Homeಮುಖಪುಟ'ಪುಷ್ಪ-2' ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ...

‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

- Advertisement -
- Advertisement -

ಡಿಸೆಂಬರ್ 4ರಂದು ಪುಷ್ಪ 2 (Pushpa 2: The Rule)ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಮತ್ತು ನಟ ಅಲ್ಲು ಅರ್ಜುನ್ ನಡುವಿನ ವಾಗ್ಯುದ್ಧ ತಾರಕಕ್ಕೇರಿದೆ.

ತೆಲಂಗಾಣ ವಿಧಾನಸಭೆಯಲ್ಲಿ ಶನಿವಾರ (ಡಿ.21) ಮಾತನಾಡಿದ್ದ ಸಿಎಂ ರೇವಂತ್ ರೆಡ್ಡಿ ” ಕಾಲ್ತುಳಿತ ಸಂಭವಿಸಿದ ಬಗ್ಗೆ ಪೊಲೀಸರು ಮಾಹಿತಿ ನೀಡಿದರೂ ಅಲ್ಲು ಅರ್ಜುನ್ ಥಿಯೇಟರ್ ಬಿಟ್ಟು ಹೋಗಲು ನಿರಾಕರಿಸಿದ್ದರು” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಲ್ಲು ಅರ್ಜುನ್, “ಕಾಲ್ತುಳಿತ ದುರಂತ ನಡೆದು ಮಹಿಳೆ ಸಾವನ್ನಪ್ಪಿದ ಬಗ್ಗೆ ನನಗೆ ಮರುದಿನವಷ್ಟೇ ಗೊತ್ತಾಯಿತು” ಎಂದಿದ್ದಾರೆ.

“ಯಾವುದೇ ಪೊಲೀಸ್ ಬಂದು ನನಗೆ ಮಾಹಿತಿ ನೀಡಿಲ್ಲ. ಥಿಯೇಟರ್ ಆಡಳಿತದವರು ಬಂದು ಹೊರಗಡೆ ಭಾರೀ ಜನ ಸೇರಿದ್ದಾರೆ. ಹಾಗಾಗಿ, ತಾವು ದಯವಿಟ್ಟು ಇಲ್ಲಿಂದ ಹೋಗಿ ಎಂದರು. ನಾನು ತಕ್ಷಣ ಹೊರಟು ಬಂದೆ. ಮಹಿಳೆ ಸಾವನ್ನಪ್ಪಿದ ಬಗ್ಗೆ ನನಗೆ ಮರುದಿನವಷ್ಟೇ ಮಾಹಿತಿ ಗೊತ್ತಾಯಿತು” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

“ನಾನು ಥಿಯೇಟರ್‌ಗೆ ಭೇಟಿ ಕೊಡುವುದಕ್ಕೆ ಅನುಮತಿ ಇಲ್ಲ ಎಂದಿದ್ದರೆ ಪೊಲೀಸರು ತಿಳಿಸಬೇಕಿತ್ತು. ಕಾನೂನು ಪಾಲಿಸುವವನಾಗಿ ನಾನು ವಾಪಸ್ ಹೋಗುತ್ತಿದ್ದೆ” ಎಂದು ಅಲ್ಲು ಅರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 4ರಂದು ಪುಷ್ಪ-2 ಸಿನಿಮಾದ ಪ್ರೀಮಿಯರ್ ಶೋ ಅನ್ನು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಆಯೋಜಿಸಲಾಗಿತ್ತು. ಇಲ್ಲಿಗೆ ಅಲ್ಲು ಅರ್ಜುನ್ ಹಠಾತ್ ಭೇಟಿ ಕೊಟ್ಟಿದ್ದರಿಂದ ಭಾರೀ ಸಂಖ್ಯೆಯಲ್ಲಿ ಜನ ಸೇರಿ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಕಾಲ್ತುಳಿತ ಸಂಭವಿಸಿ ದಿಲ್‌ಸುಖ್ ನಗರ ನಿವಾಸಿ 35 ವರ್ಷದ ರೇವತಿ ಸಾವನ್ನಪ್ಪಿದ್ದಾರೆ. ಅವರ 8 ವರ್ಷದ ಮಗ ಶ್ರೀತೇಜಾ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಚಿಕಡ್‌ಪಲ್ಲಿ ಪೊಲೀಸರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡುವಾಗ ಸಿಎಂ ರೇವಂತ್ ರೆಡ್ಡಿ,”ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸಂಧ್ಯಾ ಥಿಯೇಟರ್‌ಗೆ ಹೋಗಿ ಹೊರಗಡೆ ಭಾರೀ ಜನ ಸೇರಿ ಗದ್ದಲ ಉಂಟಾಗಿದೆ. ಇಲ್ಲಿಂದ ಹೊರಟು ಹೋಗಿ ಎಂದು ಅಲ್ಲು ಅರ್ಜುನ್‌ಗೆ ಮನವಿ ಮಾಡಿದ್ದರು. ಆದರೆ, ಅವರು ಸಿನಿಮಾ ಮುಗಿಯುವವರೆಗೆ ಹೋಗಲ್ಲ ಎಂದಿದ್ದಾರೆ. ಕೊನೆಗೆ ಡಿಸಿಪಿ ಹೋಗಿ ಬಂಧಿಸಬೇಕಾಗುತ್ತೆ ಎಂದು ಎಚ್ಚರಿಕೆ ಕೊಟ್ಟ ಬಳಿಕವಷ್ಟೇ ಥಿಯೇಟರ್ ಬಿಟ್ಟು ಹೋಗಿದ್ದಾರೆ” ಎಂದು ಆರೋಪಿಸಿದ್ದರು.

