Homeಮುಖಪುಟಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

ಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿ

- Advertisement -
- Advertisement -

ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಮೂರು ರೈಲುಗಳ ಡಿಕ್ಕಿ ಸಂಭವಿಸಿ 288 ಜನರು ಸಾವನ್ನಪ್ಪಿದರು ಮತ್ತು 1000ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇದು ಭಾರತದ ಅತಿದೊಡ್ಡ ರೈಲ್ವೆ ಅಪಘಾತಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ.

ಈ ಘಟನೆಯು ಭಾರತದ ರೈಲ್ವೆ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದಾಖಲೆಗಳನ್ನು ಗಮನಿಸಿದರೆ ಕಳೆದ 10 ವರ್ಷಗಳಲ್ಲಿ ಸರಿಸುಮಾರು 2.6 ಲಕ್ಷ ಜನರು ರೈಲು ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

NCRB ಭಾರತದಲ್ಲಿ ಅಪರಾಧ ಡೇಟಾವನ್ನು ಸಂಗ್ರಹಿಸುವ ಮತ್ತು ವಿಶ್ಲೇಷಿಸುವ ಜವಾಬ್ದಾರಿಯನ್ನು ಹೊಂದಿರುವ ಭಾರತೀಯ ಸರ್ಕಾರಿ ಸಂಸ್ಥೆಯಾಗಿದೆ.

ಗಮನಾರ್ಹ ಸಂಗತಿಯೆಂದರೆ, ಬಹುಪಾಲು ರೈಲ್ವೇ ಅಪಘಾತದ ಸಾವುಗಳು ಶುಕ್ರವಾರ ಒಡಿಶಾದಲ್ಲಿ ಸಂಭವಿಸಿದ ದುರಂತದಂತೆ ಸಂಭವಿಸಿಲ್ಲ, ಬದಲಾಗಿ ಜನ ರೈಲುಗಳಿಂದ ಕೆಳಗೆ ಬೀಳುವುದು, ಅಥವಾ ರೈಲುಗಳು ಜನರ ಮೇಲೆ ಹರಿಯುವುದರಿಂದ ಹೆಚ್ಚಿನ ಸಾವು ಸಂಭವಿಸಿದೆ ಎಂದು ದಾಖಲೆಗಳು ತೋರಿಸುತ್ತವೆ. 2017-21 ರ ನಡುವಿನ ರೈಲ್ವೆ ಅಪಘಾತದ ಸಾವುಗಳಲ್ಲಿ 70 ಪ್ರತಿಶತದಷ್ಟು ಸಾವುಗಳು ಇದೇ ರೀತಿ ಸಂಭವಿಸಿವೆ ಎಂದು ಅಂಕಿಅಂಶಗಳು ಹೇಳುತ್ತವೆ.

ಕಳೆದ 10 ವರ್ಷಗಳಲ್ಲಿ ರೈಲ್ವೆ ಅಪಘಾತಗಳ ಬಗ್ಗೆ ಡೇಟಾ ಏನು ಹೇಳುತ್ತದೆ?

ಎನ್‌ಸಿಆರ್‌ಬಿ ರೈಲ್ವೇ ಅಪಘಾತದ ಸಾವುಗಳನ್ನು ಐದು ವಿಭಾಗಗಳಲ್ಲಿ ವರ್ಗೀಕರಿಸುತ್ತದೆ. ಹಳಿತಪ್ಪುವಿಕೆಗಳು, ಘರ್ಷಣೆಗಳು, ಸ್ಫೋಟಗಳು/ಬೆಂಕಿಗಳು, ರೈಲುಗಳಿಂದ ಬೀಳುವ ಜನರು ಅಥವಾ ರೈಲುಗಳು ಹಳಿಗಳ ಮೇಲೆ ಜನರಿಗೆ ಡಿಕ್ಕಿ ಹೊಡೆಯುವುದು ಮತ್ತು ‘ಇತರ ಕಾರಣಗಳು’.

ಎನ್‌ಸಿಆರ್‌ಬಿಯ ವರದಿಯ ಪ್ರಕಾರ ”ಭಾರತದಲ್ಲಿ ರೈಲ್ವೆ ಅಪಘಾತಗಳಿಂದ 2011 ರಲ್ಲಿ ಸುಮಾರು 25,872 ಜನ ಪ್ರಾಣ ಕಳೆದುಕೊಂಡಿದ್ದಾರೆ. 2012 ರಲ್ಲಿ 27,000 ಮತ್ತು 2013 ರಲ್ಲಿ 27,765 ರೈಲು ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ, 2014 ರಲ್ಲಿ ಇದರ ಪ್ರಮಾಣ 25,000 ಜನರಿಗೆ ಇಳಿಯಿತು.

