Homeಅಂಕಣಗಳುನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

ನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

- Advertisement -
- Advertisement -

ರೈತ ಹೋರಾಟವನ್ನು ದಕ್ಷಿಣ ಭಾರತ ಮತ್ತು ಉತ್ತರ ಪ್ರದೇಶಗಳಿಗೆ ವಿಸ್ತರಿಸಲು ಭಾರತ್ ಕಿಸಾನ್ ಯೂನಿಯನ್ ತೀರ್ಮಾನಿಸಿರುವುದು ಸ್ವಾಗತಾರ್ಹ ಬೆಳವಣಿಗೆ. ಭಾರತದ ಕಿಸಾನ್ ಯೂನಿಯನ್ ಪರವಾಗಿ ಈ ಹೋರಾಟದ ವಿಸ್ತರಣೆ ಜವಬ್ದಾರಿಯನ್ನು ರಾಕೇಶ್ ಟಿಕಾಯತ್ ವಹಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ 20ನೇ ತಾರೀಕು ರೈತ ಮಹಾಪಂಚಾಯತ್‌ಅನ್ನು ಉದ್ಘಾಟಿಸಿದ ರಾಕೇಶ್ ಟಿಕಾಯತ್, ದೆಹಲಿಯಲ್ಲಿ ಚಳುವಳಿ ನಡೆಸುತ್ತಿರುವ ಭಾರತ್ ಕಿಸಾನ್ ಯೂನಿಯನ್ ಈ ಹೋರಾಟವನ್ನು ಮೋದಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವವರೆಗೂ, ಅನಿರ್ದಿಷ್ಟ ಕಾಲ ಮುಂದುವರೆಸುವುದಾಗಿ ಮಾಡಿದ್ದಾರೆ. ಅದರ ಜೊತೆ ಜೊತೆಗೇ ದಕ್ಷಿಣ ಭಾರತ ರಾಜ್ಯಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವಂತೆಯೇ ರೈತ ಮಹಾಪಂಚಾಯತ್‌ಗಳ ಸಮಾವೇಶಗಳನ್ನು ನಡೆಸುವ ಮೂಲಕ ರೈತರ ಈ ಹೋರಾಟಕ್ಕೆ ಬೆಂಬಲ ಪಡೆದುಕೊಳ್ಳುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಕರ್ನಾಟಕದ ಶಿವಮೊಗ್ಗದಲ್ಲಿ ಇದನ್ನು ಮೊದಲ ಬಾರಿಗೆ ನೆರವೇರಿಸಿದ್ದಾರೆ.

ಎರಡನೆಯ ರೈತ ಮಹಾಪಂಚಾಯತ್ ಹಾವೇರಿಯಲ್ಲಿ 21ರಂದು ನಡೆದಿದೆ. 22.3.21ರಂದು ಬೆಂಗಳೂರಿನಲ್ಲಿ ನಡೆಯುವ ವಿಧಾನ ಸೌಧ ಚಲೋ ಮೆರವಣಿಗೆಯಲ್ಲಿ ರೈತರು ಮತ್ತು ಇತರ ಸಾಮಾಜಿಕ ಸಂಸ್ಥೆಗಳು ಕೂಡಿಕೊಂಡು ರೈತ ಮಹಾಪಂಚಾಯತ್ ನಡೆಸುವುದಲ್ಲದೆ ಯಡಿಯೂರಪ್ಪ ಸರ್ಕಾರದ ವಿರುದ್ಧ ಮುತ್ತಿಗೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಶಿವಮೊಗ್ಗದಲ್ಲಿ ಅಶೋಕ್ ಅವರ ತಂಡ ತಾಲ್ಲೂಕು ತಾಲ್ಲೂಕಿಗೂ ಹೋಗಿ ರೈತ ಜಾಗೃತಿ ಕೆಲಸ ಮಾಡಿದ್ದರ ಫಲವಾಗಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ರೈತರು ಮತ್ತು ಇತರ ಹೋರಾಟ ಸಂಘಟನೆಗಳ ಕಾರ್ಯಕರ್ತರು ಶಿವಮೊಗ್ಗದಲ್ಲಿ ಭಾಗವಹಿಸಿ ರೈತ ಮಹಾಪಂಚಾಯತ್‌ಗೆ ಚಾಲನೆ ಕೊಟ್ಟಿದ್ದಾರೆ. ಅದೇ ರೀತಿ ಅತ್ಯಧಿಕ ಸಂಖ್ಯೆಯಲ್ಲಿ ಬೆಂಗಳೂರು ಮುತ್ತಿಗೆಗೆ ಕೂಡ ಜನ ಸೇರಿದ್ದು, ಅದು ಕೊನೆಗೆ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು ಕೃಷಿ ಸಚಿವ ಬಿ ಸಿ ಪಾಟಿಲ್, ಸಮಾವೇಶಕ್ಕೆ ಬಂದು ರೈತರ ಮನವಿಯನ್ನು ಸ್ವೀಕರಿಸಿ ಹೋಗಿದ್ದಾರೆ.

