Homeಅಂಕಣಗಳುನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

ನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

- Advertisement -
- Advertisement -

ರೈತ ಹೋರಾಟವನ್ನು ದಕ್ಷಿಣ ಭಾರತ ಮತ್ತು ಉತ್ತರ ಪ್ರದೇಶಗಳಿಗೆ ವಿಸ್ತರಿಸಲು ಭಾರತ್ ಕಿಸಾನ್ ಯೂನಿಯನ್ ತೀರ್ಮಾನಿಸಿರುವುದು ಸ್ವಾಗತಾರ್ಹ ಬೆಳವಣಿಗೆ. ಭಾರತದ ಕಿಸಾನ್ ಯೂನಿಯನ್ ಪರವಾಗಿ ಈ ಹೋರಾಟದ ವಿಸ್ತರಣೆ ಜವಬ್ದಾರಿಯನ್ನು ರಾಕೇಶ್ ಟಿಕಾಯತ್ ವಹಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ 20ನೇ ತಾರೀಕು ರೈತ ಮಹಾಪಂಚಾಯತ್‌ಅನ್ನು ಉದ್ಘಾಟಿಸಿದ ರಾಕೇಶ್ ಟಿಕಾಯತ್, ದೆಹಲಿಯಲ್ಲಿ ಚಳುವಳಿ ನಡೆಸುತ್ತಿರುವ ಭಾರತ್ ಕಿಸಾನ್ ಯೂನಿಯನ್ ಈ ಹೋರಾಟವನ್ನು ಮೋದಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವವರೆಗೂ, ಅನಿರ್ದಿಷ್ಟ ಕಾಲ ಮುಂದುವರೆಸುವುದಾಗಿ ಮಾಡಿದ್ದಾರೆ. ಅದರ ಜೊತೆ ಜೊತೆಗೇ ದಕ್ಷಿಣ ಭಾರತ ರಾಜ್ಯಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವಂತೆಯೇ ರೈತ ಮಹಾಪಂಚಾಯತ್‌ಗಳ ಸಮಾವೇಶಗಳನ್ನು ನಡೆಸುವ ಮೂಲಕ ರೈತರ ಈ ಹೋರಾಟಕ್ಕೆ ಬೆಂಬಲ ಪಡೆದುಕೊಳ್ಳುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಕರ್ನಾಟಕದ ಶಿವಮೊಗ್ಗದಲ್ಲಿ ಇದನ್ನು ಮೊದಲ ಬಾರಿಗೆ ನೆರವೇರಿಸಿದ್ದಾರೆ.

ಎರಡನೆಯ ರೈತ ಮಹಾಪಂಚಾಯತ್ ಹಾವೇರಿಯಲ್ಲಿ 21ರಂದು ನಡೆದಿದೆ. 22.3.21ರಂದು ಬೆಂಗಳೂರಿನಲ್ಲಿ ನಡೆಯುವ ವಿಧಾನ ಸೌಧ ಚಲೋ ಮೆರವಣಿಗೆಯಲ್ಲಿ ರೈತರು ಮತ್ತು ಇತರ ಸಾಮಾಜಿಕ ಸಂಸ್ಥೆಗಳು ಕೂಡಿಕೊಂಡು ರೈತ ಮಹಾಪಂಚಾಯತ್ ನಡೆಸುವುದಲ್ಲದೆ ಯಡಿಯೂರಪ್ಪ ಸರ್ಕಾರದ ವಿರುದ್ಧ ಮುತ್ತಿಗೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಶಿವಮೊಗ್ಗದಲ್ಲಿ ಅಶೋಕ್ ಅವರ ತಂಡ ತಾಲ್ಲೂಕು ತಾಲ್ಲೂಕಿಗೂ ಹೋಗಿ ರೈತ ಜಾಗೃತಿ ಕೆಲಸ ಮಾಡಿದ್ದರ ಫಲವಾಗಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ರೈತರು ಮತ್ತು ಇತರ ಹೋರಾಟ ಸಂಘಟನೆಗಳ ಕಾರ್ಯಕರ್ತರು ಶಿವಮೊಗ್ಗದಲ್ಲಿ ಭಾಗವಹಿಸಿ ರೈತ ಮಹಾಪಂಚಾಯತ್‌ಗೆ ಚಾಲನೆ ಕೊಟ್ಟಿದ್ದಾರೆ. ಅದೇ ರೀತಿ ಅತ್ಯಧಿಕ ಸಂಖ್ಯೆಯಲ್ಲಿ ಬೆಂಗಳೂರು ಮುತ್ತಿಗೆಗೆ ಕೂಡ ಜನ ಸೇರಿದ್ದು, ಅದು ಕೊನೆಗೆ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು ಕೃಷಿ ಸಚಿವ ಬಿ ಸಿ ಪಾಟಿಲ್, ಸಮಾವೇಶಕ್ಕೆ ಬಂದು ರೈತರ ಮನವಿಯನ್ನು ಸ್ವೀಕರಿಸಿ ಹೋಗಿದ್ದಾರೆ.

