Homeಅಂಕಣಗಳುನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

ನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

- Advertisement -
- Advertisement -

ರೈತ ಹೋರಾಟವನ್ನು ದಕ್ಷಿಣ ಭಾರತ ಮತ್ತು ಉತ್ತರ ಪ್ರದೇಶಗಳಿಗೆ ವಿಸ್ತರಿಸಲು ಭಾರತ್ ಕಿಸಾನ್ ಯೂನಿಯನ್ ತೀರ್ಮಾನಿಸಿರುವುದು ಸ್ವಾಗತಾರ್ಹ ಬೆಳವಣಿಗೆ. ಭಾರತದ ಕಿಸಾನ್ ಯೂನಿಯನ್ ಪರವಾಗಿ ಈ ಹೋರಾಟದ ವಿಸ್ತರಣೆ ಜವಬ್ದಾರಿಯನ್ನು ರಾಕೇಶ್ ಟಿಕಾಯತ್ ವಹಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ 20ನೇ ತಾರೀಕು ರೈತ ಮಹಾಪಂಚಾಯತ್‌ಅನ್ನು ಉದ್ಘಾಟಿಸಿದ ರಾಕೇಶ್ ಟಿಕಾಯತ್, ದೆಹಲಿಯಲ್ಲಿ ಚಳುವಳಿ ನಡೆಸುತ್ತಿರುವ ಭಾರತ್ ಕಿಸಾನ್ ಯೂನಿಯನ್ ಈ ಹೋರಾಟವನ್ನು ಮೋದಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವವರೆಗೂ, ಅನಿರ್ದಿಷ್ಟ ಕಾಲ ಮುಂದುವರೆಸುವುದಾಗಿ ಮಾಡಿದ್ದಾರೆ. ಅದರ ಜೊತೆ ಜೊತೆಗೇ ದಕ್ಷಿಣ ಭಾರತ ರಾಜ್ಯಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವಂತೆಯೇ ರೈತ ಮಹಾಪಂಚಾಯತ್‌ಗಳ ಸಮಾವೇಶಗಳನ್ನು ನಡೆಸುವ ಮೂಲಕ ರೈತರ ಈ ಹೋರಾಟಕ್ಕೆ ಬೆಂಬಲ ಪಡೆದುಕೊಳ್ಳುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಕರ್ನಾಟಕದ ಶಿವಮೊಗ್ಗದಲ್ಲಿ ಇದನ್ನು ಮೊದಲ ಬಾರಿಗೆ ನೆರವೇರಿಸಿದ್ದಾರೆ.

ಎರಡನೆಯ ರೈತ ಮಹಾಪಂಚಾಯತ್ ಹಾವೇರಿಯಲ್ಲಿ 21ರಂದು ನಡೆದಿದೆ. 22.3.21ರಂದು ಬೆಂಗಳೂರಿನಲ್ಲಿ ನಡೆಯುವ ವಿಧಾನ ಸೌಧ ಚಲೋ ಮೆರವಣಿಗೆಯಲ್ಲಿ ರೈತರು ಮತ್ತು ಇತರ ಸಾಮಾಜಿಕ ಸಂಸ್ಥೆಗಳು ಕೂಡಿಕೊಂಡು ರೈತ ಮಹಾಪಂಚಾಯತ್ ನಡೆಸುವುದಲ್ಲದೆ ಯಡಿಯೂರಪ್ಪ ಸರ್ಕಾರದ ವಿರುದ್ಧ ಮುತ್ತಿಗೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಶಿವಮೊಗ್ಗದಲ್ಲಿ ಅಶೋಕ್ ಅವರ ತಂಡ ತಾಲ್ಲೂಕು ತಾಲ್ಲೂಕಿಗೂ ಹೋಗಿ ರೈತ ಜಾಗೃತಿ ಕೆಲಸ ಮಾಡಿದ್ದರ ಫಲವಾಗಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ರೈತರು ಮತ್ತು ಇತರ ಹೋರಾಟ ಸಂಘಟನೆಗಳ ಕಾರ್ಯಕರ್ತರು ಶಿವಮೊಗ್ಗದಲ್ಲಿ ಭಾಗವಹಿಸಿ ರೈತ ಮಹಾಪಂಚಾಯತ್‌ಗೆ ಚಾಲನೆ ಕೊಟ್ಟಿದ್ದಾರೆ. ಅದೇ ರೀತಿ ಅತ್ಯಧಿಕ ಸಂಖ್ಯೆಯಲ್ಲಿ ಬೆಂಗಳೂರು ಮುತ್ತಿಗೆಗೆ ಕೂಡ ಜನ ಸೇರಿದ್ದು, ಅದು ಕೊನೆಗೆ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು ಕೃಷಿ ಸಚಿವ ಬಿ ಸಿ ಪಾಟಿಲ್, ಸಮಾವೇಶಕ್ಕೆ ಬಂದು ರೈತರ ಮನವಿಯನ್ನು ಸ್ವೀಕರಿಸಿ ಹೋಗಿದ್ದಾರೆ.

