Homeಅಂಕಣಗಳುನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

ನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

- Advertisement -
- Advertisement -

ರೈತ ಹೋರಾಟವನ್ನು ದಕ್ಷಿಣ ಭಾರತ ಮತ್ತು ಉತ್ತರ ಪ್ರದೇಶಗಳಿಗೆ ವಿಸ್ತರಿಸಲು ಭಾರತ್ ಕಿಸಾನ್ ಯೂನಿಯನ್ ತೀರ್ಮಾನಿಸಿರುವುದು ಸ್ವಾಗತಾರ್ಹ ಬೆಳವಣಿಗೆ. ಭಾರತದ ಕಿಸಾನ್ ಯೂನಿಯನ್ ಪರವಾಗಿ ಈ ಹೋರಾಟದ ವಿಸ್ತರಣೆ ಜವಬ್ದಾರಿಯನ್ನು ರಾಕೇಶ್ ಟಿಕಾಯತ್ ವಹಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ 20ನೇ ತಾರೀಕು ರೈತ ಮಹಾಪಂಚಾಯತ್‌ಅನ್ನು ಉದ್ಘಾಟಿಸಿದ ರಾಕೇಶ್ ಟಿಕಾಯತ್, ದೆಹಲಿಯಲ್ಲಿ ಚಳುವಳಿ ನಡೆಸುತ್ತಿರುವ ಭಾರತ್ ಕಿಸಾನ್ ಯೂನಿಯನ್ ಈ ಹೋರಾಟವನ್ನು ಮೋದಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವವರೆಗೂ, ಅನಿರ್ದಿಷ್ಟ ಕಾಲ ಮುಂದುವರೆಸುವುದಾಗಿ ಮಾಡಿದ್ದಾರೆ. ಅದರ ಜೊತೆ ಜೊತೆಗೇ ದಕ್ಷಿಣ ಭಾರತ ರಾಜ್ಯಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವಂತೆಯೇ ರೈತ ಮಹಾಪಂಚಾಯತ್‌ಗಳ ಸಮಾವೇಶಗಳನ್ನು ನಡೆಸುವ ಮೂಲಕ ರೈತರ ಈ ಹೋರಾಟಕ್ಕೆ ಬೆಂಬಲ ಪಡೆದುಕೊಳ್ಳುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಕರ್ನಾಟಕದ ಶಿವಮೊಗ್ಗದಲ್ಲಿ ಇದನ್ನು ಮೊದಲ ಬಾರಿಗೆ ನೆರವೇರಿಸಿದ್ದಾರೆ.

ಎರಡನೆಯ ರೈತ ಮಹಾಪಂಚಾಯತ್ ಹಾವೇರಿಯಲ್ಲಿ 21ರಂದು ನಡೆದಿದೆ. 22.3.21ರಂದು ಬೆಂಗಳೂರಿನಲ್ಲಿ ನಡೆಯುವ ವಿಧಾನ ಸೌಧ ಚಲೋ ಮೆರವಣಿಗೆಯಲ್ಲಿ ರೈತರು ಮತ್ತು ಇತರ ಸಾಮಾಜಿಕ ಸಂಸ್ಥೆಗಳು ಕೂಡಿಕೊಂಡು ರೈತ ಮಹಾಪಂಚಾಯತ್ ನಡೆಸುವುದಲ್ಲದೆ ಯಡಿಯೂರಪ್ಪ ಸರ್ಕಾರದ ವಿರುದ್ಧ ಮುತ್ತಿಗೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಶಿವಮೊಗ್ಗದಲ್ಲಿ ಅಶೋಕ್ ಅವರ ತಂಡ ತಾಲ್ಲೂಕು ತಾಲ್ಲೂಕಿಗೂ ಹೋಗಿ ರೈತ ಜಾಗೃತಿ ಕೆಲಸ ಮಾಡಿದ್ದರ ಫಲವಾಗಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ರೈತರು ಮತ್ತು ಇತರ ಹೋರಾಟ ಸಂಘಟನೆಗಳ ಕಾರ್ಯಕರ್ತರು ಶಿವಮೊಗ್ಗದಲ್ಲಿ ಭಾಗವಹಿಸಿ ರೈತ ಮಹಾಪಂಚಾಯತ್‌ಗೆ ಚಾಲನೆ ಕೊಟ್ಟಿದ್ದಾರೆ. ಅದೇ ರೀತಿ ಅತ್ಯಧಿಕ ಸಂಖ್ಯೆಯಲ್ಲಿ ಬೆಂಗಳೂರು ಮುತ್ತಿಗೆಗೆ ಕೂಡ ಜನ ಸೇರಿದ್ದು, ಅದು ಕೊನೆಗೆ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು ಕೃಷಿ ಸಚಿವ ಬಿ ಸಿ ಪಾಟಿಲ್, ಸಮಾವೇಶಕ್ಕೆ ಬಂದು ರೈತರ ಮನವಿಯನ್ನು ಸ್ವೀಕರಿಸಿ ಹೋಗಿದ್ದಾರೆ.

