Homeಮುಖಪುಟಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

ಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

- Advertisement -
- Advertisement -

ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಮೂರು ರೈಲುಗಳ ಡಿಕ್ಕಿ ಸಂಭವಿಸಿ 288 ಜನರು ಸಾವನ್ನಪ್ಪಿದರು ಮತ್ತು 1000ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇದು ಭಾರತದ ಅತಿದೊಡ್ಡ ರೈಲ್ವೆ ಅಪಘಾತಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ.

ಈ ಘಟನೆಯು ಭಾರತದ ರೈಲ್ವೆ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದಾಖಲೆಗಳನ್ನು ಗಮನಿಸಿದರೆ ಕಳೆದ 10 ವರ್ಷಗಳಲ್ಲಿ ಸರಿಸುಮಾರು 2.6 ಲಕ್ಷ ಜನರು ರೈಲು ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

NCRB ಭಾರತದಲ್ಲಿ ಅಪರಾಧ ಡೇಟಾವನ್ನು ಸಂಗ್ರಹಿಸುವ ಮತ್ತು ವಿಶ್ಲೇಷಿಸುವ ಜವಾಬ್ದಾರಿಯನ್ನು ಹೊಂದಿರುವ ಭಾರತೀಯ ಸರ್ಕಾರಿ ಸಂಸ್ಥೆಯಾಗಿದೆ.

ಗಮನಾರ್ಹ ಸಂಗತಿಯೆಂದರೆ, ಬಹುಪಾಲು ರೈಲ್ವೇ ಅಪಘಾತದ ಸಾವುಗಳು ಶುಕ್ರವಾರ ಒಡಿಶಾದಲ್ಲಿ ಸಂಭವಿಸಿದ ದುರಂತದಂತೆ ಸಂಭವಿಸಿಲ್ಲ, ಬದಲಾಗಿ ಜನ ರೈಲುಗಳಿಂದ ಕೆಳಗೆ ಬೀಳುವುದು, ಅಥವಾ ರೈಲುಗಳು ಜನರ ಮೇಲೆ ಹರಿಯುವುದರಿಂದ ಹೆಚ್ಚಿನ ಸಾವು ಸಂಭವಿಸಿದೆ ಎಂದು ದಾಖಲೆಗಳು ತೋರಿಸುತ್ತವೆ. 2017-21 ರ ನಡುವಿನ ರೈಲ್ವೆ ಅಪಘಾತದ ಸಾವುಗಳಲ್ಲಿ 70 ಪ್ರತಿಶತದಷ್ಟು ಸಾವುಗಳು ಇದೇ ರೀತಿ ಸಂಭವಿಸಿವೆ ಎಂದು ಅಂಕಿಅಂಶಗಳು ಹೇಳುತ್ತವೆ.

ಕಳೆದ 10 ವರ್ಷಗಳಲ್ಲಿ ರೈಲ್ವೆ ಅಪಘಾತಗಳ ಬಗ್ಗೆ ಡೇಟಾ ಏನು ಹೇಳುತ್ತದೆ?

ಎನ್‌ಸಿಆರ್‌ಬಿ ರೈಲ್ವೇ ಅಪಘಾತದ ಸಾವುಗಳನ್ನು ಐದು ವಿಭಾಗಗಳಲ್ಲಿ ವರ್ಗೀಕರಿಸುತ್ತದೆ. ಹಳಿತಪ್ಪುವಿಕೆಗಳು, ಘರ್ಷಣೆಗಳು, ಸ್ಫೋಟಗಳು/ಬೆಂಕಿಗಳು, ರೈಲುಗಳಿಂದ ಬೀಳುವ ಜನರು ಅಥವಾ ರೈಲುಗಳು ಹಳಿಗಳ ಮೇಲೆ ಜನರಿಗೆ ಡಿಕ್ಕಿ ಹೊಡೆಯುವುದು ಮತ್ತು ‘ಇತರ ಕಾರಣಗಳು’.

ಎನ್‌ಸಿಆರ್‌ಬಿಯ ವರದಿಯ ಪ್ರಕಾರ ”ಭಾರತದಲ್ಲಿ ರೈಲ್ವೆ ಅಪಘಾತಗಳಿಂದ 2011 ರಲ್ಲಿ ಸುಮಾರು 25,872 ಜನ ಪ್ರಾಣ ಕಳೆದುಕೊಂಡಿದ್ದಾರೆ. 2012 ರಲ್ಲಿ 27,000 ಮತ್ತು 2013 ರಲ್ಲಿ 27,765 ರೈಲು ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ, 2014 ರಲ್ಲಿ ಇದರ ಪ್ರಮಾಣ 25,000 ಜನರಿಗೆ ಇಳಿಯಿತು.

