Homeಮುಖಪುಟ'ಪುಷ್ಪ-2' ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ...

‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

- Advertisement -
- Advertisement -

ಡಿಸೆಂಬರ್ 4ರಂದು ಪುಷ್ಪ 2 (Pushpa 2: The Rule)ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಮತ್ತು ನಟ ಅಲ್ಲು ಅರ್ಜುನ್ ನಡುವಿನ ವಾಗ್ಯುದ್ಧ ತಾರಕಕ್ಕೇರಿದೆ.

ತೆಲಂಗಾಣ ವಿಧಾನಸಭೆಯಲ್ಲಿ ಶನಿವಾರ (ಡಿ.21) ಮಾತನಾಡಿದ್ದ ಸಿಎಂ ರೇವಂತ್ ರೆಡ್ಡಿ ” ಕಾಲ್ತುಳಿತ ಸಂಭವಿಸಿದ ಬಗ್ಗೆ ಪೊಲೀಸರು ಮಾಹಿತಿ ನೀಡಿದರೂ ಅಲ್ಲು ಅರ್ಜುನ್ ಥಿಯೇಟರ್ ಬಿಟ್ಟು ಹೋಗಲು ನಿರಾಕರಿಸಿದ್ದರು” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಲ್ಲು ಅರ್ಜುನ್, “ಕಾಲ್ತುಳಿತ ದುರಂತ ನಡೆದು ಮಹಿಳೆ ಸಾವನ್ನಪ್ಪಿದ ಬಗ್ಗೆ ನನಗೆ ಮರುದಿನವಷ್ಟೇ ಗೊತ್ತಾಯಿತು” ಎಂದಿದ್ದಾರೆ.

“ಯಾವುದೇ ಪೊಲೀಸ್ ಬಂದು ನನಗೆ ಮಾಹಿತಿ ನೀಡಿಲ್ಲ. ಥಿಯೇಟರ್ ಆಡಳಿತದವರು ಬಂದು ಹೊರಗಡೆ ಭಾರೀ ಜನ ಸೇರಿದ್ದಾರೆ. ಹಾಗಾಗಿ, ತಾವು ದಯವಿಟ್ಟು ಇಲ್ಲಿಂದ ಹೋಗಿ ಎಂದರು. ನಾನು ತಕ್ಷಣ ಹೊರಟು ಬಂದೆ. ಮಹಿಳೆ ಸಾವನ್ನಪ್ಪಿದ ಬಗ್ಗೆ ನನಗೆ ಮರುದಿನವಷ್ಟೇ ಮಾಹಿತಿ ಗೊತ್ತಾಯಿತು” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

“ನಾನು ಥಿಯೇಟರ್‌ಗೆ ಭೇಟಿ ಕೊಡುವುದಕ್ಕೆ ಅನುಮತಿ ಇಲ್ಲ ಎಂದಿದ್ದರೆ ಪೊಲೀಸರು ತಿಳಿಸಬೇಕಿತ್ತು. ಕಾನೂನು ಪಾಲಿಸುವವನಾಗಿ ನಾನು ವಾಪಸ್ ಹೋಗುತ್ತಿದ್ದೆ” ಎಂದು ಅಲ್ಲು ಅರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 4ರಂದು ಪುಷ್ಪ-2 ಸಿನಿಮಾದ ಪ್ರೀಮಿಯರ್ ಶೋ ಅನ್ನು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಆಯೋಜಿಸಲಾಗಿತ್ತು. ಇಲ್ಲಿಗೆ ಅಲ್ಲು ಅರ್ಜುನ್ ಹಠಾತ್ ಭೇಟಿ ಕೊಟ್ಟಿದ್ದರಿಂದ ಭಾರೀ ಸಂಖ್ಯೆಯಲ್ಲಿ ಜನ ಸೇರಿ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಕಾಲ್ತುಳಿತ ಸಂಭವಿಸಿ ದಿಲ್‌ಸುಖ್ ನಗರ ನಿವಾಸಿ 35 ವರ್ಷದ ರೇವತಿ ಸಾವನ್ನಪ್ಪಿದ್ದಾರೆ. ಅವರ 8 ವರ್ಷದ ಮಗ ಶ್ರೀತೇಜಾ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಚಿಕಡ್‌ಪಲ್ಲಿ ಪೊಲೀಸರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡುವಾಗ ಸಿಎಂ ರೇವಂತ್ ರೆಡ್ಡಿ,”ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸಂಧ್ಯಾ ಥಿಯೇಟರ್‌ಗೆ ಹೋಗಿ ಹೊರಗಡೆ ಭಾರೀ ಜನ ಸೇರಿ ಗದ್ದಲ ಉಂಟಾಗಿದೆ. ಇಲ್ಲಿಂದ ಹೊರಟು ಹೋಗಿ ಎಂದು ಅಲ್ಲು ಅರ್ಜುನ್‌ಗೆ ಮನವಿ ಮಾಡಿದ್ದರು. ಆದರೆ, ಅವರು ಸಿನಿಮಾ ಮುಗಿಯುವವರೆಗೆ ಹೋಗಲ್ಲ ಎಂದಿದ್ದಾರೆ. ಕೊನೆಗೆ ಡಿಸಿಪಿ ಹೋಗಿ ಬಂಧಿಸಬೇಕಾಗುತ್ತೆ ಎಂದು ಎಚ್ಚರಿಕೆ ಕೊಟ್ಟ ಬಳಿಕವಷ್ಟೇ ಥಿಯೇಟರ್ ಬಿಟ್ಟು ಹೋಗಿದ್ದಾರೆ” ಎಂದು ಆರೋಪಿಸಿದ್ದರು.

