಠಾತ್ ಭೇಟಿ ಕೊಟ್ಟಿದ್ದರಿಂದ ಭಾರೀ ಸಂಖ್ಯೆಯಲ್ಲಿ ಜನ ಸೇರಿ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಕಾಲ್ತುಳಿತ ಸಂಭವಿಸಿ ದಿಲ್‌ಸುಖ್ ನಗರ ನಿವಾಸಿ 35 ವರ್ಷದ ರೇವತಿ ಸಾವನ್ನಪ್ಪಿದ್ದಾರೆ. ಅವರ 8 ವರ್ಷದ ಮಗ ಶ್ರೀತೇಜಾ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಚಿಕಡ್‌ಪಲ್ಲಿ ಪೊಲೀಸರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡುವಾಗ ಸಿಎಂ ರೇವಂತ್ ರೆಡ್ಡಿ,”ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸಂಧ್ಯಾ ಥಿಯೇಟರ್‌ಗೆ ಹೋಗಿ ಹೊರಗಡೆ ಭಾರೀ ಜನ ಸೇರಿ ಗದ್ದಲ ಉಂಟಾಗಿದೆ. ಇಲ್ಲಿಂದ ಹೊರಟು ಹೋಗಿ ಎಂದು ಅಲ್ಲು ಅರ್ಜುನ್‌ಗೆ ಮನವಿ ಮಾಡಿದ್ದರು. ಆದರೆ, ಅವರು ಸಿನಿಮಾ ಮುಗಿಯುವವರೆಗೆ ಹೋಗಲ್ಲ ಎಂದಿದ್ದಾರೆ. ಕೊನೆಗೆ ಡಿಸಿಪಿ ಹೋಗಿ ಬಂಧಿಸಬೇಕಾಗುತ್ತೆ ಎಂದು ಎಚ್ಚರಿಕೆ ಕೊಟ್ಟ ಬಳಿಕವಷ್ಟೇ ಥಿಯೇಟರ್ ಬಿಟ್ಟು ಹೋಗಿದ್ದಾರೆ” ಎಂದು ಆರೋಪಿಸಿದ್ದರು.

ಎಐಎಂಐಎಂ ನಾಯಕ ಅಕ್ಬರುದ್ದೀನ್ ಓವೈಸಿ ಕೂಡ ಹೆಸರು ಉಲ್ಲೇಖಿಸದೆ ಪರೋಕ್ಷವಾಗಿ ಅಲ್ಲು ಅರ್ಜುನ್ ವಿರುದ್ದ ಕಿಡಿಕಾರಿದ್ದಾರೆ. “ಚಿತ್ರ ಈಗ ಹಿಟ್ ಆಗಬಹುದು” ಎಂದಿದ್ದಾರೆ.

ಕಾಲ್ತುಳಿತ ಸಂಭವಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ “ಚಿತ್ರ ಹಿಟ್ ಆಗಲಿದೆ” ಎಂದು ಹೇಳಿದ್ದಾಗಿ ಅಕ್ಬರುದ್ದೀನ್ ಓವೈಸಿ ಆರೋಪಿಸಿದ್ದಾರೆ.

” ಜನರು ಸಾಯುವಾಗ ನಾನು ಆ ರೀತಿಯ ಹೇಳಿಕೆಗಳನ್ನು ಕನಸಿನಲ್ಲೂ ಹೇಳುವವನಲ್ಲ. ನನ್ನ ವಿರುದ್ದ ಈ ರೀತಿಯ ಆರೋಪಗಳು ನನ್ನ ತೇಜೋವದೆ ಮಾಡುವ ಉದ್ದೇಶ ಹೊಂದಿದೆ. ಕಳೆದ 20 ವರ್ಷಗಳಲ್ಲಿ ಕಷ್ಟಪಟ್ಟು ಮೇಲೆ ಬಂದ ನಾನು ಈ ಹೆಸರು, ಗೌರವವನ್ನು ಗಳಿಸಿಕೊಂಡಿದ್ದೇನೆ” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

ಮುಂದುರಿದು “ನಾನು ಯಾರನ್ನೂ ದೂಷಿಸುವುದಿಲ್ಲ. ನನ್ನ ಹೆಸರಿನಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಗಳ ಕುರಿತು ಸ್ಪಷ್ಟನೆ ನೀಡಿದ್ದೇನೆ” ಅಷ್ಟೆ ಎಂದಿದ್ದಾರೆ.

“ಮಹಿಳೆ ಸಾವನ್ನಪ್ಪಿದ ವಿಷಯ ತಿಳಿದು ಅವರ ಕುಟುಂಬವನ್ನು ಭೇಟಿ ಮಾಡಲು ನಾನು ನನ್ನ ಸಿಬ್ಬಂದಿಯನ್ನು ಕಳಿಸಿದ್ದೆ. ನನ್ನ ಮೇಲೆ ಆ ಕುಟುಂಬ ದೂರು ದಾಖಲಿಸಿದ್ದರಿಂದ ನಾನು ಹೋಗುವುದು ಕಾನೂನಾತ್ಮಕವಾಗಿ ತಪ್ಪಾಗುತ್ತದೆ ಎಂದು ಹೋಗಿರಲಿಲ್ಲ. ಗಾಯಗೊಂಡಿರುವ ಬಾಲಕನ ಬಗ್ಗೆ ನಾವು ಕಾಳಜಿವಹಿಸುತ್ತೇವೆ. ಮುಂದೆ ಅವರ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...