Homeಅಂಕಣಗಳುನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

ನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

- Advertisement -
- Advertisement -

ರೈತ ಹೋರಾಟವನ್ನು ದಕ್ಷಿಣ ಭಾರತ ಮತ್ತು ಉತ್ತರ ಪ್ರದೇಶಗಳಿಗೆ ವಿಸ್ತರಿಸಲು ಭಾರತ್ ಕಿಸಾನ್ ಯೂನಿಯನ್ ತೀರ್ಮಾನಿಸಿರುವುದು ಸ್ವಾಗತಾರ್ಹ ಬೆಳವಣಿಗೆ. ಭಾರತದ ಕಿಸಾನ್ ಯೂನಿಯನ್ ಪರವಾಗಿ ಈ ಹೋರಾಟದ ವಿಸ್ತರಣೆ ಜವಬ್ದಾರಿಯನ್ನು ರಾಕೇಶ್ ಟಿಕಾಯತ್ ವಹಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ 20ನೇ ತಾರೀಕು ರೈತ ಮಹಾಪಂಚಾಯತ್‌ಅನ್ನು ಉದ್ಘಾಟಿಸಿದ ರಾಕೇಶ್ ಟಿಕಾಯತ್, ದೆಹಲಿಯಲ್ಲಿ ಚಳುವಳಿ ನಡೆಸುತ್ತಿರುವ ಭಾರತ್ ಕಿಸಾನ್ ಯೂನಿಯನ್ ಈ ಹೋರಾಟವನ್ನು ಮೋದಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವವರೆಗೂ, ಅನಿರ್ದಿಷ್ಟ ಕಾಲ ಮುಂದುವರೆಸುವುದಾಗಿ ಮಾಡಿದ್ದಾರೆ. ಅದರ ಜೊತೆ ಜೊತೆಗೇ ದಕ್ಷಿಣ ಭಾರತ ರಾಜ್ಯಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವಂತೆಯೇ ರೈತ ಮಹಾಪಂಚಾಯತ್‌ಗಳ ಸಮಾವೇಶಗಳನ್ನು ನಡೆಸುವ ಮೂಲಕ ರೈತರ ಈ ಹೋರಾಟಕ್ಕೆ ಬೆಂಬಲ ಪಡೆದುಕೊಳ್ಳುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಕರ್ನಾಟಕದ ಶಿವಮೊಗ್ಗದಲ್ಲಿ ಇದನ್ನು ಮೊದಲ ಬಾರಿಗೆ ನೆರವೇರಿಸಿದ್ದಾರೆ.

ಎರಡನೆಯ ರೈತ ಮಹಾಪಂಚಾಯತ್ ಹಾವೇರಿಯಲ್ಲಿ 21ರಂದು ನಡೆದಿದೆ. 22.3.21ರಂದು ಬೆಂಗಳೂರಿನಲ್ಲಿ ನಡೆಯುವ ವಿಧಾನ ಸೌಧ ಚಲೋ ಮೆರವಣಿಗೆಯಲ್ಲಿ ರೈತರು ಮತ್ತು ಇತರ ಸಾಮಾಜಿಕ ಸಂಸ್ಥೆಗಳು ಕೂಡಿಕೊಂಡು ರೈತ ಮಹಾಪಂಚಾಯತ್ ನಡೆಸುವುದಲ್ಲದೆ ಯಡಿಯೂರಪ್ಪ ಸರ್ಕಾರದ ವಿರುದ್ಧ ಮುತ್ತಿಗೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಶಿವಮೊಗ್ಗದಲ್ಲಿ ಅಶೋಕ್ ಅವರ ತಂಡ ತಾಲ್ಲೂಕು ತಾಲ್ಲೂಕಿಗೂ ಹೋಗಿ ರೈತ ಜಾಗೃತಿ ಕೆಲಸ ಮಾಡಿದ್ದರ ಫಲವಾಗಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ರೈತರು ಮತ್ತು ಇತರ ಹೋರಾಟ ಸಂಘಟನೆಗಳ ಕಾರ್ಯಕರ್ತರು ಶಿವಮೊಗ್ಗದಲ್ಲಿ ಭಾಗವಹಿಸಿ ರೈತ ಮಹಾಪಂಚಾಯತ್‌ಗೆ ಚಾಲನೆ ಕೊಟ್ಟಿದ್ದಾರೆ. ಅದೇ ರೀತಿ ಅತ್ಯಧಿಕ ಸಂಖ್ಯೆಯಲ್ಲಿ ಬೆಂಗಳೂರು ಮುತ್ತಿಗೆಗೆ ಕೂಡ ಜನ ಸೇರಿದ್ದು, ಅದು ಕೊನೆಗೆ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು ಕೃಷಿ ಸಚಿವ ಬಿ ಸಿ ಪಾಟಿಲ್, ಸಮಾವೇಶಕ್ಕೆ ಬಂದು ರೈತರ ಮನವಿಯನ್ನು ಸ್ವೀಕರಿಸಿ ಹೋಗಿದ್ದಾರೆ.

