Homeಅಂಕಣಗಳುನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

ನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

- Advertisement -
- Advertisement -

ರೈತ ಹೋರಾಟವನ್ನು ದಕ್ಷಿಣ ಭಾರತ ಮತ್ತು ಉತ್ತರ ಪ್ರದೇಶಗಳಿಗೆ ವಿಸ್ತರಿಸಲು ಭಾರತ್ ಕಿಸಾನ್ ಯೂನಿಯನ್ ತೀರ್ಮಾನಿಸಿರುವುದು ಸ್ವಾಗತಾರ್ಹ ಬೆಳವಣಿಗೆ. ಭಾರತದ ಕಿಸಾನ್ ಯೂನಿಯನ್ ಪರವಾಗಿ ಈ ಹೋರಾಟದ ವಿಸ್ತರಣೆ ಜವಬ್ದಾರಿಯನ್ನು ರಾಕೇಶ್ ಟಿಕಾಯತ್ ವಹಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ 20ನೇ ತಾರೀಕು ರೈತ ಮಹಾಪಂಚಾಯತ್‌ಅನ್ನು ಉದ್ಘಾಟಿಸಿದ ರಾಕೇಶ್ ಟಿಕಾಯತ್, ದೆಹಲಿಯಲ್ಲಿ ಚಳುವಳಿ ನಡೆಸುತ್ತಿರುವ ಭಾರತ್ ಕಿಸಾನ್ ಯೂನಿಯನ್ ಈ ಹೋರಾಟವನ್ನು ಮೋದಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವವರೆಗೂ, ಅನಿರ್ದಿಷ್ಟ ಕಾಲ ಮುಂದುವರೆಸುವುದಾಗಿ ಮಾಡಿದ್ದಾರೆ. ಅದರ ಜೊತೆ ಜೊತೆಗೇ ದಕ್ಷಿಣ ಭಾರತ ರಾಜ್ಯಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವಂತೆಯೇ ರೈತ ಮಹಾಪಂಚಾಯತ್‌ಗಳ ಸಮಾವೇಶಗಳನ್ನು ನಡೆಸುವ ಮೂಲಕ ರೈತರ ಈ ಹೋರಾಟಕ್ಕೆ ಬೆಂಬಲ ಪಡೆದುಕೊಳ್ಳುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಕರ್ನಾಟಕದ ಶಿವಮೊಗ್ಗದಲ್ಲಿ ಇದನ್ನು ಮೊದಲ ಬಾರಿಗೆ ನೆರವೇರಿಸಿದ್ದಾರೆ.

ಎರಡನೆಯ ರೈತ ಮಹಾಪಂಚಾಯತ್ ಹಾವೇರಿಯಲ್ಲಿ 21ರಂದು ನಡೆದಿದೆ. 22.3.21ರಂದು ಬೆಂಗಳೂರಿನಲ್ಲಿ ನಡೆಯುವ ವಿಧಾನ ಸೌಧ ಚಲೋ ಮೆರವಣಿಗೆಯಲ್ಲಿ ರೈತರು ಮತ್ತು ಇತರ ಸಾಮಾಜಿಕ ಸಂಸ್ಥೆಗಳು ಕೂಡಿಕೊಂಡು ರೈತ ಮಹಾಪಂಚಾಯತ್ ನಡೆಸುವುದಲ್ಲದೆ ಯಡಿಯೂರಪ್ಪ ಸರ್ಕಾರದ ವಿರುದ್ಧ ಮುತ್ತಿಗೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಶಿವಮೊಗ್ಗದಲ್ಲಿ ಅಶೋಕ್ ಅವರ ತಂಡ ತಾಲ್ಲೂಕು ತಾಲ್ಲೂಕಿಗೂ ಹೋಗಿ ರೈತ ಜಾಗೃತಿ ಕೆಲಸ ಮಾಡಿದ್ದರ ಫಲವಾಗಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ರೈತರು ಮತ್ತು ಇತರ ಹೋರಾಟ ಸಂಘಟನೆಗಳ ಕಾರ್ಯಕರ್ತರು ಶಿವಮೊಗ್ಗದಲ್ಲಿ ಭಾಗವಹಿಸಿ ರೈತ ಮಹಾಪಂಚಾಯತ್‌ಗೆ ಚಾಲನೆ ಕೊಟ್ಟಿದ್ದಾರೆ. ಅದೇ ರೀತಿ ಅತ್ಯಧಿಕ ಸಂಖ್ಯೆಯಲ್ಲಿ ಬೆಂಗಳೂರು ಮುತ್ತಿಗೆಗೆ ಕೂಡ ಜನ ಸೇರಿದ್ದು, ಅದು ಕೊನೆಗೆ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು ಕೃಷಿ ಸಚಿವ ಬಿ ಸಿ ಪಾಟಿಲ್, ಸಮಾವೇಶಕ್ಕೆ ಬಂದು ರೈತರ ಮನವಿಯನ್ನು ಸ್ವೀಕರಿಸಿ ಹೋಗಿದ್ದಾರೆ.

