Homeಮುಖಪುಟ'ಪುಷ್ಪ-2' ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ...

‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

- Advertisement -
- Advertisement -

ಡಿಸೆಂಬರ್ 4ರಂದು ಪುಷ್ಪ 2 (Pushpa 2: The Rule)ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಮತ್ತು ನಟ ಅಲ್ಲು ಅರ್ಜುನ್ ನಡುವಿನ ವಾಗ್ಯುದ್ಧ ತಾರಕಕ್ಕೇರಿದೆ.

ತೆಲಂಗಾಣ ವಿಧಾನಸಭೆಯಲ್ಲಿ ಶನಿವಾರ (ಡಿ.21) ಮಾತನಾಡಿದ್ದ ಸಿಎಂ ರೇವಂತ್ ರೆಡ್ಡಿ ” ಕಾಲ್ತುಳಿತ ಸಂಭವಿಸಿದ ಬಗ್ಗೆ ಪೊಲೀಸರು ಮಾಹಿತಿ ನೀಡಿದರೂ ಅಲ್ಲು ಅರ್ಜುನ್ ಥಿಯೇಟರ್ ಬಿಟ್ಟು ಹೋಗಲು ನಿರಾಕರಿಸಿದ್ದರು” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಲ್ಲು ಅರ್ಜುನ್, “ಕಾಲ್ತುಳಿತ ದುರಂತ ನಡೆದು ಮಹಿಳೆ ಸಾವನ್ನಪ್ಪಿದ ಬಗ್ಗೆ ನನಗೆ ಮರುದಿನವಷ್ಟೇ ಗೊತ್ತಾಯಿತು” ಎಂದಿದ್ದಾರೆ.

“ಯಾವುದೇ ಪೊಲೀಸ್ ಬಂದು ನನಗೆ ಮಾಹಿತಿ ನೀಡಿಲ್ಲ. ಥಿಯೇಟರ್ ಆಡಳಿತದವರು ಬಂದು ಹೊರಗಡೆ ಭಾರೀ ಜನ ಸೇರಿದ್ದಾರೆ. ಹಾಗಾಗಿ, ತಾವು ದಯವಿಟ್ಟು ಇಲ್ಲಿಂದ ಹೋಗಿ ಎಂದರು. ನಾನು ತಕ್ಷಣ ಹೊರಟು ಬಂದೆ. ಮಹಿಳೆ ಸಾವನ್ನಪ್ಪಿದ ಬಗ್ಗೆ ನನಗೆ ಮರುದಿನವಷ್ಟೇ ಮಾಹಿತಿ ಗೊತ್ತಾಯಿತು” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

“ನಾನು ಥಿಯೇಟರ್‌ಗೆ ಭೇಟಿ ಕೊಡುವುದಕ್ಕೆ ಅನುಮತಿ ಇಲ್ಲ ಎಂದಿದ್ದರೆ ಪೊಲೀಸರು ತಿಳಿಸಬೇಕಿತ್ತು. ಕಾನೂನು ಪಾಲಿಸುವವನಾಗಿ ನಾನು ವಾಪಸ್ ಹೋಗುತ್ತಿದ್ದೆ” ಎಂದು ಅಲ್ಲು ಅರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 4ರಂದು ಪುಷ್ಪ-2 ಸಿನಿಮಾದ ಪ್ರೀಮಿಯರ್ ಶೋ ಅನ್ನು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಆಯೋಜಿಸಲಾಗಿತ್ತು. ಇಲ್ಲಿಗೆ ಅಲ್ಲು ಅರ್ಜುನ್ ಹಠಾತ್ ಭೇಟಿ ಕೊಟ್ಟಿದ್ದರಿಂದ ಭಾರೀ ಸಂಖ್ಯೆಯಲ್ಲಿ ಜನ ಸೇರಿ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಕಾಲ್ತುಳಿತ ಸಂಭವಿಸಿ ದಿಲ್‌ಸುಖ್ ನಗರ ನಿವಾಸಿ 35 ವರ್ಷದ ರೇವತಿ ಸಾವನ್ನಪ್ಪಿದ್ದಾರೆ. ಅವರ 8 ವರ್ಷದ ಮಗ ಶ್ರೀತೇಜಾ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಚಿಕಡ್‌ಪಲ್ಲಿ ಪೊಲೀಸರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡುವಾಗ ಸಿಎಂ ರೇವಂತ್ ರೆಡ್ಡಿ,”ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಸಂಧ್ಯಾ ಥಿಯೇಟರ್‌ಗೆ ಹೋಗಿ ಹೊರಗಡೆ ಭಾರೀ ಜನ ಸೇರಿ ಗದ್ದಲ ಉಂಟಾಗಿದೆ. ಇಲ್ಲಿಂದ ಹೊರಟು ಹೋಗಿ ಎಂದು ಅಲ್ಲು ಅರ್ಜುನ್‌ಗೆ ಮನವಿ ಮಾಡಿದ್ದರು. ಆದರೆ, ಅವರು ಸಿನಿಮಾ ಮುಗಿಯುವವರೆಗೆ ಹೋಗಲ್ಲ ಎಂದಿದ್ದಾರೆ. ಕೊನೆಗೆ ಡಿಸಿಪಿ ಹೋಗಿ ಬಂಧಿಸಬೇಕಾಗುತ್ತೆ ಎಂದು ಎಚ್ಚರಿಕೆ ಕೊಟ್ಟ ಬಳಿಕವಷ್ಟೇ ಥಿಯೇಟರ್ ಬಿಟ್ಟು ಹೋಗಿದ್ದಾರೆ” ಎಂದು ಆರೋಪಿಸಿದ್ದರು.

