Homeಅಂಕಣಗಳುನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

ನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

- Advertisement -
- Advertisement -

ರೈತ ಹೋರಾಟವನ್ನು ದಕ್ಷಿಣ ಭಾರತ ಮತ್ತು ಉತ್ತರ ಪ್ರದೇಶಗಳಿಗೆ ವಿಸ್ತರಿಸಲು ಭಾರತ್ ಕಿಸಾನ್ ಯೂನಿಯನ್ ತೀರ್ಮಾನಿಸಿರುವುದು ಸ್ವಾಗತಾರ್ಹ ಬೆಳವಣಿಗೆ. ಭಾರತದ ಕಿಸಾನ್ ಯೂನಿಯನ್ ಪರವಾಗಿ ಈ ಹೋರಾಟದ ವಿಸ್ತರಣೆ ಜವಬ್ದಾರಿಯನ್ನು ರಾಕೇಶ್ ಟಿಕಾಯತ್ ವಹಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ 20ನೇ ತಾರೀಕು ರೈತ ಮಹಾಪಂಚಾಯತ್‌ಅನ್ನು ಉದ್ಘಾಟಿಸಿದ ರಾಕೇಶ್ ಟಿಕಾಯತ್, ದೆಹಲಿಯಲ್ಲಿ ಚಳುವಳಿ ನಡೆಸುತ್ತಿರುವ ಭಾರತ್ ಕಿಸಾನ್ ಯೂನಿಯನ್ ಈ ಹೋರಾಟವನ್ನು ಮೋದಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವವರೆಗೂ, ಅನಿರ್ದಿಷ್ಟ ಕಾಲ ಮುಂದುವರೆಸುವುದಾಗಿ ಮಾಡಿದ್ದಾರೆ. ಅದರ ಜೊತೆ ಜೊತೆಗೇ ದಕ್ಷಿಣ ಭಾರತ ರಾಜ್ಯಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವಂತೆಯೇ ರೈತ ಮಹಾಪಂಚಾಯತ್‌ಗಳ ಸಮಾವೇಶಗಳನ್ನು ನಡೆಸುವ ಮೂಲಕ ರೈತರ ಈ ಹೋರಾಟಕ್ಕೆ ಬೆಂಬಲ ಪಡೆದುಕೊಳ್ಳುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಕರ್ನಾಟಕದ ಶಿವಮೊಗ್ಗದಲ್ಲಿ ಇದನ್ನು ಮೊದಲ ಬಾರಿಗೆ ನೆರವೇರಿಸಿದ್ದಾರೆ.

ಎರಡನೆಯ ರೈತ ಮಹಾಪಂಚಾಯತ್ ಹಾವೇರಿಯಲ್ಲಿ 21ರಂದು ನಡೆದಿದೆ. 22.3.21ರಂದು ಬೆಂಗಳೂರಿನಲ್ಲಿ ನಡೆಯುವ ವಿಧಾನ ಸೌಧ ಚಲೋ ಮೆರವಣಿಗೆಯಲ್ಲಿ ರೈತರು ಮತ್ತು ಇತರ ಸಾಮಾಜಿಕ ಸಂಸ್ಥೆಗಳು ಕೂಡಿಕೊಂಡು ರೈತ ಮಹಾಪಂಚಾಯತ್ ನಡೆಸುವುದಲ್ಲದೆ ಯಡಿಯೂರಪ್ಪ ಸರ್ಕಾರದ ವಿರುದ್ಧ ಮುತ್ತಿಗೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಶಿವಮೊಗ್ಗದಲ್ಲಿ ಅಶೋಕ್ ಅವರ ತಂಡ ತಾಲ್ಲೂಕು ತಾಲ್ಲೂಕಿಗೂ ಹೋಗಿ ರೈತ ಜಾಗೃತಿ ಕೆಲಸ ಮಾಡಿದ್ದರ ಫಲವಾಗಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ರೈತರು ಮತ್ತು ಇತರ ಹೋರಾಟ ಸಂಘಟನೆಗಳ ಕಾರ್ಯಕರ್ತರು ಶಿವಮೊಗ್ಗದಲ್ಲಿ ಭಾಗವಹಿಸಿ ರೈತ ಮಹಾಪಂಚಾಯತ್‌ಗೆ ಚಾಲನೆ ಕೊಟ್ಟಿದ್ದಾರೆ. ಅದೇ ರೀತಿ ಅತ್ಯಧಿಕ ಸಂಖ್ಯೆಯಲ್ಲಿ ಬೆಂಗಳೂರು ಮುತ್ತಿಗೆಗೆ ಕೂಡ ಜನ ಸೇರಿದ್ದು, ಅದು ಕೊನೆಗೆ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು ಕೃಷಿ ಸಚಿವ ಬಿ ಸಿ ಪಾಟಿಲ್, ಸಮಾವೇಶಕ್ಕೆ ಬಂದು ರೈತರ ಮನವಿಯನ್ನು ಸ್ವೀಕರಿಸಿ ಹೋಗಿದ್ದಾರೆ.