ಇದನ್ನೂ ಓದಿ: ಒಡಿಶಾ ರೈಲು ದುರಂತದ ತನಿಖೆಯನ್ನು ಸಿಬಿಐಗೆ ವಹಿಸಲು ರೈಲ್ವೆ ಮಂಡಳಿ ಶಿಫಾರಸು

ಈ ಗ್ರಾಫ್ 2017 ರಿಂದ ಕ್ರಮೇಣ ಕಡಿಮೆಯಾಯಿತು – ಆ ವರ್ಷ, ಅಂತಹ ಸಾವುಗಳು 24,000ಕ್ಕೆ ಇಳಿದವು ಮತ್ತು 2019 ರವರೆಗೆ (24,619 ಆಗಿದ್ದಾಗ) ಆ ಅಂಕಿಅಂಶದ ಸುತ್ತ ಸುಳಿದಾಡಿತು. ನಿರೀಕ್ಷೆಯಂತೆ, 2020 ರಲ್ಲಿ ಅತ್ಯಂತ ಕುಸಿತವು ಸಂಭವಿಸಿತು. ಏಕೆಂದರೆ COVID-19 ಸಾಂಕ್ರಾಮಿಕದಿಂದ ರೈಲುಗಳ ಓಡಾಟ ಸ್ಥಗಿತವಾಗಿದ್ದು ಕೂಡ ಇದಕ್ಕೆ ಮುಖ್ಯ ಕಾರಣವಾಯಿತು. ಹಾಗಾಗಿ 2020ರಲ್ಲಿ ರೈಲ್ವೆ ಅಪಘಾತದ ಸಾವುಗಳು ಸುಮಾರು 11,968 ಕ್ಕೆ ಇಳಿದವು. 2021ರಲ್ಲಿ 16,431 ಕ್ಕೆ ಏರಿತು ಅಂದರೆ 27 ಪ್ರತಿಶತದಷ್ಟು ಸಾವಿನ ಸಂಖ್ಯೆ ಹೆಚ್ಚಾಯಿತು. ಆದರೂ ಇದು ಸಾಂಕ್ರಾಮಿಕ ಪೂರ್ವದ ಮಟ್ಟಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿದೆ.

ಸಾವಿನ ಕಾರಣಗಳು

ಹೆಚ್ಚಿನ ಸಾವುಗಳು ಜನರು ರೈಲಿನಿಂದ ಬೀಳುವುದರಿಂದ ಅಥವಾ ಅವರ ಮೇಲೆ ರೈಲು ಹರಿದು ಸಾವುಗಳು ಸಂಭವಿಸಿವೆ ಎಂದು ಡೇಟಾ ತೋರಿಸುತ್ತದೆ. ಎನ್‌ಸಿಆರ್‌ಬಿ ಪ್ರಕಾರ, 2021ರಲ್ಲಿ ಸಂಭವಿಸಿದ ಒಟ್ಟು 16,431 ಜನರು ರೈಲ್ವೆ ಅಪಘಾತದಿಂದ ಸಾವುಗಳಾಗಿದ್ದರೆ, ಅದರಲ್ಲಿ 11,036 ಜನರು ರೈಲಿನಿಂದ ಬಿದ್ದು, ರೈಲು ಹರಿದು ಸಾವಿಗೀಡಾಗಿದ್ದಾರೆ. ಇತರೆ ಕಾರಣಗಳಿಂದ 5,287 ಜನ ಸಾವನ್ನಪ್ಪಿದ್ದಾರೆ. ‘ಇತರ’ ವರ್ಗ ಎಂಬುದರ ಬಗ್ಗೆ ಎನ್‌ಸಿಆರ್ ಬಿ ಸ್ಪಷ್ಟವಾಗಿ ತಿಳಿಸಿಲ್ಲ. ರೈಲು ಡಿಕ್ಕಿಗಳಿಂದ 86 ಮತ್ತು ಹಳಿ ತಪ್ಪಿದ್ದರಿಂದ 22 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 2021ರಲ್ಲಿ ಬೆಂಕಿ ಅಥವಾ ಸ್ಫೋಟಗಳಲ್ಲಿ ಯಾರೂ ಸಾವನ್ನಪ್ಪಿಲ್ಲ.

2017-21 ರ ನಡುವೆ ವರದಿಯಾದ 1 ಲಕ್ಷ ರೈಲ್ವೆ ಅಪಘಾತ ಸಾವುಗಳಲ್ಲಿ, 71,000 ಕ್ಕೂ ಹೆಚ್ಚು ಜನರು ರೈಲಿನಿಂದ ಬಿದ್ದು ಅಥವಾ ರೈಲು ಹರಿದು ಸಾವನ್ನಪ್ಪಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಂಕಿಅಂಶಗಳನ್ನು ಗಮನಿಸಿದರೆ ಮಹಾರಾಷ್ಟ್ರದಲ್ಲಿ ಹೆಚ್ಚು ಸಾವು ಈ ಅವಧಿಯಲ್ಲಿ ಸಂಭವಿಸಿವೆ. ಇದು 2017 ಮತ್ತು 2021 ರ ನಡುವೆ 17,000 ಇಂತಹ ಸಾವುನೋವುಗಳು ಸಂಭವಿಸಿವೆ ಎಂದು ವರದಿ ಮಾಡಿದೆ. ಅದರ ನಂತರ ಉತ್ತರ ಪ್ರದೇಶ (13,074) ಮತ್ತು ಪಶ್ಚಿಮ ಬಂಗಾಳ (11,967). ಹೋಲಿಸಿದರೆ, ಅದೇ ಅವಧಿಯಲ್ಲಿ ಒಡಿಶಾದ ಸಂಖ್ಯೆಗಳು ಅತ್ಯಂತ ಕಡಿಮೆ, ಕೇವಲ 1,845 ಸಾವುಗಳು ಸಂಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...