ಬೆಂಗಳೂರು ಕಾರ್ಯಕ್ರಮದ ನಂತರ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ರೈತ ಮಹಾಪಂಚಾಯತ್‌ಗಳು ಮುಂದುವರೆಲಿದೆ. ಪತ್ರಿಕಾ ಸಂದರ್ಶನದಲ್ಲಿ ರಾಕೇಶ್ ಟಿಕಾಯತ್ ಕೆಲವು ಸ್ವಾರಸ್ಯಕರ ವಿಚಾರಗಳನ್ನು ತಿಳಿಸಿದ್ದಾರೆ. ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳ ಕಾರ್ಯಕರ್ತರು ರೈತ ವಿರೋಧಿ ಕಾನೂನುಗಳನ್ನು ಸರ್ಕಾರ ಹಿಂಪಡೆಯುವವರೆಗೂ ದೆಹಲಿಯನ್ನು ಬಿಟ್ಟು ಹೊರಬೀಳುವುದಿಲ್ಲ ಎಂದಿದ್ದಾರೆ. ’ನಾವು ರೈತರು ಬೀಜ ಬಿತ್ತಿ 3 ರಿಂದ 4 ತಿಂಗಳು ಫಸಲಿಗೆ ಕಾಯುತ್ತೇವೆ, ಅದೇ ರೀತಿ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೆ ಕಾಯಲು ಸಿದ್ಧರಿದ್ದೇವೆ. ಅದಕ್ಕಾಗಿ ಹೋರಾಟವನ್ನು ಅನಿರ್ದಿಷ್ಟ ಕಾಲ ನಡೆಸಲು ತಯಾರಿ ಮಾಡಿಕೊಂಡಿದ್ದೇವೆ. ಪಂಜಾಬ್, ಹರ್ಯಾಣ, ರಾಜಸ್ಥಾನ ರಾಜ್ಯಗಳಿಗೆ ಸೀಮಿತವಾಗಿರುವ ರೈತ ಚಳುವಳಿಯನ್ನು ಭಾರತದ ಎಲ್ಲ ರಾಜ್ಯಗಳಿಗೂ ಹರಡಲು ಕ್ರಮಕೈಗೊಳ್ಳುತ್ತೇವೆ. ಈ ಕೆಲಸವನ್ನು ನಾವು ಈಗ ರೈತ ಮಹಾಪಂಚಾಯತ್‌ಗಳನ್ನು ನಡೆಸುವ ಮೂಲಕ ಕರ್ನಾಟಕದಿಂದ ಆರಂಭ ಮಾಡಲಿದ್ದೇವೆ’ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಸ್ಪಷ್ಟ ಪಡಿಸಿದ್ದಾರೆ.

ಕಾಲಕ್ರಮೇಣ ಭಾರತದ ಎಲ್ಲ ರಾಜ್ಯಗಳಲ್ಲೂ ಭಾರತ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ಆಯಾ ರಾಜ್ಯಗಳ ಎಲ್ಲ ಹೋರಾಟ ಸಮಿತಿಗಳೂ ಕೂಡಿಕೊಂಡು ಚಳುವಳಿಯನ್ನು ಬಲಗೊಳಿಸಬೇಕು. ರೈತರ ಬೇಡಿಕೆಗಳಿಗೆ ಆದ್ಯತೆ ನೀಡಿ, ಬಿಜೆಪಿ ಸರ್ಕಾರದಿಂದ ಸಾರ್ವಜನಿಕರು ಅನುಭವಿಸುತ್ತಿರುವ ಇತರ ಕಷ್ಟಕೋಟಲೆಗಳ ವಿರುದ್ಧವಾಗಿಯೂ ಧ್ವನಿ ಎತ್ತಬೇಕು.