ಎಐಎಂಐಎಂ ನಾಯಕ ಅಕ್ಬರುದ್ದೀನ್ ಓವೈಸಿ ಕೂಡ ಹೆಸರು ಉಲ್ಲೇಖಿಸದೆ ಪರೋಕ್ಷವಾಗಿ ಅಲ್ಲು ಅರ್ಜುನ್ ವಿರುದ್ದ ಕಿಡಿಕಾರಿದ್ದಾರೆ. “ಚಿತ್ರ ಈಗ ಹಿಟ್ ಆಗಬಹುದು” ಎಂದಿದ್ದಾರೆ.

ಕಾಲ್ತುಳಿತ ಸಂಭವಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ “ಚಿತ್ರ ಹಿಟ್ ಆಗಲಿದೆ” ಎಂದು ಹೇಳಿದ್ದಾಗಿ ಅಕ್ಬರುದ್ದೀನ್ ಓವೈಸಿ ಆರೋಪಿಸಿದ್ದಾರೆ.

” ಜನರು ಸಾಯುವಾಗ ನಾನು ಆ ರೀತಿಯ ಹೇಳಿಕೆಗಳನ್ನು ಕನಸಿನಲ್ಲೂ ಹೇಳುವವನಲ್ಲ. ನನ್ನ ವಿರುದ್ದ ಈ ರೀತಿಯ ಆರೋಪಗಳು ನನ್ನ ತೇಜೋವದೆ ಮಾಡುವ ಉದ್ದೇಶ ಹೊಂದಿದೆ. ಕಳೆದ 20 ವರ್ಷಗಳಲ್ಲಿ ಕಷ್ಟಪಟ್ಟು ಮೇಲೆ ಬಂದ ನಾನು ಈ ಹೆಸರು, ಗೌರವವನ್ನು ಗಳಿಸಿಕೊಂಡಿದ್ದೇನೆ” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

ಮುಂದುರಿದು “ನಾನು ಯಾರನ್ನೂ ದೂಷಿಸುವುದಿಲ್ಲ. ನನ್ನ ಹೆಸರಿನಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಗಳ ಕುರಿತು ಸ್ಪಷ್ಟನೆ ನೀಡಿದ್ದೇನೆ” ಅಷ್ಟೆ ಎಂದಿದ್ದಾರೆ.

“ಮಹಿಳೆ ಸಾವನ್ನಪ್ಪಿದ ವಿಷಯ ತಿಳಿದು ಅವರ ಕುಟುಂಬವನ್ನು ಭೇಟಿ ಮಾಡಲು ನಾನು ನನ್ನ ಸಿಬ್ಬಂದಿಯನ್ನು ಕಳಿಸಿದ್ದೆ. ನನ್ನ ಮೇಲೆ ಆ ಕುಟುಂಬ ದೂರು ದಾಖಲಿಸಿದ್ದರಿಂದ ನಾನು ಹೋಗುವುದು ಕಾನೂನಾತ್ಮಕವಾಗಿ ತಪ್ಪಾಗುತ್ತದೆ ಎಂದು ಹೋಗಿರಲಿಲ್ಲ. ಗಾಯಗೊಂಡಿರುವ ಬಾಲಕನ ಬಗ್ಗೆ ನಾವು ಕಾಳಜಿವಹಿಸುತ್ತೇವೆ. ಮುಂದೆ ಅವರ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...