ಬೆಂಗಳೂರು ಕಾರ್ಯಕ್ರಮದ ನಂತರ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ರೈತ ಮಹಾಪಂಚಾಯತ್‌ಗಳು ಮುಂದುವರೆಲಿದೆ. ಪತ್ರಿಕಾ ಸಂದರ್ಶನದಲ್ಲಿ ರಾಕೇಶ್ ಟಿಕಾಯತ್ ಕೆಲವು ಸ್ವಾರಸ್ಯಕರ ವಿಚಾರಗಳನ್ನು ತಿಳಿಸಿದ್ದಾರೆ. ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳ ಕಾರ್ಯಕರ್ತರು ರೈತ ವಿರೋಧಿ ಕಾನೂನುಗಳನ್ನು ಸರ್ಕಾರ ಹಿಂಪಡೆಯುವವರೆಗೂ ದೆಹಲಿಯನ್ನು ಬಿಟ್ಟು ಹೊರಬೀಳುವುದಿಲ್ಲ ಎಂದಿದ್ದಾರೆ. ’ನಾವು ರೈತರು ಬೀಜ ಬಿತ್ತಿ 3 ರಿಂದ 4 ತಿಂಗಳು ಫಸಲಿಗೆ ಕಾಯುತ್ತೇವೆ, ಅದೇ ರೀತಿ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೆ ಕಾಯಲು ಸಿದ್ಧರಿದ್ದೇವೆ. ಅದಕ್ಕಾಗಿ ಹೋರಾಟವನ್ನು ಅನಿರ್ದಿಷ್ಟ ಕಾಲ ನಡೆಸಲು ತಯಾರಿ ಮಾಡಿಕೊಂಡಿದ್ದೇವೆ. ಪಂಜಾಬ್, ಹರ್ಯಾಣ, ರಾಜಸ್ಥಾನ ರಾಜ್ಯಗಳಿಗೆ ಸೀಮಿತವಾಗಿರುವ ರೈತ ಚಳುವಳಿಯನ್ನು ಭಾರತದ ಎಲ್ಲ ರಾಜ್ಯಗಳಿಗೂ ಹರಡಲು ಕ್ರಮಕೈಗೊಳ್ಳುತ್ತೇವೆ. ಈ ಕೆಲಸವನ್ನು ನಾವು ಈಗ ರೈತ ಮಹಾಪಂಚಾಯತ್‌ಗಳನ್ನು ನಡೆಸುವ ಮೂಲಕ ಕರ್ನಾಟಕದಿಂದ ಆರಂಭ ಮಾಡಲಿದ್ದೇವೆ’ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಸ್ಪಷ್ಟ ಪಡಿಸಿದ್ದಾರೆ.

ಕಾಲಕ್ರಮೇಣ ಭಾರತದ ಎಲ್ಲ ರಾಜ್ಯಗಳಲ್ಲೂ ಭಾರತ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ಆಯಾ ರಾಜ್ಯಗಳ ಎಲ್ಲ ಹೋರಾಟ ಸಮಿತಿಗಳೂ ಕೂಡಿಕೊಂಡು ಚಳುವಳಿಯನ್ನು ಬಲಗೊಳಿಸಬೇಕು. ರೈತರ ಬೇಡಿಕೆಗಳಿಗೆ ಆದ್ಯತೆ ನೀಡಿ, ಬಿಜೆಪಿ ಸರ್ಕಾರದಿಂದ ಸಾರ್ವಜನಿಕರು ಅನುಭವಿಸುತ್ತಿರುವ ಇತರ ಕಷ್ಟಕೋಟಲೆಗಳ ವಿರುದ್ಧವಾಗಿಯೂ ಧ್ವನಿ ಎತ್ತಬೇಕು.