ಬೆಂಗಳೂರು ಕಾರ್ಯಕ್ರಮದ ನಂತರ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ರೈತ ಮಹಾಪಂಚಾಯತ್‌ಗಳು ಮುಂದುವರೆಲಿದೆ. ಪತ್ರಿಕಾ ಸಂದರ್ಶನದಲ್ಲಿ ರಾಕೇಶ್ ಟಿಕಾಯತ್ ಕೆಲವು ಸ್ವಾರಸ್ಯಕರ ವಿಚಾರಗಳನ್ನು ತಿಳಿಸಿದ್ದಾರೆ. ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳ ಕಾರ್ಯಕರ್ತರು ರೈತ ವಿರೋಧಿ ಕಾನೂನುಗಳನ್ನು ಸರ್ಕಾರ ಹಿಂಪಡೆಯುವವರೆಗೂ ದೆಹಲಿಯನ್ನು ಬಿಟ್ಟು ಹೊರಬೀಳುವುದಿಲ್ಲ ಎಂದಿದ್ದಾರೆ. ’ನಾವು ರೈತರು ಬೀಜ ಬಿತ್ತಿ 3 ರಿಂದ 4 ತಿಂಗಳು ಫಸಲಿಗೆ ಕಾಯುತ್ತೇವೆ, ಅದೇ ರೀತಿ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೆ ಕಾಯಲು ಸಿದ್ಧರಿದ್ದೇವೆ. ಅದಕ್ಕಾಗಿ ಹೋರಾಟವನ್ನು ಅನಿರ್ದಿಷ್ಟ ಕಾಲ ನಡೆಸಲು ತಯಾರಿ ಮಾಡಿಕೊಂಡಿದ್ದೇವೆ. ಪಂಜಾಬ್, ಹರ್ಯಾಣ, ರಾಜಸ್ಥಾನ ರಾಜ್ಯಗಳಿಗೆ ಸೀಮಿತವಾಗಿರುವ ರೈತ ಚಳುವಳಿಯನ್ನು ಭಾರತದ ಎಲ್ಲ ರಾಜ್ಯಗಳಿಗೂ ಹರಡಲು ಕ್ರಮಕೈಗೊಳ್ಳುತ್ತೇವೆ. ಈ ಕೆಲಸವನ್ನು ನಾವು ಈಗ ರೈತ ಮಹಾಪಂಚಾಯತ್‌ಗಳನ್ನು ನಡೆಸುವ ಮೂಲಕ ಕರ್ನಾಟಕದಿಂದ ಆರಂಭ ಮಾಡಲಿದ್ದೇವೆ’ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಸ್ಪಷ್ಟ ಪಡಿಸಿದ್ದಾರೆ.

ಕಾಲಕ್ರಮೇಣ ಭಾರತದ ಎಲ್ಲ ರಾಜ್ಯಗಳಲ್ಲೂ ಭಾರತ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ಆಯಾ ರಾಜ್ಯಗಳ ಎಲ್ಲ ಹೋರಾಟ ಸಮಿತಿಗಳೂ ಕೂಡಿಕೊಂಡು ಚಳುವಳಿಯನ್ನು ಬಲಗೊಳಿಸಬೇಕು. ರೈತರ ಬೇಡಿಕೆಗಳಿಗೆ ಆದ್ಯತೆ ನೀಡಿ, ಬಿಜೆಪಿ ಸರ್ಕಾರದಿಂದ ಸಾರ್ವಜನಿಕರು ಅನುಭವಿಸುತ್ತಿರುವ ಇತರ ಕಷ್ಟಕೋಟಲೆಗಳ ವಿರುದ್ಧವಾಗಿಯೂ ಧ್ವನಿ ಎತ್ತಬೇಕು.