ಬೆಂಗಳೂರು ಕಾರ್ಯಕ್ರಮದ ನಂತರ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ರೈತ ಮಹಾಪಂಚಾಯತ್‌ಗಳು ಮುಂದುವರೆಲಿದೆ. ಪತ್ರಿಕಾ ಸಂದರ್ಶನದಲ್ಲಿ ರಾಕೇಶ್ ಟಿಕಾಯತ್ ಕೆಲವು ಸ್ವಾರಸ್ಯಕರ ವಿಚಾರಗಳನ್ನು ತಿಳಿಸಿದ್ದಾರೆ. ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳ ಕಾರ್ಯಕರ್ತರು ರೈತ ವಿರೋಧಿ ಕಾನೂನುಗಳನ್ನು ಸರ್ಕಾರ ಹಿಂಪಡೆಯುವವರೆಗೂ ದೆಹಲಿಯನ್ನು ಬಿಟ್ಟು ಹೊರಬೀಳುವುದಿಲ್ಲ ಎಂದಿದ್ದಾರೆ. ’ನಾವು ರೈತರು ಬೀಜ ಬಿತ್ತಿ 3 ರಿಂದ 4 ತಿಂಗಳು ಫಸಲಿಗೆ ಕಾಯುತ್ತೇವೆ, ಅದೇ ರೀತಿ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೆ ಕಾಯಲು ಸಿದ್ಧರಿದ್ದೇವೆ. ಅದಕ್ಕಾಗಿ ಹೋರಾಟವನ್ನು ಅನಿರ್ದಿಷ್ಟ ಕಾಲ ನಡೆಸಲು ತಯಾರಿ ಮಾಡಿಕೊಂಡಿದ್ದೇವೆ. ಪಂಜಾಬ್, ಹರ್ಯಾಣ, ರಾಜಸ್ಥಾನ ರಾಜ್ಯಗಳಿಗೆ ಸೀಮಿತವಾಗಿರುವ ರೈತ ಚಳುವಳಿಯನ್ನು ಭಾರತದ ಎಲ್ಲ ರಾಜ್ಯಗಳಿಗೂ ಹರಡಲು ಕ್ರಮಕೈಗೊಳ್ಳುತ್ತೇವೆ. ಈ ಕೆಲಸವನ್ನು ನಾವು ಈಗ ರೈತ ಮಹಾಪಂಚಾಯತ್‌ಗಳನ್ನು ನಡೆಸುವ ಮೂಲಕ ಕರ್ನಾಟಕದಿಂದ ಆರಂಭ ಮಾಡಲಿದ್ದೇವೆ’ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಸ್ಪಷ್ಟ ಪಡಿಸಿದ್ದಾರೆ.

ಕಾಲಕ್ರಮೇಣ ಭಾರತದ ಎಲ್ಲ ರಾಜ್ಯಗಳಲ್ಲೂ ಭಾರತ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ಆಯಾ ರಾಜ್ಯಗಳ ಎಲ್ಲ ಹೋರಾಟ ಸಮಿತಿಗಳೂ ಕೂಡಿಕೊಂಡು ಚಳುವಳಿಯನ್ನು ಬಲಗೊಳಿಸಬೇಕು. ರೈತರ ಬೇಡಿಕೆಗಳಿಗೆ ಆದ್ಯತೆ ನೀಡಿ, ಬಿಜೆಪಿ ಸರ್ಕಾರದಿಂದ ಸಾರ್ವಜನಿಕರು ಅನುಭವಿಸುತ್ತಿರುವ ಇತರ ಕಷ್ಟಕೋಟಲೆಗಳ ವಿರುದ್ಧವಾಗಿಯೂ ಧ್ವನಿ ಎತ್ತಬೇಕು.