ಇದನ್ನೂ ಓದಿ: ಒಡಿಶಾ ರೈಲು ದುರಂತದ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು

ಈ ಗ್ರಾಫ್ 2017 ರಿಂದ ಕ್ರಮೇಣ ಕಡಿಮೆಯಾಯಿತು – ಆ ವರ್ಷ, ಅಂತಹ ಸಾವುಗಳು 24,000ಕ್ಕೆ ಇಳಿದವು ಮತ್ತು 2019 ರವರೆಗೆ (24,619 ಆಗಿದ್ದಾಗ) ಆ ಅಂಕಿಅಂಶದ ಸುತ್ತ ಸುಳಿದಾಡಿತು. ನಿರೀಕ್ಷೆಯಂತೆ, 2020 ರಲ್ಲಿ ಅತ್ಯಂತ ಕುಸಿತವು ಸಂಭವಿಸಿತು. ಏಕೆಂದರೆ COVID-19 ಸಾಂಕ್ರಾಮಿಕದಿಂದ ರೈಲುಗಳ ಓಡಾಟ ಸ್ಥಗಿತವಾಗಿದ್ದು ಕೂಡ ಇದಕ್ಕೆ ಮುಖ್ಯ ಕಾರಣವಾಯಿತು. ಹಾಗಾಗಿ 2020ರಲ್ಲಿ ರೈಲ್ವೆ ಅಪಘಾತದ ಸಾವುಗಳು ಸುಮಾರು 11,968 ಕ್ಕೆ ಇಳಿದವು. 2021ರಲ್ಲಿ 16,431 ಕ್ಕೆ ಏರಿತು ಅಂದರೆ 27 ಪ್ರತಿಶತದಷ್ಟು ಸಾವಿನ ಸಂಖ್ಯೆ ಹೆಚ್ಚಾಯಿತು. ಆದರೂ ಇದು ಸಾಂಕ್ರಾಮಿಕ ಪೂರ್ವದ ಮಟ್ಟಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿದೆ.

ಸಾವಿನ ಕಾರಣಗಳು

ಹೆಚ್ಚಿನ ಸಾವುಗಳು ಜನರು ರೈಲಿನಿಂದ ಬೀಳುವುದರಿಂದ ಅಥವಾ ಅವರ ಮೇಲೆ ರೈಲು ಹರಿದು ಸಾವುಗಳು ಸಂಭವಿಸಿವೆ ಎಂದು ಡೇಟಾ ತೋರಿಸುತ್ತದೆ. ಎನ್‌ಸಿಆರ್‌ಬಿ ಪ್ರಕಾರ, 2021ರಲ್ಲಿ ಸಂಭವಿಸಿದ ಒಟ್ಟು 16,431 ಜನರು ರೈಲ್ವೆ ಅಪಘಾತದಿಂದ ಸಾವುಗಳಾಗಿದ್ದರೆ, ಅದರಲ್ಲಿ 11,036 ಜನರು ರೈಲಿನಿಂದ ಬಿದ್ದು, ರೈಲು ಹರಿದು ಸಾವಿಗೀಡಾಗಿದ್ದಾರೆ. ಇತರೆ ಕಾರಣಗಳಿಂದ 5,287 ಜನ ಸಾವನ್ನಪ್ಪಿದ್ದಾರೆ. ‘ಇತರ’ ವರ್ಗ ಎಂಬುದರ ಬಗ್ಗೆ ಎನ್‌ಸಿಆರ್ ಬಿ ಸ್ಪಷ್ಟವಾಗಿ ತಿಳಿಸಿಲ್ಲ. ರೈಲು ಡಿಕ್ಕಿಗಳಿಂದ 86 ಮತ್ತು ಹಳಿ ತಪ್ಪಿದ್ದರಿಂದ 22 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 2021ರಲ್ಲಿ ಬೆಂಕಿ ಅಥವಾ ಸ್ಫೋಟಗಳಲ್ಲಿ ಯಾರೂ ಸಾವನ್ನಪ್ಪಿಲ್ಲ.

2017-21 ರ ನಡುವೆ ವರದಿಯಾದ 1 ಲಕ್ಷ ರೈಲ್ವೆ ಅಪಘಾತ ಸಾವುಗಳಲ್ಲಿ, 71,000 ಕ್ಕೂ ಹೆಚ್ಚು ಜನರು ರೈಲಿನಿಂದ ಬಿದ್ದು ಅಥವಾ ರೈಲು ಹರಿದು ಸಾವನ್ನಪ್ಪಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಂಕಿಅಂಶಗಳನ್ನು ಗಮನಿಸಿದರೆ ಮಹಾರಾಷ್ಟ್ರದಲ್ಲಿ ಹೆಚ್ಚು ಸಾವು ಈ ಅವಧಿಯಲ್ಲಿ ಸಂಭವಿಸಿವೆ. ಇದು 2017 ಮತ್ತು 2021 ರ ನಡುವೆ 17,000 ಇಂತಹ ಸಾವುನೋವುಗಳು ಸಂಭವಿಸಿವೆ ಎಂದು ವರದಿ ಮಾಡಿದೆ. ಅದರ ನಂತರ ಉತ್ತರ ಪ್ರದೇಶ (13,074) ಮತ್ತು ಪಶ್ಚಿಮ ಬಂಗಾಳ (11,967). ಹೋಲಿಸಿದರೆ, ಅದೇ ಅವಧಿಯಲ್ಲಿ ಒಡಿಶಾದ ಸಂಖ್ಯೆಗಳು ಅತ್ಯಂತ ಕಡಿಮೆ, ಕೇವಲ 1,845 ಸಾವುಗಳು ಸಂಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...