Homeಮುಖಪುಟಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

ಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

- Advertisement -
- Advertisement -

ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಮೂರು ರೈಲುಗಳ ಡಿಕ್ಕಿ ಸಂಭವಿಸಿ 288 ಜನರು ಸಾವನ್ನಪ್ಪಿದರು ಮತ್ತು 1000ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇದು ಭಾರತದ ಅತಿದೊಡ್ಡ ರೈಲ್ವೆ ಅಪಘಾತಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ.

ಈ ಘಟನೆಯು ಭಾರತದ ರೈಲ್ವೆ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದಾಖಲೆಗಳನ್ನು ಗಮನಿಸಿದರೆ ಕಳೆದ 10 ವರ್ಷಗಳಲ್ಲಿ ಸರಿಸುಮಾರು 2.6 ಲಕ್ಷ ಜನರು ರೈಲು ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

NCRB ಭಾರತದಲ್ಲಿ ಅಪರಾಧ ಡೇಟಾವನ್ನು ಸಂಗ್ರಹಿಸುವ ಮತ್ತು ವಿಶ್ಲೇಷಿಸುವ ಜವಾಬ್ದಾರಿಯನ್ನು ಹೊಂದಿರುವ ಭಾರತೀಯ ಸರ್ಕಾರಿ ಸಂಸ್ಥೆಯಾಗಿದೆ.

ಗಮನಾರ್ಹ ಸಂಗತಿಯೆಂದರೆ, ಬಹುಪಾಲು ರೈಲ್ವೇ ಅಪಘಾತದ ಸಾವುಗಳು ಶುಕ್ರವಾರ ಒಡಿಶಾದಲ್ಲಿ ಸಂಭವಿಸಿದ ದುರಂತದಂತೆ ಸಂಭವಿಸಿಲ್ಲ, ಬದಲಾಗಿ ಜನ ರೈಲುಗಳಿಂದ ಕೆಳಗೆ ಬೀಳುವುದು, ಅಥವಾ ರೈಲುಗಳು ಜನರ ಮೇಲೆ ಹರಿಯುವುದರಿಂದ ಹೆಚ್ಚಿನ ಸಾವು ಸಂಭವಿಸಿದೆ ಎಂದು ದಾಖಲೆಗಳು ತೋರಿಸುತ್ತವೆ. 2017-21 ರ ನಡುವಿನ ರೈಲ್ವೆ ಅಪಘಾತದ ಸಾವುಗಳಲ್ಲಿ 70 ಪ್ರತಿಶತದಷ್ಟು ಸಾವುಗಳು ಇದೇ ರೀತಿ ಸಂಭವಿಸಿವೆ ಎಂದು ಅಂಕಿಅಂಶಗಳು ಹೇಳುತ್ತವೆ.

ಕಳೆದ 10 ವರ್ಷಗಳಲ್ಲಿ ರೈಲ್ವೆ ಅಪಘಾತಗಳ ಬಗ್ಗೆ ಡೇಟಾ ಏನು ಹೇಳುತ್ತದೆ?

ಎನ್‌ಸಿಆರ್‌ಬಿ ರೈಲ್ವೇ ಅಪಘಾತದ ಸಾವುಗಳನ್ನು ಐದು ವಿಭಾಗಗಳಲ್ಲಿ ವರ್ಗೀಕರಿಸುತ್ತದೆ. ಹಳಿತಪ್ಪುವಿಕೆಗಳು, ಘರ್ಷಣೆಗಳು, ಸ್ಫೋಟಗಳು/ಬೆಂಕಿಗಳು, ರೈಲುಗಳಿಂದ ಬೀಳುವ ಜನರು ಅಥವಾ ರೈಲುಗಳು ಹಳಿಗಳ ಮೇಲೆ ಜನರಿಗೆ ಡಿಕ್ಕಿ ಹೊಡೆಯುವುದು ಮತ್ತು ‘ಇತರ ಕಾರಣಗಳು’.

ಎನ್‌ಸಿಆರ್‌ಬಿಯ ವರದಿಯ ಪ್ರಕಾರ ”ಭಾರತದಲ್ಲಿ ರೈಲ್ವೆ ಅಪಘಾತಗಳಿಂದ 2011 ರಲ್ಲಿ ಸುಮಾರು 25,872 ಜನ ಪ್ರಾಣ ಕಳೆದುಕೊಂಡಿದ್ದಾರೆ. 2012 ರಲ್ಲಿ 27,000 ಮತ್ತು 2013 ರಲ್ಲಿ 27,765 ರೈಲು ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ, 2014 ರಲ್ಲಿ ಇದರ ಪ್ರಮಾಣ 25,000 ಜನರಿಗೆ ಇಳಿಯಿತು.

