Homeಮುಖಪುಟಸಂಪೂರ್ಣ ಗೋಹತ್ಯೆ ನಿಷೇಧದ ಜೊತೆಗೆ 'ರಾಷ್ಟ್ರೀಯ ಮಾತೃ ಸ್ಥಾನಮಾನ ನೀಡಬೇಕು: ಕಾಂಗ್ರೆಸ್ ಸಂಸದ ಉಜ್ವಲ್ ರಮಣ್...

ಸಂಪೂರ್ಣ ಗೋಹತ್ಯೆ ನಿಷೇಧದ ಜೊತೆಗೆ ‘ರಾಷ್ಟ್ರೀಯ ಮಾತೃ ಸ್ಥಾನಮಾನ ನೀಡಬೇಕು: ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್

ಗೋವನ್ನು 'ರಾಷ್ಟ್ರಮಾತೆ ಅಥವಾ ರಾಜಮಾತೆ' ಎಂದು ಘೋಷಿಸಬೇಕು ಎಂದು ಒತ್ತಾಯ

- Advertisement -
- Advertisement -

“ಗೋವನ್ನು ರಾಷ್ಟ್ರಮಾತೆ ಅಥವಾ ರಾಜಮಾತೆ” ಎಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಮೂಲಕ ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಸಂಸತ್ತಿನಲ್ಲಿ ಹಲವರನ್ನು ಅಚ್ಚರಿಗೊಳಿಸಿದರು. ಕಲಾಪದ ಶೂನ್ಯ ವೇಳೆಯಲ್ಲಿ ಅವರು ಈ ವಿಷಯವನ್ನು ಪ್ರಸ್ತಾಪಿಸಿ, “ಭಾರತದ ಸ್ಥಳೀಯ ಗೋ ತಳಿಗಳಿಗೆ ತುರ್ತು ರಕ್ಷಣೆ ಮಾಡಬೇಕು. ಎಲ್ಲ ಜಾನುವಾರುಗಳ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು” ಎಂದು ಅವರು ಒತ್ತಾಯಿಸಿದರು.

“ದೇಸಿ ಗೋವುಗಳ ಜನಸಂಖ್ಯೆ ವೇಗವಾಗಿ ಕುಸಿಯುತ್ತಿದೆ, ಅವುಗಳ ಗುರುತು ಮತ್ತು ಘನತೆಯನ್ನು ರಕ್ಷಿಸಬೇಕು. ಗೋವು ರಾಷ್ಟ್ರೀಯ ಗುರುತು ಮತ್ತು ಹೆಮ್ಮೆಯ ಸಂಕೇತವಾಗಿದೆ. ನಮ್ಮ ಸ್ಥಳೀಯ ಗೋ ತಳಿಗಳನ್ನು ರಕ್ಷಿಸುವ ಮತ್ತು ಗೌರವಿಸುವ ತುರ್ತು ಅವಶ್ಯಕತೆಯಿದೆ” ಎಂದು ಅವರು ಹೇಳಿದರು.

“ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದರು ಈ ಮನ್ನಣೆಗಾಗಿ ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ. ಸರ್ಕಾರವು ಅವರ ಬೇಡಿಕೆಯನ್ನು ಪರಿಗಣಿಸಬೇಕು. ಗೋವಿಗೆ ರಾಷ್ಟ್ರಮಾತೆ ಅಥವಾ ರಾಜಮಾತೆ ಸ್ಥಾನಮಾನ ನೀಡಬೇಕು” ಎಂದು ಸಿಂಗ್ ಸಂಸತ್ತಿಗೆ ತಿಳಿಸಿದರು.

ಅವರ ಹೇಳಿಕೆಯು ಚರ್ಚೆಯನ್ನು ಸೃಷ್ಟಿಸಿತು. ಏಕೆಂದರೆ, ಈ ವಿಷಯವನ್ನು ಸಾಮಾನ್ಯವಾಗಿ ಬಿಜೆಪಿ ಮತ್ತು ಅದರ ಅಂಗಸಂಸ್ಥೆ ಗುಂಪುಗಳು ಎತ್ತುತ್ತವೆ. ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಬೇಕೆಂಬ ಬೇಡಿಕೆ ಹೆಚ್ಚಾಗಿ ಹಿಂದೂ ಧಾರ್ಮಿಕ ಮುಖಂಡರು ಮತ್ತು ಬಲಪಂಥೀಯ ಸಂಘಟನೆಗಳಿಂದ ಬಂದಿದೆ.

ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವ ಮೂಲಕ, ಪಕ್ಷವು ಯಾವುದೇ ಅಧಿಕೃತ ಹೇಳಿಕೆಯನ್ನು ನೀಡದಿದ್ದರೂ, ಕಾಂಗ್ರೆಸ್ ನಾಯಕರು ಸಹ ಈ ವಿಷಯದ ಬಗ್ಗೆ ಯೋಚಿಸುತ್ತಾರೆ ಎಂದು ಸಿಂಗ್ ಸೂಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...

14 ವರ್ಷದೊಳಗಿನ ಶಾಲಾ ಬಾಲಕಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸಿದ ಆಸ್ಟ್ರಿಯಾ

14 ವರ್ಷದೊಳಗಿನ ಹುಡುಗಿಯರು ಶಾಲೆಗಳಲ್ಲಿ ಶಿರಸ್ತ್ರಾಣ ಧರಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಕಾನೂನನ್ನು ಆಸ್ಟ್ರಿಯಾದ ಸಂಸತ್ತು ಅಂಗೀಕರಿಸಿದೆ. ಸಂಪ್ರದಾಯವಾದಿ ನೇತೃತ್ವದ ಸಮ್ಮಿಶ್ರ ಸರ್ಕಾರವು ಬೆಂಬಲಿಸಿದ ಈ ಕ್ರಮವು ತಕ್ಷಣವೇ ಟೀಕೆಗೆ ಗುರಿಯಾಗಿದೆ. ಇದು ತಾರತಮ್ಯ...

ಜುಬೀನ್ ಗರ್ಗ್ ‘ಹತ್ಯೆ’ ಪ್ರಕರಣ: ಅಸ್ಸಾಂ ಸಿಐಡಿಯಿಂದ 3,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

ಗುವಾಹಟಿ: ಖ್ಯಾತ ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಅಸ್ಸಾಂ ಸಿಐಡಿಯ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಗುವಾಹಟಿಯ ನ್ಯಾಯಾಲಯದಲ್ಲಿ 3,500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ ಅಸ್ಸಾಂ...

ನೆಹರು ಮೇಲೆ ಕೇಂದ್ರ ಸಚಿವರ ಆರೋಪ: ಸರ್ದಾರ್ ಪಟೇಲ್ ಮಗಳ ಡೈರಿಯನ್ನು ರಾಜನಾಥ್‌ಗೆ ನೀಡಿದ ಜೈರಾಮ್ ರಮೇಶ್

'ಬಾಬರಿ ಮಸೀದಿ ನಿರ್ಮಾಣಕ್ಕೆ ನೆಹರು ಸಾರ್ವಜನಿಕ ಹಣ ಬಳಸಿದ್ದರು' ಎಂದಿದ್ದ ರಕ್ಷಣಾ ಸಚಿವರು ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುತ್ರಿ ಮಣಿಬೆನ್ ಪಟೇಲ್ ಅವರ ಡೈರಿ ನಮೂದುಗಳನ್ನು...

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ ಗಳ ಅಮಾನತು 

ನವದೆಹಲಿ: ಇಂಡಿಗೋ ವಿಮಾನದ ಕಾರ್ಯಾಚರಣೆಯಲ್ಲಿ ಉಂಟಾದ ಪ್ರಮುಖ ಅಡಚಣೆಗಳಿಂದಾಗಿ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿ ಸಾವಿರಾರು ವಿಮಾನಗಳ ಹಾರಾಟ ರದ್ದತಿಗೆ ಕಾರಣವಾದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ನಾಲ್ವರು ವಿಮಾನ ಕಾರ್ಯಾಚರಣೆಯ...