Homeಅಂಕಣಗಳುನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

ನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

- Advertisement -
- Advertisement -

ರೈತ ಹೋರಾಟವನ್ನು ದಕ್ಷಿಣ ಭಾರತ ಮತ್ತು ಉತ್ತರ ಪ್ರದೇಶಗಳಿಗೆ ವಿಸ್ತರಿಸಲು ಭಾರತ್ ಕಿಸಾನ್ ಯೂನಿಯನ್ ತೀರ್ಮಾನಿಸಿರುವುದು ಸ್ವಾಗತಾರ್ಹ ಬೆಳವಣಿಗೆ. ಭಾರತದ ಕಿಸಾನ್ ಯೂನಿಯನ್ ಪರವಾಗಿ ಈ ಹೋರಾಟದ ವಿಸ್ತರಣೆ ಜವಬ್ದಾರಿಯನ್ನು ರಾಕೇಶ್ ಟಿಕಾಯತ್ ವಹಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ 20ನೇ ತಾರೀಕು ರೈತ ಮಹಾಪಂಚಾಯತ್‌ಅನ್ನು ಉದ್ಘಾಟಿಸಿದ ರಾಕೇಶ್ ಟಿಕಾಯತ್, ದೆಹಲಿಯಲ್ಲಿ ಚಳುವಳಿ ನಡೆಸುತ್ತಿರುವ ಭಾರತ್ ಕಿಸಾನ್ ಯೂನಿಯನ್ ಈ ಹೋರಾಟವನ್ನು ಮೋದಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವವರೆಗೂ, ಅನಿರ್ದಿಷ್ಟ ಕಾಲ ಮುಂದುವರೆಸುವುದಾಗಿ ಮಾಡಿದ್ದಾರೆ. ಅದರ ಜೊತೆ ಜೊತೆಗೇ ದಕ್ಷಿಣ ಭಾರತ ರಾಜ್ಯಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವಂತೆಯೇ ರೈತ ಮಹಾಪಂಚಾಯತ್‌ಗಳ ಸಮಾವೇಶಗಳನ್ನು ನಡೆಸುವ ಮೂಲಕ ರೈತರ ಈ ಹೋರಾಟಕ್ಕೆ ಬೆಂಬಲ ಪಡೆದುಕೊಳ್ಳುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಕರ್ನಾಟಕದ ಶಿವಮೊಗ್ಗದಲ್ಲಿ ಇದನ್ನು ಮೊದಲ ಬಾರಿಗೆ ನೆರವೇರಿಸಿದ್ದಾರೆ.

ಎರಡನೆಯ ರೈತ ಮಹಾಪಂಚಾಯತ್ ಹಾವೇರಿಯಲ್ಲಿ 21ರಂದು ನಡೆದಿದೆ. 22.3.21ರಂದು ಬೆಂಗಳೂರಿನಲ್ಲಿ ನಡೆಯುವ ವಿಧಾನ ಸೌಧ ಚಲೋ ಮೆರವಣಿಗೆಯಲ್ಲಿ ರೈತರು ಮತ್ತು ಇತರ ಸಾಮಾಜಿಕ ಸಂಸ್ಥೆಗಳು ಕೂಡಿಕೊಂಡು ರೈತ ಮಹಾಪಂಚಾಯತ್ ನಡೆಸುವುದಲ್ಲದೆ ಯಡಿಯೂರಪ್ಪ ಸರ್ಕಾರದ ವಿರುದ್ಧ ಮುತ್ತಿಗೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಶಿವಮೊಗ್ಗದಲ್ಲಿ ಅಶೋಕ್ ಅವರ ತಂಡ ತಾಲ್ಲೂಕು ತಾಲ್ಲೂಕಿಗೂ ಹೋಗಿ ರೈತ ಜಾಗೃತಿ ಕೆಲಸ ಮಾಡಿದ್ದರ ಫಲವಾಗಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ರೈತರು ಮತ್ತು ಇತರ ಹೋರಾಟ ಸಂಘಟನೆಗಳ ಕಾರ್ಯಕರ್ತರು ಶಿವಮೊಗ್ಗದಲ್ಲಿ ಭಾಗವಹಿಸಿ ರೈತ ಮಹಾಪಂಚಾಯತ್‌ಗೆ ಚಾಲನೆ ಕೊಟ್ಟಿದ್ದಾರೆ. ಅದೇ ರೀತಿ ಅತ್ಯಧಿಕ ಸಂಖ್ಯೆಯಲ್ಲಿ ಬೆಂಗಳೂರು ಮುತ್ತಿಗೆಗೆ ಕೂಡ ಜನ ಸೇರಿದ್ದು, ಅದು ಕೊನೆಗೆ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು ಕೃಷಿ ಸಚಿವ ಬಿ ಸಿ ಪಾಟಿಲ್, ಸಮಾವೇಶಕ್ಕೆ ಬಂದು ರೈತರ ಮನವಿಯನ್ನು ಸ್ವೀಕರಿಸಿ ಹೋಗಿದ್ದಾರೆ.