ಬೆಂಗಳೂರು ಕಾರ್ಯಕ್ರಮದ ನಂತರ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ರೈತ ಮಹಾಪಂಚಾಯತ್‌ಗಳು ಮುಂದುವರೆಲಿದೆ. ಪತ್ರಿಕಾ ಸಂದರ್ಶನದಲ್ಲಿ ರಾಕೇಶ್ ಟಿಕಾಯತ್ ಕೆಲವು ಸ್ವಾರಸ್ಯಕರ ವಿಚಾರಗಳನ್ನು ತಿಳಿಸಿದ್ದಾರೆ. ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳ ಕಾರ್ಯಕರ್ತರು ರೈತ ವಿರೋಧಿ ಕಾನೂನುಗಳನ್ನು ಸರ್ಕಾರ ಹಿಂಪಡೆಯುವವರೆಗೂ ದೆಹಲಿಯನ್ನು ಬಿಟ್ಟು ಹೊರಬೀಳುವುದಿಲ್ಲ ಎಂದಿದ್ದಾರೆ. ’ನಾವು ರೈತರು ಬೀಜ ಬಿತ್ತಿ 3 ರಿಂದ 4 ತಿಂಗಳು ಫಸಲಿಗೆ ಕಾಯುತ್ತೇವೆ, ಅದೇ ರೀತಿ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೆ ಕಾಯಲು ಸಿದ್ಧರಿದ್ದೇವೆ. ಅದಕ್ಕಾಗಿ ಹೋರಾಟವನ್ನು ಅನಿರ್ದಿಷ್ಟ ಕಾಲ ನಡೆಸಲು ತಯಾರಿ ಮಾಡಿಕೊಂಡಿದ್ದೇವೆ. ಪಂಜಾಬ್, ಹರ್ಯಾಣ, ರಾಜಸ್ಥಾನ ರಾಜ್ಯಗಳಿಗೆ ಸೀಮಿತವಾಗಿರುವ ರೈತ ಚಳುವಳಿಯನ್ನು ಭಾರತದ ಎಲ್ಲ ರಾಜ್ಯಗಳಿಗೂ ಹರಡಲು ಕ್ರಮಕೈಗೊಳ್ಳುತ್ತೇವೆ. ಈ ಕೆಲಸವನ್ನು ನಾವು ಈಗ ರೈತ ಮಹಾಪಂಚಾಯತ್‌ಗಳನ್ನು ನಡೆಸುವ ಮೂಲಕ ಕರ್ನಾಟಕದಿಂದ ಆರಂಭ ಮಾಡಲಿದ್ದೇವೆ’ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಸ್ಪಷ್ಟ ಪಡಿಸಿದ್ದಾರೆ.

ಕಾಲಕ್ರಮೇಣ ಭಾರತದ ಎಲ್ಲ ರಾಜ್ಯಗಳಲ್ಲೂ ಭಾರತ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ಆಯಾ ರಾಜ್ಯಗಳ ಎಲ್ಲ ಹೋರಾಟ ಸಮಿತಿಗಳೂ ಕೂಡಿಕೊಂಡು ಚಳುವಳಿಯನ್ನು ಬಲಗೊಳಿಸಬೇಕು. ರೈತರ ಬೇಡಿಕೆಗಳಿಗೆ ಆದ್ಯತೆ ನೀಡಿ, ಬಿಜೆಪಿ ಸರ್ಕಾರದಿಂದ ಸಾರ್ವಜನಿಕರು ಅನುಭವಿಸುತ್ತಿರುವ ಇತರ ಕಷ್ಟಕೋಟಲೆಗಳ ವಿರುದ್ಧವಾಗಿಯೂ ಧ್ವನಿ ಎತ್ತಬೇಕು.