ಬೆಂಗಳೂರು ಕಾರ್ಯಕ್ರಮದ ನಂತರ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ರೈತ ಮಹಾಪಂಚಾಯತ್‌ಗಳು ಮುಂದುವರೆಲಿದೆ. ಪತ್ರಿಕಾ ಸಂದರ್ಶನದಲ್ಲಿ ರಾಕೇಶ್ ಟಿಕಾಯತ್ ಕೆಲವು ಸ್ವಾರಸ್ಯಕರ ವಿಚಾರಗಳನ್ನು ತಿಳಿಸಿದ್ದಾರೆ. ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳ ಕಾರ್ಯಕರ್ತರು ರೈತ ವಿರೋಧಿ ಕಾನೂನುಗಳನ್ನು ಸರ್ಕಾರ ಹಿಂಪಡೆಯುವವರೆಗೂ ದೆಹಲಿಯನ್ನು ಬಿಟ್ಟು ಹೊರಬೀಳುವುದಿಲ್ಲ ಎಂದಿದ್ದಾರೆ. ’ನಾವು ರೈತರು ಬೀಜ ಬಿತ್ತಿ 3 ರಿಂದ 4 ತಿಂಗಳು ಫಸಲಿಗೆ ಕಾಯುತ್ತೇವೆ, ಅದೇ ರೀತಿ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೆ ಕಾಯಲು ಸಿದ್ಧರಿದ್ದೇವೆ. ಅದಕ್ಕಾಗಿ ಹೋರಾಟವನ್ನು ಅನಿರ್ದಿಷ್ಟ ಕಾಲ ನಡೆಸಲು ತಯಾರಿ ಮಾಡಿಕೊಂಡಿದ್ದೇವೆ. ಪಂಜಾಬ್, ಹರ್ಯಾಣ, ರಾಜಸ್ಥಾನ ರಾಜ್ಯಗಳಿಗೆ ಸೀಮಿತವಾಗಿರುವ ರೈತ ಚಳುವಳಿಯನ್ನು ಭಾರತದ ಎಲ್ಲ ರಾಜ್ಯಗಳಿಗೂ ಹರಡಲು ಕ್ರಮಕೈಗೊಳ್ಳುತ್ತೇವೆ. ಈ ಕೆಲಸವನ್ನು ನಾವು ಈಗ ರೈತ ಮಹಾಪಂಚಾಯತ್‌ಗಳನ್ನು ನಡೆಸುವ ಮೂಲಕ ಕರ್ನಾಟಕದಿಂದ ಆರಂಭ ಮಾಡಲಿದ್ದೇವೆ’ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಸ್ಪಷ್ಟ ಪಡಿಸಿದ್ದಾರೆ.

ಕಾಲಕ್ರಮೇಣ ಭಾರತದ ಎಲ್ಲ ರಾಜ್ಯಗಳಲ್ಲೂ ಭಾರತ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ಆಯಾ ರಾಜ್ಯಗಳ ಎಲ್ಲ ಹೋರಾಟ ಸಮಿತಿಗಳೂ ಕೂಡಿಕೊಂಡು ಚಳುವಳಿಯನ್ನು ಬಲಗೊಳಿಸಬೇಕು. ರೈತರ ಬೇಡಿಕೆಗಳಿಗೆ ಆದ್ಯತೆ ನೀಡಿ, ಬಿಜೆಪಿ ಸರ್ಕಾರದಿಂದ ಸಾರ್ವಜನಿಕರು ಅನುಭವಿಸುತ್ತಿರುವ ಇತರ ಕಷ್ಟಕೋಟಲೆಗಳ ವಿರುದ್ಧವಾಗಿಯೂ ಧ್ವನಿ ಎತ್ತಬೇಕು.

