Homeಮುಖಪುಟಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

ಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

- Advertisement -
- Advertisement -

ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಮೂರು ರೈಲುಗಳ ಡಿಕ್ಕಿ ಸಂಭವಿಸಿ 288 ಜನರು ಸಾವನ್ನಪ್ಪಿದರು ಮತ್ತು 1000ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇದು ಭಾರತದ ಅತಿದೊಡ್ಡ ರೈಲ್ವೆ ಅಪಘಾತಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ.

ಈ ಘಟನೆಯು ಭಾರತದ ರೈಲ್ವೆ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದಾಖಲೆಗಳನ್ನು ಗಮನಿಸಿದರೆ ಕಳೆದ 10 ವರ್ಷಗಳಲ್ಲಿ ಸರಿಸುಮಾರು 2.6 ಲಕ್ಷ ಜನರು ರೈಲು ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

NCRB ಭಾರತದಲ್ಲಿ ಅಪರಾಧ ಡೇಟಾವನ್ನು ಸಂಗ್ರಹಿಸುವ ಮತ್ತು ವಿಶ್ಲೇಷಿಸುವ ಜವಾಬ್ದಾರಿಯನ್ನು ಹೊಂದಿರುವ ಭಾರತೀಯ ಸರ್ಕಾರಿ ಸಂಸ್ಥೆಯಾಗಿದೆ.

ಗಮನಾರ್ಹ ಸಂಗತಿಯೆಂದರೆ, ಬಹುಪಾಲು ರೈಲ್ವೇ ಅಪಘಾತದ ಸಾವುಗಳು ಶುಕ್ರವಾರ ಒಡಿಶಾದಲ್ಲಿ ಸಂಭವಿಸಿದ ದುರಂತದಂತೆ ಸಂಭವಿಸಿಲ್ಲ, ಬದಲಾಗಿ ಜನ ರೈಲುಗಳಿಂದ ಕೆಳಗೆ ಬೀಳುವುದು, ಅಥವಾ ರೈಲುಗಳು ಜನರ ಮೇಲೆ ಹರಿಯುವುದರಿಂದ ಹೆಚ್ಚಿನ ಸಾವು ಸಂಭವಿಸಿದೆ ಎಂದು ದಾಖಲೆಗಳು ತೋರಿಸುತ್ತವೆ. 2017-21 ರ ನಡುವಿನ ರೈಲ್ವೆ ಅಪಘಾತದ ಸಾವುಗಳಲ್ಲಿ 70 ಪ್ರತಿಶತದಷ್ಟು ಸಾವುಗಳು ಇದೇ ರೀತಿ ಸಂಭವಿಸಿವೆ ಎಂದು ಅಂಕಿಅಂಶಗಳು ಹೇಳುತ್ತವೆ.

ಕಳೆದ 10 ವರ್ಷಗಳಲ್ಲಿ ರೈಲ್ವೆ ಅಪಘಾತಗಳ ಬಗ್ಗೆ ಡೇಟಾ ಏನು ಹೇಳುತ್ತದೆ?

ಎನ್‌ಸಿಆರ್‌ಬಿ ರೈಲ್ವೇ ಅಪಘಾತದ ಸಾವುಗಳನ್ನು ಐದು ವಿಭಾಗಗಳಲ್ಲಿ ವರ್ಗೀಕರಿಸುತ್ತದೆ. ಹಳಿತಪ್ಪುವಿಕೆಗಳು, ಘರ್ಷಣೆಗಳು, ಸ್ಫೋಟಗಳು/ಬೆಂಕಿಗಳು, ರೈಲುಗಳಿಂದ ಬೀಳುವ ಜನರು ಅಥವಾ ರೈಲುಗಳು ಹಳಿಗಳ ಮೇಲೆ ಜನರಿಗೆ ಡಿಕ್ಕಿ ಹೊಡೆಯುವುದು ಮತ್ತು ‘ಇತರ ಕಾರಣಗಳು’.

ಎನ್‌ಸಿಆರ್‌ಬಿಯ ವರದಿಯ ಪ್ರಕಾರ ”ಭಾರತದಲ್ಲಿ ರೈಲ್ವೆ ಅಪಘಾತಗಳಿಂದ 2011 ರಲ್ಲಿ ಸುಮಾರು 25,872 ಜನ ಪ್ರಾಣ ಕಳೆದುಕೊಂಡಿದ್ದಾರೆ. 2012 ರಲ್ಲಿ 27,000 ಮತ್ತು 2013 ರಲ್ಲಿ 27,765 ರೈಲು ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ, 2014 ರಲ್ಲಿ ಇದರ ಪ್ರಮಾಣ 25,000 ಜನರಿಗೆ ಇಳಿಯಿತು.

