Homeಮುಖಪುಟರಾಜಸ್ಥಾನದಲ್ಲಿ ಆಪರೇಷನ್ ಕಮಲ; ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿಯಲ್ಲಿ ಸಚಿನ್ ಪೈಲಟ್‌

ರಾಜಸ್ಥಾನದಲ್ಲಿ ಆಪರೇಷನ್ ಕಮಲ; ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿಯಲ್ಲಿ ಸಚಿನ್ ಪೈಲಟ್‌

- Advertisement -
- Advertisement -

ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಯಶಸ್ವಿ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದ ಬಿಜೆಪಿಯ ಕಣ್ಣು ಈಗ ರಾಜಸ್ಥಾನದ ಮೇಲೆ ನೆಟ್ಟಿದೆ. ತಮ್ಮ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ವಿರೋಧ ಪಕ್ಷ ಬಿಜೆಪಿ ಪ್ರಯತ್ನಿಸುತ್ತಿದ್ದು, ಶಾಸಕರಿಗೆ ತಲಾ 15 ಕೋಟಿ ರೂಗಳ ಆಮಿಷವೊಡ್ಡಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್‌ ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿಯಲ್ಲಿ ಬೀಡುಬಿಟ್ಟಿರುವುದು ಕಾಂಗ್ರೆಸ್ ತಲೆನೋವಿಗೆ ಕಾರಣವಾಗಿದೆ.

ನಿನ್ನೆ ತಾನೇ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಗೆಹ್ಲೋಟ್ “COVID-19 ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಜನರಿಗಾಗಿ ಕೆಲಸ ಮಾಡುತ್ತಿರುವಾಗ ಬಿಜೆಪಿಯು ಸರ್ಕಾರ ಉರುಳಿಸುವ ಕುತಂತ್ರ ಹೆಣೆದಿದೆ ಎಂದು ಕಿಡಿಕಾರಿದ್ದರು.

ಇಂದು ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿ ಮಾಹಿತಿ ಪಡೆದಿದ್ದಾರೆ. ಎಂತಹ ಬಿಕ್ಕಟ್ಟು ಇದ್ದರೂ ಸಹ ಅದನ್ನು ಆಂತರೀಕವಾಗಿ ಚರ್ಚಿಸಿ ಬಗೆಹರಿಸಿಕೊಳ್ಳಬೇಕೆಂದು ಸೋನಿಯಾ ಗಾಂಧಿ ತಿಳಿಸಿದ್ದಾರೆಂದು ಮೂಲಗಳು ಹೇಳಿವೆ.

ಇಂದು ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿ ತಲುಪಿರುವ ಸಚಿನ್ ಪೈಲಟ್ ಯಾರ ಫೋನ್ ಕರೆಗೂ ಉತ್ತರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. “ಸಾಮಾನ್ಯವಾಗಿ ಸುಲಭಕ್ಕೆ ಸಿಗುತ್ತಿದ್ದ ಸಚಿನ್ ಪೈಲಟ್ ಕಳೆದ 24 ಗಂಟೆಗಳಿಂದ ನಮ್ಮ ಪೋನ್‌ ಕರೆಗಳಿಗೆ ಉತ್ತರಿಸುತ್ತಿಲ್ಲ. ಇದು ಸರ್ಕಾರ ಅಸ್ಥಿರದಲ್ಲಿರುವುದರ ಸಂಕೇತ” ಎಂದು ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಟ್ವೀಟ್ ಮಾಡಿದ್ದಾರೆ.

ಸಚಿನ್ ಪೈಲಟ್ ಮಧ್ಯಪ್ರದೇಶ ಜ್ಯೋತಿರಾದಿತ್ಯ ಸಿಂಧಿಯಾ ಆಗಲು ಹೊರಟಿದ್ದಾರೆ ಎಂದು ಹಲವಾರು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಪಕ್ಷ ಬದಲಿಸಲು ಕಾಂಗ್ರೆಸ್‌ ಶಾಸಕರಿಗೆ 15 ಕೋಟಿ ರೂಗಳ ಆಮಿಷವೊಡ್ಡಿದ್ದಾರೆ ಎಂಬ ಮಾತುಗಳು ಪದೇ ಪದೇ ಕೇಳಿಬರುತ್ತಿವೆ. ಒಟ್ಟಾರೆ ನಿರಂತರವಾಗಿ ಬಿಜೆಪಿಯು ಸರ್ಕಾರ ಉರುಳಿಸಲು ಪ್ರಯತ್ನಿಸಿತ್ತಿದ್ದು, ಕೋವಿಡ್ ಸಮಯದಲ್ಲಿ ಅಸ್ಥಿರತೆ ಉಂಟು ಮಾಡಲು ಮುಂದಾಗಿದ್ದಾರೆ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

“2014 ರಲ್ಲಿ ಕೇಂದ್ರ ಬಿಜೆಪಿ ಅಧಿಕಾರ ಹಿಡಿದಾಗಿನಿಂದಲೂ ಅದರ ನಿಜ ಮುಖವನ್ನು ಬಹಿರಂಗಪಡಿಸಲಾಗಿದೆ. ಅವರು ಮೊದಲು ರಹಸ್ಯವಾಗಿ ಮಾಡಿದ್ದನ್ನು ಈಗ ಬಹಿರಂಗವಾಗಿ ಮಾಡುತ್ತಾರೆ. ಗೋವಾ, ಕರ್ನಾಟಕ, ಮಧ್ಯಪ್ರದೇಶ ಮತ್ತು ಈಶಾನ್ಯ ರಾಜ್ಯಗಳಲ್ಲಿ ನೀವು ಇದನ್ನು ನೋಡಿದ್ದೀರಿ” ಎಂದು ಗೆಹ್ಲೋಟ್ ತಿಳಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕರು ಈ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ಕೆಲವು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ರಾಜಸ್ಥಾನ ಪೊಲೀಸರ ಎಸ್‌ಒಜಿ (ವಿಶೇಷ ಕಾರ್ಯಾಚರಣೆ ಗುಂಪು) ಮತ್ತು ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಗೆ ದೂರು ಸಲ್ಲಿಸಿರುವ ಕಾಂಗ್ರೆಸ್ ನಾಯಕ ಮಹೇಶ್ ಜೋಶಿ,  ಬಿಜೆಪಿ ಭಯಭೀತರಾಗಿದೆ ಎಂದು ಹೇಳಿದ್ದಾರೆ.

200 ಸದಸ್ಯರ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ 107 ಸ್ಥಾನಗಳನ್ನು ಹೊಂದಿದ್ದು, 12 ಸ್ವತಂತ್ರ ಅಭ್ಯರ್ಥಿಗಳ ಬೆಂಬಲವನ್ನು ಹೊಂದಿದೆ. ಇದಲ್ಲದೆ ಇತರ ಪಕ್ಷಗಳ ಐದು ಶಾಸಕರು ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸಿದ್ದಾರೆ.


ಇದನ್ನೂ ಓದಿ: ಸರ್ಕಾರ ಉರುಳಿಸಲು ಶಾಸಕರಿಗೆ ಬಿಜೆಪಿ 15 ಕೋಟಿ ನೀಡುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...