ಮೋದಿ ಒಬ್ಬ ಚುನಾಯಿತ ಸರ್ವಾಧಿಕಾರಿಯಾವುವತ್ತ ನಡೆದಿದ್ದಾರೆ. ಸಾಮಾನ್ಯ ಜನ ದಿನನಿತ್ಯ ಅನುಭವಿಸುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ, ಮನೆಗಳಿಗೆ ಸರಬರಾಜು ಮಾಡಲಾಗುವ ಗ್ಯಾಸ್ ಸಿಲೆಂಡರ್‌ಗಳ ಬೆಲೆ ವಿಪರೀತವಾಗಿ ಹೆಚ್ಚುತ್ತಿರುವುದು, ಸರ್ಕಾರಿ ಉದ್ಯಮಗಳ ಷೇರುಗಳನ್ನು ಮಾರಾಟ ಮಾಡುವುದು, ಕಲ್ಲಿದ್ದಲು ಗಣಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರವೃತ್ತಿ, ಏರೋಡ್ರೋಮ್‌ಗಳು, ರೈಲ್ವೆ ಮಾರ್ಗಗಳು ಇವುಗಳ ಖಾಸಗೀಕರಣ, ರೈತರ ಜಮೀನುಗಳನ್ನು ಬಂಡವಾಳಶಾಹಿಗಳು ಕೊಂಡು ರೈತರನ್ನು ಬೀದಿಪಾಲು ಮಾಡುವ ಇಲ್ಲವೇ ಶ್ರೀಮಂತರ ಗುಲಾಮರನ್ನಾಗಿಸುವ ಹುನ್ನಾರ, ಬೆಂಬಲ ಬೆಲೆ ಘೋಷಿಸದೆ ರೈತರು ಬೆಳೆದ ಬೆಳೆಗಳನ್ನು ಸರ್ಕಾರವೇ ಕೊಳ್ಳುತ್ತಿದ್ದ ಪದ್ಧತಿಯನ್ನು ರದ್ದುಗೊಳಿಸಿಸಲು ಮಾಡಿರುವ ಪ್ರಯತ್ನ, ಖಾಸಗಿಯವರು ಅವುಗಳನ್ನು ಕೊಳ್ಳುವ ಸೌಲಭ್ಯ ಒದಗಿಸಿಕೊಟ್ಟಿರುವುದು ಈ ಎಲ್ಲವೂ ರೈತ ವಿರೋಧಿ ತೀರ್ಮಾನಗಳೇ ಆಗಿವೆ. ಇವುಗಳ ವಿರುದ್ಧ ಒಂದು ಶಾಂತಿಯುತ ಹೋರಾಟ ನಡೆಸಿ ಜೈಲ್‌ಭರೋ ಕಾರ್ಯಾಚರಣೆಗೆ ಜನರನ್ನು ಅಣಿಗೊಳಿಸುವ ಕೆಲಸ ಜರೂರಾಗಿ ಆಗಬೇಕು.

ಬಿಜೆಪಿ ಸರ್ಕಾರದ ಈ ಜನವಿರೋಧಿ ನಿರ್ಧಾರಗಳು ರೈತ ಸಮೂಹವನ್ನೇ ಮಾತ್ರವಲ್ಲದೆ ಎಲ್ಲ ಸ್ಥರಗಳ ಜನರನ್ನೂ ಕಾಡುತ್ತಿರುವುದರಿಂದ ಜನಸಮೂಹ ದೊಡ್ಡ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಕೂಡಿಕೊಳ್ಳುತ್ತಾರೆಂಬುದು ನನ್ನ ಅಭಿಪ್ರಾಯ. ಅಲ್ಲದೆ ಇಂತಹ ಕಾರ್ಯಕ್ರಮ ಕೈಗೊಳ್ಳುವುದರಿಂದ ಸರ್ಕಾರ ತನ್ನ ಜನವಿರೋಧಿ, ರೈತ ವಿರೋಧಿ ನೀತಿಯನ್ನು ಕೈಬಿಡಬೇಕು ಇಲ್ಲವೇ ಮೋದಿ ರಾಜೀನಾಮೆ ಕೊಟ್ಟು ಹೋಗಬೇಕು ಎಂಬ ಪರಿಸ್ಥಿತಿಯನ್ನು ಉಂಟು ಮಾಡಲು ಸಹಕರಿಸುತ್ತದೆ. ಈ ಜೈಲ್‌ಭರೋ ಕಾರ್ಯಕ್ರಮ ಇದನ್ನು ಇನ್ನಷ್ಟು ತೀವ್ರಗೊಳಿಸುವುದರಲ್ಲಿ ಅನುಮಾನವಿಲ್ಲ.

ಭಾರತದ ಎಲ್ಲ ರಾಜ್ಯಗಳಲ್ಲೂ ಈ ಜೈಲ್‌ಭರೋ ಕಾರ್ಯಕ್ರಮ ಯಶಸ್ವಿಯಾಗಿ ನಡೆದರೆ, ಮುಂದೆಂದೂ ಈ ಜನವಿರೋಧಿ, ರೈತ ವಿರೋಧಿ ರಾಜಕೀಯ ಪಕ್ಷಗಳು ಅವುಗಳ ರಾಜಕೀಯ ನಾಯಕರು ಇಂತಹ ದುಸ್ಸಾಹಸಕ್ಕೆ ಎಂದಿಗೂ ಕೈ ಹಾಕಲಾರರು ಎಂಬ ವಿಶ್ವಾಸ ನನಗಿದೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....