ಮೋದಿ ಒಬ್ಬ ಚುನಾಯಿತ ಸರ್ವಾಧಿಕಾರಿಯಾವುವತ್ತ ನಡೆದಿದ್ದಾರೆ. ಸಾಮಾನ್ಯ ಜನ ದಿನನಿತ್ಯ ಅನುಭವಿಸುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ, ಮನೆಗಳಿಗೆ ಸರಬರಾಜು ಮಾಡಲಾಗುವ ಗ್ಯಾಸ್ ಸಿಲೆಂಡರ್‌ಗಳ ಬೆಲೆ ವಿಪರೀತವಾಗಿ ಹೆಚ್ಚುತ್ತಿರುವುದು, ಸರ್ಕಾರಿ ಉದ್ಯಮಗಳ ಷೇರುಗಳನ್ನು ಮಾರಾಟ ಮಾಡುವುದು, ಕಲ್ಲಿದ್ದಲು ಗಣಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರವೃತ್ತಿ, ಏರೋಡ್ರೋಮ್‌ಗಳು, ರೈಲ್ವೆ ಮಾರ್ಗಗಳು ಇವುಗಳ ಖಾಸಗೀಕರಣ, ರೈತರ ಜಮೀನುಗಳನ್ನು ಬಂಡವಾಳಶಾಹಿಗಳು ಕೊಂಡು ರೈತರನ್ನು ಬೀದಿಪಾಲು ಮಾಡುವ ಇಲ್ಲವೇ ಶ್ರೀಮಂತರ ಗುಲಾಮರನ್ನಾಗಿಸುವ ಹುನ್ನಾರ, ಬೆಂಬಲ ಬೆಲೆ ಘೋಷಿಸದೆ ರೈತರು ಬೆಳೆದ ಬೆಳೆಗಳನ್ನು ಸರ್ಕಾರವೇ ಕೊಳ್ಳುತ್ತಿದ್ದ ಪದ್ಧತಿಯನ್ನು ರದ್ದುಗೊಳಿಸಿಸಲು ಮಾಡಿರುವ ಪ್ರಯತ್ನ, ಖಾಸಗಿಯವರು ಅವುಗಳನ್ನು ಕೊಳ್ಳುವ ಸೌಲಭ್ಯ ಒದಗಿಸಿಕೊಟ್ಟಿರುವುದು ಈ ಎಲ್ಲವೂ ರೈತ ವಿರೋಧಿ ತೀರ್ಮಾನಗಳೇ ಆಗಿವೆ. ಇವುಗಳ ವಿರುದ್ಧ ಒಂದು ಶಾಂತಿಯುತ ಹೋರಾಟ ನಡೆಸಿ ಜೈಲ್‌ಭರೋ ಕಾರ್ಯಾಚರಣೆಗೆ ಜನರನ್ನು ಅಣಿಗೊಳಿಸುವ ಕೆಲಸ ಜರೂರಾಗಿ ಆಗಬೇಕು.

ಬಿಜೆಪಿ ಸರ್ಕಾರದ ಈ ಜನವಿರೋಧಿ ನಿರ್ಧಾರಗಳು ರೈತ ಸಮೂಹವನ್ನೇ ಮಾತ್ರವಲ್ಲದೆ ಎಲ್ಲ ಸ್ಥರಗಳ ಜನರನ್ನೂ ಕಾಡುತ್ತಿರುವುದರಿಂದ ಜನಸಮೂಹ ದೊಡ್ಡ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಕೂಡಿಕೊಳ್ಳುತ್ತಾರೆಂಬುದು ನನ್ನ ಅಭಿಪ್ರಾಯ. ಅಲ್ಲದೆ ಇಂತಹ ಕಾರ್ಯಕ್ರಮ ಕೈಗೊಳ್ಳುವುದರಿಂದ ಸರ್ಕಾರ ತನ್ನ ಜನವಿರೋಧಿ, ರೈತ ವಿರೋಧಿ ನೀತಿಯನ್ನು ಕೈಬಿಡಬೇಕು ಇಲ್ಲವೇ ಮೋದಿ ರಾಜೀನಾಮೆ ಕೊಟ್ಟು ಹೋಗಬೇಕು ಎಂಬ ಪರಿಸ್ಥಿತಿಯನ್ನು ಉಂಟು ಮಾಡಲು ಸಹಕರಿಸುತ್ತದೆ. ಈ ಜೈಲ್‌ಭರೋ ಕಾರ್ಯಕ್ರಮ ಇದನ್ನು ಇನ್ನಷ್ಟು ತೀವ್ರಗೊಳಿಸುವುದರಲ್ಲಿ ಅನುಮಾನವಿಲ್ಲ.

ಭಾರತದ ಎಲ್ಲ ರಾಜ್ಯಗಳಲ್ಲೂ ಈ ಜೈಲ್‌ಭರೋ ಕಾರ್ಯಕ್ರಮ ಯಶಸ್ವಿಯಾಗಿ ನಡೆದರೆ, ಮುಂದೆಂದೂ ಈ ಜನವಿರೋಧಿ, ರೈತ ವಿರೋಧಿ ರಾಜಕೀಯ ಪಕ್ಷಗಳು ಅವುಗಳ ರಾಜಕೀಯ ನಾಯಕರು ಇಂತಹ ದುಸ್ಸಾಹಸಕ್ಕೆ ಎಂದಿಗೂ ಕೈ ಹಾಕಲಾರರು ಎಂಬ ವಿಶ್ವಾಸ ನನಗಿದೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...