ಇದನ್ನೂ ಓದಿ: ಒಡಿಶಾ ರೈಲು ದುರಂತದ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು

ಈ ಗ್ರಾಫ್ 2017 ರಿಂದ ಕ್ರಮೇಣ ಕಡಿಮೆಯಾಯಿತು – ಆ ವರ್ಷ, ಅಂತಹ ಸಾವುಗಳು 24,000ಕ್ಕೆ ಇಳಿದವು ಮತ್ತು 2019 ರವರೆಗೆ (24,619 ಆಗಿದ್ದಾಗ) ಆ ಅಂಕಿಅಂಶದ ಸುತ್ತ ಸುಳಿದಾಡಿತು. ನಿರೀಕ್ಷೆಯಂತೆ, 2020 ರಲ್ಲಿ ಅತ್ಯಂತ ಕುಸಿತವು ಸಂಭವಿಸಿತು. ಏಕೆಂದರೆ COVID-19 ಸಾಂಕ್ರಾಮಿಕದಿಂದ ರೈಲುಗಳ ಓಡಾಟ ಸ್ಥಗಿತವಾಗಿದ್ದು ಕೂಡ ಇದಕ್ಕೆ ಮುಖ್ಯ ಕಾರಣವಾಯಿತು. ಹಾಗಾಗಿ 2020ರಲ್ಲಿ ರೈಲ್ವೆ ಅಪಘಾತದ ಸಾವುಗಳು ಸುಮಾರು 11,968 ಕ್ಕೆ ಇಳಿದವು. 2021ರಲ್ಲಿ 16,431 ಕ್ಕೆ ಏರಿತು ಅಂದರೆ 27 ಪ್ರತಿಶತದಷ್ಟು ಸಾವಿನ ಸಂಖ್ಯೆ ಹೆಚ್ಚಾಯಿತು. ಆದರೂ ಇದು ಸಾಂಕ್ರಾಮಿಕ ಪೂರ್ವದ ಮಟ್ಟಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿದೆ.

ಸಾವಿನ ಕಾರಣಗಳು

ಹೆಚ್ಚಿನ ಸಾವುಗಳು ಜನರು ರೈಲಿನಿಂದ ಬೀಳುವುದರಿಂದ ಅಥವಾ ಅವರ ಮೇಲೆ ರೈಲು ಹರಿದು ಸಾವುಗಳು ಸಂಭವಿಸಿವೆ ಎಂದು ಡೇಟಾ ತೋರಿಸುತ್ತದೆ. ಎನ್‌ಸಿಆರ್‌ಬಿ ಪ್ರಕಾರ, 2021ರಲ್ಲಿ ಸಂಭವಿಸಿದ ಒಟ್ಟು 16,431 ಜನರು ರೈಲ್ವೆ ಅಪಘಾತದಿಂದ ಸಾವುಗಳಾಗಿದ್ದರೆ, ಅದರಲ್ಲಿ 11,036 ಜನರು ರೈಲಿನಿಂದ ಬಿದ್ದು, ರೈಲು ಹರಿದು ಸಾವಿಗೀಡಾಗಿದ್ದಾರೆ. ಇತರೆ ಕಾರಣಗಳಿಂದ 5,287 ಜನ ಸಾವನ್ನಪ್ಪಿದ್ದಾರೆ. ‘ಇತರ’ ವರ್ಗ ಎಂಬುದರ ಬಗ್ಗೆ ಎನ್‌ಸಿಆರ್ ಬಿ ಸ್ಪಷ್ಟವಾಗಿ ತಿಳಿಸಿಲ್ಲ. ರೈಲು ಡಿಕ್ಕಿಗಳಿಂದ 86 ಮತ್ತು ಹಳಿ ತಪ್ಪಿದ್ದರಿಂದ 22 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 2021ರಲ್ಲಿ ಬೆಂಕಿ ಅಥವಾ ಸ್ಫೋಟಗಳಲ್ಲಿ ಯಾರೂ ಸಾವನ್ನಪ್ಪಿಲ್ಲ.

2017-21 ರ ನಡುವೆ ವರದಿಯಾದ 1 ಲಕ್ಷ ರೈಲ್ವೆ ಅಪಘಾತ ಸಾವುಗಳಲ್ಲಿ, 71,000 ಕ್ಕೂ ಹೆಚ್ಚು ಜನರು ರೈಲಿನಿಂದ ಬಿದ್ದು ಅಥವಾ ರೈಲು ಹರಿದು ಸಾವನ್ನಪ್ಪಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಂಕಿಅಂಶಗಳನ್ನು ಗಮನಿಸಿದರೆ ಮಹಾರಾಷ್ಟ್ರದಲ್ಲಿ ಹೆಚ್ಚು ಸಾವು ಈ ಅವಧಿಯಲ್ಲಿ ಸಂಭವಿಸಿವೆ. ಇದು 2017 ಮತ್ತು 2021 ರ ನಡುವೆ 17,000 ಇಂತಹ ಸಾವುನೋವುಗಳು ಸಂಭವಿಸಿವೆ ಎಂದು ವರದಿ ಮಾಡಿದೆ. ಅದರ ನಂತರ ಉತ್ತರ ಪ್ರದೇಶ (13,074) ಮತ್ತು ಪಶ್ಚಿಮ ಬಂಗಾಳ (11,967). ಹೋಲಿಸಿದರೆ, ಅದೇ ಅವಧಿಯಲ್ಲಿ ಒಡಿಶಾದ ಸಂಖ್ಯೆಗಳು ಅತ್ಯಂತ ಕಡಿಮೆ, ಕೇವಲ 1,845 ಸಾವುಗಳು ಸಂಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...