ಮೋದಿ ಒಬ್ಬ ಚುನಾಯಿತ ಸರ್ವಾಧಿಕಾರಿಯಾವುವತ್ತ ನಡೆದಿದ್ದಾರೆ. ಸಾಮಾನ್ಯ ಜನ ದಿನನಿತ್ಯ ಅನುಭವಿಸುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ, ಮನೆಗಳಿಗೆ ಸರಬರಾಜು ಮಾಡಲಾಗುವ ಗ್ಯಾಸ್ ಸಿಲೆಂಡರ್‌ಗಳ ಬೆಲೆ ವಿಪರೀತವಾಗಿ ಹೆಚ್ಚುತ್ತಿರುವುದು, ಸರ್ಕಾರಿ ಉದ್ಯಮಗಳ ಷೇರುಗಳನ್ನು ಮಾರಾಟ ಮಾಡುವುದು, ಕಲ್ಲಿದ್ದಲು ಗಣಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರವೃತ್ತಿ, ಏರೋಡ್ರೋಮ್‌ಗಳು, ರೈಲ್ವೆ ಮಾರ್ಗಗಳು ಇವುಗಳ ಖಾಸಗೀಕರಣ, ರೈತರ ಜಮೀನುಗಳನ್ನು ಬಂಡವಾಳಶಾಹಿಗಳು ಕೊಂಡು ರೈತರನ್ನು ಬೀದಿಪಾಲು ಮಾಡುವ ಇಲ್ಲವೇ ಶ್ರೀಮಂತರ ಗುಲಾಮರನ್ನಾಗಿಸುವ ಹುನ್ನಾರ, ಬೆಂಬಲ ಬೆಲೆ ಘೋಷಿಸದೆ ರೈತರು ಬೆಳೆದ ಬೆಳೆಗಳನ್ನು ಸರ್ಕಾರವೇ ಕೊಳ್ಳುತ್ತಿದ್ದ ಪದ್ಧತಿಯನ್ನು ರದ್ದುಗೊಳಿಸಿಸಲು ಮಾಡಿರುವ ಪ್ರಯತ್ನ, ಖಾಸಗಿಯವರು ಅವುಗಳನ್ನು ಕೊಳ್ಳುವ ಸೌಲಭ್ಯ ಒದಗಿಸಿಕೊಟ್ಟಿರುವುದು ಈ ಎಲ್ಲವೂ ರೈತ ವಿರೋಧಿ ತೀರ್ಮಾನಗಳೇ ಆಗಿವೆ. ಇವುಗಳ ವಿರುದ್ಧ ಒಂದು ಶಾಂತಿಯುತ ಹೋರಾಟ ನಡೆಸಿ ಜೈಲ್‌ಭರೋ ಕಾರ್ಯಾಚರಣೆಗೆ ಜನರನ್ನು ಅಣಿಗೊಳಿಸುವ ಕೆಲಸ ಜರೂರಾಗಿ ಆಗಬೇಕು.

ಬಿಜೆಪಿ ಸರ್ಕಾರದ ಈ ಜನವಿರೋಧಿ ನಿರ್ಧಾರಗಳು ರೈತ ಸಮೂಹವನ್ನೇ ಮಾತ್ರವಲ್ಲದೆ ಎಲ್ಲ ಸ್ಥರಗಳ ಜನರನ್ನೂ ಕಾಡುತ್ತಿರುವುದರಿಂದ ಜನಸಮೂಹ ದೊಡ್ಡ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಕೂಡಿಕೊಳ್ಳುತ್ತಾರೆಂಬುದು ನನ್ನ ಅಭಿಪ್ರಾಯ. ಅಲ್ಲದೆ ಇಂತಹ ಕಾರ್ಯಕ್ರಮ ಕೈಗೊಳ್ಳುವುದರಿಂದ ಸರ್ಕಾರ ತನ್ನ ಜನವಿರೋಧಿ, ರೈತ ವಿರೋಧಿ ನೀತಿಯನ್ನು ಕೈಬಿಡಬೇಕು ಇಲ್ಲವೇ ಮೋದಿ ರಾಜೀನಾಮೆ ಕೊಟ್ಟು ಹೋಗಬೇಕು ಎಂಬ ಪರಿಸ್ಥಿತಿಯನ್ನು ಉಂಟು ಮಾಡಲು ಸಹಕರಿಸುತ್ತದೆ. ಈ ಜೈಲ್‌ಭರೋ ಕಾರ್ಯಕ್ರಮ ಇದನ್ನು ಇನ್ನಷ್ಟು ತೀವ್ರಗೊಳಿಸುವುದರಲ್ಲಿ ಅನುಮಾನವಿಲ್ಲ.

ಭಾರತದ ಎಲ್ಲ ರಾಜ್ಯಗಳಲ್ಲೂ ಈ ಜೈಲ್‌ಭರೋ ಕಾರ್ಯಕ್ರಮ ಯಶಸ್ವಿಯಾಗಿ ನಡೆದರೆ, ಮುಂದೆಂದೂ ಈ ಜನವಿರೋಧಿ, ರೈತ ವಿರೋಧಿ ರಾಜಕೀಯ ಪಕ್ಷಗಳು ಅವುಗಳ ರಾಜಕೀಯ ನಾಯಕರು ಇಂತಹ ದುಸ್ಸಾಹಸಕ್ಕೆ ಎಂದಿಗೂ ಕೈ ಹಾಕಲಾರರು ಎಂಬ ವಿಶ್ವಾಸ ನನಗಿದೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...