ಬೆಂಗಳೂರು ಕಾರ್ಯಕ್ರಮದ ನಂತರ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ರೈತ ಮಹಾಪಂಚಾಯತ್‌ಗಳು ಮುಂದುವರೆಲಿದೆ. ಪತ್ರಿಕಾ ಸಂದರ್ಶನದಲ್ಲಿ ರಾಕೇಶ್ ಟಿಕಾಯತ್ ಕೆಲವು ಸ್ವಾರಸ್ಯಕರ ವಿಚಾರಗಳನ್ನು ತಿಳಿಸಿದ್ದಾರೆ. ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳ ಕಾರ್ಯಕರ್ತರು ರೈತ ವಿರೋಧಿ ಕಾನೂನುಗಳನ್ನು ಸರ್ಕಾರ ಹಿಂಪಡೆಯುವವರೆಗೂ ದೆಹಲಿಯನ್ನು ಬಿಟ್ಟು ಹೊರಬೀಳುವುದಿಲ್ಲ ಎಂದಿದ್ದಾರೆ. ’ನಾವು ರೈತರು ಬೀಜ ಬಿತ್ತಿ 3 ರಿಂದ 4 ತಿಂಗಳು ಫಸಲಿಗೆ ಕಾಯುತ್ತೇವೆ, ಅದೇ ರೀತಿ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೆ ಕಾಯಲು ಸಿದ್ಧರಿದ್ದೇವೆ. ಅದಕ್ಕಾಗಿ ಹೋರಾಟವನ್ನು ಅನಿರ್ದಿಷ್ಟ ಕಾಲ ನಡೆಸಲು ತಯಾರಿ ಮಾಡಿಕೊಂಡಿದ್ದೇವೆ. ಪಂಜಾಬ್, ಹರ್ಯಾಣ, ರಾಜಸ್ಥಾನ ರಾಜ್ಯಗಳಿಗೆ ಸೀಮಿತವಾಗಿರುವ ರೈತ ಚಳುವಳಿಯನ್ನು ಭಾರತದ ಎಲ್ಲ ರಾಜ್ಯಗಳಿಗೂ ಹರಡಲು ಕ್ರಮಕೈಗೊಳ್ಳುತ್ತೇವೆ. ಈ ಕೆಲಸವನ್ನು ನಾವು ಈಗ ರೈತ ಮಹಾಪಂಚಾಯತ್‌ಗಳನ್ನು ನಡೆಸುವ ಮೂಲಕ ಕರ್ನಾಟಕದಿಂದ ಆರಂಭ ಮಾಡಲಿದ್ದೇವೆ’ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಸ್ಪಷ್ಟ ಪಡಿಸಿದ್ದಾರೆ.

ಕಾಲಕ್ರಮೇಣ ಭಾರತದ ಎಲ್ಲ ರಾಜ್ಯಗಳಲ್ಲೂ ಭಾರತ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ಆಯಾ ರಾಜ್ಯಗಳ ಎಲ್ಲ ಹೋರಾಟ ಸಮಿತಿಗಳೂ ಕೂಡಿಕೊಂಡು ಚಳುವಳಿಯನ್ನು ಬಲಗೊಳಿಸಬೇಕು. ರೈತರ ಬೇಡಿಕೆಗಳಿಗೆ ಆದ್ಯತೆ ನೀಡಿ, ಬಿಜೆಪಿ ಸರ್ಕಾರದಿಂದ ಸಾರ್ವಜನಿಕರು ಅನುಭವಿಸುತ್ತಿರುವ ಇತರ ಕಷ್ಟಕೋಟಲೆಗಳ ವಿರುದ್ಧವಾಗಿಯೂ ಧ್ವನಿ ಎತ್ತಬೇಕು.