ಬೆಂಗಳೂರು ಕಾರ್ಯಕ್ರಮದ ನಂತರ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ರೈತ ಮಹಾಪಂಚಾಯತ್‌ಗಳು ಮುಂದುವರೆಲಿದೆ. ಪತ್ರಿಕಾ ಸಂದರ್ಶನದಲ್ಲಿ ರಾಕೇಶ್ ಟಿಕಾಯತ್ ಕೆಲವು ಸ್ವಾರಸ್ಯಕರ ವಿಚಾರಗಳನ್ನು ತಿಳಿಸಿದ್ದಾರೆ. ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳ ಕಾರ್ಯಕರ್ತರು ರೈತ ವಿರೋಧಿ ಕಾನೂನುಗಳನ್ನು ಸರ್ಕಾರ ಹಿಂಪಡೆಯುವವರೆಗೂ ದೆಹಲಿಯನ್ನು ಬಿಟ್ಟು ಹೊರಬೀಳುವುದಿಲ್ಲ ಎಂದಿದ್ದಾರೆ. ’ನಾವು ರೈತರು ಬೀಜ ಬಿತ್ತಿ 3 ರಿಂದ 4 ತಿಂಗಳು ಫಸಲಿಗೆ ಕಾಯುತ್ತೇವೆ, ಅದೇ ರೀತಿ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೆ ಕಾಯಲು ಸಿದ್ಧರಿದ್ದೇವೆ. ಅದಕ್ಕಾಗಿ ಹೋರಾಟವನ್ನು ಅನಿರ್ದಿಷ್ಟ ಕಾಲ ನಡೆಸಲು ತಯಾರಿ ಮಾಡಿಕೊಂಡಿದ್ದೇವೆ. ಪಂಜಾಬ್, ಹರ್ಯಾಣ, ರಾಜಸ್ಥಾನ ರಾಜ್ಯಗಳಿಗೆ ಸೀಮಿತವಾಗಿರುವ ರೈತ ಚಳುವಳಿಯನ್ನು ಭಾರತದ ಎಲ್ಲ ರಾಜ್ಯಗಳಿಗೂ ಹರಡಲು ಕ್ರಮಕೈಗೊಳ್ಳುತ್ತೇವೆ. ಈ ಕೆಲಸವನ್ನು ನಾವು ಈಗ ರೈತ ಮಹಾಪಂಚಾಯತ್‌ಗಳನ್ನು ನಡೆಸುವ ಮೂಲಕ ಕರ್ನಾಟಕದಿಂದ ಆರಂಭ ಮಾಡಲಿದ್ದೇವೆ’ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಸ್ಪಷ್ಟ ಪಡಿಸಿದ್ದಾರೆ.

ಕಾಲಕ್ರಮೇಣ ಭಾರತದ ಎಲ್ಲ ರಾಜ್ಯಗಳಲ್ಲೂ ಭಾರತ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ಆಯಾ ರಾಜ್ಯಗಳ ಎಲ್ಲ ಹೋರಾಟ ಸಮಿತಿಗಳೂ ಕೂಡಿಕೊಂಡು ಚಳುವಳಿಯನ್ನು ಬಲಗೊಳಿಸಬೇಕು. ರೈತರ ಬೇಡಿಕೆಗಳಿಗೆ ಆದ್ಯತೆ ನೀಡಿ, ಬಿಜೆಪಿ ಸರ್ಕಾರದಿಂದ ಸಾರ್ವಜನಿಕರು ಅನುಭವಿಸುತ್ತಿರುವ ಇತರ ಕಷ್ಟಕೋಟಲೆಗಳ ವಿರುದ್ಧವಾಗಿಯೂ ಧ್ವನಿ ಎತ್ತಬೇಕು.