ಎಐಎಂಐಎಂ ನಾಯಕ ಅಕ್ಬರುದ್ದೀನ್ ಓವೈಸಿ ಕೂಡ ಹೆಸರು ಉಲ್ಲೇಖಿಸದೆ ಪರೋಕ್ಷವಾಗಿ ಅಲ್ಲು ಅರ್ಜುನ್ ವಿರುದ್ದ ಕಿಡಿಕಾರಿದ್ದಾರೆ. “ಚಿತ್ರ ಈಗ ಹಿಟ್ ಆಗಬಹುದು” ಎಂದಿದ್ದಾರೆ.

ಕಾಲ್ತುಳಿತ ಸಂಭವಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ “ಚಿತ್ರ ಹಿಟ್ ಆಗಲಿದೆ” ಎಂದು ಹೇಳಿದ್ದಾಗಿ ಅಕ್ಬರುದ್ದೀನ್ ಓವೈಸಿ ಆರೋಪಿಸಿದ್ದಾರೆ.

” ಜನರು ಸಾಯುವಾಗ ನಾನು ಆ ರೀತಿಯ ಹೇಳಿಕೆಗಳನ್ನು ಕನಸಿನಲ್ಲೂ ಹೇಳುವವನಲ್ಲ. ನನ್ನ ವಿರುದ್ದ ಈ ರೀತಿಯ ಆರೋಪಗಳು ನನ್ನ ತೇಜೋವದೆ ಮಾಡುವ ಉದ್ದೇಶ ಹೊಂದಿದೆ. ಕಳೆದ 20 ವರ್ಷಗಳಲ್ಲಿ ಕಷ್ಟಪಟ್ಟು ಮೇಲೆ ಬಂದ ನಾನು ಈ ಹೆಸರು, ಗೌರವವನ್ನು ಗಳಿಸಿಕೊಂಡಿದ್ದೇನೆ” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

ಮುಂದುರಿದು “ನಾನು ಯಾರನ್ನೂ ದೂಷಿಸುವುದಿಲ್ಲ. ನನ್ನ ಹೆಸರಿನಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಗಳ ಕುರಿತು ಸ್ಪಷ್ಟನೆ ನೀಡಿದ್ದೇನೆ” ಅಷ್ಟೆ ಎಂದಿದ್ದಾರೆ.

“ಮಹಿಳೆ ಸಾವನ್ನಪ್ಪಿದ ವಿಷಯ ತಿಳಿದು ಅವರ ಕುಟುಂಬವನ್ನು ಭೇಟಿ ಮಾಡಲು ನಾನು ನನ್ನ ಸಿಬ್ಬಂದಿಯನ್ನು ಕಳಿಸಿದ್ದೆ. ನನ್ನ ಮೇಲೆ ಆ ಕುಟುಂಬ ದೂರು ದಾಖಲಿಸಿದ್ದರಿಂದ ನಾನು ಹೋಗುವುದು ಕಾನೂನಾತ್ಮಕವಾಗಿ ತಪ್ಪಾಗುತ್ತದೆ ಎಂದು ಹೋಗಿರಲಿಲ್ಲ. ಗಾಯಗೊಂಡಿರುವ ಬಾಲಕನ ಬಗ್ಗೆ ನಾವು ಕಾಳಜಿವಹಿಸುತ್ತೇವೆ. ಮುಂದೆ ಅವರ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ ಖಾತೆ ಹಂಚಿಕೆ | ಶಿಂದೆಗೆ ಎರಡು ಮತ್ತೊಂದು, ಅಜಿತ್‌ಗೆ ಹಣಕಾಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...