ಮೋದಿ ಒಬ್ಬ ಚುನಾಯಿತ ಸರ್ವಾಧಿಕಾರಿಯಾವುವತ್ತ ನಡೆದಿದ್ದಾರೆ. ಸಾಮಾನ್ಯ ಜನ ದಿನನಿತ್ಯ ಅನುಭವಿಸುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ, ಮನೆಗಳಿಗೆ ಸರಬರಾಜು ಮಾಡಲಾಗುವ ಗ್ಯಾಸ್ ಸಿಲೆಂಡರ್‌ಗಳ ಬೆಲೆ ವಿಪರೀತವಾಗಿ ಹೆಚ್ಚುತ್ತಿರುವುದು, ಸರ್ಕಾರಿ ಉದ್ಯಮಗಳ ಷೇರುಗಳನ್ನು ಮಾರಾಟ ಮಾಡುವುದು, ಕಲ್ಲಿದ್ದಲು ಗಣಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರವೃತ್ತಿ, ಏರೋಡ್ರೋಮ್‌ಗಳು, ರೈಲ್ವೆ ಮಾರ್ಗಗಳು ಇವುಗಳ ಖಾಸಗೀಕರಣ, ರೈತರ ಜಮೀನುಗಳನ್ನು ಬಂಡವಾಳಶಾಹಿಗಳು ಕೊಂಡು ರೈತರನ್ನು ಬೀದಿಪಾಲು ಮಾಡುವ ಇಲ್ಲವೇ ಶ್ರೀಮಂತರ ಗುಲಾಮರನ್ನಾಗಿಸುವ ಹುನ್ನಾರ, ಬೆಂಬಲ ಬೆಲೆ ಘೋಷಿಸದೆ ರೈತರು ಬೆಳೆದ ಬೆಳೆಗಳನ್ನು ಸರ್ಕಾರವೇ ಕೊಳ್ಳುತ್ತಿದ್ದ ಪದ್ಧತಿಯನ್ನು ರದ್ದುಗೊಳಿಸಿಸಲು ಮಾಡಿರುವ ಪ್ರಯತ್ನ, ಖಾಸಗಿಯವರು ಅವುಗಳನ್ನು ಕೊಳ್ಳುವ ಸೌಲಭ್ಯ ಒದಗಿಸಿಕೊಟ್ಟಿರುವುದು ಈ ಎಲ್ಲವೂ ರೈತ ವಿರೋಧಿ ತೀರ್ಮಾನಗಳೇ ಆಗಿವೆ. ಇವುಗಳ ವಿರುದ್ಧ ಒಂದು ಶಾಂತಿಯುತ ಹೋರಾಟ ನಡೆಸಿ ಜೈಲ್‌ಭರೋ ಕಾರ್ಯಾಚರಣೆಗೆ ಜನರನ್ನು ಅಣಿಗೊಳಿಸುವ ಕೆಲಸ ಜರೂರಾಗಿ ಆಗಬೇಕು.

ಬಿಜೆಪಿ ಸರ್ಕಾರದ ಈ ಜನವಿರೋಧಿ ನಿರ್ಧಾರಗಳು ರೈತ ಸಮೂಹವನ್ನೇ ಮಾತ್ರವಲ್ಲದೆ ಎಲ್ಲ ಸ್ಥರಗಳ ಜನರನ್ನೂ ಕಾಡುತ್ತಿರುವುದರಿಂದ ಜನಸಮೂಹ ದೊಡ್ಡ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಕೂಡಿಕೊಳ್ಳುತ್ತಾರೆಂಬುದು ನನ್ನ ಅಭಿಪ್ರಾಯ. ಅಲ್ಲದೆ ಇಂತಹ ಕಾರ್ಯಕ್ರಮ ಕೈಗೊಳ್ಳುವುದರಿಂದ ಸರ್ಕಾರ ತನ್ನ ಜನವಿರೋಧಿ, ರೈತ ವಿರೋಧಿ ನೀತಿಯನ್ನು ಕೈಬಿಡಬೇಕು ಇಲ್ಲವೇ ಮೋದಿ ರಾಜೀನಾಮೆ ಕೊಟ್ಟು ಹೋಗಬೇಕು ಎಂಬ ಪರಿಸ್ಥಿತಿಯನ್ನು ಉಂಟು ಮಾಡಲು ಸಹಕರಿಸುತ್ತದೆ. ಈ ಜೈಲ್‌ಭರೋ ಕಾರ್ಯಕ್ರಮ ಇದನ್ನು ಇನ್ನಷ್ಟು ತೀವ್ರಗೊಳಿಸುವುದರಲ್ಲಿ ಅನುಮಾನವಿಲ್ಲ.

ಭಾರತದ ಎಲ್ಲ ರಾಜ್ಯಗಳಲ್ಲೂ ಈ ಜೈಲ್‌ಭರೋ ಕಾರ್ಯಕ್ರಮ ಯಶಸ್ವಿಯಾಗಿ ನಡೆದರೆ, ಮುಂದೆಂದೂ ಈ ಜನವಿರೋಧಿ, ರೈತ ವಿರೋಧಿ ರಾಜಕೀಯ ಪಕ್ಷಗಳು ಅವುಗಳ ರಾಜಕೀಯ ನಾಯಕರು ಇಂತಹ ದುಸ್ಸಾಹಸಕ್ಕೆ ಎಂದಿಗೂ ಕೈ ಹಾಕಲಾರರು ಎಂಬ ವಿಶ್ವಾಸ ನನಗಿದೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...