ಮೋದಿ ಒಬ್ಬ ಚುನಾಯಿತ ಸರ್ವಾಧಿಕಾರಿಯಾವುವತ್ತ ನಡೆದಿದ್ದಾರೆ. ಸಾಮಾನ್ಯ ಜನ ದಿನನಿತ್ಯ ಅನುಭವಿಸುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ, ಮನೆಗಳಿಗೆ ಸರಬರಾಜು ಮಾಡಲಾಗುವ ಗ್ಯಾಸ್ ಸಿಲೆಂಡರ್‌ಗಳ ಬೆಲೆ ವಿಪರೀತವಾಗಿ ಹೆಚ್ಚುತ್ತಿರುವುದು, ಸರ್ಕಾರಿ ಉದ್ಯಮಗಳ ಷೇರುಗಳನ್ನು ಮಾರಾಟ ಮಾಡುವುದು, ಕಲ್ಲಿದ್ದಲು ಗಣಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರವೃತ್ತಿ, ಏರೋಡ್ರೋಮ್‌ಗಳು, ರೈಲ್ವೆ ಮಾರ್ಗಗಳು ಇವುಗಳ ಖಾಸಗೀಕರಣ, ರೈತರ ಜಮೀನುಗಳನ್ನು ಬಂಡವಾಳಶಾಹಿಗಳು ಕೊಂಡು ರೈತರನ್ನು ಬೀದಿಪಾಲು ಮಾಡುವ ಇಲ್ಲವೇ ಶ್ರೀಮಂತರ ಗುಲಾಮರನ್ನಾಗಿಸುವ ಹುನ್ನಾರ, ಬೆಂಬಲ ಬೆಲೆ ಘೋಷಿಸದೆ ರೈತರು ಬೆಳೆದ ಬೆಳೆಗಳನ್ನು ಸರ್ಕಾರವೇ ಕೊಳ್ಳುತ್ತಿದ್ದ ಪದ್ಧತಿಯನ್ನು ರದ್ದುಗೊಳಿಸಿಸಲು ಮಾಡಿರುವ ಪ್ರಯತ್ನ, ಖಾಸಗಿಯವರು ಅವುಗಳನ್ನು ಕೊಳ್ಳುವ ಸೌಲಭ್ಯ ಒದಗಿಸಿಕೊಟ್ಟಿರುವುದು ಈ ಎಲ್ಲವೂ ರೈತ ವಿರೋಧಿ ತೀರ್ಮಾನಗಳೇ ಆಗಿವೆ. ಇವುಗಳ ವಿರುದ್ಧ ಒಂದು ಶಾಂತಿಯುತ ಹೋರಾಟ ನಡೆಸಿ ಜೈಲ್‌ಭರೋ ಕಾರ್ಯಾಚರಣೆಗೆ ಜನರನ್ನು ಅಣಿಗೊಳಿಸುವ ಕೆಲಸ ಜರೂರಾಗಿ ಆಗಬೇಕು.

ಬಿಜೆಪಿ ಸರ್ಕಾರದ ಈ ಜನವಿರೋಧಿ ನಿರ್ಧಾರಗಳು ರೈತ ಸಮೂಹವನ್ನೇ ಮಾತ್ರವಲ್ಲದೆ ಎಲ್ಲ ಸ್ಥರಗಳ ಜನರನ್ನೂ ಕಾಡುತ್ತಿರುವುದರಿಂದ ಜನಸಮೂಹ ದೊಡ್ಡ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಕೂಡಿಕೊಳ್ಳುತ್ತಾರೆಂಬುದು ನನ್ನ ಅಭಿಪ್ರಾಯ. ಅಲ್ಲದೆ ಇಂತಹ ಕಾರ್ಯಕ್ರಮ ಕೈಗೊಳ್ಳುವುದರಿಂದ ಸರ್ಕಾರ ತನ್ನ ಜನವಿರೋಧಿ, ರೈತ ವಿರೋಧಿ ನೀತಿಯನ್ನು ಕೈಬಿಡಬೇಕು ಇಲ್ಲವೇ ಮೋದಿ ರಾಜೀನಾಮೆ ಕೊಟ್ಟು ಹೋಗಬೇಕು ಎಂಬ ಪರಿಸ್ಥಿತಿಯನ್ನು ಉಂಟು ಮಾಡಲು ಸಹಕರಿಸುತ್ತದೆ. ಈ ಜೈಲ್‌ಭರೋ ಕಾರ್ಯಕ್ರಮ ಇದನ್ನು ಇನ್ನಷ್ಟು ತೀವ್ರಗೊಳಿಸುವುದರಲ್ಲಿ ಅನುಮಾನವಿಲ್ಲ.

ಭಾರತದ ಎಲ್ಲ ರಾಜ್ಯಗಳಲ್ಲೂ ಈ ಜೈಲ್‌ಭರೋ ಕಾರ್ಯಕ್ರಮ ಯಶಸ್ವಿಯಾಗಿ ನಡೆದರೆ, ಮುಂದೆಂದೂ ಈ ಜನವಿರೋಧಿ, ರೈತ ವಿರೋಧಿ ರಾಜಕೀಯ ಪಕ್ಷಗಳು ಅವುಗಳ ರಾಜಕೀಯ ನಾಯಕರು ಇಂತಹ ದುಸ್ಸಾಹಸಕ್ಕೆ ಎಂದಿಗೂ ಕೈ ಹಾಕಲಾರರು ಎಂಬ ವಿಶ್ವಾಸ ನನಗಿದೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...