ಇದನ್ನೂ ಓದಿ: ಒಡಿಶಾ ರೈಲು ದುರಂತದ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು

ಈ ಗ್ರಾಫ್ 2017 ರಿಂದ ಕ್ರಮೇಣ ಕಡಿಮೆಯಾಯಿತು – ಆ ವರ್ಷ, ಅಂತಹ ಸಾವುಗಳು 24,000ಕ್ಕೆ ಇಳಿದವು ಮತ್ತು 2019 ರವರೆಗೆ (24,619 ಆಗಿದ್ದಾಗ) ಆ ಅಂಕಿಅಂಶದ ಸುತ್ತ ಸುಳಿದಾಡಿತು. ನಿರೀಕ್ಷೆಯಂತೆ, 2020 ರಲ್ಲಿ ಅತ್ಯಂತ ಕುಸಿತವು ಸಂಭವಿಸಿತು. ಏಕೆಂದರೆ COVID-19 ಸಾಂಕ್ರಾಮಿಕದಿಂದ ರೈಲುಗಳ ಓಡಾಟ ಸ್ಥಗಿತವಾಗಿದ್ದು ಕೂಡ ಇದಕ್ಕೆ ಮುಖ್ಯ ಕಾರಣವಾಯಿತು. ಹಾಗಾಗಿ 2020ರಲ್ಲಿ ರೈಲ್ವೆ ಅಪಘಾತದ ಸಾವುಗಳು ಸುಮಾರು 11,968 ಕ್ಕೆ ಇಳಿದವು. 2021ರಲ್ಲಿ 16,431 ಕ್ಕೆ ಏರಿತು ಅಂದರೆ 27 ಪ್ರತಿಶತದಷ್ಟು ಸಾವಿನ ಸಂಖ್ಯೆ ಹೆಚ್ಚಾಯಿತು. ಆದರೂ ಇದು ಸಾಂಕ್ರಾಮಿಕ ಪೂರ್ವದ ಮಟ್ಟಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿದೆ.

ಸಾವಿನ ಕಾರಣಗಳು

ಹೆಚ್ಚಿನ ಸಾವುಗಳು ಜನರು ರೈಲಿನಿಂದ ಬೀಳುವುದರಿಂದ ಅಥವಾ ಅವರ ಮೇಲೆ ರೈಲು ಹರಿದು ಸಾವುಗಳು ಸಂಭವಿಸಿವೆ ಎಂದು ಡೇಟಾ ತೋರಿಸುತ್ತದೆ. ಎನ್‌ಸಿಆರ್‌ಬಿ ಪ್ರಕಾರ, 2021ರಲ್ಲಿ ಸಂಭವಿಸಿದ ಒಟ್ಟು 16,431 ಜನರು ರೈಲ್ವೆ ಅಪಘಾತದಿಂದ ಸಾವುಗಳಾಗಿದ್ದರೆ, ಅದರಲ್ಲಿ 11,036 ಜನರು ರೈಲಿನಿಂದ ಬಿದ್ದು, ರೈಲು ಹರಿದು ಸಾವಿಗೀಡಾಗಿದ್ದಾರೆ. ಇತರೆ ಕಾರಣಗಳಿಂದ 5,287 ಜನ ಸಾವನ್ನಪ್ಪಿದ್ದಾರೆ. ‘ಇತರ’ ವರ್ಗ ಎಂಬುದರ ಬಗ್ಗೆ ಎನ್‌ಸಿಆರ್ ಬಿ ಸ್ಪಷ್ಟವಾಗಿ ತಿಳಿಸಿಲ್ಲ. ರೈಲು ಡಿಕ್ಕಿಗಳಿಂದ 86 ಮತ್ತು ಹಳಿ ತಪ್ಪಿದ್ದರಿಂದ 22 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 2021ರಲ್ಲಿ ಬೆಂಕಿ ಅಥವಾ ಸ್ಫೋಟಗಳಲ್ಲಿ ಯಾರೂ ಸಾವನ್ನಪ್ಪಿಲ್ಲ.

2017-21 ರ ನಡುವೆ ವರದಿಯಾದ 1 ಲಕ್ಷ ರೈಲ್ವೆ ಅಪಘಾತ ಸಾವುಗಳಲ್ಲಿ, 71,000 ಕ್ಕೂ ಹೆಚ್ಚು ಜನರು ರೈಲಿನಿಂದ ಬಿದ್ದು ಅಥವಾ ರೈಲು ಹರಿದು ಸಾವನ್ನಪ್ಪಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಂಕಿಅಂಶಗಳನ್ನು ಗಮನಿಸಿದರೆ ಮಹಾರಾಷ್ಟ್ರದಲ್ಲಿ ಹೆಚ್ಚು ಸಾವು ಈ ಅವಧಿಯಲ್ಲಿ ಸಂಭವಿಸಿವೆ. ಇದು 2017 ಮತ್ತು 2021 ರ ನಡುವೆ 17,000 ಇಂತಹ ಸಾವುನೋವುಗಳು ಸಂಭವಿಸಿವೆ ಎಂದು ವರದಿ ಮಾಡಿದೆ. ಅದರ ನಂತರ ಉತ್ತರ ಪ್ರದೇಶ (13,074) ಮತ್ತು ಪಶ್ಚಿಮ ಬಂಗಾಳ (11,967). ಹೋಲಿಸಿದರೆ, ಅದೇ ಅವಧಿಯಲ್ಲಿ ಒಡಿಶಾದ ಸಂಖ್ಯೆಗಳು ಅತ್ಯಂತ ಕಡಿಮೆ, ಕೇವಲ 1,845 ಸಾವುಗಳು ಸಂಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...