ಮೋದಿ ಒಬ್ಬ ಚುನಾಯಿತ ಸರ್ವಾಧಿಕಾರಿಯಾವುವತ್ತ ನಡೆದಿದ್ದಾರೆ. ಸಾಮಾನ್ಯ ಜನ ದಿನನಿತ್ಯ ಅನುಭವಿಸುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ, ಮನೆಗಳಿಗೆ ಸರಬರಾಜು ಮಾಡಲಾಗುವ ಗ್ಯಾಸ್ ಸಿಲೆಂಡರ್‌ಗಳ ಬೆಲೆ ವಿಪರೀತವಾಗಿ ಹೆಚ್ಚುತ್ತಿರುವುದು, ಸರ್ಕಾರಿ ಉದ್ಯಮಗಳ ಷೇರುಗಳನ್ನು ಮಾರಾಟ ಮಾಡುವುದು, ಕಲ್ಲಿದ್ದಲು ಗಣಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರವೃತ್ತಿ, ಏರೋಡ್ರೋಮ್‌ಗಳು, ರೈಲ್ವೆ ಮಾರ್ಗಗಳು ಇವುಗಳ ಖಾಸಗೀಕರಣ, ರೈತರ ಜಮೀನುಗಳನ್ನು ಬಂಡವಾಳಶಾಹಿಗಳು ಕೊಂಡು ರೈತರನ್ನು ಬೀದಿಪಾಲು ಮಾಡುವ ಇಲ್ಲವೇ ಶ್ರೀಮಂತರ ಗುಲಾಮರನ್ನಾಗಿಸುವ ಹುನ್ನಾರ, ಬೆಂಬಲ ಬೆಲೆ ಘೋಷಿಸದೆ ರೈತರು ಬೆಳೆದ ಬೆಳೆಗಳನ್ನು ಸರ್ಕಾರವೇ ಕೊಳ್ಳುತ್ತಿದ್ದ ಪದ್ಧತಿಯನ್ನು ರದ್ದುಗೊಳಿಸಿಸಲು ಮಾಡಿರುವ ಪ್ರಯತ್ನ, ಖಾಸಗಿಯವರು ಅವುಗಳನ್ನು ಕೊಳ್ಳುವ ಸೌಲಭ್ಯ ಒದಗಿಸಿಕೊಟ್ಟಿರುವುದು ಈ ಎಲ್ಲವೂ ರೈತ ವಿರೋಧಿ ತೀರ್ಮಾನಗಳೇ ಆಗಿವೆ. ಇವುಗಳ ವಿರುದ್ಧ ಒಂದು ಶಾಂತಿಯುತ ಹೋರಾಟ ನಡೆಸಿ ಜೈಲ್‌ಭರೋ ಕಾರ್ಯಾಚರಣೆಗೆ ಜನರನ್ನು ಅಣಿಗೊಳಿಸುವ ಕೆಲಸ ಜರೂರಾಗಿ ಆಗಬೇಕು.

ಬಿಜೆಪಿ ಸರ್ಕಾರದ ಈ ಜನವಿರೋಧಿ ನಿರ್ಧಾರಗಳು ರೈತ ಸಮೂಹವನ್ನೇ ಮಾತ್ರವಲ್ಲದೆ ಎಲ್ಲ ಸ್ಥರಗಳ ಜನರನ್ನೂ ಕಾಡುತ್ತಿರುವುದರಿಂದ ಜನಸಮೂಹ ದೊಡ್ಡ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಕೂಡಿಕೊಳ್ಳುತ್ತಾರೆಂಬುದು ನನ್ನ ಅಭಿಪ್ರಾಯ. ಅಲ್ಲದೆ ಇಂತಹ ಕಾರ್ಯಕ್ರಮ ಕೈಗೊಳ್ಳುವುದರಿಂದ ಸರ್ಕಾರ ತನ್ನ ಜನವಿರೋಧಿ, ರೈತ ವಿರೋಧಿ ನೀತಿಯನ್ನು ಕೈಬಿಡಬೇಕು ಇಲ್ಲವೇ ಮೋದಿ ರಾಜೀನಾಮೆ ಕೊಟ್ಟು ಹೋಗಬೇಕು ಎಂಬ ಪರಿಸ್ಥಿತಿಯನ್ನು ಉಂಟು ಮಾಡಲು ಸಹಕರಿಸುತ್ತದೆ. ಈ ಜೈಲ್‌ಭರೋ ಕಾರ್ಯಕ್ರಮ ಇದನ್ನು ಇನ್ನಷ್ಟು ತೀವ್ರಗೊಳಿಸುವುದರಲ್ಲಿ ಅನುಮಾನವಿಲ್ಲ.

ಭಾರತದ ಎಲ್ಲ ರಾಜ್ಯಗಳಲ್ಲೂ ಈ ಜೈಲ್‌ಭರೋ ಕಾರ್ಯಕ್ರಮ ಯಶಸ್ವಿಯಾಗಿ ನಡೆದರೆ, ಮುಂದೆಂದೂ ಈ ಜನವಿರೋಧಿ, ರೈತ ವಿರೋಧಿ ರಾಜಕೀಯ ಪಕ್ಷಗಳು ಅವುಗಳ ರಾಜಕೀಯ ನಾಯಕರು ಇಂತಹ ದುಸ್ಸಾಹಸಕ್ಕೆ ಎಂದಿಗೂ ಕೈ ಹಾಕಲಾರರು ಎಂಬ ವಿಶ್ವಾಸ ನನಗಿದೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...