Homeಮುಖಪುಟರಾಜಸ್ಥಾನದಲ್ಲಿ ಆಪರೇಷನ್ ಕಮಲ; ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿಯಲ್ಲಿ ಸಚಿನ್ ಪೈಲಟ್‌

ರಾಜಸ್ಥಾನದಲ್ಲಿ ಆಪರೇಷನ್ ಕಮಲ; ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿಯಲ್ಲಿ ಸಚಿನ್ ಪೈಲಟ್‌

- Advertisement -
- Advertisement -

ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಯಶಸ್ವಿ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದ ಬಿಜೆಪಿಯ ಕಣ್ಣು ಈಗ ರಾಜಸ್ಥಾನದ ಮೇಲೆ ನೆಟ್ಟಿದೆ. ತಮ್ಮ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ವಿರೋಧ ಪಕ್ಷ ಬಿಜೆಪಿ ಪ್ರಯತ್ನಿಸುತ್ತಿದ್ದು, ಶಾಸಕರಿಗೆ ತಲಾ 15 ಕೋಟಿ ರೂಗಳ ಆಮಿಷವೊಡ್ಡಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್‌ ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿಯಲ್ಲಿ ಬೀಡುಬಿಟ್ಟಿರುವುದು ಕಾಂಗ್ರೆಸ್ ತಲೆನೋವಿಗೆ ಕಾರಣವಾಗಿದೆ.

ನಿನ್ನೆ ತಾನೇ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಗೆಹ್ಲೋಟ್ “COVID-19 ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಜನರಿಗಾಗಿ ಕೆಲಸ ಮಾಡುತ್ತಿರುವಾಗ ಬಿಜೆಪಿಯು ಸರ್ಕಾರ ಉರುಳಿಸುವ ಕುತಂತ್ರ ಹೆಣೆದಿದೆ ಎಂದು ಕಿಡಿಕಾರಿದ್ದರು.

ಇಂದು ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿ ಮಾಹಿತಿ ಪಡೆದಿದ್ದಾರೆ. ಎಂತಹ ಬಿಕ್ಕಟ್ಟು ಇದ್ದರೂ ಸಹ ಅದನ್ನು ಆಂತರೀಕವಾಗಿ ಚರ್ಚಿಸಿ ಬಗೆಹರಿಸಿಕೊಳ್ಳಬೇಕೆಂದು ಸೋನಿಯಾ ಗಾಂಧಿ ತಿಳಿಸಿದ್ದಾರೆಂದು ಮೂಲಗಳು ಹೇಳಿವೆ.

ಇಂದು ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿ ತಲುಪಿರುವ ಸಚಿನ್ ಪೈಲಟ್ ಯಾರ ಫೋನ್ ಕರೆಗೂ ಉತ್ತರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. “ಸಾಮಾನ್ಯವಾಗಿ ಸುಲಭಕ್ಕೆ ಸಿಗುತ್ತಿದ್ದ ಸಚಿನ್ ಪೈಲಟ್ ಕಳೆದ 24 ಗಂಟೆಗಳಿಂದ ನಮ್ಮ ಪೋನ್‌ ಕರೆಗಳಿಗೆ ಉತ್ತರಿಸುತ್ತಿಲ್ಲ. ಇದು ಸರ್ಕಾರ ಅಸ್ಥಿರದಲ್ಲಿರುವುದರ ಸಂಕೇತ” ಎಂದು ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಟ್ವೀಟ್ ಮಾಡಿದ್ದಾರೆ.

ಸಚಿನ್ ಪೈಲಟ್ ಮಧ್ಯಪ್ರದೇಶ ಜ್ಯೋತಿರಾದಿತ್ಯ ಸಿಂಧಿಯಾ ಆಗಲು ಹೊರಟಿದ್ದಾರೆ ಎಂದು ಹಲವಾರು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಪಕ್ಷ ಬದಲಿಸಲು ಕಾಂಗ್ರೆಸ್‌ ಶಾಸಕರಿಗೆ 15 ಕೋಟಿ ರೂಗಳ ಆಮಿಷವೊಡ್ಡಿದ್ದಾರೆ ಎಂಬ ಮಾತುಗಳು ಪದೇ ಪದೇ ಕೇಳಿಬರುತ್ತಿವೆ. ಒಟ್ಟಾರೆ ನಿರಂತರವಾಗಿ ಬಿಜೆಪಿಯು ಸರ್ಕಾರ ಉರುಳಿಸಲು ಪ್ರಯತ್ನಿಸಿತ್ತಿದ್ದು, ಕೋವಿಡ್ ಸಮಯದಲ್ಲಿ ಅಸ್ಥಿರತೆ ಉಂಟು ಮಾಡಲು ಮುಂದಾಗಿದ್ದಾರೆ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

“2014 ರಲ್ಲಿ ಕೇಂದ್ರ ಬಿಜೆಪಿ ಅಧಿಕಾರ ಹಿಡಿದಾಗಿನಿಂದಲೂ ಅದರ ನಿಜ ಮುಖವನ್ನು ಬಹಿರಂಗಪಡಿಸಲಾಗಿದೆ. ಅವರು ಮೊದಲು ರಹಸ್ಯವಾಗಿ ಮಾಡಿದ್ದನ್ನು ಈಗ ಬಹಿರಂಗವಾಗಿ ಮಾಡುತ್ತಾರೆ. ಗೋವಾ, ಕರ್ನಾಟಕ, ಮಧ್ಯಪ್ರದೇಶ ಮತ್ತು ಈಶಾನ್ಯ ರಾಜ್ಯಗಳಲ್ಲಿ ನೀವು ಇದನ್ನು ನೋಡಿದ್ದೀರಿ” ಎಂದು ಗೆಹ್ಲೋಟ್ ತಿಳಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕರು ಈ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ಕೆಲವು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ರಾಜಸ್ಥಾನ ಪೊಲೀಸರ ಎಸ್‌ಒಜಿ (ವಿಶೇಷ ಕಾರ್ಯಾಚರಣೆ ಗುಂಪು) ಮತ್ತು ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಗೆ ದೂರು ಸಲ್ಲಿಸಿರುವ ಕಾಂಗ್ರೆಸ್ ನಾಯಕ ಮಹೇಶ್ ಜೋಶಿ,  ಬಿಜೆಪಿ ಭಯಭೀತರಾಗಿದೆ ಎಂದು ಹೇಳಿದ್ದಾರೆ.

200 ಸದಸ್ಯರ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ 107 ಸ್ಥಾನಗಳನ್ನು ಹೊಂದಿದ್ದು, 12 ಸ್ವತಂತ್ರ ಅಭ್ಯರ್ಥಿಗಳ ಬೆಂಬಲವನ್ನು ಹೊಂದಿದೆ. ಇದಲ್ಲದೆ ಇತರ ಪಕ್ಷಗಳ ಐದು ಶಾಸಕರು ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸಿದ್ದಾರೆ.


ಇದನ್ನೂ ಓದಿ: ಸರ್ಕಾರ ಉರುಳಿಸಲು ಶಾಸಕರಿಗೆ ಬಿಜೆಪಿ 15 ಕೋಟಿ ನೀಡುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...