ಮೋದಿ ಒಬ್ಬ ಚುನಾಯಿತ ಸರ್ವಾಧಿಕಾರಿಯಾವುವತ್ತ ನಡೆದಿದ್ದಾರೆ. ಸಾಮಾನ್ಯ ಜನ ದಿನನಿತ್ಯ ಅನುಭವಿಸುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ, ಮನೆಗಳಿಗೆ ಸರಬರಾಜು ಮಾಡಲಾಗುವ ಗ್ಯಾಸ್ ಸಿಲೆಂಡರ್‌ಗಳ ಬೆಲೆ ವಿಪರೀತವಾಗಿ ಹೆಚ್ಚುತ್ತಿರುವುದು, ಸರ್ಕಾರಿ ಉದ್ಯಮಗಳ ಷೇರುಗಳನ್ನು ಮಾರಾಟ ಮಾಡುವುದು, ಕಲ್ಲಿದ್ದಲು ಗಣಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರವೃತ್ತಿ, ಏರೋಡ್ರೋಮ್‌ಗಳು, ರೈಲ್ವೆ ಮಾರ್ಗಗಳು ಇವುಗಳ ಖಾಸಗೀಕರಣ, ರೈತರ ಜಮೀನುಗಳನ್ನು ಬಂಡವಾಳಶಾಹಿಗಳು ಕೊಂಡು ರೈತರನ್ನು ಬೀದಿಪಾಲು ಮಾಡುವ ಇಲ್ಲವೇ ಶ್ರೀಮಂತರ ಗುಲಾಮರನ್ನಾಗಿಸುವ ಹುನ್ನಾರ, ಬೆಂಬಲ ಬೆಲೆ ಘೋಷಿಸದೆ ರೈತರು ಬೆಳೆದ ಬೆಳೆಗಳನ್ನು ಸರ್ಕಾರವೇ ಕೊಳ್ಳುತ್ತಿದ್ದ ಪದ್ಧತಿಯನ್ನು ರದ್ದುಗೊಳಿಸಿಸಲು ಮಾಡಿರುವ ಪ್ರಯತ್ನ, ಖಾಸಗಿಯವರು ಅವುಗಳನ್ನು ಕೊಳ್ಳುವ ಸೌಲಭ್ಯ ಒದಗಿಸಿಕೊಟ್ಟಿರುವುದು ಈ ಎಲ್ಲವೂ ರೈತ ವಿರೋಧಿ ತೀರ್ಮಾನಗಳೇ ಆಗಿವೆ. ಇವುಗಳ ವಿರುದ್ಧ ಒಂದು ಶಾಂತಿಯುತ ಹೋರಾಟ ನಡೆಸಿ ಜೈಲ್‌ಭರೋ ಕಾರ್ಯಾಚರಣೆಗೆ ಜನರನ್ನು ಅಣಿಗೊಳಿಸುವ ಕೆಲಸ ಜರೂರಾಗಿ ಆಗಬೇಕು.

ಬಿಜೆಪಿ ಸರ್ಕಾರದ ಈ ಜನವಿರೋಧಿ ನಿರ್ಧಾರಗಳು ರೈತ ಸಮೂಹವನ್ನೇ ಮಾತ್ರವಲ್ಲದೆ ಎಲ್ಲ ಸ್ಥರಗಳ ಜನರನ್ನೂ ಕಾಡುತ್ತಿರುವುದರಿಂದ ಜನಸಮೂಹ ದೊಡ್ಡ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಕೂಡಿಕೊಳ್ಳುತ್ತಾರೆಂಬುದು ನನ್ನ ಅಭಿಪ್ರಾಯ. ಅಲ್ಲದೆ ಇಂತಹ ಕಾರ್ಯಕ್ರಮ ಕೈಗೊಳ್ಳುವುದರಿಂದ ಸರ್ಕಾರ ತನ್ನ ಜನವಿರೋಧಿ, ರೈತ ವಿರೋಧಿ ನೀತಿಯನ್ನು ಕೈಬಿಡಬೇಕು ಇಲ್ಲವೇ ಮೋದಿ ರಾಜೀನಾಮೆ ಕೊಟ್ಟು ಹೋಗಬೇಕು ಎಂಬ ಪರಿಸ್ಥಿತಿಯನ್ನು ಉಂಟು ಮಾಡಲು ಸಹಕರಿಸುತ್ತದೆ. ಈ ಜೈಲ್‌ಭರೋ ಕಾರ್ಯಕ್ರಮ ಇದನ್ನು ಇನ್ನಷ್ಟು ತೀವ್ರಗೊಳಿಸುವುದರಲ್ಲಿ ಅನುಮಾನವಿಲ್ಲ.

ಭಾರತದ ಎಲ್ಲ ರಾಜ್ಯಗಳಲ್ಲೂ ಈ ಜೈಲ್‌ಭರೋ ಕಾರ್ಯಕ್ರಮ ಯಶಸ್ವಿಯಾಗಿ ನಡೆದರೆ, ಮುಂದೆಂದೂ ಈ ಜನವಿರೋಧಿ, ರೈತ ವಿರೋಧಿ ರಾಜಕೀಯ ಪಕ್ಷಗಳು ಅವುಗಳ ರಾಜಕೀಯ ನಾಯಕರು ಇಂತಹ ದುಸ್ಸಾಹಸಕ್ಕೆ ಎಂದಿಗೂ ಕೈ ಹಾಕಲಾರರು ಎಂಬ ವಿಶ್ವಾಸ ನನಗಿದೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...