ಮೋದಿ ಒಬ್ಬ ಚುನಾಯಿತ ಸರ್ವಾಧಿಕಾರಿಯಾವುವತ್ತ ನಡೆದಿದ್ದಾರೆ. ಸಾಮಾನ್ಯ ಜನ ದಿನನಿತ್ಯ ಅನುಭವಿಸುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ, ಮನೆಗಳಿಗೆ ಸರಬರಾಜು ಮಾಡಲಾಗುವ ಗ್ಯಾಸ್ ಸಿಲೆಂಡರ್‌ಗಳ ಬೆಲೆ ವಿಪರೀತವಾಗಿ ಹೆಚ್ಚುತ್ತಿರುವುದು, ಸರ್ಕಾರಿ ಉದ್ಯಮಗಳ ಷೇರುಗಳನ್ನು ಮಾರಾಟ ಮಾಡುವುದು, ಕಲ್ಲಿದ್ದಲು ಗಣಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರವೃತ್ತಿ, ಏರೋಡ್ರೋಮ್‌ಗಳು, ರೈಲ್ವೆ ಮಾರ್ಗಗಳು ಇವುಗಳ ಖಾಸಗೀಕರಣ, ರೈತರ ಜಮೀನುಗಳನ್ನು ಬಂಡವಾಳಶಾಹಿಗಳು ಕೊಂಡು ರೈತರನ್ನು ಬೀದಿಪಾಲು ಮಾಡುವ ಇಲ್ಲವೇ ಶ್ರೀಮಂತರ ಗುಲಾಮರನ್ನಾಗಿಸುವ ಹುನ್ನಾರ, ಬೆಂಬಲ ಬೆಲೆ ಘೋಷಿಸದೆ ರೈತರು ಬೆಳೆದ ಬೆಳೆಗಳನ್ನು ಸರ್ಕಾರವೇ ಕೊಳ್ಳುತ್ತಿದ್ದ ಪದ್ಧತಿಯನ್ನು ರದ್ದುಗೊಳಿಸಿಸಲು ಮಾಡಿರುವ ಪ್ರಯತ್ನ, ಖಾಸಗಿಯವರು ಅವುಗಳನ್ನು ಕೊಳ್ಳುವ ಸೌಲಭ್ಯ ಒದಗಿಸಿಕೊಟ್ಟಿರುವುದು ಈ ಎಲ್ಲವೂ ರೈತ ವಿರೋಧಿ ತೀರ್ಮಾನಗಳೇ ಆಗಿವೆ. ಇವುಗಳ ವಿರುದ್ಧ ಒಂದು ಶಾಂತಿಯುತ ಹೋರಾಟ ನಡೆಸಿ ಜೈಲ್‌ಭರೋ ಕಾರ್ಯಾಚರಣೆಗೆ ಜನರನ್ನು ಅಣಿಗೊಳಿಸುವ ಕೆಲಸ ಜರೂರಾಗಿ ಆಗಬೇಕು.

ಬಿಜೆಪಿ ಸರ್ಕಾರದ ಈ ಜನವಿರೋಧಿ ನಿರ್ಧಾರಗಳು ರೈತ ಸಮೂಹವನ್ನೇ ಮಾತ್ರವಲ್ಲದೆ ಎಲ್ಲ ಸ್ಥರಗಳ ಜನರನ್ನೂ ಕಾಡುತ್ತಿರುವುದರಿಂದ ಜನಸಮೂಹ ದೊಡ್ಡ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಕೂಡಿಕೊಳ್ಳುತ್ತಾರೆಂಬುದು ನನ್ನ ಅಭಿಪ್ರಾಯ. ಅಲ್ಲದೆ ಇಂತಹ ಕಾರ್ಯಕ್ರಮ ಕೈಗೊಳ್ಳುವುದರಿಂದ ಸರ್ಕಾರ ತನ್ನ ಜನವಿರೋಧಿ, ರೈತ ವಿರೋಧಿ ನೀತಿಯನ್ನು ಕೈಬಿಡಬೇಕು ಇಲ್ಲವೇ ಮೋದಿ ರಾಜೀನಾಮೆ ಕೊಟ್ಟು ಹೋಗಬೇಕು ಎಂಬ ಪರಿಸ್ಥಿತಿಯನ್ನು ಉಂಟು ಮಾಡಲು ಸಹಕರಿಸುತ್ತದೆ. ಈ ಜೈಲ್‌ಭರೋ ಕಾರ್ಯಕ್ರಮ ಇದನ್ನು ಇನ್ನಷ್ಟು ತೀವ್ರಗೊಳಿಸುವುದರಲ್ಲಿ ಅನುಮಾನವಿಲ್ಲ.

ಭಾರತದ ಎಲ್ಲ ರಾಜ್ಯಗಳಲ್ಲೂ ಈ ಜೈಲ್‌ಭರೋ ಕಾರ್ಯಕ್ರಮ ಯಶಸ್ವಿಯಾಗಿ ನಡೆದರೆ, ಮುಂದೆಂದೂ ಈ ಜನವಿರೋಧಿ, ರೈತ ವಿರೋಧಿ ರಾಜಕೀಯ ಪಕ್ಷಗಳು ಅವುಗಳ ರಾಜಕೀಯ ನಾಯಕರು ಇಂತಹ ದುಸ್ಸಾಹಸಕ್ಕೆ ಎಂದಿಗೂ ಕೈ ಹಾಕಲಾರರು ಎಂಬ ವಿಶ್ವಾಸ ನನಗಿದೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...