ಎಐಎಂಐಎಂ ನಾಯಕ ಅಕ್ಬರುದ್ದೀನ್ ಓವೈಸಿ ಕೂಡ ಹೆಸರು ಉಲ್ಲೇಖಿಸದೆ ಪರೋಕ್ಷವಾಗಿ ಅಲ್ಲು ಅರ್ಜುನ್ ವಿರುದ್ದ ಕಿಡಿಕಾರಿದ್ದಾರೆ. “ಚಿತ್ರ ಈಗ ಹಿಟ್ ಆಗಬಹುದು” ಎಂದಿದ್ದಾರೆ.

ಕಾಲ್ತುಳಿತ ಸಂಭವಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ “ಚಿತ್ರ ಹಿಟ್ ಆಗಲಿದೆ” ಎಂದು ಹೇಳಿದ್ದಾಗಿ ಅಕ್ಬರುದ್ದೀನ್ ಓವೈಸಿ ಆರೋಪಿಸಿದ್ದಾರೆ.

” ಜನರು ಸಾಯುವಾಗ ನಾನು ಆ ರೀತಿಯ ಹೇಳಿಕೆಗಳನ್ನು ಕನಸಿನಲ್ಲೂ ಹೇಳುವವನಲ್ಲ. ನನ್ನ ವಿರುದ್ದ ಈ ರೀತಿಯ ಆರೋಪಗಳು ನನ್ನ ತೇಜೋವದೆ ಮಾಡುವ ಉದ್ದೇಶ ಹೊಂದಿದೆ. ಕಳೆದ 20 ವರ್ಷಗಳಲ್ಲಿ ಕಷ್ಟಪಟ್ಟು ಮೇಲೆ ಬಂದ ನಾನು ಈ ಹೆಸರು, ಗೌರವವನ್ನು ಗಳಿಸಿಕೊಂಡಿದ್ದೇನೆ” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

ಮುಂದುರಿದು “ನಾನು ಯಾರನ್ನೂ ದೂಷಿಸುವುದಿಲ್ಲ. ನನ್ನ ಹೆಸರಿನಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಗಳ ಕುರಿತು ಸ್ಪಷ್ಟನೆ ನೀಡಿದ್ದೇನೆ” ಅಷ್ಟೆ ಎಂದಿದ್ದಾರೆ.

“ಮಹಿಳೆ ಸಾವನ್ನಪ್ಪಿದ ವಿಷಯ ತಿಳಿದು ಅವರ ಕುಟುಂಬವನ್ನು ಭೇಟಿ ಮಾಡಲು ನಾನು ನನ್ನ ಸಿಬ್ಬಂದಿಯನ್ನು ಕಳಿಸಿದ್ದೆ. ನನ್ನ ಮೇಲೆ ಆ ಕುಟುಂಬ ದೂರು ದಾಖಲಿಸಿದ್ದರಿಂದ ನಾನು ಹೋಗುವುದು ಕಾನೂನಾತ್ಮಕವಾಗಿ ತಪ್ಪಾಗುತ್ತದೆ ಎಂದು ಹೋಗಿರಲಿಲ್ಲ. ಗಾಯಗೊಂಡಿರುವ ಬಾಲಕನ ಬಗ್ಗೆ ನಾವು ಕಾಳಜಿವಹಿಸುತ್ತೇವೆ. ಮುಂದೆ ಅವರ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...